Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯುಜಿಸಿಇಟಿ/ನೀಟ್ ಗೆ 2ನೇ ಸುತ್ತಿನ ಕೌನ್ಸೆಲಿಂಗ್ ಆರಂಭ: ಆ.29ಕ್ಕೆ ತಾತ್ಕಾಲಿಕ ಫಲಿತಾಂಶ ಪ್ರಕಟ

20/08/2025 9:25 PM

ಈ ಪೋಸಿಷನಲ್’ನಲ್ಲಿ ಸೆಕ್ಸ್ ಮಾಡುವ 99% ಮಹಿಳೆಯರಿಗೆ ಕ್ಯಾನ್ಸರ್ ಬರುತ್ತೆ ; ಶಾಕಿಂಗ್ ವರದಿ

20/08/2025 9:24 PM

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿವೈ ವಿಜಯೇಂದ್ರ ವಾಗ್ಧಾಳಿ

20/08/2025 8:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿವೈ ವಿಜಯೇಂದ್ರ ವಾಗ್ಧಾಳಿ
KARNATAKA

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿವೈ ವಿಜಯೇಂದ್ರ ವಾಗ್ಧಾಳಿ

By kannadanewsnow0920/08/2025 8:59 PM

ಬೆಂಗಳೂರು: ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜಸ್ಟಿಸ್ ಸದಾಶಿವ ಆಯೋಗದ ವರದಿಯನ್ನೂ ಸರಿಯಾಗಿ ಪಾಲಿಸಿದಂತೆ ಕಾಣುತ್ತಿಲ್ಲ. ಅದೇರೀತಿ ನ್ಯಾ.ನಾಗಮೋಹನ್ ದಾಸ್ ವರದಿಯನ್ನೂ ಸರಿಯಾಗಿ ಪಾಲಿಸಿದಂತೆ ಕಾಣುತ್ತಿಲ್ಲ ಎಂದು ಆಕ್ಷೇಪಿಸಿದರು. ನ್ಯಾ.ನಾಗಮೋಹನ್ ದಾಸ್ ವರದಿಯಲ್ಲಿ ಎ, ಬಿ, ಸಿ, ಡಿ, ಇ ಎಂದು 5 ವರ್ಗಗಳನ್ನು ಮಾಡಿದ್ದರು. ಅದನ್ನು ಎ, ಬಿ, ಸಿ ಎಂದು ಮಾಡಿದ್ದಾರೆ ಎಂದು ಆರೋಪಿಸಿದರು.

ನರೇಂದ್ರ ಸ್ವಾಮಿ ಮೊದಲಾದವರ ಮೂಲಕ ನೀವೇ ವಿಂಗಡಣೆ ಮಾಡುವುದಾದರೆ, ಸರಕಾರ ಮತ್ತು ಸಿದ್ದರಾಮಯ್ಯನವರಿಗೆ ಜಸ್ಟಿಸ್ ಸದಾಶಿವ ಆಯೋಗ, ನ್ಯಾ.ನಾಗಮೋಹನ್ ದಾಸ್ ಆಯೋಗಕ್ಕೆ ನೂರಾರು ಕೋಟಿ ಖರ್ಚು ಮಾಡುವ ಅವಶ್ಯಕತೆ ಏನಿತ್ತು ಎಂದು ಕೇಳಿದರು.

ಹಿಂದೆ ಬಸವರಾಜ ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರಕಾರ ಅಧಿಕಾರದಲ್ಲಿ ಇದ್ದಾಗ ಅವರು ಪರಿಶಿಷ್ಟ ಜಾತಿ, ಪಂಗಡಗಳ ಕುರಿತು ಒಂದು ದಿಟ್ಟ ನಿರ್ಧಾರ ಮಾಡಿದ್ದರು. ಅವತ್ತು ಬೊಮ್ಮಾಯಿಯವರು ಪರಿಶಿಷ್ಟ ಜಾತಿಗೆ ಶೇ 15 ಇದ್ದುದನ್ನು ಶೇ 17ಕ್ಕೆ ಏರಿಸಿದ್ದರು. ಪರಿಶಿಷ್ಟ ಪಂಗಡಕ್ಕೆ ಶೇ 3 ಇದ್ದುದನ್ನು ಶೇ 7ಕ್ಕೆ ಏರಿಕೆ ಮಾಡಿದ್ದರು. ಆಗ ವಿಪಕ್ಷ ನಾಯಕರಾಗಿದ್ದ ಇದೇ ಸಿದ್ದರಾಮಯ್ಯನವರು, ಒಳ ಮೀಸಲಾತಿಯ ಬಿಜೆಪಿ ಸರಕಾರದ ನಿರ್ಧಾರವನ್ನು ಯಾವುದೂ ಅನುಷ್ಠಾನ ಆಗಿಲ್ಲ; ಇವರು ಬೂಟಾಟಿಕೆ- ನಾಟಕ ಮಾಡುತ್ತಿದ್ದಾರೆಂದು ರಾಜ್ಯಾದ್ಯಂತ ಓಡಾಡಿ ಅಪಪ್ರಚಾರ ಮಾಡಿದ್ದರು ಎಂದು ಟೀಕಿಸಿದರು.

