Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಶ್ವ ಆತ್ಮಹತ್ಯೆ ತಡೆಗಟ್ಟುವಿಕೆ ದಿನ 2025: ದಿನಾಂಕ, ಥೀಮ್, ಇತಿಹಾಸ, ಮಹತ್ವ ಇಲ್ಲಿದೆ | World Suicide Prevention Day

10/09/2025 8:12 AM

ಭಾರತ-ಯುಎಸ್ ವ್ಯಾಪಾರ ಒಪ್ಪಂದ: ಮಾತುಕತೆ ಅಂತಿಮಗೊಳಿಸಲು ತಂಡಕ್ಕೆ ಪ್ರಧಾನಿ ಮೋದಿ ಸೂಚನೆ

10/09/2025 8:02 AM

ಪೋಷಕರೇ ನಿಮ್ಮ ಮಕ್ಕಳ ಮೊಬೈಲ್ ಚಟ ಬಿಡಿಸಲು ತಪ್ಪದೇ ಈ 7 ಸಲಹೆಗಳನ್ನು ಪಾಲಿಸಿ

10/09/2025 8:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೊಲೀಸ್ ಇಲಾಖೆ ಸಂಪೂರ್ಣ ವಿಫಲ: ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
KARNATAKA

ಪೊಲೀಸ್ ಇಲಾಖೆ ಸಂಪೂರ್ಣ ವಿಫಲ: ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

By kannadanewsnow0909/09/2025 9:00 PM

ಬೆಂಗಳೂರು: ಮದ್ದೂರು ಗಲಭೆ ಘಟನೆಗೆ ಸಂಬಂಧಿಸಿ ಸತ್ಯ ಸಂಶೋಧನಾ ತಂಡವನ್ನು ನಾವು ಈಗಾಗಲೇ ಪ್ರಕಟಿಸಿದ್ದೇವೆ. ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರ ನೇತೃತ್ವದಲ್ಲಿ ತಂಡ ರಚಿಸಿದ್ದೇವೆ. ಮದ್ದೂರಿನಲ್ಲಿ ಪೊಲೀಸ್ ಇಲಾಖೆಯ ಸಂಪೂರ್ಣ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ಕೊಟ್ಟರು. ಸತ್ಯಾಸತ್ಯತೆ ಪರಿಶೀಲಿಸಿ ವರದಿ ಕೊಡಲು ತಿಳಿಸಿದ್ದೇವೆ ಎಂದು ಹೇಳಿದರು. ರಾಜ್ಯದಲ್ಲಿ ಒಂದು ರೀತಿ ತುಘಲಕ್ ದರ್ಬಾರ್ ಇದೆ. ಇವರು ನಿಜಾಮರ ಆಡಳಿತವನ್ನು ನೆನಪು ಮಾಡಿ ಕೊಡುತ್ತಿದ್ದಾರೆ ಎಂದರು.

ಮುಖ್ಯಮಂತ್ರಿಗಳು, ಗೃಹ ಸಚಿವರು ತಮ್ಮ ಧೋರಣೆ ಸರಿಪಡಿಸಿಕೊಳ್ಳದಿದ್ದರೆ ಖಂಡಿತವಾಗಿ ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಡಲಿದೆ. ಇದಕ್ಕೆ ರಾಜ್ಯ ಸರಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದರು. ಗಣಪತಿ ಮೆರವಣಿಗೆಯಲ್ಲಿ ಕೇಸರಿ ಶಾಲು ಹಾಕಿ ಡ್ಯಾನ್ಸ್ ಮಾಡಿದ ಪಿಎಸ್‍ಐ ಒಬ್ಬರನ್ನು ಅಮಾನತು ಮಾಡುವ ಮಾಹಿತಿ ನನಗೆ ಬಂದಿದೆ. ನಾವೇನು ಪಾಕಿಸ್ತಾನದಲ್ಲಿದ್ದೇವಾ? ಎಂದು ಕೇಳಿದರು.

