Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೊಸ ಬ್ಯುಸಿನೆಸ್ ಶುರು ಮಾಡ್ತಿದೀರಾ.? ‘ಚಾಣಕ್ಯ’ ಹೇಳಿದ ಈ ತಂತ್ರ ಅನುಸರಿಸಿದ್ರೆ, ಯಶಸ್ಸು ಗ್ಯಾರೆಂಟಿ

13/09/2025 5:36 PM

BREAKING: ಹಾಸನ ಗಣೇಶ ಮೆರವಣಿಗೆ ದುರಂತ: ಚಿಕಿತ್ಸೆ ಫಲಿಸದೇ ಮತ್ತೊಬ್ಬ ಸಾವು, ಮೃತರ ಸಂಖ್ಯೆ 10ಕ್ಕೆ ಏರಿಕೆ

13/09/2025 5:33 PM

BIG NEWS: ರಾಜ್ಯದಲ್ಲೊಬ್ಬ ಭ್ರಷ್ಟ ಅಬಕಾರಿ ಉಪ ಆಯುಕ್ತ: ಸೂಕ್ತ ಕ್ರಮಕ್ಕೆ ರಾಜ್ಯಪಾಲರು, ಲೋಕಾಯುಕ್ತಕ್ಕೆ ದೂರು

13/09/2025 5:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯ ಸರ್ಕಾರದ ಜಾತಿಗಣತಿಯಲ್ಲಿ ಮತಾಂತರಗೊಂಡ ಜಾತಿಯನ್ನೇ ಪರಿಗಣಿಸಲಾಗುವುದು : CM ಸಿದ್ದರಾಮಯ್ಯ ಸ್ಪಷ್ಟನೆ
KARNATAKA

BREAKING : ರಾಜ್ಯ ಸರ್ಕಾರದ ಜಾತಿಗಣತಿಯಲ್ಲಿ ಮತಾಂತರಗೊಂಡ ಜಾತಿಯನ್ನೇ ಪರಿಗಣಿಸಲಾಗುವುದು : CM ಸಿದ್ದರಾಮಯ್ಯ ಸ್ಪಷ್ಟನೆ

By kannadanewsnow5713/09/2025 1:31 PM

ಮೈಸೂರು : ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವ ಜಾತಿ ಗಣತಿಯಲ್ಲಿ ಯಾರಾದರೂ ಮತಾಂತರಗೊಂಡಿದ್ದರೆ ಅವರ ಈಗಿನ ಜಾತಿಯನ್ನೇ ಪರಿಗಣಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವ ಜಾತಿ ಗಣತಿಯಲ್ಲಿ ಹೊಸ ಜಾತಿಗಳನ್ನು ಸರಕಾರ ಸೇರ್ಪಡೆ ಮಾಡುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಕೈಗೊಂಡಿರುವ ಜಾತಿ ಗಣತಿ ಬಗ್ಗೆ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು. ಯಾರಾದರೂ ಮತಾಂತರಗೊಂಡಿದ್ದರೆ ಅವರ ಈಗಿನ ಜಾತಿಯನ್ನೇ ಪರಿಗಣಿಸಲಾಗುವುದು. ಮತಾಂತರವಾಗುವುದು ಬೇಡ ಎಂದರೂ ವ್ಯವಸ್ಥೆಯ ಪರಿಣಾಮವಾಗಿ ಮತಾಂತರಗೊಳ್ಳುತ್ತಾರೆ. ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ, ಸಮಾನ ಅವಕಾಶಗಳಿದ್ದರೆ, ಏಕೆ ಮತಾಂತರಗೊಳ್ಳುತ್ತಾರೆ? ಅಸ್ಪೃಶ್ಯತೆ ಏಕೆ ಬಂತು, ಅದನ್ನು ನಾವು ಹುಟ್ಟುಹಾಕಿದ್ದೇವೆಯೇ? ಎಂದರು. ಅಸಮಾನತೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಧರ್ಮದಲ್ಲಿ ಇದ್ದರೂ ಮತಾಂತರವಾಗಿದ್ದಾರೆ. ಅದು ಅವರ ಹಕ್ಕು ಎಂದರು.

ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ. ಸಾಂಸ್ಕೃತಿಕವಾಗಿ ಎಲ್ಲ ಧರ್ಮದ ಜನರು ಇದರಲ್ಲಿ ಭಾಗವಹಿಸುತ್ತಾರೆ. ದಸರಾ ನಾಡಹಬ್ಬವಾಗಿದ್ದು, ಒಂದು ಧರ್ಮದವರು ಮಾತ್ರ ಭಾಗವಹಿಸಬೇಕು ಎಂದೇನೂ ಇಲ್ಲ. ಸಾರ್ವತ್ರಿಕ ಹಬ್ಬದಲ್ಲಿ ಎಲ್ಲ ಜಾತಿ ಮತ್ತು ಧರ್ಮದವರು ಭಾಗವಹಿಸಬಹುದು ಎಂದರು.
ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಶಾಂತಿಭಂಗ ಮಾಡುವ ಕೆಲಸ ಮಾಡಿದರೆ ಪೋಲಿಸಿನವರು ಕ್ರಮ ಕೈಗೊಳ್ಳುತ್ತಾರೆ ಎಂದರು.

ಸರ್ಕಾರ ರಸ್ತೆ ಸುರಕ್ಷತಾ ಕಾನೂನು ಜಾರಿ ಮಾಡಿದ್ದು, ಸುರಕ್ಷತಾ ಕ್ರಮಗಳನ್ನು ಗಳನ್ನು ಕೈಗೊಂಡಿದೆ. ಚಾಲಕರ ತಪ್ಪಿನಿಂದ ಅಪಘಾತವಾಗಿದೆ. ಅದಕ್ಕೆ ಸರ್ಕಾರ ಹೇಗೆ ಹೊಣೆಯಾಗಲು ಸಾಧ್ಯ? ಎಂದರು. ಮೃತರ ಕುಟುಂಬದವರಿಗೆ ಸಾವಿನ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ಹಾಸನ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಅವರಿಗೆ ಮೃತರ ಸಂಬಂಧಿಕರನ್ನು ಭೇಟಿ ಮಾಡಿ ಪರಿಹಾರ ಘೋಷಣೆ ಮಾಡುವಂತೆ ಸೂಚಿಸಿದ್ದೇನೆ ಎಂದರು.
ಆರ್ಥಿಕವಾಗಿ ಹಿಂದುಳಿದಿದ್ದಾರೆ ಎಂದೇ ಪರಿಹಾರ ನೀಡಿದೆ

ಸತ್ತವರು ಹೆಚ್ಚಾಗಿ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳಿದ್ದರು ಹಾಗಾಗಿ ಸರ್ಕಾರ ಹೆಚ್ಚಿನ ಪರಿಹಾರ ಒದಗಿಸುತ್ತಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸರ್ಕಾರ ಐದು ಲಕ್ಷ ಪರಿಹಾರ ನೀಡಿದೆ. ಮೃತರ ಕುಟುಂಬದವರು ಆರ್ಥಿಕವಾಗಿ ಹಿಂದುಳಿದಿದ್ದಾರೆ ಎಂದೇ ಪರಿಹಾರ ನೀಡಿದೆ ಎಂದರು.
ವಿರೋಧಪಕ್ಷದವರ ಒತ್ತಡದಿಂದ ಪ್ರಧಾನಿಗಳು ಮಣಿಪುರಕ್ಕೆ ಭೇಟಿ ನೀಡುತ್ತಿದ್ದಾರೆ
ಮೂರು ವರ್ಷಗಳ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಣಿಪುರಕ್ಕೆ ಭೇಟಿ ನೀಡುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿ, ಗಲಾಟೆ ಆಗುವಾಗ ಭೇಟಿ ನೀಡದೇ, ಪರಿಸ್ಥಿತಿ ಸುಧಾರಿಸಿದ ಮೇಲೆ ಭೇಟಿ ನೀಡುತ್ತಿದ್ದಾರೆ. ಇಷ್ಟು ವರ್ಷ ಆಯ್ಕೆ ಹೋಗಲಿಲ್ಲ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ವಿರೋಧಪಕ್ಷದವರ ಒತ್ತಡದಿಂದ ಈಗ ಭೇಟಿ ನೀಡುತ್ತಿದ್ದಾರೆ ಎಂದರು.

