Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಸಿಎಂ ಸಿದ್ದರಾಮಯ್ಯ ಭೇಟಿಯಾದ ಭಾರತಿ ವಿಷ್ಣುವರ್ಧನ್ : ‘ಕರ್ನಾಟಕ ರತ್ನ’ ನೀಡಿ ಎಂದು ಮನವಿ

03/09/2025 12:57 PM

ಛತ್ತೀಸ್ ಗಢದಲ್ಲಿ ಭೀಕರ ಪ್ರವಾಹ: ಸೇತುವೆ ಕುಸಿದು ನಾಲ್ವರು ಸಾವು, ಮೂವರು ನಾಪತ್ತೆ

03/09/2025 12:51 PM

BREAKING : ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ : ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಕ್ಲೀನ್ ಚಿಟ್

03/09/2025 12:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕ ಕಟ್ಟಿದ ಹಿರಿಮೆ ಅರಸು ಸಮುದಾಯದ್ದು: ಡಿಸಿಎಂ ಡಿಕೆಶಿ ಶ್ಲಾಘನೆ
KARNATAKA

ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕ ಕಟ್ಟಿದ ಹಿರಿಮೆ ಅರಸು ಸಮುದಾಯದ್ದು: ಡಿಸಿಎಂ ಡಿಕೆಶಿ ಶ್ಲಾಘನೆ

By kannadanewsnow0931/08/2025 4:16 PM

ಬೆಂಗಳೂರು : “ಮನುಷ್ಯ ಧರ್ಮವನ್ನು ಮೂಲವಾಗಿಟ್ಟುಕೊಂಡು ಮೈಸೂರು ಅರಸರು ಹಾಗೂ ಅವರ ವಂಶಸ್ಥರು ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕವನ್ನು ಕಟ್ಟಿದ ಇತಿಹಾಸ ಅರಸು ಸಮುದಾಯಕ್ಕಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಅರಸು ಅಸೋಸಿಯೇಷನ್ ನ ಸುವರ್ಣ ಮಹೋತ್ಸವದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

“ಅರಸು ಸಮುದಾಯವು ಗಾತ್ರದಲ್ಲಿ ಚಿಕ್ಕದಿರಬಹುದು. ಆದರೆ ಈ ರಾಜ್ಯಕ್ಕೆ ಅವರು ನೀಡಿರುವ ಕೊಡುಗೆ ಬಹು ದೊಡ್ಡದು. ನಾಲ್ವಡಿ ಕೃಷ್ಣರಾಜ ಒಡೆಯರ್, ಕೆಂಪರಾಜಮ್ಮಣ್ಣಿ, ಜಯಚಾಮರಾಜೇಂದ್ರ ಒಡೆಯರ್ ಅವರು ಹೀಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕನ್ನಂಬಾಡಿ ಕಟ್ಟೆ, ವಾಣಿವಿಲಾಸ ಸಾಗರ ಅಣೆಕಟ್ಟು, ಜೆ.ಸಿ. ಎಂಜಿನಿಯರ್ ಕಾಲೇಜು, ವಿಕ್ಟೋರಿಯಾ ಆಸ್ಪತ್ರೆ ಹೀಗೆ ಹಲವಾರು ಜನೋಪಕಾರಿ ಕೆಲಸಗಳಿಗೆ ಅಡಿಪಾಯ ಹಾಕಿಕೊಟ್ಟವರು ಮೈಸೂರು ಅರಸರು” ಎಂದು ಕೊಂಡಾಡಿದರು.

“ವಿದ್ಯುತ್ ಉತ್ಪಾದನೆ ಸೇರಿದಂತೆ ರಾಜ್ಯದ ಪ್ರಮುಖ ಸಂಸ್ಥೆಗಳ ಸ್ಥಾಪನೆಗೆ ಅಡಿಪಾಯ ಹಾಕಿಕೊಟ್ಟವರು ಮೈಸೂರಿನ ಒಡೆಯರು. ಇವರು ನೆಟ್ಟಿರುವ ಮರದ ಫಲವನ್ನು ನಾವೆಲ್ಲರೂ ತಿನ್ನುತ್ತಿದ್ದೇವೆ” ಎಂದರು.

