Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಗಣೇಶ ಹಬ್ಬ ಆಚರಣೆಗೆ ಮಾರ್ಗಸೂಚಿ ಪ್ರಕಟಿಸಿದ ಬಿಬಿಎಂಪಿ: ಈ ನಿಯಮಗಳ ಪಾಲನೆ ಕಡ್ಡಾಯ

20/08/2025 7:02 PM

ಸರ್ಕಾರದ ಒಳ ಮೀಸಲಾತಿ ಕೇವಲ ರಾಜಕೀಯ ತೀರ್ಮಾನ: ಛಲವಾದಿ ನಾರಾಯಣಸ್ವಾಮಿ ಕಿಡಿ

20/08/2025 6:56 PM

ಇನ್ಮುಂದೆ ಸರ್ಕಾರಿ ವೈದ್ಯರು, ಸಿಬ್ಬಂದಿಗಳಿಗೆ ಗ್ರಾಮೀಣ ಸೇವೆ ಕಡ್ಡಾಯ: ವಿಧಾನಪರಿಷತ್ತಿನಲ್ಲಿ ಮಸೂಧೆ ಅಂಗೀಕಾರ

20/08/2025 6:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸರ್ಕಾರದ ಒಳ ಮೀಸಲಾತಿ ಕೇವಲ ರಾಜಕೀಯ ತೀರ್ಮಾನ: ಛಲವಾದಿ ನಾರಾಯಣಸ್ವಾಮಿ ಕಿಡಿ
KARNATAKA

ಸರ್ಕಾರದ ಒಳ ಮೀಸಲಾತಿ ಕೇವಲ ರಾಜಕೀಯ ತೀರ್ಮಾನ: ಛಲವಾದಿ ನಾರಾಯಣಸ್ವಾಮಿ ಕಿಡಿ

By kannadanewsnow0920/08/2025 6:56 PM

ಬೆಂಗಳೂರು: ಒಳ ಮೀಸಲಾತಿ ಸಂಬಂಧ ರಾಜ್ಯದ ಕಾಂಗ್ರೆಸ್ ಸರಕಾರವು ಕೇವಲ ರಾಜಕೀಯ ತೀರ್ಮಾನ ವ್ಯಕ್ತಪಡಿಸಿದೆ ಎಂಬುದಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಂಥ ತೀರ್ಮಾನವನ್ನು ಸರಕಾರವು ಯಾವತ್ತೋ ಕೊಡಬಹುದಾಗಿತ್ತು. ಇಷ್ಟು ಕಾಯಬೇಕಿರಲಿಲ್ಲ ಎಂದು ಅವರು ಟೀಕಿಸಿದರು. ಸರಕಾರ ಸಾಮಾಜಿಕ ನ್ಯಾಯದ ಪರವಾಗಿ ಇದೆಯೇ ಎಂಬುದು ರಾಜ್ಯದ ಜನರಿಗೆ ಪ್ರಶ್ನಾರ್ಥಕ ಚಿಹ್ನೆಯಾಗಿದೆ ಎಂದು ವಿಶ್ಲೇಷಿಸಿದರು.

ರಾಜ್ಯದ ಕಾಂಗ್ರೆಸ್ ಸರಕಾರವು ಒಳ ಮೀಸಲಾತಿ ವಿಷಯದಲ್ಲಿ ಒಂದು ತೀರ್ಮಾನಕ್ಕೆ ಬಂದ ವಿಚಾರ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಈ ತೀರ್ಮಾನವು ಸುಪ್ರೀಂ ಕೋರ್ಟ್ ಆದೇಶದ ಪರವಾಗಿ ಅಥವಾ ಸದಾಶಿವ ಆಯೋಗದ ಪರವಾಗಿಯೂ ಇಲ್ಲ; ನಾಗಮೋಹನ್ ದಾಸ್ ಆಯೋಗದ ವಿಚಾರಗಳೂ ಇದರಲ್ಲಿ ಇಲ್ಲ ಎಂದು ಆಕ್ಷೇಪಿಸಿದರು.