ಧರ್ಮಸ್ಥಳ ಪ್ರಕರಣ: ತನಿಖೆಯಲ್ಲಿ ವಿಳಂಬವಾಗುತ್ತಿಲ್ಲ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ತನಿಖೆ ವಿಳಂಬವಾಗುತ್ತಿರುವುದರ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ವಿಳಂಬವಾಗುತ್ತಿಲ್ಲ. ಎಸ್ ಐ ಟಿ ತನಿಖೆ ಮಾಡುತ್ತಿದ್ದು ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಹಾಗೆಂದು ಅನಗತ್ಯವಾಗಿ ವಿಳಂಬ ಮಾಡುವಂತಿಲ್ಲ. ನನಗೆ ತಿಳಿದಂತೆ ವಿಳಂಬವಾಗುತ್ತಿಲ್ಲ ಎಂದು ಹೇಳಿದರು.

ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ

ಬಿಜೆಪಿ ನಾಯಕರಾದ ಸಿ.ಟಿ ರವಿ, ಬಸನಗೌಡ ಯತ್ನಾಳ್ ಅವರ ಮೇಲೆ ಎಫ್ಐಆರ್ ದಾಖಲಾಗಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಬಿಜೆಪಿಯವರು ಪ್ರಚೋದನಾ ಕಾರಿಯಾದ ಭಾಷಣ ಮಾಡಿದರೆ ಏನು ಮಾಡಬೇಕು? ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಇದು ರಾಜಕಾರಣವಲ್ಲ ಎಂದರು. ಇದು ಹಿಂದೂಗಳನ್ನೇ ಗುರಿಯಾಗಿಸಿ ಮಾಡಿರುವ ಕೃತ್ಯ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ನಾನೂ ಕೂಡ ಒಬ್ಬ ಹಿಂದೂ. ನನ್ನ ಹೆಸರಿನಲ್ಲಿಯೇ ಈಶ್ವರ ಮತ್ತು ರಾಮ ಎರಡೂ ದೇವರ ಹೆಸರಿದೆ ಎಂದರು.

ರಾಜಕಾರಣಕ್ಕಾಗಿ ಆಕ್ಷೇಪ
ಮಹಾರಾಷ್ಟ್ರ ಮುಖ್ಯಮಂತ್ರಿಗಳು ಆಲಮಟ್ಟಿ ಅಣೆಕಟ್ಟನ್ನು ಎತ್ತರಿಸುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ನ್ಯಾಯಮಂಡಳಿಯೇ ಅಣೆಕಟ್ಟನ್ನು 519 ಮೀ.ಗಳಿಂದ 524 ಮೀ.ವರೆಗೆ ಏರಿಸಲು 2010 ರಲ್ಲಿ ಹೇಳಿದೆ. 15 ವರ್ಷಗಳಾಗಿದ್ದು ರಾಜಕಾರಣಕ್ಕಾಗಿ ಆಕ್ಷೇಪ ತೆಗೆದಿದ್ದಾರೆ ಎಂದರು.
ಬಿಜೆಪಿ ಮುಖ್ಯಮಂತ್ರಿಗಳಿಗೆ ಪ್ರಧಾನಮಂತ್ರಿ ತಿಳಿ ಹೇಳಬೇಕು

ಗೋವಾ ಮಹದಾಯಿ ಯೋಜನೆಯನ್ನು ಹಾಗೂ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಬಿಜೆಪಿ ಮುಖ್ಯಮಂತ್ರಿಗಳಿಗೆ ಪ್ರಧಾನಮಂತ್ರಿ ತಿಳಿ ಹೇಳಬೇಕು ಎಂದರು.

BREAKING: Only converted castes will be considered in the state government's caste census: CM Siddaramaiah clarifies
Share. Facebook Twitter LinkedIn WhatsApp Email

Related Posts

BREAKING: ಹಾಸನ ಗಣೇಶ ಮೆರವಣಿಗೆ ದುರಂತ: ಚಿಕಿತ್ಸೆ ಫಲಿಸದೇ ಮತ್ತೊಬ್ಬ ಸಾವು, ಮೃತರ ಸಂಖ್ಯೆ 10ಕ್ಕೆ ಏರಿಕೆ

13/09/2025 5:33 PM1 Min Read

BIG NEWS: ರಾಜ್ಯದಲ್ಲೊಬ್ಬ ಭ್ರಷ್ಟ ಅಬಕಾರಿ ಉಪ ಆಯುಕ್ತ: ಸೂಕ್ತ ಕ್ರಮಕ್ಕೆ ರಾಜ್ಯಪಾಲರು, ಲೋಕಾಯುಕ್ತಕ್ಕೆ ದೂರು

