Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆಯಿಂದ ಆಶಾ ಕಾರ್ಯಕರ್ತೆಯರಿಂದ ಅಹೋರಾತ್ರಿ ಧರಣಿ, ಅಗತ್ಯ ಕ್ರಮಕ್ಕೆ ರಾಜ್ಯ ಸರ್ಕಾರ ಸೂಚನೆ

11/08/2025 7:31 PM

ರಾಜ್ಯದಲ್ಲಿನ ಅಕ್ರಮ ಬಡಾವಣೆ ನಿರ್ದಾಕ್ಷಿಣ್ಯವಾಗಿ ತೆರವು: ಸಚಿವ ಬಿಎಸ್ ಸುರೇಶ್

11/08/2025 7:24 PM

BREAKING : ಜಮ್ಮುವಿನಲ್ಲಿ ಒಳನುಸುಳುವಿಕೆಗೆ ವಿಫಲ ಯತ್ನ ; ಗಡಿ ದಾಟಿದ ಪಾಕಿಸ್ತಾನಿ ಪ್ರಜೆ ಗುಂಡಿಕ್ಕಿ ಕೊಂದ ‘BSF’

11/08/2025 7:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿನ ಅಕ್ರಮ ಬಡಾವಣೆ ನಿರ್ದಾಕ್ಷಿಣ್ಯವಾಗಿ ತೆರವು: ಸಚಿವ ಬಿಎಸ್ ಸುರೇಶ್
KARNATAKA

ರಾಜ್ಯದಲ್ಲಿನ ಅಕ್ರಮ ಬಡಾವಣೆ ನಿರ್ದಾಕ್ಷಿಣ್ಯವಾಗಿ ತೆರವು: ಸಚಿವ ಬಿಎಸ್ ಸುರೇಶ್

By kannadanewsnow0911/08/2025 7:24 PM

ವಿಧಾನಪರಿಷತ್ತು: ರಾಜ್ಯದ ನಗರ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ ಅಕ್ರಮ ಬಡಾವಣೆಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೇ, ಅಕ್ರಮ ಬಡಾವಣೆಗಳನ್ನು ತೆರವುಗೊಳಿಸಲು ವಿಫಲರಾಗುವ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಶಿಸ್ತಿನ ಕ್ರಮ ಜರುಗಿಸಲಾಗುತ್ತದೆ ಎಂದೂ ಅವರು ಹೇಳಿದ್ದಾರೆ.

ಸೋಮವಾರ ವಿಧಾನಪರಿಷತ್ತಿನಲ್ಲಿ ಸದಸ್ಯ ಸಿ.ಎನ್.ಮಂಜೇಗೌಡ ಅವರು ನಿಯಮ 330 ರಡಿ ಅಕ್ರಮ ಬಡಾವಣೆಗಳ ವಿಚಾರವನ್ನು ಪ್ರಸ್ತಾಪಿಸಿದರು.

