Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘RSS’ ದೇಶದ ತಾಲಿಬಾನ್ ಇದ್ದಂತೆ : ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ!

17/08/2025 3:55 PM

ಬೆಂಗಳೂರಿನ ಅವೈಜ್ಞಾನಿಕ, ದುರ್ಬಲ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್: ಕ್ರಿಮಿನಲ್ ಕೇಸ್ ಫಿಕ್ಸ್

17/08/2025 3:55 PM

BIG NEWS : ಮೈಸೂರಲ್ಲಿ ಸಂಬಳದ ನಕಲಿ ದಾಖಲೆ ಸಲ್ಲಿಸಿ ಬ್ಯಾಂಕ್‌ನಿಂದ 23 ಲಕ್ಷ ಸಾಲ ಪಡೆದ ವಂಚಕರು!

17/08/2025 3:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಅವೈಜ್ಞಾನಿಕ, ದುರ್ಬಲ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್: ಕ್ರಿಮಿನಲ್ ಕೇಸ್ ಫಿಕ್ಸ್
KARNATAKA

ಬೆಂಗಳೂರಿನ ಅವೈಜ್ಞಾನಿಕ, ದುರ್ಬಲ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್: ಕ್ರಿಮಿನಲ್ ಕೇಸ್ ಫಿಕ್ಸ್

By kannadanewsnow0917/08/2025 3:55 PM

ಬೆಂಗಳೂರು : “ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ಹಾಗೂ ದುರ್ಬಲಗೊಂಡಿರುವ ಕಟ್ಟಡಗಳನ್ನು ಮೊದಲು ಭದ್ರಗೊಳಿಸುವ ಕೆಲಸವಾಗಬೇಕು. ಇಂತಹ ಕಟ್ಟಡಗಳನ್ನು ಗುರುತಿಸಿ ನೋಟಿಸ್ ನೀಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಧರ್ಮರಾಯಸ್ವಾಮಿ ದೇವಾಲಯದ ಬಳಿಯ ನಗರ್ತಪೇಟೆಯಲ್ಲಿ ಬೆಂಕಿ ಅವಘಡದಿಂದ ಹಾನಿಗೊಳಗಾದ ಸ್ಥಳಕ್ಕೆ ಡಿಸಿಎಂ ಶಿವಕುಮಾರ್ ಅವರು ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ನಂತರ ಘಟನಾ ಸ್ಥಳ ಹಾಗೂ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಎರಡು, ಮೂರು ಮಹಡಿಗಳನ್ನು ಕಟ್ಟುವ ಕಡೆಗಳಲ್ಲಿ ಎಂಟತ್ತು ಮಹಡಿಗಳನ್ನು ನಿರ್ಮಾಣ ಮಾಡಲಾಗಿದೆ. ಹಲವಾರು ಕಟ್ಟಡಗಳು ವಾಸಕ್ಕೆ ಯೋಗ್ಯವಿಲ್ಲದಂತಾಗಿವೆ. ಇಂತಹ ಕಟ್ಟಡಗಳನ್ನು ಹೊಡೆದು ಹಾಕುವುದು ನಂತರದ ವಿಚಾರ. ಇದರ ಬಗ್ಗೆ ಮೊದಲು ಸಮೀಕ್ಷೆ ನಡೆಸಲಾಗುವುದು.‌ ಇದು ಒಂದೇ ದಿನಕ್ಕೆ ಮುಗಿಯುವ ಕೆಲಸವಲ್ಲ. ವರ್ಷಗಟ್ಟಲೆ ಹಿಡಿಯುತ್ತದೆ. ದೆಹಲಿ, ಮುಂಬೈನಲ್ಲೂ ಇದೇ ಪರಿಸ್ಥಿತಿ ಎದುರಾಗಿದೆ. ಒಳಗೆ ಬಂದು ನೋಡಿದಾಗ ನನಗೆ ಗಾಬರಿಯಾಯಿತು. ಇಂತಹ ಇಕ್ಕಟ್ಟಿನ ಜಾಗದಲ್ಲಿ ಬೆಂಕಿ ಅವಘಡ ನಡೆದರೆ ಜನ ಓಡಿ ಹೋಗುತ್ತಾರೆ, ಆಗ ಕಾಲ್ತುಳಿತ ಉಂಟಾಗಿಯೇ ಜನ ಸಾಯುತ್ತಾರೆ” ಎಂದರು.