ಮೀಸಲಾತಿ ಹಾಗೂ ನಿವೇಶನ ನೀಡುವ ಬಗ್ಗೆ ಚರ್ಚೆ

“ಅರಸು ಸಮುದಾಯಕ್ಕೆ ಮೀಸಲಾತಿ ಸೇರಿದಂತೆ ಇತರೇ ಅನುಕೂಲಗಳನ್ನು ಕಲ್ಪಿಸಿಕೊಡಬೇಕು ಎಂದು ಮುಖಂಡರುಗಳು ಮನವಿ ಸಲ್ಲಿಸಿದ್ದಾರೆ. ಇದರ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು. ಸಂಘಕ್ಕೆ ನಿವೇಶನ ಬೇಕು ಎಂದು ಮನವಿ ಸಲ್ಲಿಸಿದ್ದೀರಿ. ನಾನು ಬೆಂಗಳೂರು ಅಭಿವೃದ್ಧಿಯ ಜವಾಬ್ದಾರಿ ಹೊತ್ತಿದ್ದೇನೆ‌. ಆದ ಕಾರಣ ಸಂಘದ ಪ್ರಮುಖರು ಹಾಗೂ ರಾಜ ವಂಶಸ್ಥರ ಜೊತೆಯಲ್ಲಿ ಚರ್ಚೆ ಮಾಡಿ ನಿಮ್ಮ ಬೇಡಿಕೆ ಈಡೇರಿಸುವ ಬಗ್ಗೆ ಕೆಲಸ ಮಾಡಲಾಗುವುದು” ಎಂದು ಭರವಸೆ ನೀಡಿದರು.

“ಮೈಸೂರು ಮಹಾರಾಜರು ಯಾವ ಧರ್ಮದಲ್ಲಿ ನಡೆಯಬೇಕು, ಯಾವ ಧರ್ಮವನ್ನ ಉಳಿಸಿಕೊಳ್ಳಬೇಕು ಎಂದು ಯಾವತ್ತೂ ಮಾತನಾಡಲಿಲ್ಲ. ಏಕೆಂದರೆ ಧರ್ಮ ಯಾವುದಾದರೂ ಇರಲಿ, ತತ್ವ, ನಾಮ ನೂರಾರೂ ಇದ್ದರೂ ದೈವವೊಂದೇ. ಪೂಜೆ ಹಲವಾದರೂ ಭಕ್ತಿಯೊಂದೇ, ದೇವನೊಬ್ಬ ನಾಮ ಹಲವು” ಎಂದರು.

“ನಾವುಗಳು ಹುಟ್ಟುವಾಗ ಇದೇ ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿಕೊಂಡು ಹುಟ್ಟಲಿಲ್ಲ. ಅರಸು ಸಮುದಾಯಕ್ಕೆ ನಾವೆಲ್ಲರೂ ಋಣಿಗಳಾಗಿರಬೇಕು. ಕರ್ನಾಟಕ ಸರ್ಕಾರದ ಪರವಾಗಿ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಾನು ನನ್ನ ಕ್ಷೇತ್ರದಲ್ಲಿ ಹಲವಾರು ಅರಸು ಕುಟುಂಬದವರನ್ನು ಹತ್ತಿರದಿಂದ ನೋಡಿದ್ದೇನೆ. ಬಹಳ ಸ್ವಾಭಿಮಾನದಿಂದ ಬದುಕು ನಡೆಸುತ್ತಿರುವ ಸಮುದಾಯ.‌ ನೀವು ಸರ್ಕಾರದ ಜೊತೆ ನಿಂತು, ಬೆಂಬಲವಾಗಿರಬೇಕು” ಎಂದು ಮನವಿ ಮಾಡಿದರು.

