Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ನಿರಂತರವಾಗಿ `ಜಾಹೀರಾತು’ ಬರುತ್ತಿದ್ದರೆ ಜಸ್ಟ್ ಈ ರೀತಿ ನಿಲ್ಲಿಸಿ.!

16/01/2026 1:48 PM

BREAKING : ಮುಂಬೈ ಪಾಲಿಕೆ ಚುನಾವಣೆಯಲ್ಲಿ ಶತಕ ಬಾರಿಸಿದ ಬಿಜೆಪಿ : ಕಮಾಲ್ ಮಾಡದ ಠಾಕ್ರೆ ಬ್ರದರ್ಸ್

16/01/2026 1:43 PM

ಪೋಷಕರೇ ಗಮನಿಸಿ : `ಏಕಲವ್ಯ ಮಾದರಿ ವಸತಿ ಶಾಲೆ’ಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

16/01/2026 1:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಕಸ ವಿಲೇವಾರಿಗೆ 33 ಪ್ಯಾಕೇಜ್ ಗಳಾಗಿ ಟೆಂಡರ್: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

ಬೆಂಗಳೂರು ಕಸ ವಿಲೇವಾರಿಗೆ 33 ಪ್ಯಾಕೇಜ್ ಗಳಾಗಿ ಟೆಂಡರ್: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0921/08/2025 6:57 PM

ಬೆಂಗಳೂರು : “ನಗರದ ಕಸ ವಿಲೇವಾರಿಗೆ 28 ವಿಧಾನಸಭಾ ಕ್ಷೇತ್ರಗಳಲ್ಲಿ 33 ಪ್ಯಾಕೇಜ್ ಗಳಾಗಿ ವಿಂಗಡಿಸಿ ಟೆಂಡರ್ ಕರೆಯಲಾಗಿದೆ. ನಾಲ್ಕು ಜಾಗಗಳಲ್ಲಿ ತ್ಯಾಜ್ಯದಿಂದ ಗ್ಯಾಸ್, ವಿದ್ಯುತ್ ಉತ್ಪಾದಿಸುವ ಯೋಜನೆ ರೂಪಿಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕೇಶವ ಪ್ರಸಾದ್ ಅವರು ಬೆಂಗಳೂರಿನ ಕಸ ವಿಲೇವಾರಿ ಹಾಗೂ ಕಸದ ಸೆಸ್ ವಿಚಾರವಾಗಿ ಕೇಳಿದ ಪ್ರಶ್ನೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು.

“ಕಸ ವಿಲೇವಾರಿಗೆ ನೈಸ್ ಸಂಸ್ಥೆಗೆ ಸೇರಿದ ಜಾಗವನ್ನು ಪಡೆಯಲಾಗಿದೆ. ದೊಡ್ಡಬಳ್ಳಾಪುರ ಬಳಿಯ ಜಾಗಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಬಾಕಿಯಿತ್ತು. ಕ್ಯಾಬಿನೆಟ್ ಅನುಮತಿ ಪಡೆದು ಮುಂದುವರಿದಿದ್ದೇವೆ. ಕಸ ವಿಲೇವಾರಿಗೆಂದು ಆಧುನಿಕ ತಂತ್ರಜ್ಞಾನದ ಬಗ್ಗೆ ಅಧ್ಯಯನ ಮಾಡಲಾಗುತ್ತಿದೆ. ಇದನ್ನು ಗುತ್ತಿಗೆ ಆಧಾರದ ಮೇಲೆ ನಿರ್ವಹಣೆ ಮಾಡಬೇಕು ಎನ್ನುವ ಆಲೋಚನೆಯಿದೆ.” ಎಂದು ತಿಳಿದರು.