ಮುಖ್ಯಮಂತ್ರಿ ಪಲಾಯನ ಮಾಡಿದ್ದೇಕೆ?

ಇವತ್ತು ಸಿದ್ದರಾಮಯ್ಯ ಅವರು ಯಾಕೆ ಓಡಿ ಹೋಗುವ ಕೆಲಸ ಮಾಡಿದ್ದಾರೆ. ವಿಪಕ್ಷ ನಾಯಕರು ಚರ್ಚೆ ಮಾಡಬೇಕೆಂದು ಕೋರಿದರೂ ಪಲಾಯನವಾದ ಮಾಡಿದ್ದಾರೆ ಎಂದು ವಿಜಯೇಂದ್ರ ಅವರು ಆಕ್ಷೇಪಿಸಿದರು. ಈ ಮೂಲಕ ಸದನಕ್ಕೆ ಅಗೌರವ ತೋರಿದ್ದಾರೆ ಎಂದರು.

ಜಸ್ಟಿಸ್ ಸದಾಶಿವ ಆಯೋಗವನ್ನು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಘೋಷಣೆ ಮಾಡಿತ್ತೇ ವಿನಾ ಆ ಆಯೋಗಕ್ಕೆ ಹಣಕಾಸಿನ ನೆರವನ್ನು ಕೊಟ್ಟು ವ್ಯವಸ್ಥೆ ಮಾಡಿದ್ದು, ಯಡಿಯೂರಪ್ಪ ಅವರ ನೇತೃತ್ವದ ಹಿಂದಿನ ಬಿಜೆಪಿ ಸರಕಾರ. ಅದನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲು ಬಸವರಾಜ ಬೊಮ್ಮಾಯಿಯವರು ಮುಂದಾಗಿದ್ದರು ಎಂದು ಅವರು ಗಮನ ಸೆಳೆದರು.

ದತ್ತಾಂಶ ಇಟ್ಟುಕೊಂಡು ವರ್ಗೀಕರಣ ಮಾಡಬೇಕಿತ್ತು. ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಿಂದುಳಿದಿರುವಿಕೆ ವಿಚಾರವನ್ನು ಇಟ್ಟುಕೊಂಡು ಒಳ ಮೀಸಲಾತಿ ಕೊಡಬೇಕೇ ಹೊರತು ಜನಸಂಖ್ಯೆ ಆಧಾರದಲ್ಲಿ ಅಲ್ಲ ಎಂದು ಪ್ರತಿಪಾದಿಸಿದರು.

ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ಪ್ರಾಮಾಣಿಕ ಉತ್ತರ ಕೊಡಬೇಕು. ಹಿಂದೆ ಬಸವರಾಜ ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರಕಾರ ಶೇ 17 ಮೀಸಲಾತಿ ಕೊಟ್ಟಾಗ ಅಪಪ್ರಚಾರ ಮಾಡಿದ್ದೀರಿ. ಈಗ ಅದೇ ಶೇ 17 ಅನ್ನು ಮುಂದಿಟ್ಟಿದ್ದೀರಲ್ಲವೇ? ಹಿಂದಿನ ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರಕಾರ ಮಾಡಿದ್ದನ್ನು ಈಗಲಾದರೂ ಒಪ್ಪಿಕೊಳ್ಳಿ ಎಂದು ಆಗ್ರಹಿಸಿದರು. ಇದನ್ನು ನಾಳೆ ಸದನದಲ್ಲಿ ಚರ್ಚಿಸಿ ಮುಖ್ಯಮಂತ್ರಿಗಳಿಂದ ಹೇಳಿಕೆ ಪಡೆಯುತ್ತೇವೆ ಎಂದು ತಿಳಿಸಿದರು.

ಸಿದ್ದರಾಮಯ್ಯನವರು ಸತ್ಯಾಂಶವನ್ನು ಜನತೆಗೆ ತಿಳಿಸಲಿ; ಅಲ್ಲದೇ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಅವರು ಒತ್ತಾಯಿಸಿದರು. ದತ್ತಾಂಶವಿಲ್ಲದೇ ಹೇಗೆ ಇದನ್ನು ಮಾಡಿದ್ದಾರೆ ಎಂಬ ಕುರಿತು ನಾಳೆ ಚರ್ಚೆ ಮಾಡುತ್ತೇವೆ ಎಂದರು. ಈ ಸಂದರ್ಭದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ಶಾಸಕ ಧುರ್ಯೋದನ ಐಹೊಳೆ ಅವರು ಇದ್ದರು.

