ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸಿಯರ್ ಕಿರುಕುಳದಿಂದ ಮೃತಪಟ್ಟ, ಆತ್ಮಹತ್ಯೆ ಮಾಡಿಕೊಂಡವರಿಗೆ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.
ಇಂದು ಸದನದಲ್ಲಿ ಸದಸ್ಯರು ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು, ಮೈಕ್ರೋ ಫೈನಾನ್ಸಿಯರ್ ಗಳ ಕಾಟದಿಂದ ಮೃತಪಟ್ಟ , ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಕೊಡಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಿಸಿದರು.
ಮೈಕ್ರೋ ಫೈನಾನ್ಸ್ಗಳ ಕಿರುಕುಳಕ್ಕೆ ಕಾನೂನಾತ್ಮಕ ಕಡಿವಾಣ ಹಾಕುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಫೆಬ್ರವರಿ ತಿಂಗಳಿನಲ್ಲಿ ಹೊಸ ಕಾನೂನು ಜಾರಿಯಾದ ನಂತರದಿಂದ ಫೈನಾನ್ಸ್ ಸಿಬ್ಬಂದಿಗಳ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆಯಾಗಿದೆ, ಜೊತೆಗೆ ಆತ್ಮಹತ್ಯೆಗಳು ಕೂಡ ಕಡಿಮೆಯಾಗಿದೆ ಎಂದರು.
ಮೈಕ್ರೋ ಫೈನಾನ್ಸ್ಗಳ ಕಿರುಕುಳಕ್ಕೆ ಕಾನೂನಾತ್ಮಕ ಕಡಿವಾಣ ಹಾಕುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಫೆಬ್ರವರಿ ತಿಂಗಳಿನಲ್ಲಿ ಹೊಸ ಕಾನೂನು ಜಾರಿಯಾದ ನಂತರದಿಂದ ಫೈನಾನ್ಸ್ ಸಿಬ್ಬಂದಿಗಳ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆಯಾಗಿದೆ, ಜೊತೆಗೆ ಆತ್ಮಹತ್ಯೆಗಳು ಕೂಡ ಕಡಿಮೆಯಾಗಿದೆ. pic.twitter.com/i5WD0SUctr
— Siddaramaiah (@siddaramaiah) August 21, 2025
ರಾಜ್ಯ ಸರ್ಕಾರದಿಂದ ‘ಟ್ರಾಫಿಕ್ ದಂಡ ಬಾಕಿ’ ಉಳಿಸಿಕೊಂಡಿರೋ ‘ವಾಹನ ಸವಾರ’ರಿಗೆ ಗುಡ್ ನ್ಯೂಸ್