ನಮ್ಮ ರಾಜ್ಯದಲ್ಲಿ ಇವತ್ತು ಏನಾಗುತ್ತಿದೆ? ದಿನನಿತ್ಯ ಯಾವ ರೀತಿ ಪರಿಸ್ಥಿತಿ ಹದಗೆಡುತ್ತಿದೆ? ಕಾನೂನು ಸುವ್ಯವಸ್ಥೆ ಮುರಿದುಬಿದ್ದಿದೆ; ಕಾಂಗ್ರೆಸ್ ಸರಕಾರಕ್ಕೆ ಯಾಕೆ ಇಂಥ ದುರ್ಬುದ್ಧಿ ಬಂದಿದೆ. ಕಾಂಗ್ರೆಸ್ ಸರಕಾರಕ್ಕೆ ಹಿಂದೂಗಳು ಏನು ಅನ್ಯಾಯ ಮಾಡಿದ್ದಾರೆ ಎಂದು ರಾಜ್ಯದ ಅಸಂಖ್ಯಾತ ಹಿಂದೂ ಕಾರ್ಯಕರ್ತರು ಮುಖ್ಯಮಂತ್ರಿಗಳನ್ನು ಪ್ರಶ್ನಿಸುತ್ತಿದ್ದಾರೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ಸುತ್ತ ಅಯೋಗ್ಯರನ್ನೇ ಇಟ್ಟುಕೊಂಡಂತಿದೆ ಎಂದು ಹೇಳಿದರು. ಹಿಂದೂಗಳ ಮೇಲೆ ಕಲ್ಲೆಸೆತ, ಹಲ್ಲೆ ನಡೆಯುತ್ತಿದೆ. ಗಣಪತಿ ಮಹೋತ್ಸವವನ್ನೂ ಹಿಂದೂಗಳು ವಿಜೃಂಭಣೆಯಿಂದ ಆಚರಿಸಲು ಸಾಧ್ಯವಾಗುತ್ತಿಲ್ಲ; ಕಾಂಗ್ರೆಸ್ ಸರಕಾರದ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣವು ಕಳೆದ ಎರಡೂವರೆ ವರ್ಷಗಳಿಂದ ನಿರಂತರವಾಗಿ ನಡೆಯುತ್ತ ಬಂದಿದೆ ಎಂದು ಟೀಕಿಸಿದರು.

ತಡೆಯಲು ಇವರು ಯಾರು?

ನಮ್ಮ ರಾಜ್ಯದಲ್ಲಿ ಆರೆಸ್ಸೆಸ್, ಹಿಂದೂ ಸಂಘಟನೆಗಳು, ಹಿಂದೂ ಕಾರ್ಯಕರ್ತರನ್ನು ತಡೆಯಲು ಇವರು ಯಾರು? ಚಾಮುಂಡಿ ಬೆಟ್ಟಕ್ಕೆ, ಧರ್ಮಸ್ಥಳಕ್ಕೆ ಅಥವಾ ಗಣಪತಿ ಮೆರವಣಿಗೆಯಲ್ಲಿ ಹೋಗುವುದಾರೆ ಇವರು ಯಾರು ತಡೆಯುವುದಕ್ಕೆ ಎಂದು ಕೇಳಿದರು. ಪಾಕಿಸ್ತಾನ ಜಿಂದಾಬಾದ್ ಎಂದವರನ್ನು ತಾಕತ್ತಿದ್ದರೆ ಒದ್ದು ಒಳಗಡೆ ಹಾಕಲಿ ಎಂದು ಸವಾಲೆಸೆದರು. ಅದನ್ನು ಮಾಡಲು ಈ ಸರಕಾರಕ್ಕೆ ಯೋಗ್ಯತೆ ಇಲ್ಲ. ಇವರು ಹಾಗಿದ್ದರೆ ನಮ್ಮನ್ನು ಪ್ರಶ್ನಿಸುತ್ತಾರಾ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಮಧು ಬಂಗಾರಪ್ಪ ಇರುವ ಇಲಾಖೆಯನ್ನು ನೆಟ್ಟಗೆ ನೋಡಿಕೊಳ್ಳಲಿ. ಇರುವ ಸರಕಾರಿ ಶಾಲೆಗಳು ಮುಚ್ಚಿ ಹೋಗುತ್ತಿದೆ. ಅವರೇನು ಇದರ ಬಗ್ಗೆ ಮಾತನಾಡುವುದು ಎಂದು ಪತ್ರಕರ್ತರ ಪ್ರಶ್ನೆಗೆ ಬಿ.ವೈ. ವಿಜಯೇಂದ್ರ ಅವರು ಮರು ಪ್ರಶ್ನೆ ಹಾಕಿದರು.

