ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 22 ಮತ್ತು 23ನೇ ಕಂತಿನ ಒಟ್ಟು ₹4,000 ಹಣವನ್ನು ಇದೇ ತಿಂಗಳು ಬರುವ ಸೆಪ್ಟೆಂಬರ್ 7 ಮತ್ತು 9ನೇ ತಾರೀಕಿಗೆ ಬಿಡುಗಡೆ ಸಾಧ್ಯತೆ ಇದೇ ಎನ್ನಲಾಗಿದೆ. 2 ಮತ್ತು 23ನನೇ ಕಂತಿನ ₹4,000 ಹಣವನ್ನು ದಸರಾ ನವರಾತ್ರಿ ಹಬ್ಬದ ಸಂದರ್ಭದಲ್ಲಿ ಫಲಾನುಭವಿಗಳ ಖಾತೆಗೆ ಜಮೆಮಾಡಲಾಗುವುದು ಎನ್ನಲಾಗಿದೆ.
ಮಹಿಳೆಯರನ್ನು ಬೆಂಬಲಿಸಲು ಮತ್ತು ಅವರ ಜೀವನೋಪಾಯವನ್ನು ಸುಧಾರಿಸುವ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಒಂದಾಗಿದೆ.
ಸರ್ಕಾರದ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯು ಅತ್ಯಂತ ಮಹತ್ವಕಾಂಕ್ಷಿ ಯೋಜನೆಯಾಗಿದೆ. ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ. 2000/-ಗಳನ್ನು ನೀಡುವ “ಗೃಹಲಕ್ಷ್ಮಿ ಯೋಜನೆ”ಯನ್ನು ದಿನಾಂಕ:06-06-2023ರ ಸರ್ಕಾರದ ಆದೇಶದಂತೆ ಜಾರಿಗೊಳಿಸಲಾಗುತ್ತಿದೆ.
ಗೃಹ ಲಕ್ಷ್ಮಿ ಯೋಜನೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಫಲಾನುಭವಿಗಳು ಆನ್ಲೈನ್ ಪೋರ್ಟಲ್ಗಳು ಅಥವಾ ಸೇವಾ ಕೇಂದ್ರಗಳ ಮೂಲಕ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಗೃಹ ಲಕ್ಷ್ಮಿ ಯೋಜನೆಯನ್ನು ಆನ್ಲೈನ್ನಲ್ಲಿ ಅನ್ವಯಿಸುವ ಹಂತಗಳು ಹೀಗಿವೆ.
ಹಂತ-1: ಅಧಿಕೃತ ಜಾಲತಾಣ ಸೇವಾ ಸಿಂಧು ಪೋರ್ಟಲ್ https://sevasindhuservices.karnataka.gov.in/ ಗೆ ಭೇಟಿ ನೀಡಿ.
ಹಂತ-2: ಸೇವಾ ಸಿಂಧು ಅಕೌಂಟ್ ಲಾಗ್ಇನ್ ಮಾಡಿ.
ಹಂತ-3: ಅಲ್ಲಿ Apply For Services ಅಂತ ಇರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ View All Available Services ಅಂತ ಕಾಣುತ್ತದೆ ಅದನ್ನು ಸೇಲೆಕ್ಟ್ ಮಾಡಿ.
ಹಂತ-4: ನಂತರ GruhaLakshmi Yojana Pre Approved ಎಂದಿರುತ್ತದೆ. ನೀವು ಅದರ ಮೇಲೆ ಕ್ಲಿಕ್ ಮಾಡಿ.
ಹಂತ-5: ಮತ್ತೊಂದು ಪುಟದಲ್ಲಿ Gruhalakshmi Application ಓಪನ್ ಆಗುತ್ತದೆ. ಅಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿರಿ.