Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಸಚಿವ ಕೆ.ಎನ್ ರಾಜಣ್ಣ ರಾಜೀನಾಮೆ ಅಂಗೀಕರಿಸಿದ ಸಿಎಂ ಸಿದ್ದರಾಮಯ್ಯ | KN Rajanna Resigns

11/08/2025 4:03 PM

BREAKING: ಕೆ.ಎನ್‌ ರಾಜಣ್ಣ ‘ರಾಜೀನಾಮೆ’ ಅಂಗೀಕರಿಸಿದ ಸಿಎಂ ಸಿದ್ದರಾಮಯ್ಯ..!

11/08/2025 4:02 PM

ಸಿಕಂದರಾಬಾದ್-ಮೈಸೂರು ನಡುವೆ ದ್ವಿ-ಸಾಪ್ತಾಹಿಕ ವಿಶೇಷ ರೈಲುಗಳ ಸಂಚಾರ

11/08/2025 3:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಕೆ.ಎನ್‌ ರಾಜಣ್ಣ ‘ರಾಜೀನಾಮೆ’ ಅಂಗೀಕರಿಸಿದ ಸಿಎಂ ಸಿದ್ದರಾಮಯ್ಯ..!
KARNATAKA

BREAKING: ಕೆ.ಎನ್‌ ರಾಜಣ್ಣ ‘ರಾಜೀನಾಮೆ’ ಅಂಗೀಕರಿಸಿದ ಸಿಎಂ ಸಿದ್ದರಾಮಯ್ಯ..!

By kannadanewsnow0711/08/2025 4:02 PM

* ಅವಿನಾಶ್‌ ಆರ್‌ ಭೀಮಸಂದ್ರ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಧಿಕೃತವಾಗಿ ಸಚಿವ ಸ್ಥಾನಕ್ಕೆ ಕೆ.ಎನ್‌ ರಾಜಣ್ಣ ಅವರು ರಾಜೀನಾಮೆಯನ್ನು ನೀಡಿದ್ದಾರೆ. ಇನ್ನೂ ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ರಾಜಣ್ಣನವರ ಸಚಿವ ಸ್ಥಾನದ ರಾಜೀನಾಮೆಯನ್ನು ಅಂಗೀಕಾರ ಮಾಡಿದ್ದಾರೆ ಎನ್ನಲಾಗಿದೆ.

ಕೆಲವು ದಿನಗಳ ಹಿಂದೆ ತಮ್ಮನ್ನು ‘ಮಧುಬಲೆ’ಗೆ (ಹನಿಟ್ರ್ಯಾಪ್‌) ಕೆಡವಲು ಯತ್ನಿಸಿದ ಪ್ರಕರಣದ ಕುರಿತು ಉನ್ನತಮಟ್ಟದ ತನಿಖೆ ನಡೆಸುವಂತೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದರು. ಆದರೆ ತನಿಖಾ ತಂಡ ಕೆ.ಎನ್. ರಾಜಣ್ಣ ಅವರ ಆರೋಪ ಸುಳ್ಳು ಅಂತ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಕೆಎನ್‌ ರಾಜಣ್ಣ ಅವರು ಇತ್ತೀಚೆಗೆ ಪಕ್ಷ ಹಾಗೂ ರಾಹುಲ್‌ ಗಾಂಧಿ ವಿರುದ್ಧ ಮಾತನಾಡಿದ್ದರು. ಇನ್ನೂ ಲೋಕಸಭೆ ಚುನಾವಣೆಯಲ್ಲಿ ಮತ ಕಳವು ನಡೆದಿದೆ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಮತದಾರರ ಪಟ್ಟಿ ಸಿದ್ಧಪಡಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದನ್ನು ಸ್ಮರಿಸಿಕೊಳ್ಳಬಹುದಾಗಿದೆ. ಇದಲ್ಲದೇ ಬಹಿರಂಗವಾಗವಾಗಿಯೇ ಅವರು ಹೈಕಮಾಂಡ್‌ ವಿರುದ್ದ ಅಸಮಾಧನವನ್ನು ವ್ಯಕ್ತಪಡಿಸಿದ್ದರು.

