Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾನೂನು ತೊಡಕು: ಆನ್‌ಲೈನ್ ಗೇಮ್‌ಗಳ ನಿಷೇಧ ನಿರ್ಧರಿಸಲು ಹೊಸ ಸಮಿತಿ | Online game

03/09/2025 7:23 AM

ಇಂದಿನಿಂದ ‘GST ಕೌನ್ಸಿಲ್’ ಸಭೆ ; ಈ ಎಲ್ಲಾ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ | GST Council meeting

03/09/2025 7:18 AM

2025ಕ್ಕಿಂತ ಮೊದಲು ದೇಶಕ್ಕೆ ಬಂದ ಹಿಂದೂಗಳು, ಸಿಖ್ಖರು, ಜೈನರಿಗೆ ಪಾಸ್ಪೋರ್ಟ್ ಅಗತ್ಯವಿಲ್ಲ: ಕೇಂದ್ರ ಸರ್ಕಾರ

03/09/2025 7:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಸಾಗರದಲ್ಲಿ ಬೀದಿ ನಾಯಿ ಹಾವಳಿ ನಿಯಂತ್ರಣಕ್ಕೆ ಒತ್ತಾಯಿಸಿ ಪ್ರತಿಭಟನೆ, ಮನವಿ
KARNATAKA

ಶಿವಮೊಗ್ಗ: ಸಾಗರದಲ್ಲಿ ಬೀದಿ ನಾಯಿ ಹಾವಳಿ ನಿಯಂತ್ರಣಕ್ಕೆ ಒತ್ತಾಯಿಸಿ ಪ್ರತಿಭಟನೆ, ಮನವಿ

By kannadanewsnow0902/09/2025 7:30 PM

ಶಿವಮೊಗ್ಗ : ಜಿಲ್ಲೆಯ ಸಾಗರದಲ್ಲಿ ನಿನ್ನೆ ಬೀದಿ ನಾಯಿ ದಾಳಿಯಿಂದಾಗಿ ಬಾಲಕನೊಬ್ಬ ತೀವ್ರವಾಗಿ ಗಾಯಗೊಂಡಿದ್ದನು. ಅಲ್ಲದೇ ಮಹಿಳೆಯ ಮೇಲೂ ದಾಳಿಯನ್ನು ನಡೆಸಲಾಗಿತ್ತು. ಇಂತಹ ಬೀದಿ ನಾಯಿಗಳನ್ನು ನಿಯಂತ್ರಿಸುವಂತೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ ಜಮೀಲ್ ಸಾಗರ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಹೆಚ್ಚುತ್ತಿರುವ ಬೀದಿನಾಯಿಗಳ ಹಾವಳಿ ನಿಯಂತ್ರಿಸಬೇಕು ಹಾಗೂ ಬೀದಿನಾಯಿ ಕಚ್ಚಿ ಚಿಕಿತ್ಸೆ ಪಡೆಯುತ್ತಿರುವವರಿಗೆ ನಗರಸಭೆಯಿಂದ ಪರಿಹಾರ ನೀಡುವಂತೆ ಒತ್ತಾಯಿಸಿ ಇಂದು ಸಾಗರ ನಾಗರೀಕರ ಒಕ್ಕೂಟ, ಸಾಗರ ಹೆಲ್ಪ್‍ಲೈನ್, ಪೇಶೆಂಟ್ ರಿಲೀಫ್ ಫೌಂಡೇಶನ್ ಇನ್ನಿತರೆ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

