ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ರಾಜ್ಯ ಸರ್ಕಾರ ಕೊನೆಗೂ ಅಧ್ಯಕ್ಷ ಉಪಾಧ್ಯಕ್ಷರ ನೇಮಕ ಮಾಡಿದೆ. ರಾಜ್ಯ ಸರ್ಕಾರ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಪದನಿಮಿತ್ತ ಸದಸ್ಯರನ್ನು ಇದೀಗ ನೇಮಕ ಮಾಡಿದೆ. ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಾಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್ ನೇಮಕ ಮಾಡಲಾಗಿದೆ.
ಕೇಂದ್ರದಲ್ಲಿನ ಬೆಂಗಳೂರಿನ ಸಚಿವರು, ರಾಜ್ಯ ಸರ್ಕಾರದ ಬೆಂಗಳೂರು ಸಚಿವರು, ಬೆಂಗಳೂರಿನ ಸಂಸದರು, ಶಾಸಕರು, ಎಂಎಲ್ಸಿಗಳು ಪದನಿಮಿತ್ತ ಸದಸ್ಯರಾಗಿ ನೇಮಕ ಮಾಡಲಾಗಿದೆ. ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ ನೀಡಲಾಗಿದೆ.
ಜಿಬಿಎ ಮುಖ್ಯ ಆಯುಕ್ತರು ಪದ ನಿಮಿತ್ತ ಸದಸ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಮೇಯರ್, ಆಯುಕ್ತರು, ಪದನಿಮಿತ್ತ ಸದಸ್ಯರು, ಅಧ್ಯಕ್ಷ, ಉಪಾಧ್ಯಕ್ಷ ಹಾಗು ಪದನಿಮಿತ್ತ ಸದಸ್ಯರು ಸೇರಿದಂತೆ ಒಟ್ಟು 75 ಜನರನ್ನು ಸರ್ಕಾರ ನೇಮಕ ಮಾಡಿದೆ.