Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಿನಲ್ಲಿ `ನಮ್ಮ ಮೆಟ್ರೋ’ 3ನೇ ಹಂತದ ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ | WATCH VIDEO

10/08/2025 2:22 PM

ಮಂಡ್ಯ : ಸ್ಮಶಾನ ಭೂಮಿಗಾಗಿ ಆಗ್ರಹಿಸಿ, ಮದ್ದೂರು ತಾಲೂಕು ಕಛೇರಿ ಮುಂದೆ ಶವವಿಟ್ಟು ಗ್ರಾಮಸ್ಥರಿಂದ ಪ್ರತಿಭಟನೆ

10/08/2025 1:58 PM

BREAKING : ಕಳೆದ 11 ವರ್ಷಗಳಲ್ಲಿ 35,000 ಕಿ.ಮೀ ರೈಲ್ವೆ ಮಾರ್ಗ ನಿರ್ಮಾಣ : ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

10/08/2025 1:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಡ್ಯ : ಸ್ಮಶಾನ ಭೂಮಿಗಾಗಿ ಆಗ್ರಹಿಸಿ, ಮದ್ದೂರು ತಾಲೂಕು ಕಛೇರಿ ಮುಂದೆ ಶವವಿಟ್ಟು ಗ್ರಾಮಸ್ಥರಿಂದ ಪ್ರತಿಭಟನೆ
KARNATAKA

ಮಂಡ್ಯ : ಸ್ಮಶಾನ ಭೂಮಿಗಾಗಿ ಆಗ್ರಹಿಸಿ, ಮದ್ದೂರು ತಾಲೂಕು ಕಛೇರಿ ಮುಂದೆ ಶವವಿಟ್ಟು ಗ್ರಾಮಸ್ಥರಿಂದ ಪ್ರತಿಭಟನೆ

By kannadanewsnow0510/08/2025 1:58 PM

ಮಂಡ್ಯ :- ಸ್ಮಶಾನ ಭೂಮಿಗಾಗಿ ಆಗ್ರಹಿಸಿ ಮದ್ದೂರು ತಾಲೂಕು ಕಛೇರಿ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿ ನಿವಾಸಿಯಾದ ರಾಜು (45) ಎಂಬುವವರು ಅನಾರೋಗ್ಯದಿಂದ ಮೃತಪಟ್ಟಿದ್ದರು. ಹೀಗಾಗಿ ಅವರ ಅಂತ್ಯ ಸಂಸ್ಕಾರ ನಡೆಸಲು ತೀರ್ಮಾನಿಸಿ ಗ್ರಾಮದ ಗೋಮಾಳದ ಸರ್ವೆ ನಂ 203 ರಲ್ಲಿ ಗ್ರಾಮಸ್ಥರು ಸಿದ್ದತೆ ನಡೆಸಿದ್ದರು.

ಆದರೆ, ಸರ್ವೆ ನಂ 203 ರ 2.30 ಗುಂಟೆ ಗೋಮಾಳದ ಜಾಗವನ್ನು ಪುಟ್ಟತಾಯಮ್ಮ ಎಂಬುವವರಿಗೆ ಸರ್ಕಾರ ಮಂಜೂರು ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ಅಂತ್ಯ ಸಂಸ್ಕಾರಕ್ಕೆ ಹಾಲಿ ಜಮೀನಿನ ಮಾಲೀಕ ನಾಗರಾಜ್ ತಡೆ ಮಾಡಿದ್ದಾರೆ. ಹೀಗಾಗಿ ಶವ ಸಂಸ್ಕಾರಕ್ಕೆ ಅಡ್ಡಿಪಡಿಸಿದ್ದರಿಂದ ಶವವನ್ನು ಗ್ರಾಮಸ್ಥರು ಟ್ರಾಕ್ಟರ್ ಮೂಲಕ ರಾತ್ರಿ 8 ಗಂಟೆ ವೇಳೆಗೆ ತಾಲೂಕು ಕಛೇರಿ ಮುಂದೆ ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಇದೇ ವೇಳೆ ಗ್ರಾಮದ ಮುಖಂಡರು ಮಾತನಾಡಿ, ನಮ್ಮ ಪೂರ್ವಜರ ಕಾಲದಿಂದಲೂ ನಾವು ಸರ್ವೆ ನಂ 203 ರ ಗೋಮಾಳದ ಜಾಗದಲ್ಲಿ ಶವ ಸಂಸ್ಕಾರದ ಪ್ರಕ್ರಿಯೆ ನಡೆಸುತ್ತಿದ್ದೇವೆ. ಆದರೆ, ಈಗ ನಾಗರಾಜ್ ಎನ್ನುವ ವ್ಯಕ್ತಿ ಈ ಜಮೀನನ್ನು ಸರ್ಕಾರ ನಮಗೆ ಮಂಜೂರು ಮಾಡಿಕೊಟ್ಟಿದೆ ಎಂದು ದಬ್ಬಾಳಿಕೆ ಮಾಡುತ್ತಿದ್ದಾರೆ. ನಾವು ಈ ಜಮೀನು ಬಿಟ್ಟು ಬೇರೆ ಕಡೆ ಅಂತ್ಯ ಸಂಸ್ಕಾರ ಮಾಡುವುದಿಲ್ಲ ಹೀಗಾಗಿ ತಾಲೂಕು ಆಡಳಿತ ನಮಗೆ ಸ್ಮಶಾನ ಭೂಮಿಯನ್ನು ನೀಡಬೇಕು ಇಲ್ಲದಿದ್ದರೆ ಇಲ್ಲಿಯೇ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದರು.

ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಮಂಡ್ಯ ಉಪ ವಿಭಾಗಾಧಿಕಾರಿ ಶಿವಮೂರ್ತಿ ಹಾಗೂ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರು ಗ್ರಾಮಸ್ಥರ ಮನವಿ ಆಲಿಸಿ ಈಗಾಗಲೇ ಈ ಜಮೀನು ವಿಚಾರವಾಗಿ ಉಪ ವಿಭಾಗಾಧಿಕಾರಿ ನ್ಯಾಯಾಲಯದಲ್ಲಿ ಪ್ರಕರಣಕ್ಕೆ ತೀರ್ಪು ನೀಡಲಾಗಿದೆ. ಆದರೆ, ನಾಗರಾಜ್ ಎಂಬುವವರು ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಯುತ್ತಿರುವುದರಿಂದ ತೀರ್ಪು ಬರುವವರೆಗೂ ನಾವು ಯಾವುದೇ ತೀರ್ಮಾನ ಕೈಗೊಳ್ಳಲಾಗುವುದಿಲ್ಲ ಯಾರ ಪರ ತೀರ್ಪು ಬರುತ್ತದೆಯೋ ಅವರಿಗೆ ಜಮೀನು ಹಸ್ತಾಂತರ ಮಾಡಲಾಗುವುದು ಎಂದು ಗ್ರಾಮಸ್ಥರನ್ನು ಮನವೊಲಿಸಿದ ಬಳಿಕ ಗ್ರಾಮಸ್ಥರು ಶವವನ್ನು ಗೆಜ್ಜಲಗೆರೆ ಬಳಿಯ ವಿ.ಸಿ ಕಾಲುವೆ ದಡದಲ್ಲಿ ರಾತ್ರಿ 11 ಗಂಟೆ ವೇಳೆಗೆ ಅಂತ್ಯ ಸಂಸ್ಕಾರ ನಡೆಸಿದ್ದಾರೆ.

ಇನ್ನು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮದ್ದೂರು ಗ್ರಾಮಾಂತರ ಇನ್ಸ್ಪೆಕ್ಟರ್ ವೆಂಕಟೇಗೌಡ ಅವರ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.

ವರದಿ : ಗಿರೀಶ್ ರಾಜ್ ಮಂಡ್ಯ

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನಲ್ಲಿ `ನಮ್ಮ ಮೆಟ್ರೋ’ 3ನೇ ಹಂತದ ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ | WATCH VIDEO

10/08/2025 2:22 PM2 Mins Read

BREAKING : ಕಳೆದ 11 ವರ್ಷಗಳಲ್ಲಿ 35,000 ಕಿ.ಮೀ ರೈಲ್ವೆ ಮಾರ್ಗ ನಿರ್ಮಾಣ : ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

10/08/2025 1:39 PM2 Mins Read

ಧರ್ಮಸ್ಥಳ ಕೇಸ್ : ಪಿತೂರಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಿ : ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ ಒತ್ತಾಯ!

10/08/2025 1:13 PM1 Min Read
Recent News

BREAKING : ಬೆಂಗಳೂರಿನಲ್ಲಿ `ನಮ್ಮ ಮೆಟ್ರೋ’ 3ನೇ ಹಂತದ ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ | WATCH VIDEO

10/08/2025 2:22 PM

ಮಂಡ್ಯ : ಸ್ಮಶಾನ ಭೂಮಿಗಾಗಿ ಆಗ್ರಹಿಸಿ, ಮದ್ದೂರು ತಾಲೂಕು ಕಛೇರಿ ಮುಂದೆ ಶವವಿಟ್ಟು ಗ್ರಾಮಸ್ಥರಿಂದ ಪ್ರತಿಭಟನೆ

10/08/2025 1:58 PM

BREAKING : ಕಳೆದ 11 ವರ್ಷಗಳಲ್ಲಿ 35,000 ಕಿ.ಮೀ ರೈಲ್ವೆ ಮಾರ್ಗ ನಿರ್ಮಾಣ : ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

10/08/2025 1:39 PM

BREAKING: 2026-27ನೇ ಸಾಲಿನಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಓಪನ್ ಬುಕ್ ಅಸೆಸ್ಮೆಂಟ್ ಪರಿಚಯಿಸಲು CBSE ಅನುಮೋದನೆ

10/08/2025 1:37 PM
State News
KARNATAKA

BREAKING : ಬೆಂಗಳೂರಿನಲ್ಲಿ `ನಮ್ಮ ಮೆಟ್ರೋ’ 3ನೇ ಹಂತದ ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ | WATCH VIDEO

By kannadanewsnow5710/08/2025 2:22 PM KARNATAKA 2 Mins Read

ಬೆಂಗಳೂರು: ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಬಹುನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗದ ಮೆಟ್ರೋ ಸಂಚಾರಕ್ಕೆ ಚಾಲನೆ ನೀಡಿದ್ದು,…

ಮಂಡ್ಯ : ಸ್ಮಶಾನ ಭೂಮಿಗಾಗಿ ಆಗ್ರಹಿಸಿ, ಮದ್ದೂರು ತಾಲೂಕು ಕಛೇರಿ ಮುಂದೆ ಶವವಿಟ್ಟು ಗ್ರಾಮಸ್ಥರಿಂದ ಪ್ರತಿಭಟನೆ

10/08/2025 1:58 PM

BREAKING : ಕಳೆದ 11 ವರ್ಷಗಳಲ್ಲಿ 35,000 ಕಿ.ಮೀ ರೈಲ್ವೆ ಮಾರ್ಗ ನಿರ್ಮಾಣ : ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

10/08/2025 1:39 PM

ಧರ್ಮಸ್ಥಳ ಕೇಸ್ : ಪಿತೂರಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಿ : ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ ಒತ್ತಾಯ!

10/08/2025 1:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.