ಕಸದ ಮಾಫಿಯಾ ಭೇದಿಸುವುದು ಸುಲಭವಿಲ್ಲ

“ಬೆಂಗಳೂರಿನ ಕಸದ ಮಾಫಿಯಾವನ್ನು ಅಷ್ಟು ಸುಲಭದಲ್ಲಿ ಭೇದಿಸಲು ಆಗುವುದಿಲ್ಲ. ನಿಮ್ಮ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೂ 98 ವಾರ್ಡ್ ಗಳಿಗೆ ಟೆಂಡರ್ ಕರೆದಾಗ ಅದನ್ನೂ ಮಾಡಲು ಬಿಡಲಿಲ್ಲ. ಕಸ ವಿಲೇವಾರಿ ವಿಚಾರಕ್ಕೆ ನಾನೂ ಸಹ ದೊಡ್ಡ ಹೋರಾಟ ಮಾಡಿದೆ. ಈ ಹಿಂದಿನ ಟೆಂಡರ್ ವ್ಯವಸ್ಥೆ ರದ್ದುಗೊಳಿಸಿ ಹೊಸ ಟೆಂಡರ್ ಕರೆಯಬೇಕು ಎಂದು ನ್ಯಾಯಲಯ ನಮ್ಮಿಂದ ಅಫಿಡವಿಟ್ ಬರೆಸಿಕೊಂಡಿದೆ. ಟೆಂಡರ್ ನಲ್ಲಿ ಅಕ್ರಮ ನಡೆದಿದೆ ಎಂದು ವರದಿ ಬಂದ ಮೇಲೆ ತನಿಖೆ ನಡೆಸಿ ರದ್ದುಗೊಳಿಸಲಾಗಿದೆ. ಕಸ ವಿಲೇವಾರಿ ಘಟಕಗಳನ್ನು ಸಹ ತೆರೆಯಲಾಗಿದೆ” ಎಂದರು.

“ಕಸದ ಸಮಸ್ಯೆ ನಿವಾರಿಸಲು ದೆಹಲಿ, ಹೈದರಾಬಾದ್, ಚೆನ್ನೈ ನಗರಗಳಿಗೆ ಹೋಗಿ ಕಸ ವಿಲೇವಾರಿ ಮಾದರಿಯನ್ನು ನೋಡಿಕೊಂಡು ಬಂದಿದ್ದೇನೆ. ನಾನು ಈ ಹಿಂದೆ ಇಂಧನ ಸಚಿವನಾಗಿದ್ದಾಗ ಒಂಬತ್ತು ಕಡೆ ಕಸ ಆಧಾರಿತ ಇಂಧನ ತಯಾರಿಕೆ ಘಟಕಗಳನ್ನು ಸ್ಥಾಪಿಸಲಾಗಿತ್ತು. ಆದರೆ ಒಂದೇ ಒಂದು ಸಹ ಯಶಸ್ವಿಯಾಗಿಲ್ಲ. ಪ್ರಸ್ತುತ ಬಿಡದಿಯಲ್ಲಿ ಒಂದು ಘಟಕ ಮಾತ್ರ ಕಾರ್ಯಾಚರಣೆ ನಡೆಸುತ್ತಿದೆ. ಸಣ್ಣ ವಿದ್ಯುತ್ ಘಟಕಗಳನ್ನು ಮಾಡಲು ಸಾಧ್ಯವಿಲ್ಲ. ಕನಿಷ್ಠ 20 ಮೆ.ವ್ಯಾ. ಉತ್ಪಾದನೆ ಮಾಡಲು ಸಾಧ್ಯವಿದ್ದರೆ ಮಾತ್ರ ಸ್ಥಾಪಿಸಬಹುದು” ಎಂದರು.

ಕಸದ ಮೇಲಿನ ಸೆಸ್ ಅಳವಡಿಸಿದ್ದು ಬಿಜೆಪಿ

ಕಸದ ಮೇಲಿನ ಸೆಸ್ ವಿಚಾರಾಗಿ ಉತ್ತರಿಸಿದ ಡಿಸಿಎಂ ಅವರು, “2016 ರಲ್ಲಿ ಕೇಂದ್ರ ಸರ್ಕಾರದ ಘನತ್ಯಾಜ್ಯ ನಿರ್ವಹಣಾ ನಿಯಮದ ಪ್ರಕಾರ ನೂತನ ಆದೇಶ ನೀಡಿತು. 2020 ರಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಕೇಂದ್ರ ಸರ್ಕಾರ ಕಳುಹಿಸಿದ ಕಸ ಸಂಗ್ರಹ ದರಪಟ್ಟಿಯನ್ನು ಅಳವಡಿಸಿಕೊಂಡಿತು” ಎಂದು ಗೆಜೆಟ್ ಪ್ರತಿಯ ವಿವರವನ್ನು ಸದನಕ್ಕೆ ಓದಿ ತಿಳಿಸಿದರು.

