Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : `ಧರ್ಮಸ್ಥಳ ಕೇಸ್’ಗೆ ಬಿಗ್ ಟ್ವಿಸ್ಟ್ : `ಮತ್ತೆರಡು ಪ್ರಕರಣಗಳು `SIT’ ಗೆ ವರ್ಗಾವಣೆ.!

06/08/2025 5:56 AM

ರಾಜ್ಯದ ಎಲ್ಲಾ ಶಾಲೆಯಲ್ಲಿ ಪ್ರತಿದಿನ `ಮುಖ್ಯ ಶಿಕ್ಷಕರು’ ಈ ಕೆಲಸ ಮಾಡುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

06/08/2025 5:50 AM

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : `ಭೂ ಸುರಕ್ಷಾ’ ಯೋಜನೆಗೆ ಚಾಲನೆ, ಜನರ ಬೆರಳ ತುದಿಗೆ ರೆಕಾರ್ಡ್ ರೂಂ.!

06/08/2025 5:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಎಲ್ಲಾ ಶಾಲೆಯಲ್ಲಿ ಪ್ರತಿದಿನ `ಮುಖ್ಯ ಶಿಕ್ಷಕರು’ ಈ ಕೆಲಸ ಮಾಡುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!
KARNATAKA

ರಾಜ್ಯದ ಎಲ್ಲಾ ಶಾಲೆಯಲ್ಲಿ ಪ್ರತಿದಿನ `ಮುಖ್ಯ ಶಿಕ್ಷಕರು’ ಈ ಕೆಲಸ ಮಾಡುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

By kannadanewsnow5706/08/2025 5:50 AM

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಯಲ್ಲಿ ಪ್ರತಿದಿನ ಮುಖ್ಯ ಶಿಕ್ಷಕರು ಪರಿಶೀಲಿಸಬೇಕಾದ ಪ್ರಾಥಮಿಕ ಅಂಶಗಳ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯ ಮಕ್ಕಳ ಸುರಕ್ಷತಾ ನೀತಿ-2016 ಮತ್ತು ಈ ಕಛೇರಿಯಿಂದ ಹೊರಡಿಸಲಾಗಿದೆ. ಸುತ್ತೋಲೆಗಳಲ್ಲಿ ಮಕ್ಕಳ ಸುರಕ್ಷತೆ ಸಂಬಂಧ ಶಾಲಾ ಹಂತದಲ್ಲಿ ವಹಿಸ ಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಈಗಾಗಲೇ ಸೂಚಿಸಲಾಗಿದೆ. ಆದಾಗ್ಯೂ ಶಾಲೆಗಳಲ್ಲಿ ಮಕ್ಕಳ ಸುರಕ್ಷತೆಯಲ್ಲಿ ಹಲವು ರೀತಿಯ ಲೋಪ/ಅಪಸವ್ಯಗಳು ಸಂಭವಿಸುತ್ತಿದ್ದು ಇವುಗಳನ್ನು ಅಧಿಕಾರಿಗಳ ಶಾಲಾ ಭೇಟಿ ಸಮಯದಲ್ಲಿ, ಮಾಧ್ಯಮಗಳಲ್ಲಿ ವರದಿ ಮಾಡಲಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಕುರಿತು ಶಾಲಾ ಮುಖ್ಯ ಶಿಕ್ಷಕರು ಪ್ರತಿನಿತ್ಯ ಕೆಲವು ಪ್ರಾಥಮಿಕ ಅಂಶಗಳನ್ನು ಪರಿಶೀಲಿಸಿ ಮುಂಜಾಗ್ರತಾ ಕ್ರಮಗಳನ್ನು ವಹಿಸಿದಲ್ಲಿ ಶಾಲೆಗಳಲ್ಲಿನ ಸಂಭಾವ್ಯ ದುರ್ಘಟನೆಗಳನ್ನು ತಪ್ಪಿಸ ಬಹುದಾಗಿದೆ.

