ಬೆಂಗಳೂರು: ಆಗಸ್ಟ್.27, 2025ರಂದು ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಆದೇಶಿಸಲಾಗಿದೆ.
ದಿನಾಂಕ: 27-08-2025 ಬುಧವಾರದಂದು “ಗಣೇಶ ಚತುರ್ಥಿ ಹಬ್ಬದ” ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಅವರು ತಿಳಿಸಿದ್ದಾರೆ.