Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿವೈ ವಿಜಯೇಂದ್ರ ವಾಗ್ಧಾಳಿ

20/08/2025 8:59 PM

BREAKING: ‘ಅನನ್ಯ ಭಟ್ ನಾಪತ್ತೆ’ ಪ್ರಕರಣವನ್ನು ‘SIT’ಗೆ ಹಸ್ತಾಂತರಿಸಿ ‘ರಾಜ್ಯ ಸರ್ಕಾರ’ ಆದೇಶ

20/08/2025 8:48 PM

ಪಿಎಂ, ಸಿಎಂ ಅಥ್ವಾ ಸಚಿವರು ಜೈಲಿನಿಂದ ಸರ್ಕಾರ ನಡೆಸಬೇಕೆ ಎಂದು ಜನರು ನಿರ್ಧರಿಸಲಿ : ಅಮಿತ್ ಶಾ

20/08/2025 8:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ಅನನ್ಯ ಭಟ್ ನಾಪತ್ತೆ’ ಪ್ರಕರಣವನ್ನು ‘SIT’ಗೆ ಹಸ್ತಾಂತರಿಸಿ ‘ರಾಜ್ಯ ಸರ್ಕಾರ’ ಆದೇಶ
KARNATAKA

BREAKING: ‘ಅನನ್ಯ ಭಟ್ ನಾಪತ್ತೆ’ ಪ್ರಕರಣವನ್ನು ‘SIT’ಗೆ ಹಸ್ತಾಂತರಿಸಿ ‘ರಾಜ್ಯ ಸರ್ಕಾರ’ ಆದೇಶ

By kannadanewsnow0920/08/2025 8:48 PM

ಬೆಂಗಳೂರು: ಅನನ್ಯ ಭಟ್ ನಾಪತ್ತೆಯಾಗಿದ್ದರ ಬಗ್ಗೆ ಅವರ ತಾಯಿ ಸುಜಾತಾ ಭಟ್ ಆರೋಪಿಸಿದ್ದರು. ತಮ್ಮ ಮಗಳ ಅಸ್ಥಿ ಪಂಜರ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಅನನ್ಯ ಭಟ್ ನಾಪತ್ತೆ ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರಿಸಿ ಆದೇಶಿಸಿದೆ.

ಇಂದು ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಮಾಡಲಾಗಿದ್ದು, ಅನನ್ಯ ಭಟ್ ನಾಪತ್ತೆ ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರಿಸಿ ಆದೇಶಿಸಿದೆ. ಡಿಜಿ ಮತ್ತು ಐಜಿಪಿ ಆದೇಶದ ಮೇರೆಗೆ ಎಸ್ಐಟಿಗೆ ಹಸ್ತಾಂತರಿಸಲಾಗಿದೆ.

2003ರಲ್ಲಿ ಧರ್ಮಸ್ಥಳದಲ್ಲಿ ಅನನ್ಯ ಭಟ್ ನಾಪತ್ತೆಯಾದ ಬಗ್ಗೆ ದೂರು ದಾಖಲಾಗಿತ್ತು. ಅನನ್ಯ ಭಟ್ ಕಾಣೆಯಾಗಿದ್ದ ಬಗ್ಗೆ ದೂರು ಸಲ್ಲಿಕೆಯಾಗಿತ್ತು. ಇದೀಗ ವೈದ್ಯಕೀಯ ವಿದ್ಯಾರ್ಥಿಯಾಗಿದ್ದಂತ ಅನನ್ಯ ಭಟ್ ನಾಪತ್ತೆಯಾಗಿದ್ದರು. ಈ ಪ್ರಕರಣವನ್ನು ಎಸ್ಐಟಿಗೆ ರಾಜ್ಯ ಸರ್ಕಾರ ಹಸ್ತಾಂತರಿ ಅಧಿಕೃತ ಆದೇಶ ಮಾಡಿದೆ.

ನಿನ್ನೆ ಫೋಟೋದಲ್ಲಿರುವವಳೇ ನನ್ನ ಮಗಳು ಎಂದಿದ್ದ ಸುಜಾತ ಭಟ್

ದೂರುದಾರೆ ಸುಜಾತ ಭಟ್ ಅವರು, ಎಲ್ಲರೂ ಒಂದೊಂದು ರೀತಿ ತೇಜೋವಧೆ ಮಾಡುತ್ತಿದ್ದಾರೆ. ಅವರಿಗೆ ಬೇರೆ ಕೆಲಸ ಇಲ್ಲ. ನನ್ನ ನೋವು ನನಗೆ ಗೊತ್ತು. ನನ್ನ ಮಗಳದ್ದು ಒಂದು ಸಣ್ಣ ಫೋಟೋ ಇದೆ. ಆ ಫೋಟೋದಲ್ಲಿರುವವಳೇ ನನ್ನ ಮಗಳು ಎಂದು ಸುಜಾತ ಭಟ್ ಎಂಬುದಾಗಿ ಸ್ಪಷ್ಟ ಪಡಿಸಿದ್ದರು.

