Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ : ನಾಲ್ವರು ಸಾವು, 6 ಮಂದಿಗೆ ಗಾಯ | WATCH VIDEO

17/08/2025 9:01 AM

ಭಾರತಕ್ಕೆ ಮರಳಿದ ಶುಭಾಂಶು ಶುಕ್ಲಾ : ಮಿಷನ್ ಕುರಿತು ವಿಶೇಷ ಅಧಿವೇಶನಕ್ಕೆ ಪಾರ್ಲಿಮೆಂಟ್ ಚಿಂತನೆ

17/08/2025 8:59 AM

ರಾಜ್ಯದ ನದಿ, ಕೆರೆ ಸೇರಿದಂತೆ ಯಾವುದೇ ಜಲ ಮೂಲದಲ್ಲಿ `ಪಿಓಪಿ ಗಣೇಶ ಮೂರ್ತಿಗಳ’ ವಿಸರ್ಜನೆ ನಿಷೇಧ.!

17/08/2025 8:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ನದಿ, ಕೆರೆ ಸೇರಿದಂತೆ ಯಾವುದೇ ಜಲ ಮೂಲದಲ್ಲಿ `ಪಿಓಪಿ ಗಣೇಶ ಮೂರ್ತಿಗಳ’ ವಿಸರ್ಜನೆ ನಿಷೇಧ.!
KARNATAKA

ರಾಜ್ಯದ ನದಿ, ಕೆರೆ ಸೇರಿದಂತೆ ಯಾವುದೇ ಜಲ ಮೂಲದಲ್ಲಿ `ಪಿಓಪಿ ಗಣೇಶ ಮೂರ್ತಿಗಳ’ ವಿಸರ್ಜನೆ ನಿಷೇಧ.!

By kannadanewsnow5717/08/2025 8:48 AM

ಬೀದರ್: ಭಾದ್ರಪದ ಶುಕ್ಲ ಚತುರ್ಥಿಯಂದು ಮನೆ ಮನೆಯಲ್ಲೂ ಪೂಜೆಗೊಳ್ಳುವ ಗಣೇಶ ಪರಿಸರ (ಮಣ್ಣಿನಿಂದ)ದಿಂದಲೇ ಹುಟ್ಟಿದ ದೇವರಾಗಿದ್ದು, ಪರಿಸರ ಸ್ನೇಹಿಯಾದ ಬಣ್ಣರಹಿತ ಮಣ್ಣಿನ ಮೂರ್ತಿಗಳನ್ನೇ ಪೂಜಿಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ ಖಂಡ್ರೆ ನಾಡಿನ ಜನತೆಗೆ ಮನವಿ ಮಾಡಿದ್ದಾರೆ.

ಗೌರಿ – ಗಣೇಶ ಹಬ್ಬದ ಸಂದರ್ಭದಲ್ಲಿ ಚಿನ್ನದಿಂದ, ಬೆಳ್ಳಿಯಿಂದ ಅಥವಾ ಮಣ್ಣಿನಿಂದ ಮಾಡಿದ ಮೂರ್ತಿಗಳನ್ನು ಪೂಜಿಸುವುದು ಅನೂಚಾನವಾಗಿ ನಡೆದುಬಂದಿರುವ ಸಂಪ್ರದಾಯ. ಆದರೆ ಇತ್ತೀಚಿನ ವರ್ಷಗಳಲ್ಲಿ ನೀರಲ್ಲಿ ಕರಗದ ಪ್ಲಾಸ್ಟರ್ ಆಫ್ ಪ್ಯಾರೀಸ್ ಮತ್ತು ವಿಷಕಾರಿಯಾದ ಭಾರಲೋಹಯುಕ್ತ ರಾಸಾಯನಿಕ ಬಣ್ಣ ಲೇಪಿತ -ಪಿಓಪಿ ಮೂರ್ತಿಗಳ ಸಂಖ್ಯೆ ಹೆಚ್ಚಾಗಿದ್ದು, ಇದರ ವಿಸರ್ಜನೆಯಿಂದ ಜಲಚರಗಳು, ಪಶುಪಕ್ಷಿಗಳ ಸಾವಿಗೆ ಕಾರಣವಾಗುತ್ತಿದೆ ಎಂದೂ ತಿಳಿಸಿದ್ದಾರೆ.

ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ)ಕಾಯಿದೆ 1974ರ ಕಲಂ 33(ಎ) ಅಡಿಯಲ್ಲಿ ರಾಜ್ಯದ ನದಿ, ಸರೋವರ, ಕೆರೆ, ಕಟ್ಟೆ, ಬಾವಿ ಸೇರಿದಂತೆ ಯಾವುದೇ ಜಲ ಮೂಲದಲ್ಲಿ ಪಿಓಪಿ ಮೂರ್ತಿಗಳ ವಿಸರ್ಜನೆ ನಿಷೇಧಿಸಲಾಗಿದೆ. ಪ್ರಜ್ಞಾವಂತ, ಜವಾಬ್ದಾರಿಯುತ ನಾಗರಿಕರು, ಧಾರ್ಮಿಕರು ಪರಿಸರ ಸ್ನೇಹಿ ಮಣ್ಣಿನ ಗಣಪತಿ ಮೂರ್ತಿಗಳನ್ನು ಮಾತ್ರವೇ ಪೂಜಿಸಿ ಪರಿಸರ ಉಳಿಸುವಂತೆ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.

ಹೈಕೋರ್ಟ್ ಆದೇಶ:

ಪಿಓಪಿ ಗಣೇಶ ವಿಗ್ರಹಗಳನ್ನು ಕ್ಯಾಲ್ಷಿಯಂ, ಸಲ್ಫೇಟ್, ಹೆಮಿಹೈಡ್ರೇಟ್ ಯುಕ್ತ ಪುಡಿಯಿಂದ ತಯಾರಿಸಲಾಗುತ್ತದೆ. ಇದರಲ್ಲಿ ಗಂಧಕ, ರಂಜಕ, ಜಿಪ್ಸಮ್ ಮತ್ತು ಮ್ಯಾಗ್ನೀಷಿಯಂ ಸೇರಿದಂತೆ ಅನೇಕ ಅಪಾಯಕಾರಿ ಅಂಶಗಳಿರುತ್ತವೆ. ಇಂತಹ ಮೂರ್ತಿಗಳಿಗೆ ಪಾದರಸ, ಕ್ಯಾಡ್ಮಿಯಂ, ಸೀಸ ಮತ್ತು ಇಂಗಾಲ ಒಳಗೊಂಡ ರಾಸಾಯನಿಕ ಬಣ್ಣ ಲೇಪಿಸಲಾಗುತ್ತದೆ. ಇದನ್ನು ಕೆರೆ, ಬಾವಿ, ನದಿಯಲ್ಲಿ ವಿಸರ್ಜಿಸಿದಾಗ ಭಾರ ಲೋಹ ಕರಗಿ ಜನ ಜಾನುವಾರುಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಜಲಚರಗಳ ಸಾವಿಗೆ ಕಾರಣವಾಗುತ್ತದೆ ಎಂದು ತಿಳಿಸಿದ್ದಾರೆ.

ಹಬ್ಬದ ಸಂಭ್ರಮದಲ್ಲಿ ಯಾವುದೇ ಸಮುದಾಯದ ಧಾರ್ಮಿಕ ಭಾವನೆಗಳಿಗೆ ನೋವು ಉಂಟು ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ. ಆದರೆ ಪರಿಸರಕ್ಕೆ ಮಾರಕವಾದ ಪಿಓಪಿ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಮತ್ತು ವಿಸರ್ಜನೆ ನಿಷೇಧಿಸಿ 2023ರ ಸೆ.15ರಂದು ಸರ್ಕಾರಿ ಆದೇಶ ಹೊರಡಿಸಲಾಗಿದೆ, ಇತ್ತೀಚೆಗೆ ರಾಜ್ಯ ಹೈಕೋರ್ಟ್ ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಪರಿಸರ ಸ್ನೇಹಿಯಾದ ಮಣ್ಣಿನ ಮೂರ್ತಿಗಳನ್ನು ಪೂಜಿಸಿ ಪರಿಸರ ಉಳಿಸುವಂತೆ ಕೋರಿದ್ದಾರೆ.

Ban on the immersion of 'POP Ganesh idols' in any water source including rivers and lakes in the state!
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ 2.76 ಲಕ್ಷ `ಸರ್ಕಾರಿ ಹುದ್ದೆಗಳು’ ಖಾಲಿ : ಭರ್ತಿಗೆ ಆರ್ಥಿಕ ಸುಧಾರಣಾ ಇಲಾಖೆಗೆ ಪ್ರಸ್ತಾವನೆ ಸಲ್ಲಿಕೆ.!

