ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಿನ್ನೆ ರಾತ್ರಿ ಯುವಕರ ನಡುವೆ ಕ್ಷುಲ್ಲಕ್ಕೆ ಕಾರಣಕ್ಕೆ ಜಗಳವಾಗಿದ್ದು, ಈ ವೇಳೆ ಯುವಕನೋರ್ವನ ಕೈಗೆ ಚಾಕುವಿನಿಂದ ಇರಿಯಲಾಗಿದೆ.ಗಾಯಗೊಂಡ ಯುವಕನನ್ನಿ ಸುಪ್ರೀತ್ ಎಂದು ತಿಳಿದುಬಂದಿದೆ.
ಸದ್ಯ ಚಾಕು ಇರಿದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಇಲ್ಲಿನ ಎಲ್ ಐಸಿ ಕಚೇರಿ ಸಮೀಪ ಕಳೆದ ರಾತ್ರಿ ಘಟನೆ ನಡೆದಿದೆ. ಸ್ಥಳಕ್ಕೆ ಅಡಿಷನಲ್ ಎಸ್ಪಿ ರಮೇಶ್ ಕುಮಾರ್ ಭೇಟಿ ನೀಡಿದ್ದು, ತನಿಖೆ ನಡೆಯುತ್ತಿದೆ.