“ದೇವರಾಜ ಅರಸು ಅವರು ಉಳುವವನೇ ಭೂಮಿಯ ಒಡೆಯ ಕಾನೂನು ಜಾರಿಗೆ ತಂದು ಲಕ್ಷಾಂತರ ಭೂ ರಹಿತ ಬಡವರ ಪರವಾಗಿ ನಿಂತರು. ಈ ತೀರ್ಮಾನ ಇತಿಹಾಸದಲ್ಲಿ ಶಾಶ್ವತವಾಗಿ ಉಳಿದುಕೊಂಡಿದೆ. ಒಬ್ಬ ಮನುಷ್ಯ ಯಾವಾಗ ಸಾಹುಕಾರನಾಗುತ್ತಾನೆ, ಯಾವಾಗ ಬಡವನಾಗುತ್ತಾನೆ ಎಂಬುದು ತಿಳಿಯಿವುದಿಲ್ಲ. ಅದಲು-ಬದಲು ಪ್ರಕ್ರಿಯೆ ಅನಿರೀಕ್ಷಿತ” ಎಂದರು.

“ದೇವರಾಜ ಅರಸು ಅವರಿಗೆ ಜಾತಿ ಇರಲಿಲ್ಲ. ಆದರೆ ನಾಯಕತ್ವದ ಗುಣವಿತ್ತು. ಆ ಗುಣ ಅವರನ್ನು ದೊಡ್ಡ ಮಟ್ಟಕ್ಕೆ ಬೆಳೆಸಿತು. ಹಿಂದುಳಿದ ಹಾಗೂ ಮೇಲ್ವರ್ಗದ ಎಲ್ಲ ರಾಜಕಾರಣಿಗಳನ್ನು ಬೆಳೆಸಿ ಭದ್ರ ಅಡಿಪಾಯ ಕೊಟ್ಟವರು ದೇವರಾಜ ಅರಸು” ಎಂದರು.

“ಹಣ, ಐಶ್ವರ್ಯ ಎಷ್ಟೇ ಇದ್ದರೂ ಸರಳತೆಯನ್ನು ಕಾಪಾಡಿಕೊಂಡವರು ಅರಸು ಸಮುದಾಯದವರು. ಸಂಪತ್ತಿಗೆ ಬೆಲೆಕಟ್ಟಬಹುದು ಆದರೆ ಸರಳತೆಗೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ಇನ್ನೊಬ್ಬರಿಗೆ ಅನ್ಯಾಯವಾಗದ ರೀತಿಯಲ್ಲಿ ನಾವು ಬದುಕಬೇಕು. ಅದೇ ನಿಜವಾದ ಸರಳ ಧರ್ಮ” ಎಂದರು.

“ಈ ಸಮುದಾಯದ ಎಲ್ಲಾ ವಯೋಮಾನದವರ ಬಳಿ ನಾನು ಪ್ರಾರ್ಥಿಸಿಕೊಳ್ಳುವುದು ಏನೆಂದರೆ ನಿಮ್ಮಲ್ಲಿನ ಆತ್ಮಸ್ಥೈರ್ಯದ ರಕ್ತ ಕುಂದಬಾರದು. ಮಹಾರಾಜರು ಸೇರಿದಂತೆ ದೇವರಾಜ ಅರಸು ಅವರು ತಮಗೆ ತೊಂದರೆಯಾದರೂ ಸಮಾಜದ ಪರವಾಗಿ ನಿಂತವರು” ಎಂದರು.

“ನನ್ನ ಗುರುಗಳಾದ ಅಜ್ಜಯ್ಯ ಅವರು ಮಾನವ ಧರ್ಮಕ್ಕೆ ಜಯವಾಗಲಿ, ಮಾನವ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎನ್ನುವ ಮಾತನ್ನು ಹೇಳಿದ್ದಾರೆ. ಈ ಮಾತಿನಂತೆಯೇ ನಾವೆಲ್ಲರೂ ನಡೆಯಬೇಕು” ಎಂದರು.

