Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2030ರ ವೇಳೆಗೆ ಭಾರತವು ‘ಮೇಲ್ಮಧ್ಯಮ ಆದಾಯ’ ರಾಷ್ಟ್ರಗಳ ಸಾಲಿಗೆ ಸೇರಬಹುದು : ‘SBI’ ಸಂಶೋಧನೆ

19/01/2026 10:08 PM

ಭಾರತದ FY26 ಬೆಳವಣಿಗೆಯ ಮುನ್ಸೂಚನೆಯನ್ನು ಶೇ.7.3ಕ್ಕೆ ಏರಿಸಿದ IMF

19/01/2026 9:55 PM

ಡಿಜಿಪಿ ರಾಸಲೀಲೆ ಕೇಸ್: ರಾಜ್ಯದ ಹೆಮ್ಮೆಯ ಪೊಲೀಸ್‌ ಇಲಾಖೆಯ ಮಾನ ಮತ್ತೊಮ್ಮೆ ಹರಾಜು- ಜೆಡಿಎಸ್

19/01/2026 9:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾನೂನಿಗೆ ವಿರುದ್ಧವಾಗಿ ಯಾರೇ ನಡೆದುಕೊಂಡಿದ್ದರು ಕ್ರಮ: ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ
KARNATAKA

ಕಾನೂನಿಗೆ ವಿರುದ್ಧವಾಗಿ ಯಾರೇ ನಡೆದುಕೊಂಡಿದ್ದರು ಕ್ರಮ: ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ

By kannadanewsnow0912/09/2025 1:25 PM

ಬೆಂಗಳೂರು : ಯಾರೇ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದ್ದರಡ, ಅಂಥವರ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ಅಲ್ಲಿಗೆ ಪ್ರಚೋದನಾಕಾರಿಯಾಗಿ ಭಾಷಣ ಮಾಡುವುದು ಸರಿಯಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ಸದಾಶಿವನಗರದಲ್ಲಿ ಮಾತಾನಾಡಿದ ಅವರು, ಮದ್ದೂರು ಘಟನೆಯ ವಿಚಾರದಲ್ಲಿ ನಾವು ಮೊದಲಿಂದ ಹೇಳುತ್ತಿದ್ದೇವೆ. ಇದರಲ್ಲಿ ರಾಜಕೀಯ ಮಾಡಬೇಡಿ. ಪೊಲೀಸರಿಗೆ ಬಿಡಿ, ಕಲ್ಲು ಹೊಡೆದವರನ್ನು ಹಿಡಿದು, ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ಮುಸಲ್ಮಾನ ಅಗಿರಲಿ, ಹಿಂದು ಆಗಿರಲಿ, ಮತ್ತೊಬ್ಬ ಆಗಿರಲಿ, ಯಾರೇ ಕಾನೂನು ವಿರುದ್ಧವಾಗಿ ನಡೆದುಕೊಂಡಿದ್ದರೆ ಕ್ರಮ ತೆಗೆದುಕೊಳ್ಳುತ್ತಾರೆ. ಈ ವಿಚಾರವನ್ನು ಪೊಲೀಸರಿಗೆ ಬಿಟ್ಟುಬಿಡಬೇಕು. ಅದೆಲ್ಲ ಬಿಟ್ಟು, ಇವರು ಹೋಗಿ ಪ್ರಚೋದನಾಕಾರಿಯಾಗಿ ಭಾಷಣ ಮಾಡಿ, ಮತ್ತೇ ಜನರನ್ನೆಲ್ಲ ಎಬ್ಬಿಸುವುದು ಸರಿಯಲ್ಲ ಎಂದರು.

ವೀರಾವೇಷದಲ್ಲಿ ಮಾತಾಡಿ, ಬಳಸಬಾರದ ಪದಗಳನ್ನು ಬಳಸುವುದರಿಂದ ಏನು ಸಾಧನೆ ಮಾಡುತ್ತಾರೋ? ಒಂದಂತು ನಿಜ ರಾಜಕೀಯ ಕಾರಣಕ್ಕಾಗಿ ಇದೆಲ್ಲ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ.

