Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಕುರುಬ ಸಮುದಾಯ ST ಪಟ್ಟಿಗೆ: ಸೆ.16ರಂದು ಚರ್ಚಿಸಲು ಮಹತ್ವದ ಸಭೆ ಕರೆದ ಸರ್ಕಾರ

14/09/2025 8:16 PM

ಸಿಎಂ ಸಿದ್ದರಾಮಯ್ಯರ ದರ್ಪ ದೌಲತ್ತು ಇದೆ ರೀತಿ ಮುಂದುವರೆದರೆ, ರಾಜ್ಯದ ಜನತೆ ತಕ್ಕ ಪಾಠ ಕಳಿಸುತ್ತಾರೆ : MP ರೇಣುಕಾಚಾರ್ಯ

14/09/2025 8:08 PM

ಆಸ್ಟ್ರೇಲಿಯಾ ಏಕದಿನ ಸರಣಿಗೆ ಭಾರತ ತಂಡ ಪ್ರಕಟ

14/09/2025 8:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿದ್ದರಾಮಯ್ಯ ಅಂದ್ರೆ ಕೇವಲ ವ್ಯಕ್ತಿ ಅಲ್ಲ, ಒಂದು ಸಿದ್ಧಾಂತ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್
KARNATAKA

ಸಿದ್ದರಾಮಯ್ಯ ಅಂದ್ರೆ ಕೇವಲ ವ್ಯಕ್ತಿ ಅಲ್ಲ, ಒಂದು ಸಿದ್ಧಾಂತ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

By kannadanewsnow0914/09/2025 4:00 PM

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಂದರೆ ಕೇವಲ ಒಬ್ಬ ವ್ಯಕ್ತಿಯಲ್ಲ. ಒಂದು ಸಿದ್ದಾಂತ. ಬೆವರಿನ‌ ಸಂಸ್ಕೃತಿಗೆ ಮೌಲ್ಯ ಮತ್ತು ಘನತೆ ತಂದು ಕೊಡುವ ಸಿದ್ಧಾಂತ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಜಿಲ್ಲಾ ಶಾಖೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.‌

ಪತ್ರಕರ್ತನಾಗಿ ಎರಡು ಕಣ್ಣುಗಳಿಂದ ಸಮಾಜವನ್ನು ನೋಡುತ್ತಿದ್ದ ನನಗೆ, ಸಮಾಜದ ಲಕ್ಷಾಂತರ ಕಣ್ಣುಗಳು ನನ್ನೊಬ್ಬನನ್ನು ಗಮನಿಸುತ್ತಿರುತ್ತದೆ ಎನ್ನುವ ಸಾಮಾಜಿಕ ಎಚ್ಚರವನ್ನು ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೆರಳಲ್ಲಿ ಕಲಿತುಕೊಂಡೆ.

ಒಂದು ಬಲಿಷ್ಠವಾದ ವ್ಯವಸ್ಥೆ ಏಕಲವ್ಯರ ಬೆರಳುಗಳನ್ನು, ಅವಕಾಶ ಮತ್ತು ಪ್ರತಿಭೆಗಳನ್ನು ಹೇಗೆ ಕಿತ್ತುಕೊಳ್ಳುತ್ತದೆ ಎನ್ನುವುದನ್ನು ನಾನು ಪತ್ರಕರ್ತನಾಗಿ ಕಲಿತಿದ್ದೆ. ಆದರೆ, ಏಕಲವ್ಯರ ಬೆರಳುಗಳಿಗೆ ಶಕ್ತಿ ತುಂಬಿ ಬೆವರಿನ‌ ಸಂಸ್ಕೃತಿಗೆ ಘನತೆ ತರುವುದು ಹೇಗೆ ಎನ್ನುವುದನ್ನು ನಾನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಕಲಿತೆ. ನಾನು ಮಾನ್ಯ ಮುಖ್ಯಮಂತ್ರಿಗಳ ನೆರಳಿಗೆ ಬಂದು ಒಂದು ಡಜನ್ ವರ್ಷಗಳೇ ಕಳೆದವು. ಈ ಅವಧಿಯಲ್ಲಿ ನಾನು ಗ್ರಹಿಸಿದ್ದು ಏನೆಂದರೆ, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇವಲ ಒಬ್ಬ ರಾಜಕೀಯ ನಾಯಕರಲ್ಲ. ಒಂದು ಸಿದ್ಧಾಂತ. ಈ ಸಿದ್ಧಾಂತಕ್ಕೆ ಒಂದು ಪರಂಪರೆ ಇದೆ. ಆ ಪರಂಪರೆ ಸೃಷ್ಟಿಸಿದ ಅವಕಾಶಗಳ ಕಾರಣಕ್ಕೇ ಇಂದು ಇಲ್ಲಿ ನಾನು ಸನ್ಮಾನಿತನಾಗುತ್ತಿದ್ದೇನೆ. ಆದ್ದರಿಂದ ಈ ಸನ್ಮಾನವನ್ನು ನಾನು ಸಿದ್ಧರಾಮಯ್ಯ ಅವರ ಪರಂಪರೆಗೆ ಅರ್ಪಿಸುತ್ತೇನೆ ಎಂದರು.