ಈ ಹಿನ್ನೆಲೆಯಲ್ಲಿ, ಶಾಲೆಯಲ್ಲಿ ಪ್ರತಿದಿನ ಶಾಲಾ ಮುಖ್ಯ ಶಿಕ್ಷಕರು ಪರಿಶೀಲಿಸಬೇಕಾದ ಪ್ರಾಥಮಿಕ ಅಂಶಗಳ ಪಟ್ಟಿಯನ್ನು ಅನುಬಂಧಿಸಿ ಸಲ್ಲಿಸುತ್ತಾ ಪ್ರತೀ ಶಾಲಾ ವ್ಯಾಪ್ತಿಯಲ್ಲಿ ಪಟ್ಟಿಯಲ್ಲಿನ ಅಂಶಗಳನ್ನು ಪ್ರತಿನಿತ್ಯ ಪರಿಶೀಲಿಸಿ, ನಿತ್ಯದ ಮಾಹಿತಿಯನ್ನು ಆಯಾ ದಿನಾಂಕಗಳಂದು ಎಲ್ಲಾ ವ್ಯವಸ್ಥೆಗಳು ಸರಿ ಇರುವ ಬಗ್ಗೆ ಖಾತ್ರಿ ಪಡಿಸಿಕೊಂಡು ಮಾರ್ಕ್ ಅನ್ನು ನಮೂದಿಸುವುದು ಮತ್ತು ಇವುಗಳಲ್ಲಿ ವ್ಯತ್ಯಯಗಳೇನಾದರು ಕಂಡು ಬಂದಲ್ಲಿ ಕೂಡಲೇ ಅದನ್ನು ಪರಿಹರಿಸುವ ನಿಟ್ಟಿನಲ್ಲಿ ಕ್ರಮವಹಿಸುವುದು. ಒಟ್ಟಾರೆಯಾಗಿ ಶಾಲಾ ಮತ್ತು ಮಕ್ಕಳ ಸುರಕ್ಷತೆಯಲ್ಲಿ ಯಾವುದೇ ಲೋಪವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಿದೆ. ತಪ್ಪಿದಲ್ಲಿ ಲೋಪಗಳಿಗೆ ಆಯಾ ಶಾಲೆಯ ಮುಖ್ಯ ಶಿಕ್ಷಕರನ್ನೇ ನೇರ ಹೊಣೆಗಾರರನನ್ನಾಗಿಸಲಾಗುವುದೆಂದು ಎಚ್ಚರಿಸಿದೆ.

ಈ ಸುತ್ತೋಲೆಯನ್ನು ಮುಖ್ಯ ಶಿಕ್ಷಕರು ಶಾಲೆಗಳಲ್ಲಿ ಪ್ರತಿದಿನ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆಯೇ ಎಂದು ಸಂಬಂಧಪಟ್ಟ ಜಿಲ್ಲಾ ನೋಡಲ್ ಅಧಿಕಾರಿಗಳು, ಉಪನಿರ್ದೇಶಕರು (ಆಡಳಿತ/ ಅಭಿವೃದ್ಧಿ) ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಇ ಸಿ ಒ, ಬಿ ಆರ್ ಸಿ, ಬಿ ಆರ್ ಪಿ, ಸಿ ಆರ್ ಪಿ ಗಳು ಖಚಿತ ಪಡಿಸಿಕೊಳ್ಳಲು ಸೂಚಿಸಿದೆ. ಸದರಿ ಅಂಶಗಳನ್ನು ಶಾಲೆಗಳಲ್ಲಿ ಪಾಲಿಸುತ್ತಿರುವ ಬಗ್ಗೆ ಜಿಲ್ಲಾವಾರು ಕ್ರೋಢೀಕೃತ ವರದಿಯನ್ನು ಕಡ್ಡಾಯವಾಗಿ ಕೇಂದ್ರ ಕಛೇರಿಗೆ ಸಲ್ಲಿಸಲು ಸೂಚಿಸಿದೆ. ಅಲ್ಲದೆ ಸದರಿ ಮಾಹಿತಿಯನ್ನು SATS ತಂತ್ರಾಂಶದಲ್ಲಿ ಸಹ ಪ್ರತೀ ದಿನ ಇಂದೀಕರಿಸಲು ತಿಳಿಸಿದೆ.ಮುಂದುವರೆದು ಶಾಲೆಗೆ ಭೇಟಿ ನೀಡುವ ಅಧಿಕಾರಿಗಳು ಕಡ್ಡಾಯವಾಗಿ ಅನುಬಂಧಿಸಿದ ಪಟ್ಟಿಯಲ್ಲಿನ ಎಲ್ಲಾ ಅಂಶಗಳನ್ನು ದಿನವಹಿ ನಿರ್ವಹಿಸಿರುವ ಬಗ್ಗೆ ಖಾತ್ರಿ ಪಡಿಸಿಕೊಂಡು ದೃಢೀಕರಿಸಲು ಸೂಚಿಸಿದೆ.

