Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ `ಏರ್ ಶೋ’ಗೆ ಅನುಮತಿ : ರಕ್ಷಣಾ ಸಚಿವರಿಗೆ CM ಸಿದ್ದರಾಮಯ್ಯ ಧನ್ಯವಾದ

21/08/2025 9:09 AM

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `ಒಳಮೀಸಲಾತಿ’ ಆದೇಶ ಹೊರಬಿದ್ದ ಬಳಿಕ ಎಲ್ಲಾ ನೇಮಕಾತಿ ಪ್ರಕ್ರಿಯೆ ಆರಂಭ.!

21/08/2025 9:04 AM

ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ಆದೇಶಕ್ಕೆ ತಡೆ ಕೋರಿ ಸಿಜೆಐಗೆ ಪತ್ರ ಬರೆದ ವೈದ್ಯರು | Stray Dogs

21/08/2025 8:51 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `ಒಳಮೀಸಲಾತಿ’ ಆದೇಶ ಹೊರಬಿದ್ದ ಬಳಿಕ ಎಲ್ಲಾ ನೇಮಕಾತಿ ಪ್ರಕ್ರಿಯೆ ಆರಂಭ.!
KARNATAKA

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `ಒಳಮೀಸಲಾತಿ’ ಆದೇಶ ಹೊರಬಿದ್ದ ಬಳಿಕ ಎಲ್ಲಾ ನೇಮಕಾತಿ ಪ್ರಕ್ರಿಯೆ ಆರಂಭ.!

By kannadanewsnow5721/08/2025 9:04 AM

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಒಳ ಮೀಸಲಾತಿಯ ಆದೇಶ ಹೊರಬಿದ್ದ ನಂತರ ಎಲ್ಲಾ ನೇಮಕಾತಿ ಪ್ರಕ್ರಿಯೆಗಳು ಪ್ರಾರಂಭಗೊಳಲಿದ್ದು, ಒಂದು ಬಾರಿಗೆ ವಯೋಮಿತಿ ಸಡಿಲಿಕೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೆ ಸರ್ಕಾರ ಕಟಿಬದ್ಧವಾಗಿದ್ದು ಈ ಕುರಿತು ಶೀಘ್ರವೇ ಆದೇಶ ಹೊರಡಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ ನಲ್ಲಿ ತಿಳಿಸಿದರು.

ಒಳಮೀಸಲಾತಿ ಕುರಿತು ವಿಧಾನ ಪರಿಷತ್ನಲ್ಲಿ ಉತ್ತರಿಸಿದ ಮುಖ್ಯಮಂತ್ರಿಗಳು

ಮಾನ್ಯ ಸರ್ವೋಚ್ಛ ನ್ಯಾಯಾಲಯವು 2024ರಲ್ಲಿ ಪಂಜಾಬ್ ರಾಜ್ಯ ಮತ್ತು ಇತರರು ವರ್ಸಸ್ ದೇವಿಂದರ್ ಸಿಂಗ್ ಪ್ರಕರಣದಲ್ಲಿ ನೀಡಲಾದ ತೀರ್ಪಿನಲ್ಲಿ, ರಾಜ್ಯ ಸರ್ಕಾರಗಳಿಗೆ ಪರಿಶಿಷ್ಟ ಜಾತಿಗಳ ಉಪವರ್ಗೀಕರಣ ಮಾಡುವ ಅಧಿಕಾರವಿದ್ದು, ಸಂವಿಧಾನದ ಅನುಚ್ಚೇದ 14, 15 ಮತ್ತು 16 ರ ಮೂಲ ಆಶಯವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಒಳ ಮೀಸಲಾತಿ ವ್ಯವಸ್ಥೆ ಕಲ್ಪಿಸಬಹುದು ಎಂದು ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ, ಸರ್ಕಾರವು 12.11.2024 ರ ಆದೇಶದಂತೆ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಅವರ ಏಕ ಸದಸ್ಯ ಆಯೋಗವನ್ನು ರಚಿಸಲಾಗಿತ್ತು. ಸೂಕ್ತ ದತ್ತಾಂಶಗಳನ್ನು ಸಂಗ್ರಹಿಸಿ ಒಳ ಮೀಸಲಾತಿ ನೀಡುವ ಕುರಿತು ಶಿಫಾರಸ್ಸುಗಳನ್ನು ಮಾಡುವಂತೆ ಆಯೋಗವನ್ನು ಕೋರಲಾಗಿತ್ತು.

