ಬೆಂಗಳೂರು: ಬಾಕಿಯಿರುವ ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಬ್ಯಾಕ್ಲಾಗ್ ಹುದ್ದೆ ಭರ್ತಿ ವಿಷಯದಲ್ಲಿ ಯಾವುದೇ ರಾಜಿ ಪ್ರಶ್ನೆಯೇ ಇಲ್ಲ. ಸರ್ಕಾರ ದಲಿತರ ಪರವಾಗಿದ್ದು, ದಲಿತರಿಗೆ ಸೂಕ್ತ ನ್ಯಾಯ ಒದಗಿಸಲು ಅಡ್ಡಗಾಲು ಹಾಕುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಮಾತನಾಡಿದಂತ ಅವರು, ರಾಜ್ಯಾದ್ಯಂತ ದೇವದಾಸಿಯರ ಸಮೀಕ್ಷೆ ಕಾರ್ಯವನ್ನು ಈಗಾಗಲೇ ಆರಂಭಿಸಲಾಗಿದ್ದು, ಸಮೀಕ್ಷೆ ಪೂರ್ಣಗೊಂಡ ಬಳಿಕ ದೇವದಾಸಿಯರ ಪುನರ್ವಸತಿಗೆ ಹಾಗೂ ಈ ಪಿಡುಗನ್ನು ಸಂಪೂರ್ಣವಾಗಿ ತೊಲಗಿಸಲು ಯೋಜನೆ ಜಾರಿಗೊಳಿಸಲಾಗುವುದು. ವಿಶೇಷ ಅನುದಾನ ನೀಡುವ ಬಗ್ಗೆಯೂ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಕಳೆದ ಆರು ತಿಂಗಳಲ್ಲಿ ಶೇ.84 ರಷ್ಟು ಮಾತ್ರ ಪ್ರಕರಣಗಳಲ್ಲಿ ನಿಗದಿತ ಅವಧಿಯ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಶೇ.100 ಪ್ರಕರಣಗಳಲ್ಲಿ 60ದಿನಗಳ ಒಳಗಾಗಿ ಕಡ್ಡಾಯವಾಗಿ ಆರೋಪ ಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸ್ಪಷ್ಟ ಸೂಚನೆ ನೀಡಿದರು.
“ಪೊಲೀಸರು ಇದರಲ್ಲಿ ಯಾವುದೇ ನೆಪ ಹೇಳಬಾರದು. ನ್ಯಾಯಾಲಯದಲ್ಲಿ 56ಪ್ರಕರಣಗಳಲ್ಲಿ ತಡೆಯಾಜ್ಞೆ ಇದ್ದು, ಇದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.
ರಾಜ್ಯದಲ್ಲಿ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗಾಗಿ 11ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಪ್ರಕರಣಗಳ ಸರಿಯಾದ ವಿಚಾರಣೆ ನಡೆಸಿ, ತ್ವರಿತವಾಗಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಶಿಕ್ಷೆಯ ಪ್ರಮಾಣ ಶೇ.10ರಷ್ಟಿದ್ದು, ಇದು ಹೆಚ್ಚಾಗಬೇಕು. ಆರೋಪಿಗಳೊಂದಿಗೆ ಪೊಲೀಸರು ಶಾಮೀಲಾಗಿರುವುದು ಕಂಡು ಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.
ದೌರ್ಜ್ಯನ್ಯ ಪ್ರಕರಣಗಳಲ್ಲಿ ಅಂಗವೈಕಲ್ಯತೆ ಉಂಟಾದಲ್ಲಿ ನೀಡಲಾಗುವ ವೈದ್ಯಕೀಯ ಪರಿಹಾರದ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲನೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಮೈಸೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮಧುಸೂದನ್ ಕೆ ಎಸ್ ಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ
BIG NEWS : ಧರ್ಮಸ್ಥಳ ಕೇಸ್ ಶೇ.90ರಷ್ಟು ತನಿಖೆ ಮುಗಿದಿದೆ, ‘NIA, CBI’ ಅಗತ್ಯವಿಲ್ಲ: ಸಚಿವ ರಾಮಲಿಂಗಾರೆಡ್ಡಿ