Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಚಿಕ್ಕಮ್ಮನ ಮೇಲೆ 7 ವರ್ಷ ನಿರಂತರ ಅತ್ಯಾಚಾರ ಎಸಗಿದ ಸಹೋದರರು!

03/09/2025 6:16 AM

BREAKING : ವಿಜಯಪುರದಲ್ಲಿ ಘೋರ ದುರಂತ : ಗಣೇಶ ವಿಸರ್ಜನೆಯ ವೇಳೆ ವಿದ್ಯುತ್ ತಂತಿ ತಗುಲಿ ಯುವಕ ಸಾವು!

03/09/2025 6:05 AM

BREAKING : ‘ಬಿಗ್ ಬಾಸ್ ಕನ್ನಡ ಸೀಸನ್ 12ರ’ ಪ್ರೊಮೊ ರಿಲೀಸ್ : ಕಿಚ್ಚನ ಮಾಸ್ ಎಂಟ್ರಿ, ಸೆ.28 ರಿಂದ ಅಸಲಿ ಆಟ ಶುರು!

03/09/2025 5:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇನ್ಮುಂದೆ ರಾಜ್ಯ ಸರ್ಕಾರಿ ಆಸ್ಪತ್ರೆಗಳ ರೋಗಿಗಳಿಗೆ ಸಿಗಲಿದೆ ವಿಶೇಷ ಪೌಷ್ಟಿಕ ಆಹಾರ: ದಿನೇಶ್ ಗುಂಡೂರಾವ್ ಚಾಲನೆ
KARNATAKA

ಇನ್ಮುಂದೆ ರಾಜ್ಯ ಸರ್ಕಾರಿ ಆಸ್ಪತ್ರೆಗಳ ರೋಗಿಗಳಿಗೆ ಸಿಗಲಿದೆ ವಿಶೇಷ ಪೌಷ್ಟಿಕ ಆಹಾರ: ದಿನೇಶ್ ಗುಂಡೂರಾವ್ ಚಾಲನೆ

By kannadanewsnow0902/09/2025 6:03 PM

ಬೆಂಗಳೂರು: ರಾಜ್ಯದಲ್ಲಿ‌ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಗಳಿಗೆ ಪೌಷ್ಠಿಕ ಆಹಾರ ಒದಗಿಸುವ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಚಾಲನೆ ನೀಡಿದರು. 

ಒಂದೇ ರೀತಿಯ ಸಾಮಾನ್ಯ ಆಹಾರದ ಬದಲು ರೋಗಿಗಳಿಗೆ ಅಗತ್ಯ ಪೌಷ್ಠಿಕಾಂಶ ಒದಗಿಸುವ ಆಹಾರವನ್ನು ನೀಡುವ ಯೋಜನೆಯನ್ನು ಆರೋಗ್ಯ ಇಲಾಖೆ ಇಸ್ಕಾನ್ ಸಂಸ್ಥೆಯ ಸಹಭಾಗಿತ್ವದೊಂದಿಗೆ ಜಾರಿಗೆ ತಂದಿದೆ.

ಬೆಂಗಳೂರಿನ ಸಿ.ವಿ ರಾಮನ್ ನಗರ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಹಾರ ವಿತರಿಸುವ ಮೂಲಕ ‘ವಿಶೇಷ ಪೌಷ್ಟಿಕ ಆಹಾರ’ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಚಿವರು, ರೋಗಿಗಳ ಚೇತರಿಕೆಗೆ ಚಿಕಿತ್ಸೆಯ ಜೊತೆಗೆ ಪೌಷ್ಠಿಕ ಆಹಾರ ಸೇವನೆ ಕೂಡ ಮಹತ್ವದ ಪಾತ್ರ ವಹಿಸಲಿದೆ.. ಈ ಯೋಜನೆಯ ಮೂಲಕ ರೋಗಿಗಳ ನಿರ್ದಿಷ್ಟ ಪೌಷ್ಟಿಕಾಂಶದ ಅಗತ್ಯಗಳನ್ನು ಪೂರೈಸುವ ಆಹಾರವನ್ನ ಒದಗಿಸಲಾಗುವುದು.

ರೋಗಿಗಳ ಆರೋಗ್ಯ ಸ್ಥಿತಿ ಮತ್ತು ವಯಸ್ಸಿಗೆ ಅನುಗುಣವಾಗಿ ಪೌಷ್ಟಿಕಾಂಶದ ಅಗತ್ಯಗಳು ಭಿನ್ನವಾಗಿರುವುದರಿಂದ, ಎಲ್ಲರಿಗೂ ಒಂದೇ ರೀತಿಯ ಆಹಾರ ಸೂಕ್ತವಲ್ಲ.
ಆಹಾರ ಪದ್ಧತಿಯನ್ನು ಸಂಪೂರ್ಣವಾಗಿ ಪರಿಷ್ಕರಿಸಲಾಗಿದ್ದು, ರೋಗಿಗಳ ವೈದ್ಯಕೀಯ ಅಗತ್ಯಗಳ ಆಧಾರದ ಮೇಲೆ ಆಹಾರವನ್ನು ವಿಂಗಡಿಸಲಾಗಿದೆ.