ಹಿಂದೂಗಳ ಪರವಾಗಿ ಇಲ್ಲವೆಂದು ಘೋಷಿಸಲಿ..

ಬಿಜೆಪಿ ಹಿಂದುತ್ವದ ಪರವಾಗಿ ಇದೆ. ಇವರ್ಯಾರು ಅದನ್ನು ಪ್ರಶ್ನೆ ಮಾಡಲು ಎಂದು ಆಕ್ಷೇಪಿಸಿದರು. ಸರಕಾರ ನಡೆಸುತ್ತಿದ್ದಾರೆ; ಕಾನೂನು- ಸುವ್ಯವಸ್ಥೆ ಕಾಪಾಡಿ ಹಿಂದೂಗಳ ರಕ್ಷಣೆ ಮಾಡುವುದು ಇವರ ಕರ್ತವ್ಯವಲ್ಲವೇ? ಎಂದು ಕೇಳಿದರು. ಕರ್ನಾಟಕ ರಾಜ್ಯದಲ್ಲಿ ನಮ್ಮ ಸರಕಾರ ಹಿಂದೂಗಳ ಪರವಾಗಿ ಇಲ್ಲವೆಂದು ಘೋಷಿಸಲಿ; ಹಿಂದೂಗಳು ಸ್ವಯಂ ರಕ್ಷಣೆ ಮಾಡಿಕೊಳ್ಳಬೇಕೆಂದು ಪ್ರಕಟಿಸಲಿ ಎಂದು ಒತ್ತಾಯಿಸಿದರು.

ನಾಳೆ ಮದ್ದೂರಿಗೆ ಭೇಟಿ

ನಾಳೆ (ಸೆ.10) ಬೆಳಿಗ್ಗೆ 10, 10.30ಕ್ಕೆ ನಾನು, ನಮ್ಮ ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಪಕ್ಷದ ಇತರ ಮುಖಂಡರು ಮದ್ದೂರಿಗೆ ಭೇಟಿ ಕೊಡಲಿದ್ದೇವೆ ಎಂದು ಅವರು ಪ್ರಶ್ನೆಗೆ ಉತ್ತರಿಸಿದರು.

ಪೊಲೀಸ್ ಠಾಣೆಗೆ ಕಲ್ಲು ಬಿಸಾಡಿದ, ಪೊಲೀಸ್ ಠಾಣೆಗೆ ನುಗ್ಗಿ ಬೆಂಕಿ ಹಚ್ಚಿದ ದೇಶದ್ರೋಹಿಗಳ ಕೇಸು ರದ್ದು ಮಾಡಿದ್ದಾರೆ ಎಂದು ಆಕ್ಷೇಪಿಸಿದರು. ಮೊನ್ನೆ ದಿನ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ನಡೆಯಲಿದೆ; ಸಾವಿರಾರು ಸಂಖ್ಯೆಯ ಹಿಂದೂ ಕಾರ್ಯಕರ್ತರು ಪಾಲ್ಗೊಳ್ಳುತ್ತಾರೆ ಎಂಬ ಮಾಹಿತಿ ಪೊಲೀಸರಿಗೆ ಇರಲಿಲ್ಲವೇ ಎಂದು ಪ್ರಶ್ನೆ ಮಾಡಿದರು. ಪೊಲೀಸ್ ವರಿಷ್ಠಾಧಿಕಾರಿಗಳು ಯಾಕೆ ಅಲ್ಲಿ ಇರಲಿಲ್ಲ? ಯಾಕೆ ಕೆಲವರು ಮಸೀದಿ ಒಳಗೆ ತೆರಳಲು ಪೊಲೀಸರು ಅವಕಾಶ ಕೊಟ್ಟರು? ಯಾಕೆ ಸರಕಾರ ಇದಕ್ಕೆ ಅವಕಾಶ ಮಾಡಿಕೊಟ್ಟಿದೆ ಎಂದು ಪ್ರಶ್ನೆಗಳನ್ನು ಮುಂದಿಟ್ಟರು.