BREAKING: ‘ಅನನ್ಯ ಭಟ್ ನಾಪತ್ತೆ’ ಪ್ರಕರಣವನ್ನು ‘SIT’ಗೆ ಹಸ್ತಾಂತರಿಸಿ ‘ರಾಜ್ಯ ಸರ್ಕಾರ’ ಆದೇಶ

ಬಾಲಕನ ಚಿಕಿತ್ಸೆಗೆ 5 ಲಕ್ಷ ನೆರವು ನೀಡಿದ ಸಚಿವ ಜಮೀರ್ ಅಹಮದ್ ಖಾನ್

Share. Facebook Twitter LinkedIn WhatsApp Email

Related Posts

ಯುಜಿಸಿಇಟಿ/ನೀಟ್ ಗೆ 2ನೇ ಸುತ್ತಿನ ಕೌನ್ಸೆಲಿಂಗ್ ಆರಂಭ: ಆ.29ಕ್ಕೆ ತಾತ್ಕಾಲಿಕ ಫಲಿತಾಂಶ ಪ್ರಕಟ

20/08/2025 9:25 PM2 Mins Read

BREAKING: ‘ಅನನ್ಯ ಭಟ್ ನಾಪತ್ತೆ’ ಪ್ರಕರಣವನ್ನು ‘SIT’ಗೆ ಹಸ್ತಾಂತರಿಸಿ ‘ರಾಜ್ಯ ಸರ್ಕಾರ’ ಆದೇಶ

20/08/2025 8:48 PM2 Mins Read

ಬಾಲಕನ ಚಿಕಿತ್ಸೆಗೆ 5 ಲಕ್ಷ ನೆರವು ನೀಡಿದ ಸಚಿವ ಜಮೀರ್ ಅಹಮದ್ ಖಾನ್

20/08/2025 8:26 PM1 Min Read
Recent News

ಯುಜಿಸಿಇಟಿ/ನೀಟ್ ಗೆ 2ನೇ ಸುತ್ತಿನ ಕೌನ್ಸೆಲಿಂಗ್ ಆರಂಭ: ಆ.29ಕ್ಕೆ ತಾತ್ಕಾಲಿಕ ಫಲಿತಾಂಶ ಪ್ರಕಟ

20/08/2025 9:25 PM

ಈ ಪೋಸಿಷನಲ್’ನಲ್ಲಿ ಸೆಕ್ಸ್ ಮಾಡುವ 99% ಮಹಿಳೆಯರಿಗೆ ಕ್ಯಾನ್ಸರ್ ಬರುತ್ತೆ ; ಶಾಕಿಂಗ್ ವರದಿ

20/08/2025 9:24 PM

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿವೈ ವಿಜಯೇಂದ್ರ ವಾಗ್ಧಾಳಿ

20/08/2025 8:59 PM

BREAKING: ‘ಅನನ್ಯ ಭಟ್ ನಾಪತ್ತೆ’ ಪ್ರಕರಣವನ್ನು ‘SIT’ಗೆ ಹಸ್ತಾಂತರಿಸಿ ‘ರಾಜ್ಯ ಸರ್ಕಾರ’ ಆದೇಶ

20/08/2025 8:48 PM
State News
KARNATAKA

ಯುಜಿಸಿಇಟಿ/ನೀಟ್ ಗೆ 2ನೇ ಸುತ್ತಿನ ಕೌನ್ಸೆಲಿಂಗ್ ಆರಂಭ: ಆ.29ಕ್ಕೆ ತಾತ್ಕಾಲಿಕ ಫಲಿತಾಂಶ ಪ್ರಕಟ

By kannadanewsnow0920/08/2025 9:25 PM KARNATAKA 2 Mins Read

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ಎಲ್ಲ ವೃತ್ತಿಪರ ಕೋರ್ಸ್ ಗಳ ಎರಡನೇ ಸುತ್ತಿನ ಪ್ರವೇಶ ಪ್ರಕ್ರಿಯೆ ಬುಧವಾರದಿಂದ ಆರಂಭವಾಗಿದೆ. ಲಭ್ಯ…

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿವೈ ವಿಜಯೇಂದ್ರ ವಾಗ್ಧಾಳಿ

20/08/2025 8:59 PM

BREAKING: ‘ಅನನ್ಯ ಭಟ್ ನಾಪತ್ತೆ’ ಪ್ರಕರಣವನ್ನು ‘SIT’ಗೆ ಹಸ್ತಾಂತರಿಸಿ ‘ರಾಜ್ಯ ಸರ್ಕಾರ’ ಆದೇಶ

20/08/2025 8:48 PM

ಬಾಲಕನ ಚಿಕಿತ್ಸೆಗೆ 5 ಲಕ್ಷ ನೆರವು ನೀಡಿದ ಸಚಿವ ಜಮೀರ್ ಅಹಮದ್ ಖಾನ್

20/08/2025 8:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.