ಆಯೋಗವು ರಾಜ್ಯದ 101 ಪರಿಶಿಷ್ಟ ಜಾತಿಗಳ ಸಮಗ್ರ ಅಧ್ಯಯನ ನಡೆಸಿ 1,05,09,871 ಜನರ ದತ್ತಾಂಶಗಳನ್ನು ಸಂಗ್ರಹಿದ್ದು ಶೇ.93 ರಷ್ಟು ಪರಿಶಿಷ್ಟ ಜಾತಿಗಳ ಜನಸಂಖ್ಯೆ ಈ ಸಮೀಕ್ಷೆಯ ಭಾಗವಾಗಿದೆ. ಅಂತಿಮವಾಗಿ ಆಯೋಗವು ಇದೇ ಆಗಸ್ಟ್ 1 ರಂದು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು ಎಂದರು

ಆಯೋಗದ ಶಿಫಾರಸ್ಸುಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ಕೆಲವು ಮಾರ್ಪಾಡುಗಳೊಂದಿಗೆ ಇದೇ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಲಾಗಿದೆ ಎಂದರು.

ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗವು ಎ,ಬಿ,ಸಿ,ಡಿ,ಇ ಎಂದು ಪ್ರವರ್ಗಗಳನ್ನಾಗಿ ವಿಭಾಗೀಕರಿಸಿ ಮಾಡಿದ್ದ ಶಿಫಾರಸ್ಸನ್ನು ಸಚಿವ ಸಂಪುಟವು ಎ,ಬಿ,ಸಿ ಎಂದು ಮೂರು ಪ್ರವರ್ಗಗಳನ್ನಾಗಿ ವಿಭಾಗೀಕರಿಸಲು ಒಪ್ಪಿಗೆ ನೀಡಿದೆ. ಎಡಗೈ ಸಂಬಂಧಿತ ಜಾತಿಗಳುಳ್ಳ ಎ ಪ್ರವರ್ಗಕ್ಕೆ – ಶೇ. 6, ಬಲಗೈ ಸಂಬ0ಧಿತ ಜಾತಿಗಳುಳ್ಳ ಬಿ ಪ್ರವರ್ಗಕ್ಕೆ – ಶೇ. 6 ಹಾಗೂ ಸ್ಪೃಶ್ಯ ಜಾತಿಗಳುಳ್ಳ ಸಿ ಪ್ರವರ್ಗಕ್ಕೆ – ಶೇ.5 ರಷ್ಟು ಒಳಮೀಸಲಾತಿ ನೀಡಲು ಸರ್ಕಾರ ತೀರ್ಮಾನಿಸಿದೆ.

ಪರಿಶಿಷ್ಟ ಜಾತಿಯ ಎಲ್ಲ ಸಮುದಾಯಗಳಿಗೆ ಶಿಕ್ಷಣ, ಉದ್ಯೋಗಾವಕಾಶ ಹಾಗೂ ಇನ್ನಿತರ ಅವಕಾಶಗಳನ್ನು ಸಮಾನವಾಗಿ ಹಂಚುವ ಆಶಯದೊಂದಿಗೆ, ಮಾನ್ಯ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಗಮನದಲ್ಲಿಟ್ಟುಕೊಂಡು, ಕೆಲ ಮಾರ್ಪಾಡುಗಳೊಂದಿಗೆ ಒಳಮೀಸಲಾತಿ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಶಾಶ್ವತ ಪರಿಶಿಷ್ಟ ಜಾತಿ ಆಯೋಗದ ರಚನೆ ಸೇರಿದಂತೆ ಒಳಮೀಸಲಾತಿ ಹೋರಾಟಗಾರರ ಮೇಲಿನ ಎಲ್ಲ ಮೊಕದ್ದಮೆಗಳನ್ನು ಹಿಂಪಡೆಯಲಾಗುವುದೆಂದು ತಿಳಿಸಿದರು.

ಒಳ ಮೀಸಲಾತಿಯ ಆದೇಶ ಹೊರಬಿದ್ದ ನಂತರ ಎಲ್ಲಾ ನೇಮಕಾತಿ ಪ್ರಕ್ರಿಯೆಗಳು ಪ್ರಾರಂಭಗೊಳಲಿದ್ದು, ಒಂದು ಬಾರಿಗೆ ವಯೋಮಿತಿ ಸಡಿಲಿಕೆ ಮಾಡಲಾಗುವುದು ಎಂದರು.

ಒಳಮೀಸಲಾತಿಗಾಗಿ ದಶಕಗಳಿಂದ ನಡೆಯುತ್ತಿದ್ದ ಹೋರಾಟಕ್ಕೆ ನಮ್ಮ ಸರ್ಕಾರ ನ್ಯಾಯಯುತವಾಗಿ ಸ್ಪಂದಿಸಿದೆ. ನಮ್ಮ ರಾಜ್ಯವು ಅಭಿವೃದ್ಧಿಯ ಜೊತೆಜೊತೆಗೆ ಸಾಮಾಜಿಕ ನ್ಯಾಯವನ್ನು ಒದಗಿಸುವ ನಿಟ್ಟಿನಲ್ಲೂ ಮುಂಚೂಣಿಯಲ್ಲಿದೆ ಎಂದವರು ತಿಳಿಸಿದರು.