ಮೃತರಿಗೆ ತಲಾ ಐದು ಲಕ್ಷ ಪರಿಹಾರ

“ನಿರ್ಲಕ್ಷ್ಯ ವಹಿಸಿರುವ ಕಟ್ಟಡ ಮಾಲೀಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.‌ ಅವಘಡ ನಡೆದ ಕಟ್ಟಡದ ಮಾಲೀಕರನ್ನೂ ಸಹ ಬಂಧಿಸಲಾಗಿದೆ. ಸೂಕ್ತ ಕಾನೂನು ಕ್ರಮ ಜರುಗಿಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಲಾಗಿದೆ. ಅವಘಡದಲ್ಲಿ ಮೃತಪಟ್ಟ ಪ್ರತಿ ವ್ಯಕ್ತಿಗಳ ಕುಟುಂಬಸ್ಥರಿಗೆ ರೂ. 5 ಲಕ್ಷ ಪರಿಹಾರ ನೀಡಲು ಸರ್ಕಾರ ತೀರ್ಮಾನಿಸಿದೆ” ಎಂದು ತಿಳಿಸಿದರು.

“ಕೂಡಲೇ ದುರ್ಬಲ ಕಟ್ಟಡಗಳನ್ನು ಕೆಡವಲು ಹೋಗುವುದಿಲ್ಲ. ಮಾಲೀಕರು ಕೂಡಲೇ ದುರಸ್ಥಿಗೆ ಒಳಪಡಿಸಬೇಕು. ಇಲ್ಲದಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ. ಏಕೆಂದರೆ ದುರ್ಬಲಗೊಂಡಿರುವ ಕಟ್ಟಡಗಳು ಕುಸಿತವಾಗಿ ದೊಡ್ಡ ಸಮಸ್ಯೆ ಎದುರಾಗುವುದು ಬೇಡ. ಭವಿಷ್ಯದಲ್ಲಿ ಈ ರೀತಿಯಾಗಿ ಕಟ್ಟಡಗಳ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ” ಎಂದು ಹೇಳಿದರು.

ಶೇ.70 ರಷ್ಟು ಕಟ್ಟಡಗಳು ಅಕ್ರಮ

ಅಕ್ರಮ ಕಟ್ಟಡ ನಿರ್ಮಾಣದ ಬಗ್ಗೆ ಕೇಳಿದಾಗ, “ನಗರದಲ್ಲಿ ಶೇ.70 ರಷ್ಟು ಕಟ್ಟಡ ನಿರ್ಮಾಣ ಅಕ್ರಮವಾಗಿದೆ. ನೂತನ ಬಿಡಿಎ ಲೇಔಟ್ ಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಮಹಡಿ ನಿರ್ಮಾಣ ಮಾಡುತ್ತಿದ್ದಾರೆ. ಅದಕ್ಕೆ ಈಗ ಸುಪ್ರೀಂ ಕೋರ್ಟ್ ತೀರ್ಪು ವಾಸಯೋಗ್ಯ ಪ್ರಮಾಪತ್ರವಿಲ್ಲದೇ ನೀರು, ವಿದ್ಯುತ್ ಸಂಪರ್ಕ ನೀಡಬಾರದು ಎಂದು ಮಾರ್ಗದರ್ಶನ ನೀಡಿದೆ. ಈ ಕಾರಣಕ್ಕೆ 4 ಲಕ್ಷ ಸಂಪರ್ಕಗಳನ್ನು ನಿಲ್ಲಿಸಲಾಗಿದೆ. 30/40 ಅಳತೆಯ ಎರಡು ಮಹಡಿಯ ಕಟ್ಟಡಗಳಿಗೆ ವಿನಾಯಿತಿ ನೀಡಬೇಕು ಎನ್ನುವ ವಿಚಾರವನ್ನು ಕ್ಯಾಬಿನೆಟ್ ಮುಂದೆ ತರಲಾಗುವುದು. ಸಂಪುಟ ಸಹೋದ್ಯೋಗಿಗಳು ಏನು ಹೇಳುತ್ತಾರೊ ನೋಡೋಣ” ಎಂದರು.