ಎಎಸ್‌ಪಿ ವರ್ಗಾವಣೆ ಮಾಡಿರುವ ಕುರಿತು ಮಾತನಾಡಿ, ಆಂತರಿಕವಾಗಿ ಎಲ್ಲಿ ಲೋಪ ಕಂಡಿದೆ, ಅದಕ್ಕೆ ಕ್ರಮ ತೆಗೆದುಕೊಳ್ಳಬೇಕಲ್ಲವೇ? ಒಬ್ಬ ಇನ್‌ಸ್ಪೆಕ್ಟರ್ ಆಗಿರಬಹುದು, ಸಬ್ ಇನ್‌ಸ್ಪೆಕ್ಟರ್ ಆಗಿರಬಹುದು, ಅವರ ಕರ್ತವ್ಯ ಲೋಪ ಕಂಡು ಬಂದಾಗ ಇಲಾಖೆಯಿಂದ ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.

ಧರ್ಮಸ್ಥಳ ವಿಚಾರದ, ಮೂರು ಲಾಡ್ಜ್‌ಗಳಲ್ಲಿ ನಾಲ್ಕು ಅನುಮಾನಸ್ಪದ ಸಾವುಗಳಾಗಿವೆ ಎಂದು ಮಹೇಶ್ ಶೆಟ್ಟಿ ತಿಮರೋಡಿ ದೂರು ಕೊಟ್ಟಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ದೂರು ತೆಗೆದುಕೊಳ್ಳಬೇಕ, ಬೇಡವೇ ಎಂಬುದನ್ನು ಎಸ್‌ಐಟಿಯವರು ಪರಿಶೀಲಿಸುತ್ತಾರೆ. ಪ್ರಕರಣ ಬೇರೆಬೇರೆ ದಿಕ್ಕಿಗೆ ಹೋಗುವಂತ ಪ್ರಯತ್ನ ನಡೆದರೆ, ಎಸ್‌ಐಟಿಯವರು ಬೇರೆ ತರ ತನಿಖೆ ಮಾಡುತ್ತಾರೆ ಎಂದು ಹೇಳಿದರು.

ಯಾರೋ ಕೊಟ್ಟ ಹೇಳಿಕೆ ಮೇಲೆ ನಾವು ತೀರ್ಮಾನ ಮಾಡುವುದಿಲ್ಲ. ಎಸ್‌ಐಟಿ ಮುಂದೆ ಏನು ದೂರು ಕೊಟ್ಟಿರುತ್ತಾರೆ. ಅದಕ್ಕೆ ಸಾಕ್ಷ್ಯ ಕೊಟ್ಟಿರುತ್ತಾರೆ. ಅದೆಲ್ಲವನ್ನು ನೋಡಿ ಎಸ್‌ಐಟಿಯವರು ತೀರ್ಮಾನ ಮಾಡುತ್ತಾರೆ. ಸರ್ಕಾರದ ಅನುಮತಿ ಬೇಕೆಂದರೆ ಕೇಳುತ್ತಾರೆ. ಸದ್ಯಕ್ಕೆ ಯಾವುದೇ ಅನುಮತಿ ಕೇಳುವುದಕ್ಕೆ ಬಂದಿಲ್ಲ ಎಂದರು.

ಪ್ರತಿನಿತ್ಯ ನಾವು ಏನು ಮಾಡುತ್ತಿದ್ದೇವೆ ಎಂದು ಎಸ್‌ಐಟಿಯವರು, ಮಾಧ್ಯಮಕ್ಕಾಗಲಿ ಅಥವಾ ಸಾರ್ವಜನಿಕರಿಗಾಗಲಿ ಹೇಳುವುದಿಲ್ಲ. ಅನೇಕ ವಿಚಾರಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವುದಿಲ್ಲ. ಇದರಿಂದ ಎಸ್‌ಐಟಿ ವೇಗ ಕಳೆದುಕೊಂಡು ಬಿಟ್ಟಿದೆ, ತನಿಖೆ ನಡೆಯುತ್ತಿಲ್ಲ ಅಂದುಕೊಳ್ಳಬಾರದು. ಅನೇಕ ವಿಚಾರಗಳಲ್ಲಿ ಸಂಪೂರ್ಣ ಮಾಹಿತಿ ಬರುವವರೆಗೂ ಎಸ್‌ಐಟಿಯವರು ನಮಗೂ ಹೇಳುವುದಿಲ್ಲ ಎಂದರು.

