ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು ಬಾಲಕ ಸಾವನ್ನಪ್ಪಿದ ಘಟನೆ ನಗರದ ಆಡುಗೊಡಿಯಲ್ಲಿ ನಡೆದಿದ್ದು, ಘಟನೆಯಲ್ಲಿ ಓರ್ವ ಬಾಲಕ ಸಾವನ್ನಪ್ಪಿದ್ದು, 8 ಜನ ಗಾಯಗೊಂಡಿದ್ದಾರೆ. ಅದರಲ್ಲಿ ಮೂವರ ಸ್ಥಿತಿ ಗಂಭಿರವಾಗಿದೆ ಎಂದು ತಿಳಿದುಬಂದಿದೆ. ಇದೀಗ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆಯಲ್ಲಿ 8 ವರ್ಷದ ಬಾಲಕ ಮೃತಪಟ್ಟಿದ್ದು, ಮೃತ ಬಾಲಕನನ್ನು ಮುಬಾರಕ್ (8) ಎಂದು ಗುರುತಿಸಲಾಗಿದೆ. ತಿಮ್ಮರಾಜು ಎಂಬುವವರ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಆ ಮನೆ ಸಂಪೂರ್ಣ ಛಿದ್ರವಾಗಿದೆ.
ಸ್ಫೋಟದಿಂದ ಅಕ್ಕಪಕ್ಕದ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಗಾಯಾಳುಗಳು ತೀವ್ರ ರಕ್ತಸ್ರಾವ ಹಾಗೂ ಸುಟ್ಟ ಗಾಯಗಳಿಂದ ನರಾಳಾಡುತ್ತಿರುವ ದೃಶ್ಯ ಸಹ ಕಂಡು ಬಂತು. ಗಾಯಾಳಯಗಳನ್ನು ಸಂಜಯ್ ಗಾಂಧಿ, ರಾಜೀವ್ ಗಾಂಧಿ ಆಸ್ಪತ್ರೆ ಸೇರಿದಂತೆ ಇತರೆ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.