ಚಿಕ್ಕಪೇಟೆ, ನಗರ್ತಪೇಟೆ ಇವುಗಳು ಹೆಸರಿಗೆ ವಾಸಸ್ಥಳಗಳು, ಆದರೆ ವ್ಯಾಪಾರಿ ಕೇಂದ್ರಗಳಾಗಿ ಬದಲಾಗಿವೆ ಎಂದು ಕೇಳಿದಾಗ, “ಜನರ ಬಡತನದ ಬದುಕು. ಅಗ್ನಿಶಾಮಕ ನಿಯಮದ ಪ್ರಕಾರ ಹೋದರೆ ಎಲ್ಲಾ ಕಟ್ಟಡಗಳನ್ನು ಒಡೆದು ಹಾಕಬೇಕಾಗುತ್ತದೆ” ಎಂದರು.

“ಅನೇಕ ಕಟ್ಟಡಗಳ ಮೇಲ್ಬಾಗಕ್ಕೆ ಹತ್ತಲು ಸಹ ಆಗುತ್ತಿಲ್ಲ. ಶಾರ್ಟ್ ಸರ್ಕೀಟ್ ಆದ ಕಾರಣಕ್ಕೆ ಬೆಂಕಿ ಹೊತ್ತುಕೊಂಡು ಸಾವನ್ನಪ್ಪಿದ್ದಾರೆ. ಮೃತರೆಲ್ಲಾ ರಾಜಸ್ಥಾನ ಮೂಲದವರು.‌ ಎಲ್ಲಿಯವರು ಆದರೇನು ಬದುಕು ಕಟ್ಟಿಕೊಳ್ಳಲು ಇಲ್ಲಿಗೆ ಬಂದಿದ್ದರು” ಎಂದರು.

“ಎರಡು ದಿನಗಳ ಹಿಂದೆ ಸಿಲಿಂಡರ್ ಸ್ಪೋಟಗೊಂಡು ಮನೆ ಹಾನಿಯಾಗಿದೆ, ಜನರ ಗಾಯಗೊಂಡಿದ್ದಾರೆ. ಬೆಂಕಿಗೆ ಸಿಲುಕಿ ಐದು ಮಂದಿ ಸತ್ತಿದ್ದಾರೆ. ಬಾಡಿಗೆಗಾಗಿ ಹೀಗೆ ಕಟ್ಟಡಗಳನ್ನು ನಿರ್ಮಾಣ ಮಾಡಿರುವುದೇ ಇದೆಲ್ಲದಕ್ಕೂ ಕಾರಣ.‌‌ ಇದು ಸರಿಯಲ್ಲ” ಎಂದರು.

ಧರ್ಮಸ್ಥಳ ಬಿಜೆಪಿಯವರ ಮನೆ ಆಸ್ತಿಯಲ್ಲ

ಬಿಜೆಪಿಯವರು ಧರ್ಮಸ್ಥಳ ಯಾತ್ರೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಇದು ರಾಜಕೀಯದ ಯಾತ್ರೆ. ಧರ್ಮದ ಯಾತ್ರೆಯಲ್ಲ.‌ ಧರ್ಮಸ್ಥಳ ಬಿಜೆಪಿಯವರ ಮನೆ ಆಸ್ತಿಯಲ್ಲ. ಸಾರ್ವಜನಿಕರ ಸ್ವತ್ತು” ಎಂದರು.

