Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

NIRF 2025: ಭಾರತದ ಅತ್ಯುತ್ತಮ MBA ಕಾಲೇಜುಗಳ ಪಟ್ಟಿಯಲ್ಲಿ ಐಐಎಂ-ಅಹಮದಾಬಾದ್, ಐಐಟಿ-ದೆಹಲಿ ಟಾಪ್ 10 ರಲ್ಲಿ ಸ್ಥಾನ

05/09/2025 9:03 AM

ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ, ಪುನರ್ವಸತಿಗಾಗಿ ದೇವದಾಸಿಯರ ಮರು ಸಮೀಕ್ಷೆಗೆ ಕರ್ನಾಟಕ ಸರ್ಕಾರ ನಿರ್ಧಾರ

05/09/2025 8:58 AM

SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಕಲ್ಬುರ್ಗಿಯಲ್ಲಿ ಕರ್ತವ್ಯ ನಿರತ ಹೆಡ್ ಕಾನ್ಸ್ಟೇಬಲ್ ಸಾವು!

05/09/2025 8:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘BBMP’ ಇನ್ನು ನೆನಪು ಮಾತ್ರ : ಕಚೇರಿಗೆ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ಬೋರ್ಡ್ ಅಳವಡಿಕೆ
KARNATAKA

BIG NEWS : ‘BBMP’ ಇನ್ನು ನೆನಪು ಮಾತ್ರ : ಕಚೇರಿಗೆ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ಬೋರ್ಡ್ ಅಳವಡಿಕೆ

By kannadanewsnow0503/09/2025 5:45 AM

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಜೊತೆಗೆ ಐದು ನಗರ ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿದ್ದು, ಪ್ರಾಧಿಕಾರ ಹಾಗೂ ಐದು ನಗರ ಪಾಲಿಕೆಗಳಿಗೆ ಆಯುಕ್ತರು, ವಿಶೇಷ ಆಯಕ್ತರುಗಳನ್ನು ನೇಮಿಸಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಆ ಮೂಲಕ ಬಿಬಿಎಂಪಿ ಇತಿಹಾಸ ಪುಟ ಸೇರಿತು.

ಇಂದಿನಿಂದ ಐದು ನಗರ ಪಾಲಿಕೆಗಳು ಪ್ರತ್ಯೇಕವಾಗಿ ಕಾರ್ಯನಿರ್ವಹಿಸಲಿದ್ದು, ಬುಧವಾರದಿಂದ ಆಯಾ ನಗರ ಪಾಲಿಕೆಗಳು ತೆರಿಗೆ ಸಂಗ್ರಹ ಮಾಡಲಿದೆ. ಇತ್ತ ಜಿಬಿಎ ಕೇಂದ್ರ ಕಚೇರಿಯಲ್ಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಎಂಬ ನಾಮಫಲಕ ತೆಗೆದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಫಲಕವನ್ನು ಅಳವಡಿಸಲಾಗಿದೆ.

ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ವಿಮ ನಗರ ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿದ್ದು, ಪ್ರತಿ ನಗರ ಪಾಲಿಕೆಗಳು ತಲಾ ಎರಡು ವಲಯಗಳಂತೆ ಒಟ್ಟು 10 ವಲಯಗಳನ್ನು ಹೊಂದಿರಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿದ್ದ 198 ವಾರ್ಡುಗಳನ್ನೇ ಐದು ನಗರ ಪಾಲಿಕೆಗಳಿಗೆ ವಿಂಗಡನೆ ಮಾಡಲಾಗಿದೆ.

ಪಾಲಿಕೆ ವಾರ್ಡುಗಳ ವಿಂಗಡನೆ ಹೇಗಿದೆ?