ಇದರಲ್ಲಿ ಫೇಕ್ ಯಾವುದೂ ಇಲ್ಲ. ನಾನು ರಂಗಪ್ರಸಾದ್ ಅವರ ಮನೆಯಲ್ಲಿ ಇದ್ದಿದ್ದು ನಿಜ. ನಾನು ಕೇಳಿರೋದು ನನ್ನ ಮಗಳ ಅಸ್ಥಿ. ಅನಾಮಧೇಯ ವ್ಯಕ್ತಿ ಬಂದು ಶವಗಳನ್ನು ಹೂತಿದ್ದಾಗಿ ಹೇಳಿದ್ದ. ನನ್ನ ಮಗಳ ಅಸ್ಥಿ ಪಂಜರ ಸಿಕ್ಕಿದ್ರೆ ಕೊಡಿ ಎಂದು ಕೇಳಿದ್ದೆ. ಪೋಟೋದಲ್ಲಿ ಇರುವವಳು ನನ್ನ ಮಗಳು. ಅದು ಸತ್ಯ. ಒಬ್ಬ ವ್ಯಕ್ತಿ ರೀತಿ ತುಂಬಾ ಜನ ಇರುತ್ತಾರೆ ಅಲ್ವ? ನನ್ನ ಭಾವ ಈ ಆರೋಪಗಳನ್ನು ಮಾಡ್ತಿದ್ದಾರೆ. ನಾನು ಎಲ್ಲಿ ದಾಖಲೆ ಕೊಡಬೇಕೋ ಅಲ್ಲಿ ಕೊಡುತ್ತೇನೆ ಎಂದಿದ್ದರು.

ರಿಪ್ಪನ್ ಪೇಟೆಯಲ್ಲಿ ಪ್ರಭಾಕರ್ ಜೊತೆ ಇದ್ದಿದ್ದು ನಿಜ. ಪ್ರಭಾಕರ್ ನನ್ನ ಗಂಡ ಅಲ್ಲ. ನಾನು ಕಷ್ಟದಲ್ಲಿ ಇರುವಾಗ ಅವರು ನೋಡಿಕೊಂಡಿದ್ದಾರೆ. ಯಾರ ಜೊತೆಗೂ ಇರಬಾರದು ಅಂತ ಇದೆಯಾ ಎಂದು ಪ್ರಶ್ನಿಸಿದ್ದರು.

ರಿಪ್ಪನ್ ಪೇಟೆಯಿಂದ ಕೋಲ್ಕತ್ತಾಗೆ ಹೋಗಿ ಬರುತ್ತಿದ್ದೆ. ಯಾರಿಗೂ ಗೊತ್ತಿರದಂತೆ ನನ್ನ ಮಗಳನ್ನು ಬೆಳೆಸಿದ್ದೆ. ನನ್ನ ತಂದೆಯ ಕುಟುಂಬದಿಂದ ಬೆದರಿಕೆಯಿತ್ತು. ಕುಟುಂಬಕ್ಕೆ ಗೊತ್ತಿಲ್ಲದೇ ಅನಿಲ್ ಭಟ್ ಎಂಬುವರ ಮದುವೆಯಾಗಿದ್ದೆ. ನನ್ನ ಮಗಳು ಮೃತಪಟ್ಟಿರುವುದು ನನಗೆ ಗೊತ್ತು. ದಾಖಲೆ, ಸಾಕ್ಷಿಗಳನ್ನು ಟೀಂ ಒಂದು ನಾಶ ಮಾಡಿದೆ. ಜನನ ಪ್ರಮಾಣ ಪತ್ರ ನನ್ನ ಬಳಿ ಇದೆ ಎಂಬುದಾಗಿ ದೂರುದಾರೆ ಸುಜಾತ ಭಟ್ ತಿಳಿಸಿದ್ದರು.

