Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಲ್ಪಸಂಖ್ಯಾತರನ್ನು ಕಂಡರೆ ಭಯ ಹೆಚ್ಚಾಗಿ ರಣಹೇಡಿತನವನ್ನು ಕಾಂಗ್ರೆಸ್ ಸರ್ಕಾರ ಪ್ರದರ್ಶನ: ಛಲವಾದಿ ನಾರಾಯಣಸ್ವಾಮಿ

13/09/2025 6:26 PM

BREAKING : ರಷ್ಯಾದ ತೈಲ ಖರೀದಿ ನಿಲ್ಲಿಸುವಂತೆ ನ್ಯಾಟೋಗೆ ಟ್ರಂಪ್ ಎಚ್ಚರಿಕೆ, ಚೀನಾದ ಮೇಲೆ 50-100% ಸುಂಕ ವಿಧಿಸುವಂತೆ ಒತ್ತಾಯ

13/09/2025 6:15 PM

‘ಫ್ಯಾಟಿ ಲಿವರ್’ಗೆ ಪವರ್ಫುಲ್ ಮಂತ್ರ ; ಹೀಗೆ ಮಾಡಿದ್ರೆ, ಯಕೃತ್ತಿನಲ್ಲಿರುವ ‘ವಿಷ’ವೆಲ್ಲಾ ಮಟಾಷ್!

13/09/2025 6:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ನಾಳೆ ಸಾಗರದ ಎಂಎಲ್ ಹಳ್ಳಿಯ ರಾಮಕೃಷ್ಣ ಶಾಲೆಯಲ್ಲಿ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮ, ಸಂತೋಷ್ ಹೆಗಡೆ ಭಾಗಿ
KARNATAKA

ಶಿವಮೊಗ್ಗ: ನಾಳೆ ಸಾಗರದ ಎಂಎಲ್ ಹಳ್ಳಿಯ ರಾಮಕೃಷ್ಣ ಶಾಲೆಯಲ್ಲಿ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮ, ಸಂತೋಷ್ ಹೆಗಡೆ ಭಾಗಿ

By kannadanewsnow0913/09/2025 2:19 PM

ಶಿವಮೊಗ್ಗ: ಸಾಗರದ ಲಿಂಗದಹಳ್ಳಿ ಬಳಿಯಲ್ಲಿರುವಂತ ರಾಮಕೃಷ್ಣ ವಸತಿ ಶಾಲೆಯಲ್ಲಿ ನಾಳೆ ಭ್ರಷ್ಟ ಮುಕ್ತ ಸಮಾಜ ನಿರ್ಮಾಣಕ್ಕೆ  ವಿದ್ಯಾರ್ಥಿಗಳ ಜಾಗೃತಿ ಕಾರ್ಯಕ್ರಮ ನಡೆಯಲಿದೆ. ಸುಪ್ರೀಂ ಕೋರ್ಟ್, ಲೋಕಾಯುಕ್ತದ ವಿಶ್ರಾಂತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ಭಾಗಿಯಾಗಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಶ್ರೀ ರಾಮಕೃಷ್ಣ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದಂತ ದೇವರಾಜ್ ಮಾಹಿತಿ ಹಂಚಿಕೊಂಡರು.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿನ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ದಿನಾಂಕ 14-09-2025ರ ಭಾನುವಾರದಂದು ಭ್ರಷ್ಟ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮವನ್ನು ಶ್ರೀ ರಾಮಕೃಷ್ಣ ವಸತಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಹಿಂದೆ ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ ಸತೀಶ್ ಅವರನ್ನು ಕರೆಯಿಸಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವಂತ ಕೆಲಸವನ್ನು ನಮ್ಮ ಶಾಲೆ ವತಿಯಿಂದ ಮಾಡಲಾಗಿತ್ತು ಎಂದರು.

ನಾಳೆ ಬೆಳಗ್ಗೆ 11 ಗಂಟೆಗೆ ಎಂಎಲ್ ಹಳ್ಳಿಯ ಶಾಲಾ ಆವರಣದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಸುಪ್ರೀಂ ಕೋರ್ಟ್, ಲೋಕಾಯುಕ್ತದ ವಿಶ್ರಾಂತ ನ್ಯಾಯಾಧೀಶರಾದಂತ ಸಂತೋಷ್ ಹೆಗಡೆ ಅವರು ಉದ್ಘಾಟಿಸಲಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರು ರಾಷ್ಟ್ರ ಸೇವಾ ಯೋಧರಿಗೆ ಸನ್ಮಾನವನ್ನು ಮಾಡಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರಾಮಕೃಷ್ಣ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ತಾವೇ ವಹಿಸಿಕೊಳ್ಳುವುದಾಗಿ ಹೇಳಿದರು.

