Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶೀಘ್ರದಲ್ಲೇ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿಗಳಿಗೆ ಚುನಾವಣೆ: ಸಚಿವ ಪ್ರಿಯಾಂಕ್ ಖರ್ಗೆ

14/08/2025 6:37 PM

ಚೀನಾ ಜೊತೆ ಗಡಿ ವ್ಯಾಪಾರ ಪುನರಾರಂಭ ಕುರಿತು ಸರ್ಕಾರ ಸುಳಿವು, ‘ಭಾರತದೊಂದಿಗೆ ಕೆಲಸ ಮಾಡಲು ಸಿದ್ಧ’ ಎಂದ ಬೀಜಿಂಗ್

14/08/2025 6:37 PM

ವೈದ್ಯಕೀಯ: ಛಾಯ್ಸ್‌-2 ಅಭ್ಯರ್ಥಿಗಳಿಗೆ ಮುಂಗಡ ಶುಲ್ಕ ಪಾವತಿಯಲ್ಲಿ ಬದಲಾವಣೆ- ಕೆಇಎ

14/08/2025 6:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವೈದ್ಯಕೀಯ: ಛಾಯ್ಸ್‌-2 ಅಭ್ಯರ್ಥಿಗಳಿಗೆ ಮುಂಗಡ ಶುಲ್ಕ ಪಾವತಿಯಲ್ಲಿ ಬದಲಾವಣೆ- ಕೆಇಎ
KARNATAKA

ವೈದ್ಯಕೀಯ: ಛಾಯ್ಸ್‌-2 ಅಭ್ಯರ್ಥಿಗಳಿಗೆ ಮುಂಗಡ ಶುಲ್ಕ ಪಾವತಿಯಲ್ಲಿ ಬದಲಾವಣೆ- ಕೆಇಎ

By kannadanewsnow0914/08/2025 6:34 PM

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಹೋಮಿಯೋಪಥಿ ಕೋರ್ಸ್‌ನ ಮೊದಲ ಸುತ್ತಿನ ಸೀಟು ಹಂಚಿಕೆಗೆ ಛಾಯ್ಸ್‌ ದಾಖಲಿಸುವ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು, ₹12 ಲಕ್ಷಕ್ಕಿಂತ ಹೆಚ್ಚಿನ ಕೋರ್ಸ್‌ ಶುಲ್ಕದ ಸೀಟು ಸಿಕ್ಕಿ, ಛಾಯ್ಸ್‌-2 ಆಯ್ಕೆ ಮಾಡಿಕೊಳ್ಳುವ ಅಭ್ಯರ್ಥಿಗಳಿಗೆ ಪೂರ್ಣ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಗುರುವಾರ ಇಲ್ಲಿ ತಿಳಿಸಿದ್ದಾರೆ.

ಇದುವರೆಗೂ ಛಾಯ್ಸ್‌-2 ದಾಖಲಿಸುವ ವೈದ್ಯಕೀಯ ಅಭ್ಯರ್ಥಿಗಳು ಪೂರ್ಣ ಕೋರ್ಸ್‌ ಶುಲ್ಕ ಕಟ್ಟಬೇಕಿತ್ತು. ಆದರೆ, ಈ ಬಾರಿ ಇದನ್ನು ಬದಲಿಸಲಾಗಿದೆ. ₹12 ಲಕ್ಷಕ್ಕಿಂತ ಹೆಚ್ಚಿನ ಕೋರ್ಸ್‌ ಶುಲ್ಕದ ವೈದ್ಯಕೀಯ ಸೀಟು ಹಂಚಿಕೆಯಾಗಿದ್ದಲ್ಲಿ ಮತ್ತು ಛಾಯ್ಸ್‌-2 ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು 12,001,17 ರೂಪಾಯಿಯನ್ನು ಮುಂಗಡ ಕೋರ್ಸ್‌ ಶುಲ್ಕವಾಗಿ ಪಾವತಿಸಬೇಕು. ಎಸ್‌ಸಿ/ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳು ಎರಡು ಲಕ್ಷ ರೂಪಾಯಿ ಕಟ್ಟಬೇಕು. ಬಾಕಿ ಶುಲ್ಕವನ್ನು 2ನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಣೆ ನಂತರ ಪಾವತಿಸಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೊದಲ ಸುತ್ತಿನಲ್ಲಿ ʼಜಿʼ ವರ್ಗದಲ್ಲಿ ವೈದ್ಯಕೀಯ ಸೀಟು ಪಡೆದು, ಛಾಯ್ಸ್‌-2 ಆಯ್ಕೆ ಮಾಡಿಕೊಂಡವರು ಸೂಚನೆಗಳನ್ವಯ ಕೋರ್ಸ್‌ ಶುಲ್ಕವನ್ನು ಕಟ್ಟಬೇಕು ಎಂದು ಅವರು ವಿವರಿಸಿದ್ದಾರೆ.

