ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ ಅನ್ನು ರಾಜ್ಯ ಸರ್ಕಾರ ನೀಡಿದೆ. ಅದೇ ಕರಾರಸಾ ನಿಗಮದ ನೌಕರರು ಅಪಘಾತ ಹೊರತುಪಡಿಸಿ ಇತರೇ ಕಾರಣಗಳಿಂದ ನೌಕರರು ಮರಣ ಹೊಂದಿದಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ನೀಡುತ್ತಿದ್ದ ಪರಿಹಾರ ಮೊತ್ತವನ್ನು ರೂ.10 ಲಕ್ಷಗಳಿಂದ ರೂ. 20 ಲಕ್ಷಗಳಿಗೆ ಹೆಚ್ಚಳ ಮಾಡಿದೆ.
ಕೆ ಎಸ್ ಆರ್ ಟಿ ಸಿ ನೌಕರರು ಸೇವೆಯಲ್ಲಿರುವಾಗ ಸಿಬ್ಬಂದಿಗಳು ಖಾಸಗಿ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ ರೂ.1 ಕೋಟಿಗಳ ಅಪಘಾತ ವಿಮಾ ಮೊತ್ತವನ್ನು ವಿತರಿಸುವ ಯೋಜನೆ ಈಗಾಗಲೇ ಜಾರಿಯಲ್ಲಿರುತ್ತದೆ.
* ಇದೇ ಮೊದಲ ಬಾರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ರವರು ಅಪಘಾತ ಹೊರತುಪಡಿಸಿ ಇತರೆ ಕೆಳಕಂಡ ಪ್ರಕರಣಗಳಲ್ಲಿ ರೂ.6 ಲಕ್ಷ ಪರಿಹಾರ ಮೊತ್ತ ನೀಡುತ್ತಿದ್ದಾರೆ.
* ನಿಗಮದ ನೌಕರರು ಅಪಘಾತ ಹೊರತುಪಡಿಸಿ ಇತರೇ ಕಾರಣಗಳಿಂದ ಅಂದರೆ ಹೃದಯಾಘಾತ, ಕ್ಯಾನ್ಸರ್, ಕಿಡ್ನಿ ಹಾಗೂ ಇತರೇ ಕಾರಣಗಳಿಂದ ನೌಕರರು ಮರಣ ಹೊಂದಿದಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ನೀಡುತ್ತಿದ್ದ ಪರಿಹಾರ ಮೊತ್ತವನ್ನು ರೂ.3.00 ಲಕ್ಷಗಳಿಂದ ರೂ. 10.00 ಲಕ್ಷಗಳಿಗೆ ಹೆಚ್ಚಿಸಿ 01.10.2023 ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿತ್ತು.
* ಅದರಂತೆ ಇದುವರೆವಿಗೂ 157 ಮೃತ ನೌಕರರ ಅವಲಂಬಿತರಿಗೆ ತಲಾ ರೂ.10 ಲಕ್ಷಗಳ ಪರಿಹಾರ ಮೊತ್ತವನ್ನು ವಿತರಿಸಲಾಗಿದೆ.
* ಮೃತ ನೌಕರರ ಅವಲಂಬಿತರಿಗೆ ಹೆಚ್ಚಿನ ಮೊತ್ತದ ಪರಿಹಾರ ನೀಡುವ ಮೂಲಕ, ಆರ್ಥಿಕ ಭದ್ರತೆ ಒದಗಿಸಿಕೊಡುವ ಸದುದ್ದೇಶದಿಂದ ದಿನಾಂಕ:01.09.2025 ರಿಂದ ಜಾರಿಗೆ ಬರುವಂತೆ ನಿಗಮದ ವತಿಯಿಂದ ನೀಡಲಾಗುತ್ತಿರುವ ರೂ.10 ಲಕ್ಷಗಳ ಪರಿಹಾರ ಮೊತ್ತವನ್ನು ರೂ. 14 ಲಕ್ಷ ಗಳಿಗೆ ಹೆಚ್ಚಿಸಿ ಹೆಚ್ಚಿಸಿ ಪರಿಷ್ಕರಿಸಲಾಗಿದೆ. ಇದರೊಂದಿಗೆ ರೂ.6 ಲಕ್ಷಗಳು SBI ಬ್ಯಾಂಕ್ ವತಿಯಿಂದ ,ಒಟ್ಟು ಮೊತ್ತ ರೂ.20 ಲಕ್ಷಗಳಾಗಲಿದೆ.
ವಿಧಾನಸಭೆಯಲ್ಲಿ 2025ನೇ ಸಾಲಿನ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ ಅಂಗೀಕಾರ
ರಾಜ್ಯದ ಎಲ್ಲಾ ಅಸ್ಪತ್ರೆಗಳಲ್ಲಿ ‘ಸೂಪರ್ ಸ್ಪೆಷಾಲಿಟಿ ಅಸ್ಪತ್ರೆ’ ನಿರ್ಮಾಣ: ಸಚಿವ ಶರಣಪ್ರಕಾಶ್ ಪಾಟೀಲ್