ಬೆಂಗಳೂರು: ರಾಹುಲ್ ಗಾಂಧಿ ಸುಳ್ಳಿಗೆ ಕನ್ನಡಿ ಹಿಡಿದ ದಲಿತ ಮಂತ್ರಿಗೆ ರಾಜೀನಾಮೆ ‘ಗ್ಯಾರೆಂಟಿ ಭಾಗ್ಯ’ವನ್ನು ಕಲ್ಪಿಸಲಾಗಿದೆ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕಾಂಗ್ರೆಸ್ ಪಕ್ಷಕ್ಕೆ ಸತ್ಯ ಎಂದರೆ ಅಲರ್ಜಿ, ಸುಳ್ಳು ಎಂದರೆ ಎನರ್ಜಿ. 2024ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗಲೇ ಮತದಾರರ ಪಟ್ಟಿ ಸಿದ್ಧಪಡಿಸಿದ್ದು ಎಂಬ ಸರಳ ಸತ್ಯವನ್ನು ಹೇಳಿದ್ದೆ ಸಚಿವ ರಾಜಣ್ಣನವರಿಗೆ ಮುಳುವಾಗಿರುವುದು ಅತ್ಯಂತ ದುರದೃಷ್ಟಕರ ಎಂದಿದ್ದಾರೆ.
ರಾಹುಲ್ ಗಾಂಧಿ ಅವರ ಮತಗಳ್ಳತನ ಸುಳ್ಳಿಗೆ ಕನ್ನಡಿ ಹಿಡಿದಿದ್ದೆ ಸಚಿವ ರಾಜಣ್ಣನವರ ತಪ್ಪಾ? ಸತ್ಯ ಹೇಳಿದ್ದಕ್ಕೆ ರಾಜೀನಾಮೆ ಶಿಕ್ಷೆನಾ? ಸತ್ಯದ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ಸಿಎಂ ಸಿದ್ಧರಾಮಯ್ಯ ಅವರಿಗೆ ಸತ್ಯಕ್ಕಿಂತ, ದಲಿತ ಸಚಿವರೊಬ್ಬರ ಗೌರವಕ್ಕಿಂತ ಹೈಕಮಾಂಡ್ ಗುಲಾಮಗಿರಿಯೇ ಹೆಚ್ಚಾಗಿದ್ದು ದುರಂತ. ಸಚಿವ ರಾಜಣ್ಣನವರನ್ನು ಈ ರೀತಿ ಅಗೌರವವಾಗಿ ಸಂಪುಟದಿಂದ ವಜಾ ಮಾಡಿರುವುದು, ಕಾಂಗ್ರೆಸ್ ಪಕ್ಷದ ದಲಿತ ವಿರೋಧಿ ಮನಸ್ಥಿತಿಗೆ ಮತ್ತೊಂದು ತಾಜಾ ಉದಾಹರಣೆ ಅಷ್ಟೇ. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನೇ ಸೋಲಿಸಿದ ಕಾಂಗ್ರೆಸ್ ನವರು ಕೆಎನ್ ರಾಜಣ್ಣ ಅವರ ಸತ್ಯವನ್ನು ಸಹಿಸುತ್ತಾರಾ? ಎಂದು ಪ್ರಶ್ನಿಸಿದ್ದಾರೆ.
ರಾಹುಲ್ ಗಾಂಧಿ ಸುಳ್ಳಿಗೆ ಕನ್ನಡಿ ಹಿಡಿದ ದಲಿತ ಮಂತ್ರಿಗೆ ರಾಜೀನಾಮೆ "ಗ್ಯಾರೆಂಟಿ" ಭಾಗ್ಯ!
ಕಾಂಗ್ರೆಸ್ ಪಕ್ಷಕ್ಕೆ ಸತ್ಯ ಎಂದರೆ ಅಲರ್ಜಿ, ಸುಳ್ಳು ಎಂದರೆ ಎನರ್ಜಿ. 2024ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಜ್ಯದಲ್ಲಿ @INCKarnataka ಪಕ್ಷ ಅಧಿಕಾರದಲ್ಲಿದ್ದಾಗಲೇ ಮತದಾರರ ಪಟ್ಟಿ ಸಿದ್ಧಪಡಿಸಿದ್ದು ಎಂಬ ಸರಳ ಸತ್ಯವನ್ನು ಹೇಳಿದ್ದೆ ಸಚಿವ… pic.twitter.com/1ngi24lewl
— R. Ashoka (@RAshokaBJP) August 11, 2025
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾಗಿ ‘MLC ದಿನೇಶ್ ಗೂಳಿಗೌಡ’ ನೇಮಕ
ಕಾನನ ಪ್ರದೇಶದೊಳಗೆ ಸಾಗುವ ರಸ್ತೆಗಳಲ್ಲಿ ಅರಣ್ಯ ಇಲಾಖೆಯ ಗಸ್ತು ವಾಹನ ನಿಯೋಜನೆ: ಅರಣ್ಯ ಸಚಿವ ಈಶ್ವರ್ ಖಂಡ್ರೆ