“ಈ ಗೆಜೆಟ್ ಪ್ರತಿಯಲ್ಲಿ ಐದು ಕೆಜಿಗೆ ರೂ.500, ಹತ್ತು ಕೆಜಿಗೆ ರೂ.1,400, ಇಪ್ಪತ್ತೈದು ಕೆಜಿಗೆ ರೂ.3,400, ಐವತ್ತು ಕೆಜಿಗೆ ರೂ.7000, ನೂರು ಕೆಜಿಗೆ ರೂ 14,000 ಶುಲ್ಕ ವಿಧಿಸಬೇಕು ಎಂದು ಹೇಳಲಾಗಿದೆ. ಇದನ್ನು ನೋಡಿ ನನಗೂ ಆಶ್ಚರ್ಯವಾಯಿತು. ಅಲ್ಲದೇ ಖಾಲಿ ಇರುವ ನಿವೇಶನಗಳಿಗೆ ಪ್ರತಿ ಚದರ ಅಡಿಗೆ ರೂ.20 ಶುಲ್ಕ ವಿಧಿಸಬೇಕು ಎಂದಿದೆ. ಈ ದರಗಳು ಹೆಚ್ಚಾಯಿತು ಎಂದು ಅದರಲ್ಲಿ ಕೇವಲ ಶೇ. 25ರಷ್ಟು ಮಾತ್ರ ಸಂಗ್ರಹ ಮಾಡುತ್ತಿದ್ದೇವೆ. ಒಂದು ನಿವೇಶನಕ್ಕೆ ಪ್ರತಿ ಚದರ ಅಡಿಗೆ 2.40 ರೂ. ಸಂಗ್ರಹ ಮಾಡುವಂತೆ ತೀರ್ಮಾನ ಮಾಡಲಾಗಿದೆ” ಎಂದರು.

“ದೊಡ್ಡ ಮಾಲ್ ಗಳು ತಮ್ಮ ಉತ್ಪಾದಿತ ಕಸವನ್ನು ತಾವೇ ವಿಲೇವಾರಿ ಮಾಡಿಕೊಳ್ಳುತ್ತೇವೆ ಎಂದು ಘೋಷಣೆ ಮಾಡಿಕೊಂಡಿವೆ. ಅದಕ್ಕೆ ನಾವು ಸಹ ಬೆಂಬಲ ನೀಡುತ್ತೇವೆ. ಖಾಲಿ ನಿವೇಶನಗಳು ಸ್ವಚ್ಚವಾಗಿಟ್ಟುಕೊಳ್ಳಬೇಕು ಎಂದು ಹೊಸ ಕಾನೂನು ಮಾಡಲು ಮುಂದಾಗಿದ್ದೇವೆ. ಇತ್ತೀಚೆಗೆ ಪ್ರಧಾನಿಯವರು ನಗರಕ್ಕೆ ಬಂದಾಗ ಅರಮನೆ ರಸ್ತೆಯಲ್ಲಿ ಹಸಿರು ಪರದೆ ಕಟ್ಟಲಾಯಿತು. ಅಲ್ಲಿಜಾಗ ಖಾಲಿಯಿದೆ ಎಂದು ಜನರು ಕಸ ಎಸೆಯುತ್ತಿದ್ದಾರೆ” ಎಂದು ಹೇಳಿದರು.

“ಯಾವ ರೀತಿಯ ಕಸ ಉತ್ಪಾದನೆಯಾಗುತ್ತದೆ ಎಂದು ನಾಗರೀಕರು ಸ್ವತಃ ಘೋಷಿಸಲು ಅವಕಾಶ ನೀಡಲಾಗಿದೆ. ಇದರ ಅನ್ವಯ 35 ಸಾವಿರ ಜನರು ಸ್ವಯಂ ಘೋಷಣೆ ಮಾಡಿದ್ದಾರೆ. ಇವರುಗಳೇ ಕಸವನ್ನು ವಿಲೇವಾರಿ ಮಾಡಿಕೊಳ್ಳುತ್ತಾರೆ. ಕಟ್ಟಡ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಸುರಿಯುವವರನ್ನು ಗುರುತಿಸಿ ಪ್ರಕರಣ ದಾಖಲಿಸಬೇಕು ಎಂದು ಪೊಲೀಸರಿಗೆ ಸೂಚಿಸಿದ್ದೇನೆ. ಇದರ ಬಗ್ಗೆಯೂ ಟೆಂಡರ್ ಕರೆಯಲಾಗಿದೆ. ಅಲ್ಲಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗವುದು” ಎಂದರು.

