ಚಾಮರಾಜನಗರ : ತಾಲೂಕಿನ ಕಾವೇರಿ ವನ್ಯಧಾಮದ ಶಾಗ್ಯ ಗಸ್ತಿನ ಹೊಳೆ ವ್ಯಾಪ್ತಿಯ ಮುರದಟ್ಟಿಯ ಕಿರುಬನಕಲ್ಲು ಗುಡ್ಡದಲ್ಲಿ ಎರಡು ಹುಲಿ ಮರಿಗಳು ಸಾವನ್ನಪ್ಪಿದೆ.
ಮರಿಗಳು ಜನಿಸಿ 15 ದಿನಗಳಾಗಿದ್ದು, ತಾಯಿ ಹುಲಿಯಿಂದ ಬೇರ್ಪಟ್ಟ ಬಳಿಕ ಹಸಿವಿನಿಂದ ಬಳಲಿ ನಿತ್ರಾಣಗೊಂಡ ಮೃತಪಟ್ಟಿರುವುದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದು ಬಂದಿದೆ.
ಜೂನ್ 26ರಂದು ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಬಳಿ ಐದು ಹುಲಿಗಳು ವಿಷಪ್ರಾಷನದಿಂದ ಮೃತಪಟ್ಟಿದ್ದವು. ಇದೀಗ ಮತ್ತೆರಡು ಹುಲಿ ಮರಿಗಳು ಸಾವನ್ನಪ್ಪಿದ್ದು ಪ್ರಾಣಿಪ್ರಿಯರು ಆಘಾತ ವ್ಯಕ್ತಪಡಿಸಿದ್ದಾರೆ.