ಇಂದು ರಾಜ್ಯ ಸರ್ಕಾರವು ಅನನ್ಯ ಭಟ್ ನಾಪತ್ತೆ ಪ್ರಕರಣವನ್ನು ಎಸ್ಐಟಿ ಅಧಿಕಾರಿಗಳಿಂದ ತನಿಖೆ ನಡೆಸಲು ಅಧಿಕೃತ ಆದೇಶ ಮಾಡಿದೆ. ಈ ಮೂಲಕ ಧರ್ಮಸ್ಥಳ ಪ್ರಕರಣದಲ್ಲಿ ಅನನ್ಯ ಭಟ್ ನಾಪತ್ತೆ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸುವ ಮೂಲಕ, ಮತ್ತೊಂದು ಟ್ವಿಸ್ಟ್ ನೀಡಿದೆ.

ಸೆ.1ರಿಂದ ಬಸವ ಸಂಸ್ಕೃತಿ ಅಭಿಯಾನ, ಅ.5ರಂದು ಅರಮನೆ ಮೈದಾನದಲ್ಲಿ ಸಮಾರೋಪ – ಸಚಿವ ಎಂ.ಬಿ ಪಾಟೀಲ್

ಬಾಲಕನ ಚಿಕಿತ್ಸೆಗೆ 5 ಲಕ್ಷ ನೆರವು ನೀಡಿದ ಸಚಿವ ಜಮೀರ್ ಅಹಮದ್ ಖಾನ್

Share. Facebook Twitter LinkedIn WhatsApp Email

Related Posts

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿವೈ ವಿಜಯೇಂದ್ರ ವಾಗ್ಧಾಳಿ

20/08/2025 8:59 PM2 Mins Read

ಬಾಲಕನ ಚಿಕಿತ್ಸೆಗೆ 5 ಲಕ್ಷ ನೆರವು ನೀಡಿದ ಸಚಿವ ಜಮೀರ್ ಅಹಮದ್ ಖಾನ್

20/08/2025 8:26 PM1 Min Read

ಸೆ.1ರಿಂದ ಬಸವ ಸಂಸ್ಕೃತಿ ಅಭಿಯಾನ, ಅ.5ರಂದು ಅರಮನೆ ಮೈದಾನದಲ್ಲಿ ಸಮಾರೋಪ – ಸಚಿವ ಎಂ.ಬಿ ಪಾಟೀಲ್

20/08/2025 8:19 PM1 Min Read
Recent News

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿವೈ ವಿಜಯೇಂದ್ರ ವಾಗ್ಧಾಳಿ

20/08/2025 8:59 PM

BREAKING: ‘ಅನನ್ಯ ಭಟ್ ನಾಪತ್ತೆ’ ಪ್ರಕರಣವನ್ನು ‘SIT’ಗೆ ಹಸ್ತಾಂತರಿಸಿ ‘ರಾಜ್ಯ ಸರ್ಕಾರ’ ಆದೇಶ

20/08/2025 8:48 PM

ಪಿಎಂ, ಸಿಎಂ ಅಥ್ವಾ ಸಚಿವರು ಜೈಲಿನಿಂದ ಸರ್ಕಾರ ನಡೆಸಬೇಕೆ ಎಂದು ಜನರು ನಿರ್ಧರಿಸಲಿ : ಅಮಿತ್ ಶಾ

20/08/2025 8:45 PM

ಬಾಲಕನ ಚಿಕಿತ್ಸೆಗೆ 5 ಲಕ್ಷ ನೆರವು ನೀಡಿದ ಸಚಿವ ಜಮೀರ್ ಅಹಮದ್ ಖಾನ್

20/08/2025 8:26 PM
State News
KARNATAKA

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿವೈ ವಿಜಯೇಂದ್ರ ವಾಗ್ಧಾಳಿ

By kannadanewsnow0920/08/2025 8:59 PM KARNATAKA 2 Mins Read

ಬೆಂಗಳೂರು: ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು…

BREAKING: ‘ಅನನ್ಯ ಭಟ್ ನಾಪತ್ತೆ’ ಪ್ರಕರಣವನ್ನು ‘SIT’ಗೆ ಹಸ್ತಾಂತರಿಸಿ ‘ರಾಜ್ಯ ಸರ್ಕಾರ’ ಆದೇಶ

20/08/2025 8:48 PM

ಬಾಲಕನ ಚಿಕಿತ್ಸೆಗೆ 5 ಲಕ್ಷ ನೆರವು ನೀಡಿದ ಸಚಿವ ಜಮೀರ್ ಅಹಮದ್ ಖಾನ್

20/08/2025 8:26 PM

ಸೆ.1ರಿಂದ ಬಸವ ಸಂಸ್ಕೃತಿ ಅಭಿಯಾನ, ಅ.5ರಂದು ಅರಮನೆ ಮೈದಾನದಲ್ಲಿ ಸಮಾರೋಪ – ಸಚಿವ ಎಂ.ಬಿ ಪಾಟೀಲ್

20/08/2025 8:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.