Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಗಣೇಶ ವಿಸರ್ಜನೆಯಲ್ಲಿ `ಡ್ಯಾನ್ಸ್ ‘ ಮಾಡುವಾಗ ಹೃದಯಾಘಾತದಿಂದ ವ್ಯಕ್ತಿ ಸಾವು : ವಿಡಿಯೋ ವೈರಲ್ | WATCH VIDEO

07/09/2025 1:54 PM

Shocking: ದೇಶದಲ್ಲಿ ಮತ್ತೊಂದು ಅಮಾನವೀಯ ಕ್ರೌರ್ಯ: ಭೂ ವಿವಾದದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥಳಿತ

07/09/2025 1:43 PM

ಮೈಸೂರು ದಸರಾ ಗೋಲ್ಡ್​ ಕಾರ್ಡ್​, ಟಿಕೆಟ್​ ದರ ಎಷ್ಟಿದೆ? ಖರೀದಿ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

07/09/2025 1:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು, ಆಸ್ಪತ್ರೆ ಸ್ಥಾಪನೆ : CM ಸಿದ್ದರಾಮಯ್ಯ
KARNATAKA

ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು, ಆಸ್ಪತ್ರೆ ಸ್ಥಾಪನೆ : CM ಸಿದ್ದರಾಮಯ್ಯ

By kannadanewsnow5706/09/2025 6:34 PM

ಕೊಪ್ಪಳ : ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಸ್ಥಾಪಿಸುವ ಗುರಿಯಿದೆ. ಹಂತಹಂತವಾಗಿ ಈ ಗುರಿಯನ್ನು ಸಾಧಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಸ್ಥಾಪಿಸುವ ಗುರಿಯಿದೆ. ಹಂತಹಂತವಾಗಿ ಈ ಗುರಿಯನ್ನು ಸಾಧಿಸಲಾಗುವುದು. 2025-26 ನೇ ಬಜೆಟ್ ನಲ್ಲಿ ಬಾಗಲಕೋಟೆ, ಮಂಗಳೂರು, ಕೋಲಾರ ನಂತರ ವಿಜಯಪುರದಲ್ಲಿಯೂ ವೈದ್ಯಕೀಯ ಕಾಲೇಜು ಸ್ಥಾಪಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ಸ್ಥಾಪನೆಯ ಯೋಜನೆ ಹಮ್ಮಿಕೊಂಡಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕಾಲೇಜು ನಿರ್ಮಿಸಿ, ಸರ್ಕಾರಿ ದರದಲ್ಲಿ ಚಿಕಿತ್ಸೆ ನೀಡಬೇಕೆಂಬ ಸೂಚನೆ ಆಧರಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು. ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು. ಇದರಿಂದ ಇಡೀ ಪ್ರಕ್ರಿಯೆ ವಿಳಂಬವಾಗುತ್ತದೆ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ರೈತ ಹೋರಾಟಗಾರರೊಂದಿಗೆ ಹಿಂದೆಯೇ ಬೆಳಗಾವಿಯಲ್ಲಿ ಸಭೆ ನಡೆಸಿದ್ದೆ. ಅಲ್ಲಿ ಎಲ್ಲರೂ ಒಪ್ಪಿಗೆ ಪತ್ರ ನೀಡಿ ಎಂದಿರುವ ಹಿನ್ನೆಲೆಯಲ್ಲಿ ಸರ್ಕಾರವೂ ಒಪ್ಪಿಕೊಂಡಿದೆ. ಉಪಮುಖ್ಯಮಂತ್ರಿಗಳು ಇತ್ತೀಚೆಗೆ ಈ ಭಾಗದ ರೈತರು, ಶಾಸಕರೊಂದಿಗೆ ಸಭೆ ಕರೆದು ಚರ್ಚಿಸಿದ್ದು , ಒಪ್ಪಿಗೆ ಆದೇಶ ನೀಡುವುದು ಒಂದು ಹಂತಕ್ಕೆ ಬಂದಿದೆ. ಎಲ್ಲರ ಒಪ್ಪಿಗೆಯ ಮೇಲೆ ಒಪ್ಪಂದ ಮಾಡಿಕೊಳ್ಳಲಾಗುವುದು. ಮುಂದಿನ ವಾರದೊಳಗೆ ಈ ಬಗ್ಗೆ ಇತ್ಯರ್ಥ ಮಾಡಲಾಗುವುದು.

ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದಲ್ಲಿ 519.6 ಮೀ. ರಿಂದ 524.25 ಮೀಟರ್ ಗೆ ಎತ್ತರಿಸುವುದರಿಂದ 130 ಟಿಎಂಸಿ ನೀರನ್ನು ಸಂಗ್ರಹಿಸಿ, ಬಳಕೆ ಮಾಡಲು ಅನುಕೂಲವಾಗಲಿದೆ. 173 ಟಿಎಂಸಿ ನೀರನ್ನು 6.6 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಬಹುದಾಗಿದೆ. ಮೂರನೇ ಹಂತದ ಬಗ್ಗೆಯೂ ತೀರ್ಮಾನವಾಗಿದ್ದು, ಗೆಜೆಟ್ ಅಧಿಸೂಚನೆಯಾಗಿಲ್ಲ. ಇದಾದರೆ ನೀರಾವರಿ ಹಾಗೂ ಅಣೆಕಟ್ಟು ಎತ್ತರಿಸುವ ಕೆಲಸಗಳು ಆಗಲು ಅನುಕೂಲವಾಗಲಿದೆ.
ಈ ವಿಚಾರಗಳ ಬಗ್ಗೆ ಮೂರು ಬಾರಿ ಸಂಬಂಧಪಟ್ಟ ಕೇಂದ್ರ ಸಚಿವರು ಹಾಗೂ ಪ್ರಧಾನಿಗಳನ್ನು ಭೇಟಿ ಮಾಡಲಾಗಿದೆ. ಉಪಮುಖ್ಯಮಂತ್ರಿ ಐದು ಬಾರಿ ಭೇಟಿಯಾಗಿದ್ದಾರೆ.

ನೀರಾವರಿ ನಮ್ಮ ಆದ್ಯತಾ ವಲಯ. ರೈತರಿಗೆ ಅನುಕೂಲವಾಗಬೇಕು. ರೈತರ ಜಮೀನುಗಳಿಗೆ ನೀರು ದೊರೆತು, ರೈತರ ಉತ್ಪನ್ನಗಳು ಹೆಚ್ಚಾಗಬೇಕು ಹಾಗೂ ಅವರ ಬದುಕು ಹಸನಾಗಬೇಕು ಎನ್ನುವುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ನಾವು ಪ್ರಯತ್ನ ಮಾಡುತ್ತಿದ್ದೇವೆ. ಬಾಗಲಕೋಟೆಯ ಮಲಪ್ರಭಾ ನದಿ ಹಾಗೂ ವಿಜಯಪುರ ಜಿಲ್ಲೆಯ ಡೋಣಿ ನದಿಯಲ್ಲಿ ಪ್ರವಾಹ ತಲೆದೋರಿ ರೈತರಿಗೆ ಹಾನಿಯುಂಟಾಗುತ್ತಿದ್ದು, ರೈತರಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಸರ್ಕಾರ ಬದ್ಧವಾಗಿದೆ.

ಯುಕೆಪಿ ಹಂತ 3ಕ್ಕೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಆದಷ್ಟು ಶೀಘ್ರ ಹೊರಡಿಸಲು ಕೇಂದ್ರದ ಮೇಲೆ ಹಲವು ಬಾರಿ ಒತ್ತಡ ಹೇರಲಾಗಿದೆ. ಅಧಿಸೂಚನೆ ಹೊರಡಿಸಿದ ನಂತರ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಸ್ಥಾಪಿಸುವ ಗುರಿಯಿದೆ. ಹಂತಹಂತವಾಗಿ ಈ ಗುರಿಯನ್ನು ಸಾಧಿಸಲಾಗುವುದು. 2025-26 ನೇ ಬಜೆಟ್ ನಲ್ಲಿ ಬಾಗಲಕೋಟೆ, ಮಂಗಳೂರು, ಕೋಲಾರ ನಂತರ ವಿಜಯಪುರದಲ್ಲಿಯೂ ವೈದ್ಯಕೀಯ ಕಾಲೇಜು ಸ್ಥಾಪಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್… pic.twitter.com/70alzpj5tm

— CM of Karnataka (@CMofKarnataka) September 6, 2025

ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು. ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು. ಇದರಿಂದ ಇಡೀ ಪ್ರಕ್ರಿಯೆ ವಿಳಂಬವಾಗುತ್ತದೆ.

ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ರೈತ ಹೋರಾಟಗಾರರೊಂದಿಗೆ ಹಿಂದೆಯೇ ಬೆಳಗಾವಿಯಲ್ಲಿ ಸಭೆ… pic.twitter.com/RDSBOeKhQD

— CM of Karnataka (@CMofKarnataka) September 6, 2025

 

 

 

 

 

 

 

hospitals to be established in every district of the state: CM Siddaramaiah Medical colleges
Share. Facebook Twitter LinkedIn WhatsApp Email

Related Posts

ಮೈಸೂರು ದಸರಾ ಗೋಲ್ಡ್​ ಕಾರ್ಡ್​, ಟಿಕೆಟ್​ ದರ ಎಷ್ಟಿದೆ? ಖರೀದಿ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

07/09/2025 1:42 PM1 Min Read

BREAKING : ಬೆಂಗಳೂರಲ್ಲಿ 70 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ : ಇಬ್ಬರು ವಿದೇಶಿ ಮಹಿಳೆ ಸೇರಿ ನಾಲ್ವರು ಅರೆಸ್ಟ್!

07/09/2025 12:44 PM1 Min Read

ಮಂಡ್ಯದಲ್ಲಿ ಘೋರ ಘಟನೆ : ನೋಟಿಸ್ ನೀಡಲು ಬಂದ ಕೋರ್ಟ್ ಅಮೀನ್ ಮೇಲೆ ಖಾರದ ಪುಡಿ ಎರಚಿದ ಮಹಿಳೆ!

07/09/2025 12:32 PM1 Min Read
Recent News

SHOCKING : ಗಣೇಶ ವಿಸರ್ಜನೆಯಲ್ಲಿ `ಡ್ಯಾನ್ಸ್ ‘ ಮಾಡುವಾಗ ಹೃದಯಾಘಾತದಿಂದ ವ್ಯಕ್ತಿ ಸಾವು : ವಿಡಿಯೋ ವೈರಲ್ | WATCH VIDEO

07/09/2025 1:54 PM

Shocking: ದೇಶದಲ್ಲಿ ಮತ್ತೊಂದು ಅಮಾನವೀಯ ಕ್ರೌರ್ಯ: ಭೂ ವಿವಾದದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥಳಿತ

07/09/2025 1:43 PM

ಮೈಸೂರು ದಸರಾ ಗೋಲ್ಡ್​ ಕಾರ್ಡ್​, ಟಿಕೆಟ್​ ದರ ಎಷ್ಟಿದೆ? ಖರೀದಿ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

07/09/2025 1:42 PM

BREAKING: ಥಾಯ್ಲೆಂಡ್ ನೂತನ ಪ್ರಧಾನಿಯಾಗಿ ಅನುತಿನ್ ಚಾರ್ನ್ವಿರಾಕುಲ್ ಆಯ್ಕೆ | Thailand

07/09/2025 1:34 PM
State News
KARNATAKA

ಮೈಸೂರು ದಸರಾ ಗೋಲ್ಡ್​ ಕಾರ್ಡ್​, ಟಿಕೆಟ್​ ದರ ಎಷ್ಟಿದೆ? ಖರೀದಿ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow0507/09/2025 1:42 PM KARNATAKA 1 Min Read

ಮೈಸೂರು : 2025ನೇ ಸಾಲಿನ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ…

BREAKING : ಬೆಂಗಳೂರಲ್ಲಿ 70 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ : ಇಬ್ಬರು ವಿದೇಶಿ ಮಹಿಳೆ ಸೇರಿ ನಾಲ್ವರು ಅರೆಸ್ಟ್!

07/09/2025 12:44 PM

ಮಂಡ್ಯದಲ್ಲಿ ಘೋರ ಘಟನೆ : ನೋಟಿಸ್ ನೀಡಲು ಬಂದ ಕೋರ್ಟ್ ಅಮೀನ್ ಮೇಲೆ ಖಾರದ ಪುಡಿ ಎರಚಿದ ಮಹಿಳೆ!

07/09/2025 12:32 PM

SHOCKING : ಕಾರಲ್ಲಿ ಸನ್ ರೂಫ್ ಓಪನ್ ಮಾಡಿ ಮಕ್ಕಳನ್ನು ನಿಲ್ಲಿಸುತ್ತೀರಾ ಹುಷಾರ್ : ಕಬ್ಬಿಣದ ಕಮಾನು ಬಡಿದು ಬಾಲಕನ ಸ್ಥಿತಿ ಗಂಭೀರ

07/09/2025 12:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.