ತುಮಕೂರು : ಇತ್ತೀಚಿಗೆ ಸದನದಲ್ಲಿ ಡಿಕೆ ಶಿವಕುಮಾರ್ ಮೊನ್ನೆ ಮೊನ್ನೆ ಅಷ್ಟೇ RSS ಗೀತೆ ಹಾಡಿದ್ದು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಈಗ ಗೃಹ ಸಚಿವ ಜಿ.ಪರಮೇಶ್ವರ್ ಅವರ ನಡೆ ಕೂಡ ಚರ್ಚೆಗೆ ಗ್ರಾಸವಾಗಿದ್ದು, ಎಬಿವಿಪಿ ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.
ರಾಣಿ ಅಬ್ಬಕ್ಕದೇವಿ 500ನೇ ಜಯಂತಿ ಪ್ರಯುಕ್ತ ನಿನ್ನೆ ಪಂಜಿನ ಮೆರವಣಿಗೆ ನಡೆಸಲಾಗುತ್ತಿತ್ತು. ಈ ಕಾರ್ಯಕ್ರಮದಲ್ಲಿ ಜಿ. ಪರಮೇಶ್ವರ್ ಭಾಗಿಯಾಗಿದ್ದಾರೆ ಎನ್ನಲಾಗಿದೆ ಪಂಜಿನ ಮೆರವಣಿಗೆ ಕಾರ್ಯಕ್ರಮದಲ್ಲಿ ಪರಮೇಶ್ವರ್ ಭಾಗಿಯಾಗಿದ್ದಾರೆ. ರಾಣಿ ಅಬ್ಬಕ್ಕ ದೇವಿ 500ನೇ ಜಯಂತಿ ಪ್ರಯುಕ್ತ ರಥಯಾತ್ರೆ ನಡೆಸಲಾಗಿತ್ತು. ಈ ಒಂದು ಪಂಜಿನ ಮೆರವಣಿಗೆಯಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.
ಇನ್ನು ಎಬಿವಿಪಿ ರಥಯಾತ್ರೆ ಕಾರ್ಯಕ್ರಮದಲ್ಲಿ ಪರಮೇಶ್ವರ ಭಾಗಿಯಾಗಿರುವ ವಿಚಾರವಾಗಿ ನಾನು ಯಾವುದೇ ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ನಾನು ಬರುವ ದಾರಿಯಲ್ಲಿ ರಾಣಿ ಅಬ್ಬಕ್ಕ ಮೆರವಣಿಗೆ ಬರುತ್ತಿತ್ತು ಸ್ಥಳೀಯ ಶಾಸಕ ಚಡಾಕ್ಷರಿ ನಾನು ಒಟ್ಟಿಗೆ ಇದ್ದೆವು ಅವರು ಕರೆದು ಹೂವು ಹಾಕಿ ಅಂದರು ಅದಕ್ಕೆ ಹಾಕಿದೆ ನಾನು ಯಾವುದೇ ರೀತಿಯ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ
ಇದರ ಮೇಲೆ ಯಾರಾದರೂ ವಿವಾದ ಮಾಡಿದರೆ ಮಾಡಿಕೊಳ್ಳಲಿ ನನಗೇನು ತೊಂದರೆ ಇಲ್ಲ.ನಮಗೂ ರಾಜಕೀಯ ವಿರೋಧಿಗಳು ಇರುತ್ತಾರೆ ಪಕ್ಷದ ಒಳಗೂ ಇರಬಹುದು ಪಕ್ಷದ ಹೊರಗೂ ಇರಬಹುದು ಪರಮೇಶ್ವರ ಏನು ಅಂತ ಇಡೀ ರಾಜ್ಯದ ಜನತೆಗೆ ಗೊತ್ತಿದೆ 35 ವರ್ಷಗಳಿಂದ ನನ್ನ ರಾಜಕೀಯ ಏನು ಅನ್ನೋದು ಗೊತ್ತಿದೆ ಅದನ್ನ ಪದೇ ಪದೇ ಸಾಬೀತು ಮಾಡಬೇಕಾಗಿಲ್ಲ ಎಂದು ಸ್ಪಷ್ಟಪಡಿಸಿದರು.