ಈ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನು ಚಿಕ್ಕಮಗಳೂರಿನ ಯುವ ಸ್ಪೂರ್ತಿ ಅಕಾಡೆಮಿಯ ಅಧ್ಯಕ್ಷ ಸಿ.ಬಿ ಸುಂದರೇಶ್ ಆಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಾಗರದ ತಾಲ್ಲೂಕು ಕೋರ್ಟ್ ನ ಪ್ರಧಾನ ಹಿರಿಯ ವ್ಯವಹಾರ ನ್ಯಾಯಾಧೀಶರಾದಂತ ನಟರಾಜ್.ಎಸ್, ಪ್ರಧಾನ ಕಿರಿಯ ವ್ವಹಾರ ನ್ಯಾಯಾಧೀಶರಾದಂತ ಮಾದೇಶ್.ಎಂ.ವಿ, ಹೆಚ್ಚುವರಿ ಕಿರಿಯ ವ್ಯವಹಾರ ನ್ಯಾಯಾಧೀಶರಾದಂತ ಚಾಂದಿನಿ ಯು.ಬಿ, ಸಾಗರ ಉಪ ವಿಭಾಗದ ಸಹಾಯಕ ಪೊಲೀಸ್ ವರಿಷ್ಢಾಧಿಕಾರಿ ಡಾ.ಬೆನಕ ಪ್ರಸಾದ್, ತಹಶೀಲ್ದಾರ್ ರಶ್ಮಿ ಹೆಚ್.ಜೆ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿ.ಕೆ, ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮ್.ಈ, ಕಾರ್ಯನಿರ್ವಹಣಾಧಿಕಾರಿ ಗುರುಕೃಷ್ಣ ಶಣೈ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ಬಿ ಗಿರೀಶ್ ಗೌಡ, ಸಾಗರ ಗ್ರಾಮಾಂತರ ಪೊಲೀಸ್ ನಿರೀಕ್ಷಕ ಮಹಾಬಲೇಶ್ವರ ಎಸ್.ಎನ್, ಸದ್ಗುರು ಫೌಂಡೇಶನ್ ಡಾ.ಟಿಎನ್ ಜಗದೀಶ್ ಭಾಗವಹಿಸಲಿದ್ದಾರೆ ಎಂದರು.

1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಾಳೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಸುಪ್ರೀಂ ಕೋರ್ಟ್ ಮತ್ತು ಲೋಕಾಯುಕ್ತದ ವಿಶ್ರಾಂತ ನ್ಯಾಯಮೂರ್ತಿ ಸಂತೋಷ್ ಹೆಗಡೆ ನಡೆಸಲಿದ್ದಾರೆ. ಸಮಸ್ಯೆಗೆ ಪರಿಹಾರ ಸೂಚಿಸುವಂತ ಕೆಲಸವನ್ನು ಮಾಡಲಿದ್ದಾರೆ. ಈಗಾಗಲೇ ನಮ್ಮ ಶಾಲೆಯ ವಿದ್ಯಾರ್ಥಿಗಳು ಇಂಜಿನಿಯರ್, ಡಾಕ್ಟರ್, ಸಾಧು-ಸಂತರು ಆಗಿದ್ದಾರೆ. ಆಧ್ಯಾತ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಶ್ರೀ ರಾಮಕೃಷ್ಣ ವಸತಿ ಶಾಲೆಯ ಪ್ರಾಂಶುಪಾಲೆ ಸರೀತಾ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಒಳ್ಳೆಯ ಸಂಸ್ಕೃತಿ ನಿರ್ಮಾಣಕ್ಕೆ ನಮ್ಮ ಶಾಲೆಯಲ್ಲಿ ಇಂತಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಾಳೆ ವಿದ್ಯಾರ್ಥಿಗಳಲ್ಲಿ ಭ್ರಷ್ಟ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮದಲ್ಲಿ ಲೋಕಾಯುಕ್ತದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಜೊತೆಗೆ ಸಂವಾದ ಕೂಡ ನಡೆಸಲಿದ್ದಾರೆ. ಸಾಗರ ತಾಲ್ಲೂಕಿನ ಜನರು, ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಮನವಿ ಮಾಡಿದರು.

ಈ ಸುದ್ದಿಗೋಷ್ಠಿಯಲ್ಲಿ ಸುಂದರೇಶ್, ಮುಖ್ಯ ಶಿಕ್ಷಕ ಲೋಕೇಶ್, ರವಿಶಂಕರ್ ಉಪಸ್ಥಿತರಿದ್ದರು.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ಶಿವಮೊಗ್ಗ: ಸಾಗರದಲ್ಲಿ ನವಚೇತನ ವೇದಿಕೆಯಿಂದ ಪ್ರಬಂಧ ಸ್ಪರ್ಧೆ, ವಿಜೇತರ ಹೆಸರು ಘೋಷಣೆ

Share. Facebook Twitter LinkedIn WhatsApp Email

Related Posts

ಅಲ್ಪಸಂಖ್ಯಾತರನ್ನು ಕಂಡರೆ ಭಯ ಹೆಚ್ಚಾಗಿ ರಣಹೇಡಿತನವನ್ನು ಕಾಂಗ್ರೆಸ್ ಸರ್ಕಾರ ಪ್ರದರ್ಶನ: ಛಲವಾದಿ ನಾರಾಯಣಸ್ವಾಮಿ

