ಬೆಂಗಳೂರು: ನಗರದ ಫ್ರೀಡಂ ಪಾರ್ಕ್ ನಲ್ಲಿ ಎಸ್ಸಿ ಒಳ ಮೀಸಲಾತಿ ಹೋರಾಟದ ಕಿಚ್ಚು ಹೆಚ್ಚಾಗಿದೆ. ಫ್ರೀಡಂ ಪಾರ್ಕ್ ನಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಂತ ಪ್ರತಿಭಟನಾಕಾರರು ಬ್ಯಾರಿಕೇಡ್ ಕಿತ್ತೆಸೆದು ರೋಷಾವೇಶವನ್ನು ಹೊರ ಹಾಕಲಾಗಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಂಜಾರ, ಭೋವಿ, ಕೊರಚ ಸಮುದಾಯಗಳಿಂದ ಎಸ್ಸಿ ಒಳಮೀಸಲಾತಿ ಜಾರಿ ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆ ತೀರ್ವಗೊಂಡು ಬ್ಯಾರಿಕೇಡ್ ಕಿತ್ತೆಸೆದು ಧರಣಿ ನಿರತರು ರೋಷಾವೇಶ ವ್ಯಕ್ತ ಪಡಿಸಿದ್ದಾರೆ.
ವಿಧಾನಸೌಧ ಮುತ್ತಿಗೆ ಹಾಕಲು ಪ್ರತಿಭಟನಾ ನಿರತರು ಪ್ರಯತ್ನಿಸಿದ್ದಾರೆ. ಅವರನ್ನು ಪೊಲೀಸರು ತಡೆಯಲು ಹರಸಾಹಸ ಪಡುತ್ತಿದ್ದಾರೆ. ಹೋರಾಟಗಾರರನ್ನು ತಡೆದು ನಿಲ್ಲಿಸೋದಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಆಧುನಿಕ ತಂತ್ರಜ್ಞಾನಗಳಿಗೆ ಶಿಕ್ಷಕರು ಹೊಂದಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್