ಮೊದಲ ಹಂತದದಲ್ಲಿ ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆ, ಜಯನಗರ ಹಾಗೂ ಸಿ.ವಿ ರಾಮನ್ ನಗರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ದಾಖಲಾದ ರೋಗಿಗಳಿಗೆ ವಿಶೇಷ ಪೌಷ್ಠಿಕ ಆಹಾರವನ್ನು ಪ್ರತಿನಿತ್ಯ ಒದಗಿಸಲಾಗುವುದು. ಇಸ್ಕಾನ್ ಸಂಸ್ಥೆಯ ಸಹಭಾಗಿತ್ವದೊಂದಿಗೆ ಆರೋಗ್ಯ ಇಲಾಖೆ ಯೋಜನೆಯನ್ನು ಜಾರಿಗೆ ತಂದಿದ್ದು, ಮುಂಬರುವ ದಿನಗಳಲ್ಲಿ ರಾಜ್ಯದ ಎಲ್ಲ ಸರ್ಕಾರಿ ಜಿಲ್ಲಾಸ್ಪತ್ರೆಗಳಿಗೆ ಪೌಷ್ಠಿಕ ಆಹಾರ ವಿತರಣೆ ಜಾರಿಗೆ ತರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಸಾಮಾನ್ಯ ಆಹಾರ ಕ್ರಮದ ಜೊತೆಗೆ ಚಿಕಿತ್ಸಾ ಆಹಾರ ಕ್ರಮವನ್ನು ಯೋಜನೆಯೆಡಿ ರೂಪಿಸಲಾಗಿದೆ. ಗರ್ಭಿಣಿಯರ ಆಹಾರ ಕ್ರಮ (Pregnancy Diet Plan) ಬಾಣಂತಿಯರ ಆಹಾರ ಕ್ರಮ Diet Plan) ಹಾಗು ಮಕ್ಕಳ ಆಹಾರ ಕ್ರಮ (paediatric diet plan) ಎಂದು ಆಹಾರವನ್ನು ಐದು ಪ್ರಮುಖ ವಿಭಾಗಗಳಾಗಿ ವಿಂಗಡಿಸಿ ಯೋಜನೆಯಡಿ ಪೌಷ್ಟಿಕ ಆಹಾರ ನೀಡಲಾಗುತ್ತದೆ.

ರೋಗಿಯ ಆರೋಗ್ಯ ಚೇತರಿಕೆಗೆ ಸಹಕಾರಿಯಾಗುವಂತೆ ವೈದ್ಯಕೀಯ ಉದ್ದೇಶಗಳಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದು ಪ್ರತಿ ಆಸ್ಪತ್ರೆಯಲ್ಲಿ ಸುಮಾರು 250 ರೋಗಿಗಳಿಗೆ ಪ್ರತಿದಿನ ಆಹಾರವನ್ನು ಸರಬರಾಜು ಮಾಡಲು ಇಸ್ಕಾನ್ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದಕ್ಕಾಗಿ 9 ತಿಂಗಳ ಅವಧಿಗೆ ₹1,37,45,700 ವೆಚ್ಚವನ್ನು ಆರೋಗ್ಯ ಇಲಾಖೆಯಿಂದ ಭರಿಸಲಾಗುತ್ತದೆ.ಯೋಜನೆಯಡಿ ರೋಗಿಗಳಿಗೆ ಪ್ರತಿದಿನ – ಬೆಳಗಿನ ಉಪಹಾರ, ಬೆಳಿಗ್ಗೆ ಮತ್ತು ಸಂಜೆ ಲಘು ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟವನ್ನು ವಿತರಿಸಲಾಗುವುದು.

ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳು ರೋಗನಿರೋಧಕ ಶಕ್ತಿ ಮತ್ತು ಸರಿಯಾದ ಬೆಳವಣಿಗೆಗೆ ವಿಶೇಷ ಪೌಷ್ಟಿಕಾಂಶಗಳನ್ನು ಪಡೆಯುವುದು ಬಹಳ ಮುಖ್ಯ. ಈ ಯೋಜನೆಯು ಇಂತಹ ರೋಗಿಗಳ ಅಗತ್ಯಗಳಿಗೆ ಆದ್ಯತೆ ನೀಡಿದೆ. ಉದಾಹರಣೆಗೆ, ಗರ್ಭಿಣಿಯರಿಗೆ ಗರ್ಭಾವಸ್ಥೆಯ ಆರೋಗ್ಯಕ್ಕೆ ಅಗತ್ಯವಾದ ಕಬ್ಬಿಣ ಮತ್ತು ಫೋಲಿಕ್ ಆಮ್ಲ ಹೆಚ್ಚಿರುವ ಆಹಾರವನ್ನು ನೀಡಲಾಗುತ್ತದೆ. ಬಾಣಂತಿಯರಿಗೆ ಹಾಲು ಉತ್ಪಾದನೆ ಮತ್ತು ಆರೋಗ್ಯಕ್ಕೆ ಸಹಕಾರಿಯಾಗುವ ಆಹಾರವನ್ನು ಒದಗಿಸಲಾಗುತ್ತದೆ. ಸಮರ್ಪಕ ಪೌಷ್ಟಿಕ ಆಹಾರವು ರೋಗಿಗಳನ್ನು ವೇಗವಾಗಿ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ.