ಬಿಜೆಪಿಯವರಿಗೆ ರಾಜಕೀಯ ಇಚ್ಚಾಶಕ್ತಿಯಿದ್ದರೆ ಕರ್ನಾಟಕದ ಪಾಲಿನ ಹಣ ಕೊಡಿಸಲಿ

ಬಿಜೆಪಿ ಧರ್ಮಸ್ಥಳ ಯಾತ್ರೆಯ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿದ ಡಿಸಿಎಂ ಅವರು, “ಬಿಜೆಪಿಯವರಿಗೆ ರಾಜಕೀಯ ಇಚ್ಚಾಶಕ್ತಿಯಿದ್ದರೆ ಭದ್ರಾ ಮೇಲ್ದಂಡೆಗೆ, ಬೆಂಗಳೂರು ಅಭಿವೃದ್ಧಿಗೆ ಹಣ ಕೊಡಿಸಲಿ. ಮೇಕೆದಾಟು, ಮಹದಾಯಿಗೆ ಅನುಮತಿ ಕೊಡಿಸಲಿ” ಎಂದರು.

ಧರ್ಮಸ್ಥಳ ಬದಲು ದೆಹಲಿಯಲ್ಲಿ ಹೋರಾಟ ಮಾಡಲಿ

“ಬಿಜೆಪಿಯವರು ಧರ್ಮಸ್ಥಳಕ್ಕೆ ಹೋಗಿ ತಮ್ಮ ವೈಯಕ್ತಿಕ ಲಾಭಕ್ಕೆ ಪ್ರಾರ್ಥನೆ ಮಾಡಿಕೊಂಡು ಬರುತ್ತಾರೆಯೇ ಹೊರತು ಬೇರೇನೂ ಇಲ್ಲ. ಇವರ ಹೋರಾಟ ಧರ್ಮಸ್ಥಳದಲ್ಲಿ ಅಲ್ಲ, ಎಲ್ಲಾ ಸಂಸದರು, ಶಾಸಕರನ್ನು ಕರೆದುಕೊಂಡು ಹೋಗಿ ದೆಹಲಿಯಲ್ಲಿ ಹೋರಾಟ ಮಾಡಬೇಕು. ರಾಜ್ಯಕ್ಕೆ ಅನುದಾನ ತರಬೇಕು” ಎಂದು ಛೇಡಿಸಿದರು.

ಸಗಣಿ ಮೇಲೆ ಕಲ್ಲು ಹಾಕಲ್ಲ:

ಶಿವಕುಮಾರ್ ಗೆ ಶಾಸಕರ ಬೆಂಬಲ‌ ಇಲ್ಲದೇ ಇರುವ ಕಾರಣಕ್ಕೆ ಬಿಜೆಪಿ ಕರೆದುಕೊಳ್ಳುತ್ತಿಲ್ಲ ಎನ್ನುವ ಯತ್ನಾಳ್ ಹೇಳಿಕೆ ಬಗ್ಗೆ ಕೇಳಿದಾಗ, “ಕಸ, ಸಗಣಿ ಮೇಲೆ ಕಲ್ಲನ್ನು ಹಾಕುವುದಕ್ಕೆ ನಾನು ಇಷ್ಟಪಡುವುದಿಲ್ಲ” ಎಂದು ತಿರುಗೇಟು ನೀಡಿದರು.

BREAKING: ಸೆ.28ರಿಂದ ಕನ್ನಡದ ಬಿಗ್​​ ಬಾಸ್ ಸೀಸನ್ 12 ಆರಂಭ: ನಟ ಸುದೀಪ್ ಘೋಷಣೆ | Bigg Boss Kannada Season 12

ಗಣೇಶ ಮೆರವಣಿಗೆ ವೇಳೆ DJ ಬಳಸುವವರೇ ಎಚ್ಚರ! ದಾವಣಗೆರೆಯಲ್ಲಿ ಡಿಜೆ ಜಪ್ತಿ, FIR ದಾಖಲು

Share. Facebook Twitter LinkedIn WhatsApp Email

Related Posts

BIG NEWS : ಸಿಎಂ ಸಿದ್ದರಾಮಯ್ಯ ಭೇಟಿಯಾದ ಭಾರತಿ ವಿಷ್ಣುವರ್ಧನ್ : ‘ಕರ್ನಾಟಕ ರತ್ನ’ ನೀಡಿ ಎಂದು ಮನವಿ

