ಮಂಡ್ಯ : ಮಂಡ್ಯದಲ್ಲಿ ನಿಶ್ಚಿತಾರ್ಥವಾಗಿ ಮದುವೆ ರದ್ದಾಗಿದ್ದಕ್ಕೆ ಮನನೊಂದ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕಿನ ಕಿಕ್ಕೇರಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವತಿಯನ್ನು ವಳಗೆರೆಮೆಣಸ ಗ್ರಾಮದ ಕಾವ್ಯಾ (26) ಎಂದು ತಿಳಿದುಬಂದಿದೆ.
ಅವರು ಕಿಕ್ಕೇರಿಯ ರೈತ ಸಂಪರ್ಕ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದರು. 15 ದಿನದ ಹಿಂದೆ ಹಾಸನದ ಹುಡುಗನ ಜೊತೆ ನಿಶ್ಚಿತಾರ್ಥ ಆಗಿತ್ತು. ಹುಡುಗ ಪದವೀಧರ, ಉದ್ಯೋಗದಲ್ಲಿದ್ದಾನೆ ಎಂದು ಆತನ ಮನೆಯವರು ಸುಳ್ಳು ಹೇಳಿ ಮದುವೆ ಮಾಡಿಸಲು ಮುಂದಾಗಿದ್ದರು.
ಆದರೆ ವಿಷಯ ಸುಳ್ಳೆಂದು ತಿಳಿದ ಹುಡುಗಿಯ ಮನೆಯವರು ಮದುವೆ ರದ್ದು ಮಾಡಿದ್ದರು. ಇದರಿಂದ ಮನನೊಂದ ಕಾವ್ಯಾ ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲಿ ಗುರುವಾರ ಬೆಳಗ್ಗೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.