ಬೆಂಗಳೂರು: ಸೆಪ್ಟಂಬರ್.7ರ ಭಾನುವಾರದಂದು ರಕ್ತ ಚಂದ್ರಗ್ರಹಣ ಸಂಭವಿಸಲಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಾಲಯವನ್ನು ಬೆಳಗ್ಗೆ 11 ಗಂಟೆಗೆ ಬಂದ್ ಮಾಡಲಾಗುತ್ತಿದೆ.
ಈ ಬಗ್ಗೆ ದೇವಾಲಯದ ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್ ಮಾಹಿತಿ ನೀಡಿದ್ದು, ಸೂರ್ಯಗ್ರಮಹಣವಾದರೇ ಗ್ರಹಣಕ್ಕೂ ಸ್ವಲ್ಪ ಹೊತ್ತಿನ ಮೊದಲು ದೇವಸ್ಥಾನ ಮುಚ್ಚಲಾಗುತ್ತದೆ. ಆದರೇ ಚಂದ್ರಗ್ರಹಣದ ವೇಳೆ ಹಾಗೆ ಮಾಡೋದಕ್ಕೆ ಬರೋದಿಲ್ಲ. ಗ್ರಹಣಕ್ಕೂ ಮೊದಲ ಸುಮಾರು 6 ಗಂಟೆ ದೇವಾಲಯವನ್ನು ಬಂದ್ ಮಾಡುವುದಾಗಿ ತಿಳಿಸಿದರು.
ಸೆಪ್ಟೆಂಬರ್.7ರ ಭಾನುವಾರದಂದು ಚಂದ್ರಗ್ರಹಣದ ಕಾರಣ ಗಂಗಾಧರನಿಗೆ ಕ್ಷೀರ ನೈವೇದ್ಯ ಮಾಡಲಾಗುತ್ತದೆ. ಕ್ಷೀರ ಬಿಟ್ಟು ಬೇರೆ ಪ್ರಸಾದ ನೀಡುವುದಿಲ್ಲ. ಬೆಳಗ್ಗೆ 11 ಗಂಟೆಯವರೆಗೆ ದೇವರ ದರ್ಶನಕ್ಕೆ ಭಕ್ತಾಧಿಗಳಿಗೆ ಅವಕಾಶವಿದೆ. ಆ ಬಳಿಕ ಕ್ಲೋಸ್ ಮಾಡಲಾಗುತ್ತದೆ ಎಂದರು.
BREAKING: ಭ್ರಷ್ಟಾಚಾರ ಆರೋಪ: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ರಾಜೀನಾಮೆ