ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಶನಿವಾರ ಸುರಿದ ಭಾರೀ ಮಳೆಯಿಂದಾಗಿ ದೆಹಲಿಯ ಜೈತ್ಪುರ ಪ್ರದೇಶದಲ್ಲಿ ಗೋಡೆಯ ಒಂದು ಭಾಗ ಕುಸಿದು ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ.
ಗೋಡೆ ಕುಸಿದು ಬಿದ್ದ ನಂತರ ದಿನ ಮುಂಜಾನೆ ಈ ಘಟನೆ ಸಂಭವಿಸಿದ್ದು, ಹಲವಾರು ಜನರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ. ನಂತರ ದೆಹಲಿ ಅಗ್ನಿಶಾಮಕ ದಳದವರು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಘಟನೆಯಲ್ಲಿ ಇನ್ನೂ ಕೆಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.