ಧರ್ಮಸ್ಥಳ ಆರೋಪ ಪ್ರಕರಣದಲ್ಲಿ ಚಿನ್ನಯ್ಯನ ಬೆಂಬಲವಾಗಿ ನಿಂತವರನ್ನು ಬಂಧಿಸಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾರನ್ನು ಬಂಧಿಸಬೇಕು, ಯಾವಾಗ ಬಂಧಿಸಬೇಕು ಎಂಬುದನ್ನು ನಾವು ಎಸ್‌ಐಟಿಯವರಿಗೆ ಹೇಳಕ್ಕಾಗುತ್ತದೆಯೇ? ಮಾಧ್ಯಮದವರು ಹೇಳಿದನ್ನು ಗಣನೆಗೆ ತೆಗೆದುಕೊಂಡು ಕೂಡಲೇ ಬಂಧಿಸಲು ಆಗುವುದಿಲ್ಲ. ಅವರಿಗೆ ಏನು ಮಾಹಿತಿ ಇದೆ, ಬೇಕಾದ ಅಗತ್ಯ ಪುರಾವೆ, ಸಾಕ್ಷ್ಯ ಸಿಗಬೇಕಲ್ಲ. ಅದನ್ನು ನೋಡಿಕೊಂಡು ಆನಂತರ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಸಾಹಿತಿ ಬಾನು ಮುಷ್ತಾಕ್ ಅವರಿಗೆ ಭದ್ರತೆ ಕೊಟ್ಟೆ ಕೊಡುತ್ತೇವೆ. ಈ ಬಗ್ಗೆ ಯಾರು ಏನು ಹೇಳುವುದು ಬೇಕಾಗಿಲ್ಲ. ಭದ್ರತೆ ಕೊಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ವಯೋಮಿತಿ ಹೆಚ್ಚಳಕ್ಕೆ ಚರ್ಚೆ:- ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿಯ ವಯೋಮಿತಿ ಸಡಿಲಿಕೆ ಬಗ್ಗೆ ಚರ್ಚೆ ಮಾಡಿದ್ದೇವೆ. ಬೇರೆಬೇರೆ ರಾಜ್ಯದಲ್ಲಿ ಏನಿದೆ ಎಂಬುದನ್ನು ಪರಿಶೀಲನೆ ಮಾಡುತ್ತಿದ್ದೇವೆ. ಸುಮಾರು ವರ್ಷಗಳಿಂದ ಕಾನ‌್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ನಡೆದಿಲ್ಲ. ಎರಡು,‌ ಮೂರು ವರ್ಷ ವಯೋಮಿತಿ ಹೆಚ್ಚಳ ಮಾಡಿಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಅನೇಕ ಸಂದರ್ಭಗಳಲ್ಲಿ ನನ್ನನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಡಿಜಿಯವರಿಗೆ ಸೂಚನೆ ಕೊಟ್ಟಿದ್ದೇನೆ ಎಂದರು.

ಬೇರೆ ರಾಜ್ಯದಲ್ಲಿ ವಯೋಮಿತಿ ಎಷ್ಟು ವರ್ಷ ಇದೆ. ಪರಿಶೀಲನೆ ಮಾಡಿ, ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸುವಂತೆ ಸೂಚನೆ ಕೊಟ್ಟಿದ್ದೇನೆ. ಪ್ರಸ್ತಾವನೆ ಬಂದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಪೊಲೀಸ್ ದಂಪತಿ ಅಂತರ್ ಜಿಲ್ಲಾ ವರ್ಗಾವಣೆ‌ ಸರ್ಕಾರದ ಆದೇಶದಂತೆ ನಡೆಯುತ್ತಿದೆ ಎಂದು ತಿಳಿಸಿದರು.

ಹೀಗಿದೆ ಸಿಎಂ ಸಿದ್ಧರಾಮಯ್ಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತ ಸುದ್ದಿಗೋಷ್ಠಿಯ ಹೈಲೈಟ್ಸ್

Share. Facebook Twitter LinkedIn WhatsApp Email

Related Posts

ಡಿಜಿಪಿ ರಾಸಲೀಲೆ ಕೇಸ್: ರಾಜ್ಯದ ಹೆಮ್ಮೆಯ ಪೊಲೀಸ್‌ ಇಲಾಖೆಯ ಮಾನ ಮತ್ತೊಮ್ಮೆ ಹರಾಜು- ಜೆಡಿಎಸ್

19/01/2026 9:50 PM1 Min Read

ಶಿವಮೊಗ್ಗ: ಜ.29, 30ರಂದು ‘ಶ್ರೀ ಕ್ಷೇತ್ರ ಕಂಚಿಗದ್ದೆ ಶನೀಶ್ವರ ದೇವಸ್ಥಾನ’ದಲ್ಲಿ ’23ನೇ ವಾರ್ಷಿಕ ಜಾತ್ರಾ ಮಹೋತ್ಸವ’