ಇನ್ನೂ ಸದನದಲ್ಲಿ ಕೂಡ ಈ ಬಗ್ಗೆ ವಿಪಗಳು ಹಾಗು ಆಡಳಿತಪಗಳ ನಾಯಕರ ನಡುವೆ ಮಾತಿನ ಚಕಮಕಿ ನಡೆದ ಸನ್ನಿವೇಶ ನಿರ್ಮಾಣವಾಗಿತು. ವಿಧಾನಭೆಯಲ್ಲಿ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ಮತ್ತು ಕೆ.ಎನ್‌ ರಾಜಣ್ಣ ಅವರಿಂದ ಸರಿಯಾದ ಉತ್ತರ ಬರಬೇಕು ಅಂಥ ಸ್ಪೀಕರ್ ಅವರ ಬಳಿ ಮನವಿ ಮಾಡಿದರು. ಹಲವು ಮಂದಿ ಬಿಜೆಪಿ ನಾಯಕರು ರಾಜೀನಾಮೆ ಬಗ್ಗೆ ಸರಿಯಾದ ಮಾಹಿತಿಯನ್ನು ಸದನಕ್ಕೆ ನೀಡಬೇಕು ಅಂತ ಆಗ್ರಹಿಸಿದರು. ಇನ್ನೂ ಕೆ.ಎನ್‌ ರಾಜಣ್ಣನವರ ರಾಜೀನಾಮೆಯನ್ನು ಸಿಎಂ ಸಿದ್ದರಾಮಯ್ಯ ಅವರು ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಸಿಎಂ ಕಚೇರಿಯಲ್ಲಿ ಸಿಎಂ ಬೇಟಯಾಗಿ ರಾಜಣ್ಣ ಅವರು ರಾಜೀನಾಮೆ ನೀಡಿದ್ದಾರೆ.
ಸಹಕಾರಿ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ರಾಜಣ್ಣ, ಈ ಹಿಂದೆ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟದ ನಿರ್ದೇಶಕರಾಗಿ ಮತ್ತು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ರಾಜಣ್ಣ 1972 ರಿಂದ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಕ್ಯಾತಸಂದ್ರ ತಾಲ್ಲೂಕು ಘಟಕದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅದೇ ಅವಧಿಯಲ್ಲಿ ಅವರ ಸಾರ್ವಜನಿಕ ಜೀವನ ಪ್ರಾರಂಭವಾಯಿತು. 1976 ರಲ್ಲಿ, ಅವರು ಕ್ಯಾತಸಂದ್ರ ನಗರ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾದರು, 1980 ಮತ್ತು 1984 ರ ನಡುವೆ ತುಮಕೂರು ಜಿಲ್ಲಾ ಘಟಕದ ಐಎನ್‌ಸಿಯ ಯುವ ಕಾಂಗ್ರೆಸ್ ವಿಭಾಗದ ಮುಖ್ಯಸ್ಥರಾಗಿದ್ದರು.

BREAKING: CM Siddaramaiah accepts K.N. Rajanna's 'resignation'..! BREAKING: ಕೆ.ಎನ್‌ ರಾಜಣ್ಣ 'ರಾಜೀನಾಮೆ' ಅಂಗೀಕಾರ ಮಾಡಿದ ಸಿಎಂ ಸಿದ್ದರಾಮಯ್ಯ
Share. Facebook Twitter LinkedIn WhatsApp Email

Related Posts

BREAKING : ಸಚಿವ ಕೆ.ಎನ್ ರಾಜಣ್ಣ ರಾಜೀನಾಮೆ ಅಂಗೀಕರಿಸಿದ ಸಿಎಂ ಸಿದ್ದರಾಮಯ್ಯ | KN Rajanna Resigns