ನ್ಯಾ.ನಾಗಮೋಹನ್ ದಾಸ್ ಅವರು 5 ಗುಂಪುಗಳಾಗಿ ವಿಂಗಡಿಸಿದ್ದರು. ನೀವು ಅದನ್ನು ತಿರಸ್ಕಾರ ಮಾಡಿ, 3 ಗುಂಪಾಗಿ ಸೀಮಿತಗೊಳಿಸಿದ್ದೀರಿ. ಎಡ, ಬಲ ಮತ್ತು ಸ್ಪøಶ್ಯ ಸಮುದಾಯವಾಗಿ ಮಾಡಿದ ಮಾಹಿತಿ ಇದೆ. ಹಾಗಾದಲ್ಲಿ ಅಲೆಮಾರಿ ಸಮುದಾಯಗಳು, ಮೂಲ ಜಾತಿಗಳೇ ಇಲ್ಲದವರಿಗೆ ಯಾವ ನ್ಯಾಯವನ್ನು ನೀವು ಕೊಡುತ್ತೀರಿ ಎಂದು ಕೇಳಿದರು.

ಸರಕಾರವು ಸಮಸ್ಯೆಗೆ ಇತಿಶ್ರೀ ಹಾಕಿಲ್ಲ; ಮತ್ತೆ ಗೊಂದಲ ಸೃಷ್ಟಿಸಿದೆ ಅಂದು ಅನೇಕರ ಅಭಿಪ್ರಾಯ ಎಂದು ಹೇಳಿದರು. ನಮ್ಮ ಸರಕಾರವು ಮೀಸಲಾತಿ ಪ್ರಮಾಣ ಹೆಚ್ಚಿಸಿ 4 ಗುಂಪಾಗಿ ವಿಂಗಡಿಸಿ ಕೊಟ್ಟ ಒಳ ಮೀಸಲಾತಿಯನ್ನು ನೀವು ಲೇವಡಿ ಮಾಡಿದ್ದೀರಿ. ಜೊತೆಗೆ ಗೊಂದಲ ಸೃಷ್ಟಿ ಮಾಡಿದ್ದೀರಿ. ಆಗ ಮತಬ್ಯಾಂಕಿಗಾಗಿ ಜಾತಿ ಜಾತಿಗಳನ್ನು ವಿಂಗಡಿಸಿ ನೀವು ಪ್ರಯೋಜನ ಪಡೆದುಕೊಂಡಿದ್ದೀರಿ ಎಂದು ಆಕ್ಷೇಪಿಸಿದರು.

ನೀವು ನಾವು ಕೊಟ್ಟ ಅದೇ ಶೇ 17 ಪ್ರಮಾಣದಲ್ಲೇ ಮೀಸಲಾತಿ ಕೊಟ್ಟಿದ್ದೀರಿ. ನಿಮ್ಮ ಇಬ್ಬಗೆಯ ನೀತಿಗೆ ನೀವು ರಾಜ್ಯದ ಜನರ ಕ್ಷಮೆ ಕೇಳಿ ಮುಂದಡಿ ಇಡಬೇಕಿದೆ ಎಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು.

ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕಕುಮಾರ್, ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ, ವಿಧಾನಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಕೆ. ಪ್ರತಾಪಸಿಂಹ ನಾಯಕ್ ಅವರು ಉಪಸ್ಥಿತರಿದ್ದರು.

ಇನ್ಮುಂದೆ ಸರ್ಕಾರಿ ವೈದ್ಯರು, ಸಿಬ್ಬಂದಿಗಳಿಗೆ ಗ್ರಾಮೀಣ ಸೇವೆ ಕಡ್ಡಾಯ: ವಿಧಾನಪರಿಷತ್ತಿನಲ್ಲಿ ಮಸೂಧೆ ಅಂಗೀಕಾರ

ಸಾಗರ, ಹೊಸನಗರದಲ್ಲಿ ಅಭಿವೃದ್ಧಿ ಪರ್ವಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ನಾಂದಿ: 1 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಗಣೇಶ ಹಬ್ಬ ಆಚರಣೆಗೆ ಮಾರ್ಗಸೂಚಿ ಪ್ರಕಟಿಸಿದ ಬಿಬಿಎಂಪಿ: ಈ ನಿಯಮಗಳ ಪಾಲನೆ ಕಡ್ಡಾಯ