19/01/2026 9:09 PM2 Mins Read

BREAKING: SSLC ಪರೀಕ್ಷೆಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಶಿಕ್ಷಣ ಇಲಾಖೆ: ಶಿಕ್ಷಕರಿಗೂ ಮೊಬೈಲ್ ಬಳಕೆ ನಿಷೇಧ

19/01/2026 8:33 PM1 Min Read
Recent News

2030ರ ವೇಳೆಗೆ ಭಾರತವು ‘ಮೇಲ್ಮಧ್ಯಮ ಆದಾಯ’ ರಾಷ್ಟ್ರಗಳ ಸಾಲಿಗೆ ಸೇರಬಹುದು : ‘SBI’ ಸಂಶೋಧನೆ

19/01/2026 10:08 PM

ಭಾರತದ FY26 ಬೆಳವಣಿಗೆಯ ಮುನ್ಸೂಚನೆಯನ್ನು ಶೇ.7.3ಕ್ಕೆ ಏರಿಸಿದ IMF

19/01/2026 9:55 PM

ಡಿಜಿಪಿ ರಾಸಲೀಲೆ ಕೇಸ್: ರಾಜ್ಯದ ಹೆಮ್ಮೆಯ ಪೊಲೀಸ್‌ ಇಲಾಖೆಯ ಮಾನ ಮತ್ತೊಮ್ಮೆ ಹರಾಜು- ಜೆಡಿಎಸ್

19/01/2026 9:50 PM

ನಿಮ್ಮ ಬಳಿ ‘ಆಧಾರ್ ಕಾರ್ಡ್’ ಇದ್ರೆ ಸಾಕು, ಸರ್ಕಾರದಿಂದ 90 ಸಾವಿರ ರೂ. ಸಾಲ ಲಭ್ಯ ; ಹೀಗೆ ಅರ್ಜಿ ಸಲ್ಲಿಸಿ!

19/01/2026 9:38 PM
State News
KARNATAKA

ಡಿಜಿಪಿ ರಾಸಲೀಲೆ ಕೇಸ್: ರಾಜ್ಯದ ಹೆಮ್ಮೆಯ ಪೊಲೀಸ್‌ ಇಲಾಖೆಯ ಮಾನ ಮತ್ತೊಮ್ಮೆ ಹರಾಜು- ಜೆಡಿಎಸ್

By kannadanewsnow0919/01/2026 9:50 PM KARNATAKA 1 Min Read

ಬೆಂಗಳೂರು: ಕಾಂಗ್ರೆಸ್  ಸರ್ಕಾರದ ನಿಷ್ಕ್ರಿಯ ಆಡಳಿತ ಹಾಗೂ ಅಸಮರ್ಥ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರಿಂದ ನಮ್ಮ ರಾಜ್ಯದ ಹೆಮ್ಮೆಯ…

ಶಿವಮೊಗ್ಗ: ಜ.29, 30ರಂದು ‘ಶ್ರೀ ಕ್ಷೇತ್ರ ಕಂಚಿಗದ್ದೆ ಶನೀಶ್ವರ ದೇವಸ್ಥಾನ’ದಲ್ಲಿ ’23ನೇ ವಾರ್ಷಿಕ ಜಾತ್ರಾ ಮಹೋತ್ಸವ’

19/01/2026 9:09 PM

BREAKING: SSLC ಪರೀಕ್ಷೆಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಶಿಕ್ಷಣ ಇಲಾಖೆ: ಶಿಕ್ಷಕರಿಗೂ ಮೊಬೈಲ್ ಬಳಕೆ ನಿಷೇಧ

19/01/2026 8:33 PM

ಸಾಗರದ ‘ಮಾರಿಕಾಂಬ ಜಾತ್ರೆ’ ಪ್ರಯುಕ್ತ ‘ಶಾಸಕ ಗೋಪಾಲಕೃಷ್ಣ ಬೇಳೂರು’ ನಗರ ಪ್ರದಕ್ಷಿಣೆ: ಸಿದ್ಧತೆ ವೀಕ್ಷಣೆ

19/01/2026 8:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.