ಈ ಪ್ರತಿಭಟನೆ ವೇಳೆ ಮಾತನಾಡಿದ ಪುರಸಭೆ ಮಾಜಿ ಅಧ್ಯಕ್ಷ ತೀ.ನ.ಶ್ರೀನಿವಾಸ್, ನಗರಸಭೆಯವರು ಪ್ರತಿಭಟನೆ ಇನ್ನಿತರೆಗಳಿಗೆ 30 ಸಾವಿರಕ್ಕೂ ಹೆಚ್ಚಿನ ಹಣದ ನೆರವು ನೀಡುತ್ತಾರೆ. ಆದರೆ ಬೀದಿನಾಯಿ ಕಚ್ಚಿ ಚಿಕಿತ್ಸೆ ಪಡೆಯುತ್ತಿರುವವರಿಗೆ ನಯಾಪೈಸೆ ಆರ್ಥಿಕ ಸಹಕಾರ ನೀಡುತ್ತಿಲ್ಲ. ಕಾನೂನು ನಿಯಮಾವಳಿಯನ್ನು ಪಾಲಿಸಿ ಬೀದಿನಾಯಿ ನಿಯಂತ್ರಣ ಮಾಡಲು ಅವಕಾಶ ಇದೆ. ನಾಯಿಕಾಟ ತಪ್ಪಿಸಿ ಎಂದು ನಗರಸಭೆ ಎದುರು ಸಾರ್ವಜನಿಕರು ಪ್ರತಿಭಟನೆ ಮಾಡುವುದು ಆಡಳಿತಕ್ಕೆ ಕಪ್ಪುಚುಕ್ಕೆ. ತಕ್ಷಣ ಬೀದಿನಾಯಿಗಳ ಹಾವಳಿಯಿಂದ ಜನರನ್ನು ರಕ್ಷಿಸಿ ಎಂದು ಒತ್ತಾಯಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದಂತ ಸಾಮಾಜಿಕ ಕಾರ್ಯಕರ್ತ ಜಮೀಲ್ ಸಾಗರ್ ಅವರು, ಬೀದಿನಾಯಿ ಹಾವಳಿಯಿಂದ ಜನರು ರಸ್ತೆಯಲ್ಲಿ ಓಡಾಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ನಾಯಿ ಮನೆಯ ಮೇಲೆ ಸಹ ಹತ್ತಿ ಉಪಟಳ ನೀಡುತ್ತಿವೆ. ಸೋಮವಾರ ಜನ್ನತ್ ನಗರದಲ್ಲಿ ರಶೀದ್ ಎಂಬುವವರ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿವೆ. ಮಗುವನ್ನು ಶಿವಮೊಗ್ಗ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಇಂತಹ ಹಲವು ಪ್ರಕರಣಗಳು ಪಟ್ಟಣದಲ್ಲಿ ನಡೆದಿದೆ. ಬೀದಿ ನಾಯಿ ನಿಯಂತ್ರಣ ಮಾಡಿ ಎಂದರೆ ಪ್ರಾಣಿದಯಾ ಸಂಘದವರನ್ನು ತೋರಿಸಿ ಸುಮ್ಮನಾಗುತ್ತಿದ್ದಾರೆ. ನಗರಸಭೆಯಲ್ಲಿ ನಾಯಿಕಡಿತ ಇನ್ನಿತರೆ ನಡೆದಾಗ ತಿಳಿಸಲು ಸಹಾಯವಾಣಿ ಮಾಡಬೇಕು. ಆದರೆ ಅದನ್ನು ಪಾಲಿಸಿಲ್ಲ. ತಕ್ಷಣ ಸಾಗರ ನಗರದಲ್ಲಿ ಬೀದಿನಾಯಿಗಳ ಹಾವಳಿ ನಿಯಂತ್ರಣಕ್ಕೆ ತರಬೇಕು. ಬೀದಿನಾಯಿ ಕಡಿತಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದ ಬಳಿಕ ಮಾತನಾಡಿದಂತ ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್ ಅವರು, ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು. ನಗರಸಭೆಯ ಜೊತೆಗೆ ಸಾಗರದ ಸಾರ್ವಜನಿಕರು ಕೈಜೋಡಿಸುವಂತೆ ಮನವಿ ಮಾಡಿದರು.

ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ ಮಾತನಾಡಿ ಇಂದು ಸರ್ಕಾರದಿಂದ ಬೀದಿ ನಾಯಿಗಳ ನಿಯಂತ್ರಣಕ್ಕೆ ಹೊಸ ಆದೇಶ ಬಂದಿದೆ. ಆ ಆದೇಶದಂತೆ ನಗರಸಭೆಯು ಬೀದಿ ನಾಯಿಗಳ ನಿಯಂತ್ರಣ ಕ್ರಮ ವಹಿಸಲಿದೆ. ಈಗಾಗಲೇ ಬೀದಿ ನಾಯಿಗಳನ್ನು ಹಿಡಿದು ಸಂತಾನ ಹರಣ ಶಸ್ತ್ರ ಚಿಕಿತ್ಸೆಗಾಗಿ ಟೆಂಡರ್ ಕರೆಯಲಾಗಿದೆ. ಒಂದು ಸಮಸ್ಥೆ ಮುಂದೆ ಬಂದಿದ್ದು, ಟೆಂಡರ್ ಪ್ರಕ್ರಿಯೆ ಮುಗಿದ ನಂತ್ರ ನಿಯಂತ್ರಣ ಕ್ರಮವಾಗಲಿದೆ. ನಿನ್ನೆ ಬೀದಿ ನಾಯಿಗಳ ದಾಳಿಗೆ ಒಳಗಾಗಿರುವಂತ ಬಾಲಕನ ಚಿಕಿತ್ಸಾ ವೆಚ್ಚವನ್ನು ನಗರಸಭೆಯೇ ಭರಿಸಲಿದೆ. ಇದಲ್ಲದೇ ಸರ್ಕಾರದಿಂದ ಸಿಗುವಂತ ಪರಿಹಾರವನ್ನು ನೀಡುವ ಕೆಲಸವನ್ನು ಮಾಡಲಿದೆ ಎಂದು ತಿಳಿಸಿದರು.