20/08/2025 7:02 PM3 Mins Read

ಇನ್ಮುಂದೆ ಸರ್ಕಾರಿ ವೈದ್ಯರು, ಸಿಬ್ಬಂದಿಗಳಿಗೆ ಗ್ರಾಮೀಣ ಸೇವೆ ಕಡ್ಡಾಯ: ವಿಧಾನಪರಿಷತ್ತಿನಲ್ಲಿ ಮಸೂಧೆ ಅಂಗೀಕಾರ

20/08/2025 6:53 PM1 Min Read

ವಿಧಾನಸಭೆಯಲ್ಲಿ ‘ಜನಸಂದಣಿ ನಿಯಂತ್ರಣ ವಿಧೇಯಕ’ ಅಂಗೀಕಾರ

20/08/2025 6:14 PM1 Min Read
Recent News

ಬೆಂಗಳೂರಲ್ಲಿ ಗಣೇಶ ಹಬ್ಬ ಆಚರಣೆಗೆ ಮಾರ್ಗಸೂಚಿ ಪ್ರಕಟಿಸಿದ ಬಿಬಿಎಂಪಿ: ಈ ನಿಯಮಗಳ ಪಾಲನೆ ಕಡ್ಡಾಯ

20/08/2025 7:02 PM

ಸರ್ಕಾರದ ಒಳ ಮೀಸಲಾತಿ ಕೇವಲ ರಾಜಕೀಯ ತೀರ್ಮಾನ: ಛಲವಾದಿ ನಾರಾಯಣಸ್ವಾಮಿ ಕಿಡಿ

20/08/2025 6:56 PM

ಇನ್ಮುಂದೆ ಸರ್ಕಾರಿ ವೈದ್ಯರು, ಸಿಬ್ಬಂದಿಗಳಿಗೆ ಗ್ರಾಮೀಣ ಸೇವೆ ಕಡ್ಡಾಯ: ವಿಧಾನಪರಿಷತ್ತಿನಲ್ಲಿ ಮಸೂಧೆ ಅಂಗೀಕಾರ

20/08/2025 6:53 PM

ಊಟವಾದ ಎಷ್ಟು ನಿಮಿಷಗಳ ಬಳಿಕ ‘ನೀರು’ ಕುಡಿಯಬೇಕು.? ಆಯುರ್ವೇದದ ಸುವರ್ಣ ರಹಸ್ಯಗಳಿವು.!

20/08/2025 6:50 PM
State News
KARNATAKA

ಬೆಂಗಳೂರಲ್ಲಿ ಗಣೇಶ ಹಬ್ಬ ಆಚರಣೆಗೆ ಮಾರ್ಗಸೂಚಿ ಪ್ರಕಟಿಸಿದ ಬಿಬಿಎಂಪಿ: ಈ ನಿಯಮಗಳ ಪಾಲನೆ ಕಡ್ಡಾಯ

By kannadanewsnow0920/08/2025 7:02 PM KARNATAKA 3 Mins Read

ಬೆಂಗಳೂರು: 2025ನೇ ಸಾಲಿನ ಗೌರಿ-ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ, ಗಣೇಶ ಮೂರ್ತಿಗಳ ತಯಾರಿಕೆ ಪ್ರಾರಂಭವಾಗಿದ್ದು, ಗಣೇಶ ಮೂರ್ತಿಯ ತಯಾರಿಕೆಗಾಗಿ ಬಳಸುವ ರಾಸಾಯನಿಕ…

ಸರ್ಕಾರದ ಒಳ ಮೀಸಲಾತಿ ಕೇವಲ ರಾಜಕೀಯ ತೀರ್ಮಾನ: ಛಲವಾದಿ ನಾರಾಯಣಸ್ವಾಮಿ ಕಿಡಿ

20/08/2025 6:56 PM

ಇನ್ಮುಂದೆ ಸರ್ಕಾರಿ ವೈದ್ಯರು, ಸಿಬ್ಬಂದಿಗಳಿಗೆ ಗ್ರಾಮೀಣ ಸೇವೆ ಕಡ್ಡಾಯ: ವಿಧಾನಪರಿಷತ್ತಿನಲ್ಲಿ ಮಸೂಧೆ ಅಂಗೀಕಾರ

20/08/2025 6:53 PM

ವಿಧಾನಸಭೆಯಲ್ಲಿ ‘ಜನಸಂದಣಿ ನಿಯಂತ್ರಣ ವಿಧೇಯಕ’ ಅಂಗೀಕಾರ

20/08/2025 6:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.