13/09/2025 5:28 PM2 Mins Read

ಹಾಸನ ಗಣೇಶ ಮೆರವಣಿಗೆ ದುರಂತ: ಮೃತಪಟ್ಟವರಿಗೆ ಪರಿಹಾರ ಘೋಷಿಸಿದ ಜೆಡಿಎಸ್

13/09/2025 5:14 PM1 Min Read
Recent News

ಹೊಸ ಬ್ಯುಸಿನೆಸ್ ಶುರು ಮಾಡ್ತಿದೀರಾ.? ‘ಚಾಣಕ್ಯ’ ಹೇಳಿದ ಈ ತಂತ್ರ ಅನುಸರಿಸಿದ್ರೆ, ಯಶಸ್ಸು ಗ್ಯಾರೆಂಟಿ

13/09/2025 5:36 PM

BREAKING: ಹಾಸನ ಗಣೇಶ ಮೆರವಣಿಗೆ ದುರಂತ: ಚಿಕಿತ್ಸೆ ಫಲಿಸದೇ ಮತ್ತೊಬ್ಬ ಸಾವು, ಮೃತರ ಸಂಖ್ಯೆ 10ಕ್ಕೆ ಏರಿಕೆ

13/09/2025 5:33 PM

BIG NEWS: ರಾಜ್ಯದಲ್ಲೊಬ್ಬ ಭ್ರಷ್ಟ ಅಬಕಾರಿ ಉಪ ಆಯುಕ್ತ: ಸೂಕ್ತ ಕ್ರಮಕ್ಕೆ ರಾಜ್ಯಪಾಲರು, ಲೋಕಾಯುಕ್ತಕ್ಕೆ ದೂರು

13/09/2025 5:28 PM

ಹಾಸನ ಗಣೇಶ ಮೆರವಣಿಗೆ ದುರಂತ: ಮೃತಪಟ್ಟವರಿಗೆ ಪರಿಹಾರ ಘೋಷಿಸಿದ ಜೆಡಿಎಸ್

13/09/2025 5:14 PM
State News
KARNATAKA

BREAKING: ಹಾಸನ ಗಣೇಶ ಮೆರವಣಿಗೆ ದುರಂತ: ಚಿಕಿತ್ಸೆ ಫಲಿಸದೇ ಮತ್ತೊಬ್ಬ ಸಾವು, ಮೃತರ ಸಂಖ್ಯೆ 10ಕ್ಕೆ ಏರಿಕೆ

By kannadanewsnow0913/09/2025 5:33 PM KARNATAKA 1 Min Read

ಹಾಸನ: ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಗಣೇಶ ಮೆರವಣಿಗೆಯ ವೇಳೆಯಲ್ಲಿ ಮೊಸಳೆ ಹೊಸಳ್ಳಿಯಲ್ಲಿ ಘೋರ ದುರಂತವೇ ಸಂಭವಿಸಿತ್ತು. ಕ್ಯಾಂಟರ್ ಹರಿದು 8…

BIG NEWS: ರಾಜ್ಯದಲ್ಲೊಬ್ಬ ಭ್ರಷ್ಟ ಅಬಕಾರಿ ಉಪ ಆಯುಕ್ತ: ಸೂಕ್ತ ಕ್ರಮಕ್ಕೆ ರಾಜ್ಯಪಾಲರು, ಲೋಕಾಯುಕ್ತಕ್ಕೆ ದೂರು

13/09/2025 5:28 PM

ಹಾಸನ ಗಣೇಶ ಮೆರವಣಿಗೆ ದುರಂತ: ಮೃತಪಟ್ಟವರಿಗೆ ಪರಿಹಾರ ಘೋಷಿಸಿದ ಜೆಡಿಎಸ್

13/09/2025 5:14 PM

ಹಾಸನ ಗಣೇಶ ಮೆರವಣಿಗೆ ದುರಂತದಲ್ಲಿ ಮೃತಪಟ್ಟವರಿಗೆ ತಲಾ 1 ಲಕ್ಷ ಪರಿಹಾರ: ಹೆಚ್.ಡಿ ದೇವೇಗೌಡ ಘೋಷಣೆ

13/09/2025 5:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.