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಾಂತಿನಗರ, ಸಿ.ವಿ.ರಾಮನ್ ನಗರ ಹಾಗೂ ಶಿವಾಜಿನಗರ, ಗಾಂಧಿನಗರ, ಚಿಕ್ಕಪೇಟೆ, ಚಾಮರಾಜಪೇಟೆ ಕ್ಷೇತ್ರಗಳು ಬರಲಿವೆ. ಒಟ್ಟು 42 ವಾರ್ಡುಗಳು ಸದ್ಯಕ್ಕೆ ವಿಂಗಡನೆ ಮಾಡಲಾಗಿದೆ.‌

ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಹದೇವಪುರ ಹಾಗೂ ಕೆ.ಆರ್.ಪುರಂ ಕ್ಷೇತ್ರಗಳು ಬರಲಿದ್ದು, ಒಟ್ಟು 17 ವಾರ್ಡುಗಳನ್ನು ಸದ್ಯಕ್ಕೆ ವಿಂಗಡನೆ ಮಾಡಲಾಗಿದೆ.

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬ್ಯಾಟರಾಯನಪುರ, ಪುಲಕೇಶಿನಗರ, ಸರ್ವಜ್ಞನಗರ, ದಾಸರಹಳ್ಳಿ ಕ್ಷೇತ್ರದ ಕೆಲ ಭಾಗಗಳು, ಆರ್.ಆರ್.ನಗರ ಕ್ಷೇತ್ರದ ಕೆಲ ಭಾಗ, ಹೆಬ್ಬಾಳ, ಯಲಹಂಕ ಕ್ಷೇತ್ರಗಳು ಬರಲಿದ್ದು, ಒಟ್ಟು 41 ವಾರ್ಡುಗಳನ್ನು ಹಂಚಲಾಗಿದೆ.

ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪದ್ಮನಾಭನಗರ ಕ್ಷೇತ್ರದ ಕೆಲ ಭಾಗ, ಆರ್.ಆರ್.ನಗರ ಕ್ಷೇತ್ರದ ಕೆಲ ಭಾಗ, ಯಶವಂತಪುರ ಕ್ಷೇತ್ರದ ಕೆಲಭಾಗ, ಜಯನಗರ, ಬೆಂಗಳೂರು ದಕ್ಷಿಣ, ಬಿಟಿಎಂ ಬಡಾವಣೆ, ಬೊಮ್ಮನಹಳ್ಳಿ, ಮಹದೇವಪುರ ಹಾಗೂ ಆನೇಕಲ್ ಕ್ಷೇತ್ರದ ಕೆಲ ಭಾಗಗಳನ್ನು ಸೇರಿಸಲಾಗಿದ್ದು, ಸದ್ಯ 37 ವಾರ್ಡುಗಳನ್ನು ಹಂಚಿಕೆ ಮಾಡಲಾಗಿದೆ.

ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಯಶವಂತಪುರ ಕ್ಷೇತ್ರದ ಒಂದು ಭಾಗ, ದಾಸರಹಳ್ಳಿ, ಆರ್.ಆರ್.ನಗರ, ಮಹಾಲಕ್ಷ್ಮಿ ಬಡಾವಣೆ, ಮಲ್ಲೇಶ್ವರ, ರಾಜಾಜಿನಗರ, ಗೋವಿಂದರಾಜನಗರ, ವಿಜಯನಗರ, ಬಸವನಗುಡಿ ಮತ್ತು ಪದ್ಮನಾಭನಗರ ಕ್ಷೇತ್ರದ ಕೆಲ ಭಾಗಗಳು ಸೇರಲಿದ್ದು, ಸದ್ಯ ಒಟ್ಟು 64 ವಾರ್ಡುಗಳನ್ನು ವಿಂಗಡಿಸಿ ಹಂಚಲಾಗಿದೆ.

Share. Facebook Twitter LinkedIn WhatsApp Email

Related Posts

ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ, ಪುನರ್ವಸತಿಗಾಗಿ ದೇವದಾಸಿಯರ ಮರು ಸಮೀಕ್ಷೆಗೆ ಕರ್ನಾಟಕ ಸರ್ಕಾರ ನಿರ್ಧಾರ

05/09/2025 8:58 AM1 Min Read

SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಕಲ್ಬುರ್ಗಿಯಲ್ಲಿ ಕರ್ತವ್ಯ ನಿರತ ಹೆಡ್ ಕಾನ್ಸ್ಟೇಬಲ್ ಸಾವು!