Share. Facebook Twitter LinkedIn WhatsApp Email

Related Posts

ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ನಿರಂತರವಾಗಿ `ಜಾಹೀರಾತು’ ಬರುತ್ತಿದ್ದರೆ ಜಸ್ಟ್ ಈ ರೀತಿ ನಿಲ್ಲಿಸಿ.!

16/01/2026 1:48 PM2 Mins Read

ಪೋಷಕರೇ ಗಮನಿಸಿ : `ಏಕಲವ್ಯ ಮಾದರಿ ವಸತಿ ಶಾಲೆ’ಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

16/01/2026 1:36 PM1 Min Read

BREAKING : ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣ : ‘CID’ ಇಂದ ಇಬ್ಬರು ಖಾಸಗಿ ಗನ್ ಮ್ಯಾನ್ ಗಳು ಅರೆಸ್ಟ್

16/01/2026 1:26 PM1 Min Read
Recent News

ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ನಿರಂತರವಾಗಿ `ಜಾಹೀರಾತು’ ಬರುತ್ತಿದ್ದರೆ ಜಸ್ಟ್ ಈ ರೀತಿ ನಿಲ್ಲಿಸಿ.!

16/01/2026 1:48 PM

BREAKING : ಮುಂಬೈ ಪಾಲಿಕೆ ಚುನಾವಣೆಯಲ್ಲಿ ಶತಕ ಬಾರಿಸಿದ ಬಿಜೆಪಿ : ಕಮಾಲ್ ಮಾಡದ ಠಾಕ್ರೆ ಬ್ರದರ್ಸ್

16/01/2026 1:43 PM

ಪೋಷಕರೇ ಗಮನಿಸಿ : `ಏಕಲವ್ಯ ಮಾದರಿ ವಸತಿ ಶಾಲೆ’ಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

16/01/2026 1:36 PM

BREAKING : ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣ : ‘CID’ ಇಂದ ಇಬ್ಬರು ಖಾಸಗಿ ಗನ್ ಮ್ಯಾನ್ ಗಳು ಅರೆಸ್ಟ್

16/01/2026 1:26 PM
State News
KARNATAKA

ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ನಿರಂತರವಾಗಿ `ಜಾಹೀರಾತು’ ಬರುತ್ತಿದ್ದರೆ ಜಸ್ಟ್ ಈ ರೀತಿ ನಿಲ್ಲಿಸಿ.!

By kannadanewsnow5716/01/2026 1:48 PM KARNATAKA 2 Mins Read

ನೀವು ನಿಮ್ಮ ಸ್ಮಾರ್ಟ್ ಫೋನ್ ಬಳಸುವಾಗ ಪಾಪ್-ಅಪ್ ಜಾಹೀರಾತುಗಳು, ಅಧಿಸೂಚನೆ ಜಾಹೀರಾತುಗಳು ಮತ್ತು ಪೂರ್ಣ-ಪರದೆಯ ಜಾಹೀರಾತುಗಳು ನಿಮ್ಮ ಪರದೆಯನ್ನು ಆಕ್ರಮಿಸಿಕೊಳ್ಳುತ್ತವೆಯೇ?…

ಪೋಷಕರೇ ಗಮನಿಸಿ : `ಏಕಲವ್ಯ ಮಾದರಿ ವಸತಿ ಶಾಲೆ’ಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

16/01/2026 1:36 PM

BREAKING : ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣ : ‘CID’ ಇಂದ ಇಬ್ಬರು ಖಾಸಗಿ ಗನ್ ಮ್ಯಾನ್ ಗಳು ಅರೆಸ್ಟ್

16/01/2026 1:26 PM

BIG NEWS : ಸಚಿವ ಸ್ಥಾನ ಅಷ್ಟೆ ಅಲ್ಲ ಕಸ ಗುಡಿಸೋ ಕೆಲಸ ಕೊಟ್ರು ನಾನು ಮಾಡ್ತೀನಿ : ಶಾಸಕ ಶಿವಗಂಗಾ ಬಸವರಾಜ್

16/01/2026 1:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.