* ಜಸ್ಟೀಸ್ ನಾಗಮೋಹನ್ ದಾಸ್ ಆಯೋಗವು ಎ,ಬಿ,ಸಿ,ಡಿ,ಇ ಎಂದು ಪ್ರವರ್ಗಗಳನ್ನಾಗಿ ವಿಭಾಗೀಕರಿಸಿ ಮಾಡಿದ್ದ ಶಿಫಾರಸ್ಸನ್ನು ಸಚಿವ ಸಂಪುಟವು ಎ,ಬಿ,ಸಿ ಎಂದು ಮೂರು ಪ್ರವರ್ಗಗಳನ್ನಾಗಿ ವಿಭಾಗೀಕರಿಸಲು ಹಾಗೂ ಎಡಗೈ ಸಂಬಂಧಿತ ಜಾತಿಗಳುಳ್ಳ 'ಎ' ಪ್ರವರ್ಗಕ್ಕೆ – ಶೇ. 6, ಬಲಗೈ ಸಂಬಂಧಿತ ಜಾತಿಗಳುಳ್ಳ ಬಿ ಪ್ರವರ್ಗಕ್ಕೆ – ಶೇ. 6 ಹಾಗೂ ಸಿ ಪ್ರವರ್ಗಕ್ಕೆ… pic.twitter.com/KIbpRRrRlS

— Siddaramaiah (@siddaramaiah) August 20, 2025

ಆಗಸ್ಟ್ 19 ರಂದು ನಡೆದ ಸಚಿವ ಸಂಪುಟದಲ್ಲಿ ಜಸ್ಟೀಸ್ ನಾಗಮೋಹನ್ ದಾಸ್ ಅವರ ಆಯೋಗವು ಸಲ್ಲಿಸಿದ್ದ ಶಿಫಾರಸ್ಸುಗಳನ್ನು ಕೆಲವು ಮಾರ್ಪಾಟುಗಳೊಂದಿಗೆ ಅಂಗೀಕರಿಸಿದ್ದೇವೆ.

* ಎಡಗೈ ಸಂಬಂಧಿತ ಜಾತಿಗಳೆಂದು ಆಯೋಗವು ಗುರುತಿಸಿರುವ ಸಮುದಾಯಗಳಿಗೆ ಶೇ.6 ರಷ್ಟು ಒಳಮೀಸಲಾತಿ ಕಲ್ಪಿಸಲು ತೀರ್ಮಾನಿಸಿದ್ದೇವೆ.

*ಜಸ್ಟೀಸ್ ನಾಗಮೋಹನ್ ದಾಸ್ ಆಯೋಗವು ಪರಯ,… pic.twitter.com/cYxbEmIdvn

— Siddaramaiah (@siddaramaiah) August 20, 2025

* ಜಸ್ಟೀಸ್ ನಾಗಮೋಹನ್ ದಾಸ್ ಆಯೋಗವು ಎ,ಬಿ,ಸಿ,ಡಿ,ಇ ಎಂದು ಪ್ರವರ್ಗಗಳನ್ನಾಗಿ ವಿಭಾಗೀಕರಿಸಿ ಮಾಡಿದ್ದ ಶಿಫಾರಸ್ಸನ್ನು ಸಚಿವ ಸಂಪುಟವು ಎ,ಬಿ,ಸಿ ಎಂದು ಮೂರು ಪ್ರವರ್ಗಗಳನ್ನಾಗಿ ವಿಭಾಗೀಕರಿಸಲು ಹಾಗೂ ಎಡಗೈ ಸಂಬಂಧಿತ ಜಾತಿಗಳುಳ್ಳ 'ಎ' ಪ್ರವರ್ಗಕ್ಕೆ – ಶೇ. 6, ಬಲಗೈ ಸಂಬಂಧಿತ ಜಾತಿಗಳುಳ್ಳ ಬಿ ಪ್ರವರ್ಗಕ್ಕೆ – ಶೇ. 6 ಹಾಗೂ ಸಿ ಪ್ರವರ್ಗಕ್ಕೆ… pic.twitter.com/KIbpRRrRlS