ಮಾಡಿರುವುದೇ ಮಣ್ಣು ತಿನ್ನುವ ಕೆಲಸ; ಬಿಜೆಪಿ ಮೇಲೆ ದೂರುತ್ತೀರಾ ಹಾಗಾದರೆ? ಇವರ ವೈಫಲ್ಯವನ್ನು ನಮ್ಮ ಮೇಲೆ ಹಾಕುತ್ತೀರಾ ನೀವು? ಎಂದು ಕೇಳಿದರು. ಚಾಮುಂಡಿ ಬೆಟ್ಟಕ್ಕೆ ತೆರಳುವ ಹಿಂದೂ ಕಾರ್ಯಕರ್ತರನ್ನು ಇವತ್ತು ತಡೆದಿದ್ದಾರೆ. ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರಕ್ಕೆ ಹಿಂದೂಗಳನ್ನು ಕಂಡರೆ ಆಗುವುದಿಲ್ಲ ಎಂದು ಟೀಕಿಸಿದರು.

ಮುಖ್ಯಮಂತ್ರಿಗಳ ಸುತ್ತ ಪಟ್ಟಭದ್ರ ದುಷ್ಟ ಶಕ್ತಿಗಳು ಸುತ್ತುವರಿದಿದ್ದಾರೆ. ವಿನಾಶಕಾಲೇ ವಿಪರೀತ ಬುದ್ಧಿ ಎಂಬಂತಾಗಿದೆ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು. ಅವರ ಸುತ್ತಲಿನ ಸಚಿವರ ಹೇಳಿಕೆ ಗಮನಿಸಿದರೆ ಹಿಂದೂ ಕಾರ್ಯಕರ್ತರು ಅನಿವಾರ್ಯವಾಗಿ ಬೀದಿಗೆ ಇಳಿಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಶ್ಲೇಷಿಸಿದರು.

BREAKING: ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಇಡಿ ದಾಳಿ ಪ್ರಕರಣ: 21.43 ಕೆಜಿ ಚಿನ್ನದ ಬಿಸ್ಕೆಟ್ ವಶಕ್ಕೆ

ಚಿತ್ರದುರ್ಗದಲ್ಲಿ ಗಣೇಶ ಮೆರವಣಿಗೆ ವೇಳೆ ಕಲರ್ ಪೇಪರ್, ಪಟಾಕಿ ಸಿಡಿಸಿದ ಆಯೋಜಕರ ವಿರುದ್ಧ FIR ದಾಖಲು

Share. Facebook Twitter LinkedIn WhatsApp Email

Related Posts

ಪೋಷಕರೇ ನಿಮ್ಮ ಮಕ್ಕಳ ಮೊಬೈಲ್ ಚಟ ಬಿಡಿಸಲು ತಪ್ಪದೇ ಈ 7 ಸಲಹೆಗಳನ್ನು ಪಾಲಿಸಿ

10/09/2025 8:00 AM1 Min Read

ರಾಜ್ಯದ 9, 10ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ: ವಿದ್ಯಾರ್ಥಿ ವೇತನಕ್ಕೆ ‘ಆಧಾರ್’ ಜೋಡಣೆ ಕಡ್ಡಾಯ