ಇದಕ್ಕೆ ಉತ್ತರ ನೀಡಿದ ಸಚಿವರು, ರಾಜ್ಯದಲ್ಲಿ ಬಡಾವಣೆ ನಿರ್ಮಾಣ ಮಾಡುವವರು ವಿನ್ಯಾಸ ಅನುಮೋದನೆಯನ್ನು ಪಡೆಯದೇ ಬಡಾವಣೆ ನಿರ್ಮಾಣ ಮಾಡಿದರೆ ಅದು ಅಕ್ರಮವಾಗುತ್ತದೆ. ಇಂತಹ ಬಡಾವಣೆಗಳಲ್ಲಿನ ನಿವೇಶನಗಳಿಗೆ ಖಾತೆ ಮಾಡದಂತೆ ನಿರ್ಬಂಧ ಹೇರಲಾಗಿದೆ. ಅಲ್ಲದೇ, ಅಂತಹ ಬಡಾವಣೆಗಳ ನಿವೇಶನಗಳಿಗೆ ಕಟ್ಟಡ ನಿರ್ಮಾಣಕ್ಕೆ ಅನುಮತಿಯನ್ನೂ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಅನಧಿಕೃತ ಬಡಾವಣೆಗಳ ನಿರ್ಮಾಣವನ್ನು ತಡೆಗಟ್ಟಲು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1960 ರ ಕಲಂ 17(4) ರ ಅಡಿಯಲ್ಲಿ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ಬಡಾವಣೆ ಮಾಲೀಕರಿಗೆ ನೋಟಿಸ್ ನೀಡಿ ಅಕ್ರಮ ನಿರ್ಮಾಣವನ್ನು ತಡೆಗಟ್ಟಲು ವಿಫಲರಾಗುವ ಅಧಿಕಾರಿಗಳಿಗೆ ದಂಡ ವಿಧಿಸುವ ಅಥವಾ ಅಮಾನತು ಮಾಡುವ ಅಥವಾ ಕೆಲಸದಿಂದಲೇ ವಜಾ ಮಾಡುವ ಅಧಿಕಾರ ಸರ್ಕಾರಕ್ಕಿದೆ ಎಂದರು.

ಬಡವರಿಗೆ ನಿವೇಶನ

ರಾಜ್ಯದ ಹಲವು ನಗರ ಪ್ರದೇಶಗಳಲ್ಲಿ ಬಡವರಿಗೆ ನಿವೇಶನ ನೀಡುವ ಕುರಿತು ಯೋಜನೆ ರೂಪಿಸಲಾಗುತ್ತಿದೆ. ಭೂಮಾಲೀಕರಿಗೆ ಶೇ.50 ಮತ್ತು ನಿವೇಶನಗಳಿಗೆ ಶೇ.50 ರಷ್ಟು ಪ್ರದೇಶವನ್ನು ಮೀಸಲಿಟ್ಟು ನಿವೇಶನಗಳನ್ನು ಹಂಚಿಕೆ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಬೆಂಗಳೂರು ಮಾದರಿಯಲ್ಲಿ ಆಸ್ತಿಗಳಿಗೆ ಇ-ಖಾತೆಯನ್ನು ನೀಡುವ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ ಸಂಬಂಧ ಕಾನೂನು ಇಲಾಖೆಯೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದ್ದು, ಅಭಿಪ್ರಾಯ ಪಡೆದ ನಂತರ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.

ದೇಶಾದ್ಯಂತ 49,000 ಸಸಿ ನೆಡುವ ಮೂಲಕ 49ನೇ ವರ್ಷಾಚರಣೆ ಮಾಡಿದ ‘HCL ಟೆಕ್’

BIG BREAKING: ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ | K.N.Rajanna resigns

BREAKING: ಲೋಕಸಭೆಯಲ್ಲಿ ಪರಿಷ್ಕೃತ ಆದಾಯ ತೆರಿಗೆ ಮಸೂದೆ ಮಂಡಿಸಿದ ನಿರ್ಮಲಾ ಸೀತಾರಾಮನ್

Share. Facebook Twitter LinkedIn WhatsApp Email

Related Posts

ನಾಳೆಯಿಂದ ಆಶಾ ಕಾರ್ಯಕರ್ತೆಯರಿಂದ ಅಹೋರಾತ್ರಿ ಧರಣಿ, ಅಗತ್ಯ ಕ್ರಮಕ್ಕೆ ರಾಜ್ಯ ಸರ್ಕಾರ ಸೂಚನೆ

11/08/2025 7:31 PM2 Mins Read

ದೇಶಾದ್ಯಂತ 49,000 ಸಸಿ ನೆಡುವ ಮೂಲಕ 49ನೇ ವರ್ಷಾಚರಣೆ ಮಾಡಿದ ‘HCL ಟೆಕ್’