ಸಿಎಂ ಬದಲಾವಣೆ ಹೇಳಿಕೆ: ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಗೆ ಕಾರಣ ಕೇಳಿ ನೋಟಿಸ್

ಪರಿಷ್ಕೃತ ಜಿಎಸ್‌ಟಿ ದರಗಳಿಂದ ಯಾವ ವಸ್ತುಗಳು ಅಗ್ಗವಾಗಬಹುದು? ಇಲ್ಲಿದೆ ಡೀಟೆಲ್ಸ್ | GST bonanza

Share. Facebook Twitter LinkedIn WhatsApp Email

Related Posts

BREAKING : ‘RSS’ ದೇಶದ ತಾಲಿಬಾನ್ ಇದ್ದಂತೆ : ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ!

17/08/2025 3:55 PM1 Min Read

BIG NEWS : ಮೈಸೂರಲ್ಲಿ ಸಂಬಳದ ನಕಲಿ ದಾಖಲೆ ಸಲ್ಲಿಸಿ ಬ್ಯಾಂಕ್‌ನಿಂದ 23 ಲಕ್ಷ ಸಾಲ ಪಡೆದ ವಂಚಕರು!

17/08/2025 3:49 PM1 Min Read

ಸಿಎಂ ಬದಲಾವಣೆ ಹೇಳಿಕೆ: ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಗೆ ಕಾರಣ ಕೇಳಿ ನೋಟಿಸ್

17/08/2025 3:46 PM1 Min Read
Recent News

BREAKING : ‘RSS’ ದೇಶದ ತಾಲಿಬಾನ್ ಇದ್ದಂತೆ : ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ!

17/08/2025 3:55 PM

ಬೆಂಗಳೂರಿನ ಅವೈಜ್ಞಾನಿಕ, ದುರ್ಬಲ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್: ಕ್ರಿಮಿನಲ್ ಕೇಸ್ ಫಿಕ್ಸ್

17/08/2025 3:55 PM

BIG NEWS : ಮೈಸೂರಲ್ಲಿ ಸಂಬಳದ ನಕಲಿ ದಾಖಲೆ ಸಲ್ಲಿಸಿ ಬ್ಯಾಂಕ್‌ನಿಂದ 23 ಲಕ್ಷ ಸಾಲ ಪಡೆದ ವಂಚಕರು!

17/08/2025 3:49 PM

ಸಿಎಂ ಬದಲಾವಣೆ ಹೇಳಿಕೆ: ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಗೆ ಕಾರಣ ಕೇಳಿ ನೋಟಿಸ್

17/08/2025 3:46 PM
State News
KARNATAKA

BREAKING : ‘RSS’ ದೇಶದ ತಾಲಿಬಾನ್ ಇದ್ದಂತೆ : ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ!

By kannadanewsnow0517/08/2025 3:55 PM KARNATAKA 1 Min Read

ಬೆಂಗಳೂರು : ಆರ್‌ಎಸ್‌ಎಸ್ ನವರು ದೇಶದಲ್ಲಿ ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ನಾನು ಆರ್‌ಎಸ್‌ಎಸ್ ಅನ್ನು ತಾಲಿಬಾನ್‌ಗೆ ಹೋಲಿಸುತ್ತೇನೆ. ಅವರು…

ಬೆಂಗಳೂರಿನ ಅವೈಜ್ಞಾನಿಕ, ದುರ್ಬಲ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್: ಕ್ರಿಮಿನಲ್ ಕೇಸ್ ಫಿಕ್ಸ್

17/08/2025 3:55 PM

BIG NEWS : ಮೈಸೂರಲ್ಲಿ ಸಂಬಳದ ನಕಲಿ ದಾಖಲೆ ಸಲ್ಲಿಸಿ ಬ್ಯಾಂಕ್‌ನಿಂದ 23 ಲಕ್ಷ ಸಾಲ ಪಡೆದ ವಂಚಕರು!

17/08/2025 3:49 PM

ಸಿಎಂ ಬದಲಾವಣೆ ಹೇಳಿಕೆ: ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಗೆ ಕಾರಣ ಕೇಳಿ ನೋಟಿಸ್

17/08/2025 3:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.