ಹಾಸನ: ರೀಲ್ಸ್ ಮಾಡಲು ಹೋಗಿ ಟ್ರ್ಯಾಕ್ಟರ್ ಪಲ್ಟಿಯಾಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಕಬ್ಬಳ್ಳಿಗೆರೆಯಲ್ಲಿ ರೀಲ್ಸ್ ಮಾಡಲು ಹೋಗಿ ಟ್ರ್ಯಾಕ್ಟರ್ ಪಲ್ಟಿಯಾಗಿ ವಿ.ಜಿ.ಕೊಪ್ಪಲು ಗ್ರಾಮದ ಕಿರಣ್ (19) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಿರಣ್ ಕುಮಾರ್ ಕೊಣನೂರು ಹೋಬಳಿಯ ಕಬ್ಬಳ್ಳಿಗೆರೆ ಬೆಟ್ಟದ ಮೇಲೆ ಬುಧವಾರ ಸ್ನೇಹಿತರೊಂದಿಗೆ ರೀಲ್ಸ್ ಮಾಡಲು ಬೆಟ್ಟಕ್ಕೆ ಬಂದಿದ್ದ. ವೇಗವಾಗಿ ಟ್ರ್ಯಾಕ್ಟರ್ ಓಡಿಸಿ ತಿರುಗಿಸುವಾಗ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಟ್ಯಾಕ್ಟರ್ ಅಡಿಗೆ ಬಿದ್ದು ಕಿರಣ್ ಕುಮಾರ್ ಮೃತಪಟ್ಟಿದ್ದಾರೆ. ಕೊಣನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.