It is mandatory for all 'head teachers' to do this work every day in all schools in the state: Important order from the Education Department!
Share. Facebook Twitter LinkedIn WhatsApp Email

Related Posts

BREAKING : `ಧರ್ಮಸ್ಥಳ ಕೇಸ್’ಗೆ ಬಿಗ್ ಟ್ವಿಸ್ಟ್ : `ಮತ್ತೆರಡು ಪ್ರಕರಣಗಳು `SIT’ ಗೆ ವರ್ಗಾವಣೆ.!

06/08/2025 5:56 AM1 Min Read

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : `ಭೂ ಸುರಕ್ಷಾ’ ಯೋಜನೆಗೆ ಚಾಲನೆ, ಜನರ ಬೆರಳ ತುದಿಗೆ ರೆಕಾರ್ಡ್ ರೂಂ.!

06/08/2025 5:50 AM3 Mins Read

ರಾಜ್ಯ ಸರ್ಕಾರದಿಂದ 30 ಲಕ್ಷ `ರೈತರಿಗೆ ಗುಡ್ ನ್ಯೂಸ್’ : ಡಿಸೆಂಬರ್ ಒಳಗೆ 2 ಲಕ್ಷ ಜಮೀನಿಗೆ `ಪೋಡಿ’

06/08/2025 5:45 AM1 Min Read
Recent News

BREAKING : `ಧರ್ಮಸ್ಥಳ ಕೇಸ್’ಗೆ ಬಿಗ್ ಟ್ವಿಸ್ಟ್ : `ಮತ್ತೆರಡು ಪ್ರಕರಣಗಳು `SIT’ ಗೆ ವರ್ಗಾವಣೆ.!

06/08/2025 5:56 AM

ರಾಜ್ಯದ ಎಲ್ಲಾ ಶಾಲೆಯಲ್ಲಿ ಪ್ರತಿದಿನ `ಮುಖ್ಯ ಶಿಕ್ಷಕರು’ ಈ ಕೆಲಸ ಮಾಡುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

06/08/2025 5:50 AM

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : `ಭೂ ಸುರಕ್ಷಾ’ ಯೋಜನೆಗೆ ಚಾಲನೆ, ಜನರ ಬೆರಳ ತುದಿಗೆ ರೆಕಾರ್ಡ್ ರೂಂ.!

06/08/2025 5:50 AM

ರಾಜ್ಯ ಸರ್ಕಾರದಿಂದ 30 ಲಕ್ಷ `ರೈತರಿಗೆ ಗುಡ್ ನ್ಯೂಸ್’ : ಡಿಸೆಂಬರ್ ಒಳಗೆ 2 ಲಕ್ಷ ಜಮೀನಿಗೆ `ಪೋಡಿ’

06/08/2025 5:45 AM
State News
KARNATAKA

BREAKING : `ಧರ್ಮಸ್ಥಳ ಕೇಸ್’ಗೆ ಬಿಗ್ ಟ್ವಿಸ್ಟ್ : `ಮತ್ತೆರಡು ಪ್ರಕರಣಗಳು `SIT’ ಗೆ ವರ್ಗಾವಣೆ.!

By kannadanewsnow5706/08/2025 5:56 AM KARNATAKA 1 Min Read

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿದ ಆರೋಪದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೆರಡು ಹೊಸ ದೂರುಗಳ ಬಗ್ಗೆಯೂ…

ರಾಜ್ಯದ ಎಲ್ಲಾ ಶಾಲೆಯಲ್ಲಿ ಪ್ರತಿದಿನ `ಮುಖ್ಯ ಶಿಕ್ಷಕರು’ ಈ ಕೆಲಸ ಮಾಡುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

06/08/2025 5:50 AM

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : `ಭೂ ಸುರಕ್ಷಾ’ ಯೋಜನೆಗೆ ಚಾಲನೆ, ಜನರ ಬೆರಳ ತುದಿಗೆ ರೆಕಾರ್ಡ್ ರೂಂ.!

06/08/2025 5:50 AM

ರಾಜ್ಯ ಸರ್ಕಾರದಿಂದ 30 ಲಕ್ಷ `ರೈತರಿಗೆ ಗುಡ್ ನ್ಯೂಸ್’ : ಡಿಸೆಂಬರ್ ಒಳಗೆ 2 ಲಕ್ಷ ಜಮೀನಿಗೆ `ಪೋಡಿ’

06/08/2025 5:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.