— Siddaramaiah (@siddaramaiah) August 20, 2025

ಆಗಸ್ಟ್ 19 ರಂದು ನಡೆದ ಸಚಿವ ಸಂಪುಟದಲ್ಲಿ ಜಸ್ಟೀಸ್ ನಾಗಮೋಹನ್ ದಾಸ್ ಅವರ ಆಯೋಗವು ಸಲ್ಲಿಸಿದ್ದ ಶಿಫಾರಸ್ಸುಗಳನ್ನು ಕೆಲವು ಮಾರ್ಪಾಟುಗಳೊಂದಿಗೆ ಅಂಗೀಕರಿಸಿ, ಎಡಗೈ ಸಂಬಂಧಿತ ಜಾತಿಗಳುಳ್ಳ 'ಎ' ಪ್ರವರ್ಗಕ್ಕೆ – ಶೇ. 6, ಬಲಗೈ ಸಂಬಂಧಿತ ಜಾತಿಗಳುಳ್ಳ 'ಬಿ' ಪ್ರವರ್ಗಕ್ಕೆ – ಶೇ. 6 ಹಾಗೂ 'ಸಿ' ಪ್ರವರ್ಗಕ್ಕೆ – ಶೇ.5 ರಷ್ಟು ಒಳಮೀಸಲಾತಿ ನೀಡಲು… pic.twitter.com/HvFy1zvJnf

— Siddaramaiah (@siddaramaiah) August 20, 2025

Good news for job seekers: All recruitment processes have begun as soon as the 'internal reservation' order is issued!
Share. Facebook Twitter LinkedIn WhatsApp Email

Related Posts

BREAKING: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ `ಏರ್ ಶೋ’ಗೆ ಅನುಮತಿ : ರಕ್ಷಣಾ ಸಚಿವರಿಗೆ CM ಸಿದ್ದರಾಮಯ್ಯ ಧನ್ಯವಾದ

21/08/2025 9:09 AM1 Min Read

SHOCKING : ರಾಜ್ಯದಲ್ಲಿ `ರೀಲ್ಸ್’ ಹುಚ್ಚಿಗೆ ಮತ್ತೊಂದು ಬಲಿ : ಟ್ರ್ಯಾಕ್ಟರ್ ಸ್ಟಂಟ್ ಮಾಡುವಾಗ ಯುವಕ ಸಾವು.!

21/08/2025 8:42 AM1 Min Read

Rain Alert : ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ, ಆರೆಂಜ್ ಅಲರ್ಟ್’ ಘೋಷಣೆ

21/08/2025 8:35 AM1 Min Read
Recent News

BREAKING: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ `ಏರ್ ಶೋ’ಗೆ ಅನುಮತಿ : ರಕ್ಷಣಾ ಸಚಿವರಿಗೆ CM ಸಿದ್ದರಾಮಯ್ಯ ಧನ್ಯವಾದ

21/08/2025 9:09 AM

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `ಒಳಮೀಸಲಾತಿ’ ಆದೇಶ ಹೊರಬಿದ್ದ ಬಳಿಕ ಎಲ್ಲಾ ನೇಮಕಾತಿ ಪ್ರಕ್ರಿಯೆ ಆರಂಭ.!

21/08/2025 9:04 AM

ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ಆದೇಶಕ್ಕೆ ತಡೆ ಕೋರಿ ಸಿಜೆಐಗೆ ಪತ್ರ ಬರೆದ ವೈದ್ಯರು | Stray Dogs

21/08/2025 8:51 AM

BREAKING : `ಗಾಜಾ ನಗರ’ ಸಂಪೂರ್ಣ ವಶಕ್ಕೆ ಇಸ್ರೇಲ್ ನಿಂದ `ಮಿಷನ್ ಗಾಜಾ’ ಆರಂಭ : 60000 ಸೈನಿಕರ ನೇಮಕ.!

21/08/2025 8:51 AM
State News
KARNATAKA

BREAKING: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ `ಏರ್ ಶೋ’ಗೆ ಅನುಮತಿ : ರಕ್ಷಣಾ ಸಚಿವರಿಗೆ CM ಸಿದ್ದರಾಮಯ್ಯ ಧನ್ಯವಾದ

By kannadanewsnow5721/08/2025 9:09 AM KARNATAKA 1 Min Read

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ರಕ್ಷಣಾ ಇಲಾಖೆ ಅನುಮತಿ ನೀಡಿದ್ದು, ರಕ್ಷಣಾ ಸಚಿವರಿಗೆ ಸಿಎಂ…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `ಒಳಮೀಸಲಾತಿ’ ಆದೇಶ ಹೊರಬಿದ್ದ ಬಳಿಕ ಎಲ್ಲಾ ನೇಮಕಾತಿ ಪ್ರಕ್ರಿಯೆ ಆರಂಭ.!

21/08/2025 9:04 AM

SHOCKING : ರಾಜ್ಯದಲ್ಲಿ `ರೀಲ್ಸ್’ ಹುಚ್ಚಿಗೆ ಮತ್ತೊಂದು ಬಲಿ : ಟ್ರ್ಯಾಕ್ಟರ್ ಸ್ಟಂಟ್ ಮಾಡುವಾಗ ಯುವಕ ಸಾವು.!

21/08/2025 8:42 AM

Rain Alert : ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ, ಆರೆಂಜ್ ಅಲರ್ಟ್’ ಘೋಷಣೆ

21/08/2025 8:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.