ಈ ಪ್ರತಿಭಟನೆ ವೇಳೆ ರೈತ ಸಂಘದ ದಿನೇಶ್ ಶಿರವಾಳ, ಮಂಜಪ್ಪ ಹಿರೇನೆಲ್ಲೂರು, ರಫೀಕ್ ಕೊಪ್ಪ, ಸದ್ದಾಂ ದೊಡ್ಮನೆ, ವಸೀಂ ಉಳ್ಳೂರು, ಅಜೀಂ, ಕಬೀರ್ ಚಿಪ್ಪಳಿ, ಪ್ರವೀಣ್, ಇಸ್ಮಾಯಿಲ್, ಮನ್ಸೂರ್, ಇಮ್ರಾನ್ ಇನ್ನಿತರರು ಭಾಗವಹಿಸಿದ್ದರು.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

BREAKING: 1400 ಜನರ ಸಾವಿಗೆ ಕಾರಣವಾದ ಪ್ರಬಲ ಭೂಕಂಪದ ನಂತರ, ಅಫ್ಘಾನಿಸ್ತಾನದಲ್ಲಿ 5.5 ತೀವ್ರತೆಯಯಲ್ಲಿ ಮತ್ತೆ ಭೂಕಂಪ

BREAKING: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗೆ ಆಯುಕ್ತರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ

Share. Facebook Twitter LinkedIn WhatsApp Email

Related Posts

BIG NEWS : ಇಂದು ಮೈಸೂರಿನಿಂದ ಧರ್ಮಸ್ಥಳಕ್ಕೆ ಕಾಂಗ್ರೆಸ್ ಶಾಸಕ ಕೆ.ಹರೀಶ್ ಗೌಡ ನೇತೃತ್ವದಲ್ಲಿ ಪಾದಯಾತ್ರೆ

03/09/2025 6:55 AM1 Min Read

ಉತ್ತರಕನ್ನಡ : ನಿಷೇಧಿತ ‘ಇ-ಸಿಗರೇಟ್’ ಮಾರಾಟ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್ : 2.39 ಲಕ್ಷ ರೂ.ಮೌಲ್ಯದ ಇ-ಸಿಗರೇಟ್ ವಶ

03/09/2025 6:30 AM1 Min Read

BREAKING : ಶಾಸಕ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಮತ್ತೆ ‘ED’ ದಾಳಿ : 6 ಐಷರಾಮಿ ಕಾರುಗಳು ವಶ

03/09/2025 6:22 AM1 Min Read
Recent News

ಕಾನೂನು ತೊಡಕು: ಆನ್‌ಲೈನ್ ಗೇಮ್‌ಗಳ ನಿಷೇಧ ನಿರ್ಧರಿಸಲು ಹೊಸ ಸಮಿತಿ | Online game

03/09/2025 7:23 AM

ಇಂದಿನಿಂದ ‘GST ಕೌನ್ಸಿಲ್’ ಸಭೆ ; ಈ ಎಲ್ಲಾ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ | GST Council meeting

03/09/2025 7:18 AM

2025ಕ್ಕಿಂತ ಮೊದಲು ದೇಶಕ್ಕೆ ಬಂದ ಹಿಂದೂಗಳು, ಸಿಖ್ಖರು, ಜೈನರಿಗೆ ಪಾಸ್ಪೋರ್ಟ್ ಅಗತ್ಯವಿಲ್ಲ: ಕೇಂದ್ರ ಸರ್ಕಾರ

03/09/2025 7:12 AM

ಪ್ರಧಾನಿ ಮೋದಿಗೆ ಮೊದಲ ಮೇಡ್ ಇನ್ ಇಂಡಿಯಾ ಸೆಮಿಕಂಡಕ್ಟರ್ ಚಿಪ್ ಹಸ್ತಾಂತರ | ಪ್ರೊಸೆಸರ್ ವಿಕ್ರಮ್ -3201 ಬಗ್ಗೆ ಇಲ್ಲಿದೆ ಮಾಹಿತಿ

03/09/2025 7:03 AM
State News
KARNATAKA

BIG NEWS : ಇಂದು ಮೈಸೂರಿನಿಂದ ಧರ್ಮಸ್ಥಳಕ್ಕೆ ಕಾಂಗ್ರೆಸ್ ಶಾಸಕ ಕೆ.ಹರೀಶ್ ಗೌಡ ನೇತೃತ್ವದಲ್ಲಿ ಪಾದಯಾತ್ರೆ

By kannadanewsnow0503/09/2025 6:55 AM KARNATAKA 1 Min Read

ಮೈಸೂರು : ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಇತ್ತೀಚಿಗೆ ತಾನೇ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್, ಧರ್ಮಸ್ಥಳ ಸತ್ಯ…

ಉತ್ತರಕನ್ನಡ : ನಿಷೇಧಿತ ‘ಇ-ಸಿಗರೇಟ್’ ಮಾರಾಟ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್ : 2.39 ಲಕ್ಷ ರೂ.ಮೌಲ್ಯದ ಇ-ಸಿಗರೇಟ್ ವಶ

03/09/2025 6:30 AM

BREAKING : ಶಾಸಕ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಮತ್ತೆ ‘ED’ ದಾಳಿ : 6 ಐಷರಾಮಿ ಕಾರುಗಳು ವಶ

03/09/2025 6:22 AM

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಚಿಕ್ಕಮ್ಮನ ಮೇಲೆ 7 ವರ್ಷ ನಿರಂತರ ಅತ್ಯಾಚಾರ ಎಸಗಿದ ಸಹೋದರರು!

03/09/2025 6:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.