17/08/2025 8:39 AM1 Min Read

BREAKING : ಧರ್ಮಸ್ಥಳದ `ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ’ ಭೇಟಿಯಾದ ಬಿಜೆಪಿ ನಾಯಕರು : ಮಹತ್ವದ ಚರ್ಚೆ.!

17/08/2025 8:24 AM1 Min Read

GOOD NEWS : ಹೊಸ `BPL’ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಶೀಘ್ರವೇ `ಪಡಿತರ ಚೀಟಿ’ ವಿತರಣೆ.!

17/08/2025 7:49 AM1 Min Read
Recent News

BREAKING : ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ : ನಾಲ್ವರು ಸಾವು, 6 ಮಂದಿಗೆ ಗಾಯ | WATCH VIDEO

17/08/2025 9:01 AM

ಭಾರತಕ್ಕೆ ಮರಳಿದ ಶುಭಾಂಶು ಶುಕ್ಲಾ : ಮಿಷನ್ ಕುರಿತು ವಿಶೇಷ ಅಧಿವೇಶನಕ್ಕೆ ಪಾರ್ಲಿಮೆಂಟ್ ಚಿಂತನೆ

17/08/2025 8:59 AM

ರಾಜ್ಯದ ನದಿ, ಕೆರೆ ಸೇರಿದಂತೆ ಯಾವುದೇ ಜಲ ಮೂಲದಲ್ಲಿ `ಪಿಓಪಿ ಗಣೇಶ ಮೂರ್ತಿಗಳ’ ವಿಸರ್ಜನೆ ನಿಷೇಧ.!

17/08/2025 8:48 AM

ಉಪರಾಷ್ಟ್ರಪತಿ ಚುನಾವಣೆ: NDA ಅಭ್ಯರ್ಥಿ ಯಾರು? ಇಂದು ಬಿಜೆಪಿ ಸಂಸದೀಯ ಮಂಡಳಿ ಸಭೆ

17/08/2025 8:44 AM
State News
KARNATAKA

ರಾಜ್ಯದ ನದಿ, ಕೆರೆ ಸೇರಿದಂತೆ ಯಾವುದೇ ಜಲ ಮೂಲದಲ್ಲಿ `ಪಿಓಪಿ ಗಣೇಶ ಮೂರ್ತಿಗಳ’ ವಿಸರ್ಜನೆ ನಿಷೇಧ.!

By kannadanewsnow5717/08/2025 8:48 AM KARNATAKA 2 Mins Read

ಬೀದರ್: ಭಾದ್ರಪದ ಶುಕ್ಲ ಚತುರ್ಥಿಯಂದು ಮನೆ ಮನೆಯಲ್ಲೂ ಪೂಜೆಗೊಳ್ಳುವ ಗಣೇಶ ಪರಿಸರ (ಮಣ್ಣಿನಿಂದ)ದಿಂದಲೇ ಹುಟ್ಟಿದ ದೇವರಾಗಿದ್ದು, ಪರಿಸರ ಸ್ನೇಹಿಯಾದ ಬಣ್ಣರಹಿತ…

BIG NEWS : ರಾಜ್ಯದಲ್ಲಿ 2.76 ಲಕ್ಷ `ಸರ್ಕಾರಿ ಹುದ್ದೆಗಳು’ ಖಾಲಿ : ಭರ್ತಿಗೆ ಆರ್ಥಿಕ ಸುಧಾರಣಾ ಇಲಾಖೆಗೆ ಪ್ರಸ್ತಾವನೆ ಸಲ್ಲಿಕೆ.!

17/08/2025 8:39 AM

BREAKING : ಧರ್ಮಸ್ಥಳದ `ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ’ ಭೇಟಿಯಾದ ಬಿಜೆಪಿ ನಾಯಕರು : ಮಹತ್ವದ ಚರ್ಚೆ.!

17/08/2025 8:24 AM

GOOD NEWS : ಹೊಸ `BPL’ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಶೀಘ್ರವೇ `ಪಡಿತರ ಚೀಟಿ’ ವಿತರಣೆ.!

17/08/2025 7:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.