ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಿಂದ ಕೆ.ಎನ್ ರಾಜಣ್ಣ ಅವರನ್ನು ವಜಾಗೊಳಿಸಲಾಗಿದೆ. ಈ ಬಳಿಕ ಸಂಪುಟದಿಂದ ವಜಾಗೊಳಿಸಿದ ಬಗ್ಗೆ ಅವರು ಮೊದಲ ಪ್ರತಿಕ್ರಿಯೆ ಏನು ಅಂತ ಮುಂದೆ ಓದಿ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಇಂದು ಪಕ್ಷದ ತೀರ್ಮಾನವಾಗಿದೆ. ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿಯಾಗುತ್ತೇನೆ ಎಂಬುದಾಗಿ ಸಂಪುಟದಿಂದ ವಜಾಗೊಂಡ ಬಳಿಕ ಮೊದಲ ಪ್ರತಿಕ್ರಿಯೆಯನ್ನು ಕೆ.ಎನ್ ರಾಜಣ್ಣ ನೀಡಿದರು.
ಪಕ್ಷದ ವರಿಷ್ಠರಿಗೆ ತಪ್ಪು ಗ್ರಹಿಕೆ ಆಗಿದೆ ಎಂಬ ಮಾಹಿತಿಯಿದೆ. ಈ ಹಿನ್ನಲೆಯಲ್ಲಿ ಹಿರಿಯ ಸಚಿವರು, ಶಾಸಕರ ಜೊತೆಗೆ ದೆಹಲಿಗೆ ಹೋಗುತ್ತೇನೆ. ಪಕ್ಷದ ವರಿಷ್ಠರಿಗೆ ಆಗಿರುವ ತಪ್ಪು ಗ್ರಹಿಕೆ ಸರಿಪಡಿಸುತ್ತೇನೆ. ವರಿಷ್ಠರ ಮಾರ್ಗದರ್ಶನದಂತೆ ಮುಂದುವರೆಯುತ್ತೇನೆ ಎಂದರು.