11/08/2025 6:58 PM1 Min Read

ನಾಳೆ ಹಿರಿಯ ಪತ್ರಕರ್ತ ಭೀಮಣ್ಣ ಗಜಾಪುರ ಅವರ ಅಭಿವೃದ್ಧಿ ಪತ್ರಿಕೋದ್ಯಮ ಕೃತಿ ಬಿಡುಗಡೆ

11/08/2025 6:54 PM1 Min Read
Recent News

ನಾಳೆಯಿಂದ ಆಶಾ ಕಾರ್ಯಕರ್ತೆಯರಿಂದ ಅಹೋರಾತ್ರಿ ಧರಣಿ, ಅಗತ್ಯ ಕ್ರಮಕ್ಕೆ ರಾಜ್ಯ ಸರ್ಕಾರ ಸೂಚನೆ

11/08/2025 7:31 PM

ರಾಜ್ಯದಲ್ಲಿನ ಅಕ್ರಮ ಬಡಾವಣೆ ನಿರ್ದಾಕ್ಷಿಣ್ಯವಾಗಿ ತೆರವು: ಸಚಿವ ಬಿಎಸ್ ಸುರೇಶ್

11/08/2025 7:24 PM

BREAKING : ಜಮ್ಮುವಿನಲ್ಲಿ ಒಳನುಸುಳುವಿಕೆಗೆ ವಿಫಲ ಯತ್ನ ; ಗಡಿ ದಾಟಿದ ಪಾಕಿಸ್ತಾನಿ ಪ್ರಜೆ ಗುಂಡಿಕ್ಕಿ ಕೊಂದ ‘BSF’

11/08/2025 7:16 PM

BREAKING : ರಷ್ಯಾದ ದಾಳಿ ಕುರಿತು ‘ಪ್ರಧಾನಿ ಮೋದಿ’ಗೆ ‘ಝೆಲೆನ್ಸ್ಕಿ’ ವಿವರಣೆ ; ಸೆಪ್ಟೆಂಬರ್’ನಲ್ಲಿ ಉಭಯ ನಾಯಕರ ಭೇಟಿ

11/08/2025 7:00 PM
State News
KARNATAKA

ನಾಳೆಯಿಂದ ಆಶಾ ಕಾರ್ಯಕರ್ತೆಯರಿಂದ ಅಹೋರಾತ್ರಿ ಧರಣಿ, ಅಗತ್ಯ ಕ್ರಮಕ್ಕೆ ರಾಜ್ಯ ಸರ್ಕಾರ ಸೂಚನೆ

By kannadanewsnow0911/08/2025 7:31 PM KARNATAKA 2 Mins Read

ಬೆಂಗಳೂರು: ನಾಳೆಯಿಂದ ಆಶಾ ಕಾರ್ಯಕರ್ತೆಯರು ಆಹೋರಾತ್ರಿ ಧರಣಿ, ಸತ್ಯಾಗ್ರಹವನ್ನು ನಡೆಸಲಿದ್ದಾರೆ. ಹೀಗಾಗಿ ರಾಜ್ಯಾಧ್ಯಂತ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ…

ರಾಜ್ಯದಲ್ಲಿನ ಅಕ್ರಮ ಬಡಾವಣೆ ನಿರ್ದಾಕ್ಷಿಣ್ಯವಾಗಿ ತೆರವು: ಸಚಿವ ಬಿಎಸ್ ಸುರೇಶ್

11/08/2025 7:24 PM

ದೇಶಾದ್ಯಂತ 49,000 ಸಸಿ ನೆಡುವ ಮೂಲಕ 49ನೇ ವರ್ಷಾಚರಣೆ ಮಾಡಿದ ‘HCL ಟೆಕ್’

11/08/2025 6:58 PM

ನಾಳೆ ಹಿರಿಯ ಪತ್ರಕರ್ತ ಭೀಮಣ್ಣ ಗಜಾಪುರ ಅವರ ಅಭಿವೃದ್ಧಿ ಪತ್ರಿಕೋದ್ಯಮ ಕೃತಿ ಬಿಡುಗಡೆ

11/08/2025 6:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.