05/09/2025 8:57 AM1 Min Read

BREAKING : ಬೆಳಗಾವಿಯಲ್ಲಿ ಹಿಟ್ & ರನ್ ಗೆ ಇಬ್ಬರು ಬೈಕ್ ಸವಾರರು ಬಲಿ : ಅಪಘಾತದ ಬಳಿಕ ವಾಹನ ಚಾಲಕ ಪರಾರಿ!

05/09/2025 8:54 AM1 Min Read
Recent News

NIRF 2025: ಭಾರತದ ಅತ್ಯುತ್ತಮ MBA ಕಾಲೇಜುಗಳ ಪಟ್ಟಿಯಲ್ಲಿ ಐಐಎಂ-ಅಹಮದಾಬಾದ್, ಐಐಟಿ-ದೆಹಲಿ ಟಾಪ್ 10 ರಲ್ಲಿ ಸ್ಥಾನ

05/09/2025 9:03 AM

ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ, ಪುನರ್ವಸತಿಗಾಗಿ ದೇವದಾಸಿಯರ ಮರು ಸಮೀಕ್ಷೆಗೆ ಕರ್ನಾಟಕ ಸರ್ಕಾರ ನಿರ್ಧಾರ

05/09/2025 8:58 AM

SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಕಲ್ಬುರ್ಗಿಯಲ್ಲಿ ಕರ್ತವ್ಯ ನಿರತ ಹೆಡ್ ಕಾನ್ಸ್ಟೇಬಲ್ ಸಾವು!

05/09/2025 8:57 AM

BREAKING : ಬೆಳಗಾವಿಯಲ್ಲಿ ಹಿಟ್ & ರನ್ ಗೆ ಇಬ್ಬರು ಬೈಕ್ ಸವಾರರು ಬಲಿ : ಅಪಘಾತದ ಬಳಿಕ ವಾಹನ ಚಾಲಕ ಪರಾರಿ!

05/09/2025 8:54 AM
State News
KARNATAKA

ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ, ಪುನರ್ವಸತಿಗಾಗಿ ದೇವದಾಸಿಯರ ಮರು ಸಮೀಕ್ಷೆಗೆ ಕರ್ನಾಟಕ ಸರ್ಕಾರ ನಿರ್ಧಾರ

By kannadanewsnow8905/09/2025 8:58 AM KARNATAKA 1 Min Read

ಬೆಂಗಳೂರು: ರಾಜ್ಯದಾದ್ಯಂತ ಇದೇ ಮೊದಲ ಬಾರಿಗೆ ಲಿಂಗತ್ವ ಅಲ್ಪಸಂಖ್ಯಾತರ ಬೇಸ್ ಲೈನ್ ಸಮೀಕ್ಷೆ ಹಾಗೂ 15 ಜಿಲ್ಲೆಗಳಲ್ಲಿ ಮಾಜಿ ದೇವದಾಸಿ…

SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಕಲ್ಬುರ್ಗಿಯಲ್ಲಿ ಕರ್ತವ್ಯ ನಿರತ ಹೆಡ್ ಕಾನ್ಸ್ಟೇಬಲ್ ಸಾವು!

05/09/2025 8:57 AM

BREAKING : ಬೆಳಗಾವಿಯಲ್ಲಿ ಹಿಟ್ & ರನ್ ಗೆ ಇಬ್ಬರು ಬೈಕ್ ಸವಾರರು ಬಲಿ : ಅಪಘಾತದ ಬಳಿಕ ವಾಹನ ಚಾಲಕ ಪರಾರಿ!

05/09/2025 8:54 AM

BIG NEWS : ಮಂಡ್ಯದ ಹೇಮಾವತಿ ಕಾಲುವೆಯಲ್ಲಿ ಎರಡು ಅಪರಿಚಿತ ಪುರುಷರ ಮೃತದೆಹಗಳು ಪತ್ತೆ!

05/09/2025 8:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.