ಅಖಿಲ ಭಾರತ ಕೋಟಾ ಅಥವಾ ಇತರೆ ಯಾವುದೇ ರಾಜ್ಯಗಳ ಕೌನ್ಸೆಲಿಂಗ್‌ ನಲ್ಲಿ ವೈದ್ಯಕೀಯ ಸೀಟು ಹಂಚಿಕೆಯಾದರೆ, ಅಂತಹವರು ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟಿಸುವ ಮೊದಲೇ ಕೆಇಎ ಸೀಟ್‌ ಅನ್ನು ರದ್ದುಪಡಿಸಿಕೊಳ್ಳಬಹುದು. ಅಂತಹವರ ಮುಂಗಡ ಶುಲ್ಕವನ್ನು ಸೀಟು ಹಂಚಿಕೆಯಾದ ಕಾಲೇಜುಗಳಿಗೆ ವರ್ಗಾಯಿಸಲಾಗುವುದು. ಪರಿಶಿಷ್ಟ ಜಾತಿ/ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ಮರುಪಾವತಿಸಲಾಗುವುದು ಎಂದು ವಿವರಿಸಿದ್ದಾರೆ.

ಅಖಿಲ ಭಾರತ ಕೋಟಾ ಅಥವಾ ಇತರೆ ಯಾವುದೇ ರಾಜ್ಯಗಳ ಕೌನ್ಸೆಲಿಂಗ್‌ನಲ್ಲಿ ವೈದ್ಯಕೀಯ ಸೀಟು ಸಿಗದಿದ್ದರೂ ಕೆಇಎ ಮೂಲಕ ಹಂಚಿಕೆಯಾದ ಸೀಟು ರದ್ದುಪಡಿಸಿಕೊಳ್ಳಲು ಬಯಸಿದರೆ, ಅಂತಹವರ ಮುಂಗಡ ಶುಲ್ಕವನ್ನು (12,001,17 ರೂಪಾಯಿ) ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಪರಿಶಿಷ್ಟ ಜಾತಿ/ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳ ಎರಡು ಲಕ್ಷ ರೂಪಾಯಿ ಕೂಡ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಅವರು ಹೇಳಿದರು.

ಛಾಯ್ಸ್‌ ಆಯ್ಕೆಗೆ ಆ.16ರವರೆಗೆ ಅವಕಾಶ ನೀಡಿದ್ದು, ಎಚ್ಚರಿಕೆಯಿಂದ ದಾಖಲಿಸಲು ಸಲಹೆ ನೀಡಿದ್ದಾರೆ. ರಾಜ್ಯದಲ್ಲಿ ವೈದ್ಯಕೀಯ ಸೇರಿದಂತೆ ಇತರ ಕೋರ್ಸ್‌ಗಳಲ್ಲಿ ಸೀಟು ಪಡೆದ 1,400 ಮಂದಿಗೆ ಅಖಿಲ ಭಾರತ ಕೋಟಾದಲ್ಲಿ ವೈದ್ಯಕೀಯ ಸೀಟು ಹಂಚಿಕೆಯಾಗಿದ್ದು, ಅಂತಹವರು ಅದೇ ಕೋಟಾದಲ್ಲೇ ಪ್ರವೇಶ ಪಡೆಯುವುದರಿಂದ ರಾಜ್ಯದ ಇತರರಿಗೆ ಅನುಕೂಲ ಆಗಲಿದೆ. ಈ ಬಗ್ಗೆ ಪೋಷಕರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಿ ಎಂದು ಅವರು ಸಲಹೆ ನೀಡಿದ್ದಾರೆ.

ಛಾಯ್ಸ್‌-1 ಆಯ್ಕೆ ಮಾಡಿದವರು ಆ.18ರೊಳಗೆ ಶುಲ್ಕ ಪಾವತಿಸಿ, ಸೀಟು ಖಾತರಿ ಚೀಟಿ ಡೌನ್‌ಲೋಡ್‌ ಮಾಡಿಕೊಂಡು, ಆ.19ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು. ಸ್ವಾತಂತ್ರ್ಯ ದಿನಾಚರಣೆ ದಿನ ಸೇರಿದಂತೆ ಎಲ್ಲ ರಜಾ ದಿನಗಳಲ್ಲೂ ಕಾರ್ಯನಿರ್ವಹಿಸಲು ಕಾಲೇಜುಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