BREAKING: ರಾಜ್ಯದಲ್ಲೊಂದು ಶಾಕಿಂಕ್ ಕೃತ್ಯ: ಚಿಕ್ಕಮ್ಮನ ಮೇಲೆ ಅತ್ಯಾಚಾರವೆಸಗಿದ ಕಾನ್ಸ್ ಸ್ಟೇಬಲ್ ಹಾಗೂ ಸಹೋದರ

BREAKING: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗೆ ಆಯುಕ್ತರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ

Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಚಿಕ್ಕಮ್ಮನ ಮೇಲೆ 7 ವರ್ಷ ನಿರಂತರ ಅತ್ಯಾಚಾರ ಎಸಗಿದ ಸಹೋದರರು!

03/09/2025 6:16 AM1 Min Read

BREAKING : ವಿಜಯಪುರದಲ್ಲಿ ಘೋರ ದುರಂತ : ಗಣೇಶ ವಿಸರ್ಜನೆಯ ವೇಳೆ ವಿದ್ಯುತ್ ತಂತಿ ತಗುಲಿ ಯುವಕ ಸಾವು!

03/09/2025 6:05 AM1 Min Read

BREAKING : ‘ಬಿಗ್ ಬಾಸ್ ಕನ್ನಡ ಸೀಸನ್ 12ರ’ ಪ್ರೊಮೊ ರಿಲೀಸ್ : ಕಿಚ್ಚನ ಮಾಸ್ ಎಂಟ್ರಿ, ಸೆ.28 ರಿಂದ ಅಸಲಿ ಆಟ ಶುರು!

03/09/2025 5:57 AM1 Min Read
Recent News

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಚಿಕ್ಕಮ್ಮನ ಮೇಲೆ 7 ವರ್ಷ ನಿರಂತರ ಅತ್ಯಾಚಾರ ಎಸಗಿದ ಸಹೋದರರು!

03/09/2025 6:16 AM

BREAKING : ವಿಜಯಪುರದಲ್ಲಿ ಘೋರ ದುರಂತ : ಗಣೇಶ ವಿಸರ್ಜನೆಯ ವೇಳೆ ವಿದ್ಯುತ್ ತಂತಿ ತಗುಲಿ ಯುವಕ ಸಾವು!

03/09/2025 6:05 AM

BREAKING : ‘ಬಿಗ್ ಬಾಸ್ ಕನ್ನಡ ಸೀಸನ್ 12ರ’ ಪ್ರೊಮೊ ರಿಲೀಸ್ : ಕಿಚ್ಚನ ಮಾಸ್ ಎಂಟ್ರಿ, ಸೆ.28 ರಿಂದ ಅಸಲಿ ಆಟ ಶುರು!

03/09/2025 5:57 AM

BIG NEWS : ‘BBMP’ ಇನ್ನು ನೆನಪು ಮಾತ್ರ : ಕಚೇರಿಗೆ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ಬೋರ್ಡ್ ಅಳವಡಿಕೆ

03/09/2025 5:45 AM
State News
KARNATAKA

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಚಿಕ್ಕಮ್ಮನ ಮೇಲೆ 7 ವರ್ಷ ನಿರಂತರ ಅತ್ಯಾಚಾರ ಎಸಗಿದ ಸಹೋದರರು!

By kannadanewsnow0503/09/2025 6:16 AM KARNATAKA 1 Min Read

ಯಾದಗಿರಿ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು ಸ್ವಂತ ಚಿಕ್ಕಮ್ಮನ ಮೇಲೆ ಇಬ್ಬರು ಸಹೋದರರು ಸತತ ಏಳು…

BREAKING : ವಿಜಯಪುರದಲ್ಲಿ ಘೋರ ದುರಂತ : ಗಣೇಶ ವಿಸರ್ಜನೆಯ ವೇಳೆ ವಿದ್ಯುತ್ ತಂತಿ ತಗುಲಿ ಯುವಕ ಸಾವು!

03/09/2025 6:05 AM

BREAKING : ‘ಬಿಗ್ ಬಾಸ್ ಕನ್ನಡ ಸೀಸನ್ 12ರ’ ಪ್ರೊಮೊ ರಿಲೀಸ್ : ಕಿಚ್ಚನ ಮಾಸ್ ಎಂಟ್ರಿ, ಸೆ.28 ರಿಂದ ಅಸಲಿ ಆಟ ಶುರು!

03/09/2025 5:57 AM

BIG NEWS : ‘BBMP’ ಇನ್ನು ನೆನಪು ಮಾತ್ರ : ಕಚೇರಿಗೆ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ಬೋರ್ಡ್ ಅಳವಡಿಕೆ

03/09/2025 5:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.