10/09/2025 7:55 AM1 Min Read

ರಾಜ್ಯ ಸರ್ಕಾರದಿಂದ ಮಕ್ಕಳಲ್ಲಿನ ‘ಅಪೌಷ್ಠಿಕತೆ ನಿರ್ವಾರಣೆ’ಗೆ ಮಹತ್ವದ ಕ್ರಮ: ‘ಚಿಗುರು ಯೋಜನೆ’ಗೆ ಚಾಲನೆ

10/09/2025 7:54 AM2 Mins Read
Recent News

ವಿಶ್ವ ಆತ್ಮಹತ್ಯೆ ತಡೆಗಟ್ಟುವಿಕೆ ದಿನ 2025: ದಿನಾಂಕ, ಥೀಮ್, ಇತಿಹಾಸ, ಮಹತ್ವ ಇಲ್ಲಿದೆ | World Suicide Prevention Day

10/09/2025 8:12 AM

ಭಾರತ-ಯುಎಸ್ ವ್ಯಾಪಾರ ಒಪ್ಪಂದ: ಮಾತುಕತೆ ಅಂತಿಮಗೊಳಿಸಲು ತಂಡಕ್ಕೆ ಪ್ರಧಾನಿ ಮೋದಿ ಸೂಚನೆ

10/09/2025 8:02 AM

ಪೋಷಕರೇ ನಿಮ್ಮ ಮಕ್ಕಳ ಮೊಬೈಲ್ ಚಟ ಬಿಡಿಸಲು ತಪ್ಪದೇ ಈ 7 ಸಲಹೆಗಳನ್ನು ಪಾಲಿಸಿ

10/09/2025 8:00 AM

ರಾಜ್ಯದ 9, 10ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ: ವಿದ್ಯಾರ್ಥಿ ವೇತನಕ್ಕೆ ‘ಆಧಾರ್’ ಜೋಡಣೆ ಕಡ್ಡಾಯ

10/09/2025 7:55 AM
State News
KARNATAKA

ಪೋಷಕರೇ ನಿಮ್ಮ ಮಕ್ಕಳ ಮೊಬೈಲ್ ಚಟ ಬಿಡಿಸಲು ತಪ್ಪದೇ ಈ 7 ಸಲಹೆಗಳನ್ನು ಪಾಲಿಸಿ

By kannadanewsnow5710/09/2025 8:00 AM KARNATAKA 1 Min Read

ಪೋಷಕರೇ ನಿಮ್ಮ ಮಕ್ಕಳು ಗಂಟಗಟ್ಟಲೇ ಮೊಬೈಲ್ ನೋಡುತ್ತಿದ್ದರಾ? ಹಾಗಿದ್ರೆ ಈ 7 ಸಲಹೆಗಳನ್ನು ಅನುಸರಿಸಿದ್ರೆ ನಿಮ್ಮ ಮಕ್ಕಳ ಮೊಬೈಲ್ ಚಟವನ್ನು…

ರಾಜ್ಯದ 9, 10ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ: ವಿದ್ಯಾರ್ಥಿ ವೇತನಕ್ಕೆ ‘ಆಧಾರ್’ ಜೋಡಣೆ ಕಡ್ಡಾಯ

10/09/2025 7:55 AM

ರಾಜ್ಯ ಸರ್ಕಾರದಿಂದ ಮಕ್ಕಳಲ್ಲಿನ ‘ಅಪೌಷ್ಠಿಕತೆ ನಿರ್ವಾರಣೆ’ಗೆ ಮಹತ್ವದ ಕ್ರಮ: ‘ಚಿಗುರು ಯೋಜನೆ’ಗೆ ಚಾಲನೆ

10/09/2025 7:54 AM

ಬೆಂಗಳೂರಿಗರೇ ಗಮನಿಸಿ : ಸೆ.15 ರಿಂದ 3 ದಿನ ‘ಕಾವೇರಿ ನೀರು’ ಪೂರೈಕೆಯಲ್ಲಿ ವ್ಯತ್ಯಯ | Water Supply

10/09/2025 7:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.