13/09/2025 6:26 PM3 Mins Read

BREAKING: ಹಾಸನ ಗಣೇಶ ಮೆರವಣಿಗೆ ದುರಂತ: ಚಿಕಿತ್ಸೆ ಫಲಿಸದೇ ಮತ್ತೊಬ್ಬ ಸಾವು, ಮೃತರ ಸಂಖ್ಯೆ 10ಕ್ಕೆ ಏರಿಕೆ

13/09/2025 5:33 PM1 Min Read

BIG NEWS: ರಾಜ್ಯದಲ್ಲೊಬ್ಬ ಭ್ರಷ್ಟ ಅಬಕಾರಿ ಉಪ ಆಯುಕ್ತ: ಸೂಕ್ತ ಕ್ರಮಕ್ಕೆ ರಾಜ್ಯಪಾಲರು, ಲೋಕಾಯುಕ್ತಕ್ಕೆ ದೂರು

13/09/2025 5:28 PM2 Mins Read
Recent News

ಅಲ್ಪಸಂಖ್ಯಾತರನ್ನು ಕಂಡರೆ ಭಯ ಹೆಚ್ಚಾಗಿ ರಣಹೇಡಿತನವನ್ನು ಕಾಂಗ್ರೆಸ್ ಸರ್ಕಾರ ಪ್ರದರ್ಶನ: ಛಲವಾದಿ ನಾರಾಯಣಸ್ವಾಮಿ

13/09/2025 6:26 PM

BREAKING : ರಷ್ಯಾದ ತೈಲ ಖರೀದಿ ನಿಲ್ಲಿಸುವಂತೆ ನ್ಯಾಟೋಗೆ ಟ್ರಂಪ್ ಎಚ್ಚರಿಕೆ, ಚೀನಾದ ಮೇಲೆ 50-100% ಸುಂಕ ವಿಧಿಸುವಂತೆ ಒತ್ತಾಯ

13/09/2025 6:15 PM

‘ಫ್ಯಾಟಿ ಲಿವರ್’ಗೆ ಪವರ್ಫುಲ್ ಮಂತ್ರ ; ಹೀಗೆ ಮಾಡಿದ್ರೆ, ಯಕೃತ್ತಿನಲ್ಲಿರುವ ‘ವಿಷ’ವೆಲ್ಲಾ ಮಟಾಷ್!

13/09/2025 6:05 PM

ಹೊಸ ಬ್ಯುಸಿನೆಸ್ ಶುರು ಮಾಡ್ತಿದೀರಾ.? ‘ಚಾಣಕ್ಯ’ ಹೇಳಿದ ಈ ತಂತ್ರ ಅನುಸರಿಸಿದ್ರೆ, ಯಶಸ್ಸು ಗ್ಯಾರೆಂಟಿ

13/09/2025 5:36 PM
State News
KARNATAKA

ಅಲ್ಪಸಂಖ್ಯಾತರನ್ನು ಕಂಡರೆ ಭಯ ಹೆಚ್ಚಾಗಿ ರಣಹೇಡಿತನವನ್ನು ಕಾಂಗ್ರೆಸ್ ಸರ್ಕಾರ ಪ್ರದರ್ಶನ: ಛಲವಾದಿ ನಾರಾಯಣಸ್ವಾಮಿ

By kannadanewsnow0913/09/2025 6:26 PM KARNATAKA 3 Mins Read

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆಯಲ್ಲಿ ನಿಂತಿದೆ. ಒಂದು ಕಡೆ ಓಲೈಕೆ ಮತ್ತೊಂದು ಕಡೆ ಅಲ್ಪಸಂಖ್ಯಾತರನ್ನು ಕಂಡರೆ ಭಯ ಹೆಚ್ಚಾಗಿ…

BREAKING: ಹಾಸನ ಗಣೇಶ ಮೆರವಣಿಗೆ ದುರಂತ: ಚಿಕಿತ್ಸೆ ಫಲಿಸದೇ ಮತ್ತೊಬ್ಬ ಸಾವು, ಮೃತರ ಸಂಖ್ಯೆ 10ಕ್ಕೆ ಏರಿಕೆ

13/09/2025 5:33 PM

BIG NEWS: ರಾಜ್ಯದಲ್ಲೊಬ್ಬ ಭ್ರಷ್ಟ ಅಬಕಾರಿ ಉಪ ಆಯುಕ್ತ: ಸೂಕ್ತ ಕ್ರಮಕ್ಕೆ ರಾಜ್ಯಪಾಲರು, ಲೋಕಾಯುಕ್ತಕ್ಕೆ ದೂರು

13/09/2025 5:28 PM

ಹಾಸನ ಗಣೇಶ ಮೆರವಣಿಗೆ ದುರಂತ: ಮೃತಪಟ್ಟವರಿಗೆ ಪರಿಹಾರ ಘೋಷಿಸಿದ ಜೆಡಿಎಸ್

13/09/2025 5:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.