03/09/2025 12:57 PM1 Min Read

BREAKING : ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ : ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಕ್ಲೀನ್ ಚಿಟ್

03/09/2025 12:40 PM1 Min Read

ಶಿವಮೊಗ್ಗ : ಹಬ್ಬಕೆಂದು ತವರು ಮನೆಗೆ ಬಂದ ಮಹಿಳೆ, ನೇಣು ಬಿಗಿದುಕೊಂಡು ಆತ್ಮಹತ್ಯೆ!

03/09/2025 12:30 PM1 Min Read
Recent News

BIG NEWS : ಸಿಎಂ ಸಿದ್ದರಾಮಯ್ಯ ಭೇಟಿಯಾದ ಭಾರತಿ ವಿಷ್ಣುವರ್ಧನ್ : ‘ಕರ್ನಾಟಕ ರತ್ನ’ ನೀಡಿ ಎಂದು ಮನವಿ

03/09/2025 12:57 PM

ಛತ್ತೀಸ್ ಗಢದಲ್ಲಿ ಭೀಕರ ಪ್ರವಾಹ: ಸೇತುವೆ ಕುಸಿದು ನಾಲ್ವರು ಸಾವು, ಮೂವರು ನಾಪತ್ತೆ

03/09/2025 12:51 PM

BREAKING : ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ : ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಕ್ಲೀನ್ ಚಿಟ್

03/09/2025 12:40 PM

ಶಿವಮೊಗ್ಗ : ಹಬ್ಬಕೆಂದು ತವರು ಮನೆಗೆ ಬಂದ ಮಹಿಳೆ, ನೇಣು ಬಿಗಿದುಕೊಂಡು ಆತ್ಮಹತ್ಯೆ!

03/09/2025 12:30 PM
State News
KARNATAKA

BIG NEWS : ಸಿಎಂ ಸಿದ್ದರಾಮಯ್ಯ ಭೇಟಿಯಾದ ಭಾರತಿ ವಿಷ್ಣುವರ್ಧನ್ : ‘ಕರ್ನಾಟಕ ರತ್ನ’ ನೀಡಿ ಎಂದು ಮನವಿ

By kannadanewsnow0503/09/2025 12:57 PM KARNATAKA 1 Min Read

ಬೆಂಗಳೂರು : ವಿಷ್ಣುವರ್ಧನ್ ಅವರ ಅಭಿನವ್ ಸ್ಟುಡಿಯೋದಲ್ಲಿನ ಸಮಾಧಿ ಕೆಡವಿದ್ದಾರೆ. ಸ್ಮಾರಕ ನಿರ್ಮಾಣಕ್ಕಾಗಿ 10 ಗುಂಟೆ ಜಾಗ ನೀಡುವಂತೆ ಭಾರತಿ…

BREAKING : ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ : ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಕ್ಲೀನ್ ಚಿಟ್

03/09/2025 12:40 PM

ಶಿವಮೊಗ್ಗ : ಹಬ್ಬಕೆಂದು ತವರು ಮನೆಗೆ ಬಂದ ಮಹಿಳೆ, ನೇಣು ಬಿಗಿದುಕೊಂಡು ಆತ್ಮಹತ್ಯೆ!

03/09/2025 12:30 PM

BREAKING : “ನಿಮ್ಮ ನಷ್ಟವು ಈಗ ನಮ್ಮ ಕಥೆಯ ಭಾಗವಾಗಿದೆ” : ಕಾಲ್ತುಳಿತ ದುರಂತದ ಬಗ್ಗೆ ವಿರಾಟ್ ಕೊಹ್ಲಿ ಭಾವುಕ ಪೋಸ್ಟ್!

03/09/2025 12:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.