Watch Video: ಜಮ್ಮು-ಕಾಶ್ಮೀರದಲ್ಲಿ ಮೇಘಸ್ಪೋಟದಿಂದ 33 ಮಂದಿ ಸಾವು: ಇಲ್ಲಿವೆ ಭಯಾನಕ ವೀಡಿಯೋ

BIG NEWS : ಸುಪ್ರೀಂ ಕೋರ್ಟ್ ಜಾಮೀನು ರದ್ದು ಬೆನ್ನಲ್ಲೇ ದರ್ಶನ್‌ ಆಪ್ತ A14 ಆರೋಪಿ ಪ್ರದೋಶ್, A12 ಲಕ್ಶ್ಮಣ ಅರೆಸ್ಟ್‌

Share. Facebook Twitter LinkedIn WhatsApp Email

Related Posts

ಶೀಘ್ರದಲ್ಲೇ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿಗಳಿಗೆ ಚುನಾವಣೆ: ಸಚಿವ ಪ್ರಿಯಾಂಕ್ ಖರ್ಗೆ

14/08/2025 6:37 PM1 Min Read

ಆ.16ರಂದು ‘ಕೃಷ್ಣ ಜನ್ಮಾಷ್ಟಮಿ’ ಹಿನ್ನಲೆ: ಬೆಂಗಳೂರಲ್ಲಿ ‘ಪ್ರಾಣಿವಧೆ, ಮಾಂಸ ಮಾರಾಟ’ ನಿಷೇಧ

14/08/2025 5:53 PM1 Min Read

ಇದು ಅಷ್ಟ ಲಕ್ಷ್ಮಿಯರ ಮಹಾತ್ಮೆ: ಪೂಜಿಸಿ ನೋಡಿ ಅಷ್ಟೈಶ್ವರ್ಯ ಖಚಿತ

14/08/2025 5:47 PM3 Mins Read
Recent News

ಶೀಘ್ರದಲ್ಲೇ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿಗಳಿಗೆ ಚುನಾವಣೆ: ಸಚಿವ ಪ್ರಿಯಾಂಕ್ ಖರ್ಗೆ

14/08/2025 6:37 PM

ಚೀನಾ ಜೊತೆ ಗಡಿ ವ್ಯಾಪಾರ ಪುನರಾರಂಭ ಕುರಿತು ಸರ್ಕಾರ ಸುಳಿವು, ‘ಭಾರತದೊಂದಿಗೆ ಕೆಲಸ ಮಾಡಲು ಸಿದ್ಧ’ ಎಂದ ಬೀಜಿಂಗ್

14/08/2025 6:37 PM

ವೈದ್ಯಕೀಯ: ಛಾಯ್ಸ್‌-2 ಅಭ್ಯರ್ಥಿಗಳಿಗೆ ಮುಂಗಡ ಶುಲ್ಕ ಪಾವತಿಯಲ್ಲಿ ಬದಲಾವಣೆ- ಕೆಇಎ

14/08/2025 6:34 PM

Watch Video: ಜಮ್ಮು-ಕಾಶ್ಮೀರದಲ್ಲಿ ಮೇಘಸ್ಪೋಟದಿಂದ 33 ಮಂದಿ ಸಾವು: ಇಲ್ಲಿವೆ ಭಯಾನಕ ವೀಡಿಯೋ

14/08/2025 6:03 PM
State News
KARNATAKA

ಶೀಘ್ರದಲ್ಲೇ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿಗಳಿಗೆ ಚುನಾವಣೆ: ಸಚಿವ ಪ್ರಿಯಾಂಕ್ ಖರ್ಗೆ

By kannadanewsnow0914/08/2025 6:37 PM KARNATAKA 1 Min Read

ಬೆಂಗಳೂರು: ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕರ್ನಾಟಕ…

ವೈದ್ಯಕೀಯ: ಛಾಯ್ಸ್‌-2 ಅಭ್ಯರ್ಥಿಗಳಿಗೆ ಮುಂಗಡ ಶುಲ್ಕ ಪಾವತಿಯಲ್ಲಿ ಬದಲಾವಣೆ- ಕೆಇಎ

14/08/2025 6:34 PM

ಆ.16ರಂದು ‘ಕೃಷ್ಣ ಜನ್ಮಾಷ್ಟಮಿ’ ಹಿನ್ನಲೆ: ಬೆಂಗಳೂರಲ್ಲಿ ‘ಪ್ರಾಣಿವಧೆ, ಮಾಂಸ ಮಾರಾಟ’ ನಿಷೇಧ

14/08/2025 5:53 PM

ಇದು ಅಷ್ಟ ಲಕ್ಷ್ಮಿಯರ ಮಹಾತ್ಮೆ: ಪೂಜಿಸಿ ನೋಡಿ ಅಷ್ಟೈಶ್ವರ್ಯ ಖಚಿತ

14/08/2025 5:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.