11/08/2025 4:03 PM1 Min Read

ಸಿಕಂದರಾಬಾದ್-ಮೈಸೂರು ನಡುವೆ ದ್ವಿ-ಸಾಪ್ತಾಹಿಕ ವಿಶೇಷ ರೈಲುಗಳ ಸಂಚಾರ

11/08/2025 3:58 PM2 Mins Read

ರಾಜ್ಯದ ಅನರ್ಹ ‘BPL’ ಕಾರ್ಡ್ ದಾರರಿಗೆ ಬಿಗ್ ಶಾಕ್ : ಶೀಘ್ರವೇ ‘APL’ ಕಾರ್ಡ್ ಗೆ ವರ್ಗಾವಣೆ.!

11/08/2025 3:57 PM1 Min Read
Recent News

BREAKING : ಸಚಿವ ಕೆ.ಎನ್ ರಾಜಣ್ಣ ರಾಜೀನಾಮೆ ಅಂಗೀಕರಿಸಿದ ಸಿಎಂ ಸಿದ್ದರಾಮಯ್ಯ | KN Rajanna Resigns

11/08/2025 4:03 PM

BREAKING: ಕೆ.ಎನ್‌ ರಾಜಣ್ಣ ‘ರಾಜೀನಾಮೆ’ ಅಂಗೀಕರಿಸಿದ ಸಿಎಂ ಸಿದ್ದರಾಮಯ್ಯ..!

11/08/2025 4:02 PM

ಸಿಕಂದರಾಬಾದ್-ಮೈಸೂರು ನಡುವೆ ದ್ವಿ-ಸಾಪ್ತಾಹಿಕ ವಿಶೇಷ ರೈಲುಗಳ ಸಂಚಾರ

11/08/2025 3:58 PM

ರಾಜ್ಯದ ಅನರ್ಹ ‘BPL’ ಕಾರ್ಡ್ ದಾರರಿಗೆ ಬಿಗ್ ಶಾಕ್ : ಶೀಘ್ರವೇ ‘APL’ ಕಾರ್ಡ್ ಗೆ ವರ್ಗಾವಣೆ.!

11/08/2025 3:57 PM
State News
KARNATAKA

BREAKING : ಸಚಿವ ಕೆ.ಎನ್ ರಾಜಣ್ಣ ರಾಜೀನಾಮೆ ಅಂಗೀಕರಿಸಿದ ಸಿಎಂ ಸಿದ್ದರಾಮಯ್ಯ | KN Rajanna Resigns

By kannadanewsnow0511/08/2025 4:03 PM KARNATAKA 1 Min Read

ಬೆಂಗಳೂರು : ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಇಂದು ಸಚಿವ ಸ್ಥಾನಕ್ಕೆ ಸಹಕಾರ ಸಚಿವ ರಾಜಣ್ಣ ರಾಜೀನಾಮೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ…

BREAKING: ಕೆ.ಎನ್‌ ರಾಜಣ್ಣ ‘ರಾಜೀನಾಮೆ’ ಅಂಗೀಕರಿಸಿದ ಸಿಎಂ ಸಿದ್ದರಾಮಯ್ಯ..!

11/08/2025 4:02 PM

ಸಿಕಂದರಾಬಾದ್-ಮೈಸೂರು ನಡುವೆ ದ್ವಿ-ಸಾಪ್ತಾಹಿಕ ವಿಶೇಷ ರೈಲುಗಳ ಸಂಚಾರ

11/08/2025 3:58 PM

ರಾಜ್ಯದ ಅನರ್ಹ ‘BPL’ ಕಾರ್ಡ್ ದಾರರಿಗೆ ಬಿಗ್ ಶಾಕ್ : ಶೀಘ್ರವೇ ‘APL’ ಕಾರ್ಡ್ ಗೆ ವರ್ಗಾವಣೆ.!

11/08/2025 3:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.