ವಿಧಾನಸೌಧದಲ್ಲಿ ಬೇರೆ ಬೇರೆ ಜನ ಸಮುದಾಯಗಳ, ದುಡಿಯುವ ವರ್ಗಗಳ ಸಭೆಗಳು ನಡೆಯುವಾಗ ಅವರೆಲ್ಲರ ಬಾಯಲ್ಲಿ ಬರುವ ಒಂದು ಮಾತು ಪದೇ ಪದೇ ನನ್ನ ಕಿವಿಗೆ ಬೀಳುತ್ತದೆ. ” ಸಾರ್, ನಮಗೆ ನ್ಯಾಯ ಸಿಕ್ಕರೆ ನಿಮ್ಮ ಅವಧಿಯಲ್ಲೇ ಸಿಗಬೇಕು ಸರ್. ಹಿಂದಿನವರೂ ಮಾಡಿಲ್ಲ, ಮುಂದೆ ಬರುವವರೂ ಮಾಡುವುದೂ ಕಷ್ಟ ಸರ್”. ಈ ಮಾತು ನನ್ನನ್ನು ಸದಾ ಎಚ್ಚರದಲ್ಲಿ ಇರುವಂತೆ ಮಾಡಿ ನನ್ನ ಕರ್ತವ್ಯ ಪ್ರಜ್ಞೆಯನ್ನು ರೂಪಿಸಿದೆ ಎಂದರು.

ಎರಡು ಬಾರಿ ಮುಖ್ಯಮಂತ್ರಿ ಆಗುವುದು, ಸತತ ಮೂರು ದಶಕಗಳ ಕಾಲ ಜನ ಸಮುದಾಯಗಳ ಭರವಸೆಯ ನಾಯಕರಾಗಿ ರೂಪುಗೊಂಡಿದ್ದು ಅವರ ಸಾಮಾಜಿಕ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಈ ಬದ್ಧತೆ ನೇರವಾಗಿ ನನ್ನ ಮೇಲೆ ಪ್ರಭಾವ ಬೀರಿದೆ ಎಂದು ವಿವರಿಸಿದರು.

ಪತ್ರಕರ್ತ ಸಮುದಾಯದ 20-25 ವರ್ಷಗಳ ಬೇಡಿಕೆಗೆ ನಾನು ಮುಕ್ತಿ ದೊರಕಿಸಿಕೊಟ್ಟೆ ಎಂದು ನೀವೆಲ್ಲಾ ಹೇಳುತ್ತಿದ್ದೀರಿ. ಇದೆಲ್ಲವೂ ಒಬ್ಬನಿಂದ ಆಗಿದ್ದಲ್ಲ, ಮುಖ್ಯಮಂತ್ರಿಗಳು ನನಗೆ ಕೊಟ್ಟ ಶಕ್ತಿ ಮತ್ತು ಪತ್ರಕರ್ತರ ಸಂಘದ ಸತತ ಹೋರಾಟ, ನಿರಂತರ ಪ್ರಯತ್ನ ಕೂಡ ಕಾರಣ ಎಂದು ಹೇಳಲು ಬಯಸುತ್ತೇನೆ.

ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷರಾದ ದಿಲೀಪ್ ಕುರಂದವಾಡೆ ಇಬ್ಬರೂ ಅಸಾಧ್ಯ ಸಂಘಟಕರು ಮತ್ತು ಅಷ್ಟೇ ಬದ್ಧತೆಯುಳ್ಳವರು. ನಿಮ್ಮಲ್ಲರ ಹಾರೈಕೆ ಮತ್ತು ಬೆಂಬಲದಲ್ಲಿ ನಾನು ಇಲ್ಲಿಯವರೆಗೂ ಹೆಜ್ಜೆ ಇಟ್ಟಿದ್ದೇನೆ. ನಡೆಯಬೇಕಾಗಿರುವ ಹಾದಿ ಬಹಳ ಇದೆ. ಆದರೆ, ನನಗೆ ಒದಗಿ ಬಂದಿರುವ ಈ ಅವಕಾಶದಲ್ಲಿ ನಾನು ಪತ್ರಕರ್ತರ ಬಹುತೇಕ ಸಮಸ್ಯೆಗಳಿಗೆ ಮುಕ್ತಿ ಹಾಡಬೇಕು ಎನ್ನುವ ಖಚಿತ ನಿರ್ಧಾರ ಮಾಡಿಯೇ ಕೆಲಸ ಮಾಡುತ್ತಿದ್ದೇನೆ.

ಹತ್ತಾರು ವರ್ಷಗಳಿಂದ ಜಡ್ಡುಗಟ್ಟಿರುವ ತಾಂತ್ರಿಕ‌ ಅಡೆ ತಡೆಗಳನ್ನು, ಆಡಳಿತಾತ್ಮಕ ತೊಡಕುಗಳನ್ನು ನಿವಾರಿಸಲು ಇಲಾಖೆಯ ಕಾರ್ಯದರ್ಶಿಗಳಾದ ಕಾವೇರಿ ಮೇಡಂ, ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರೂ ಸಹಕಾರ ನೀಡುತ್ತಿದ್ದಾರೆ. ಜೊತೆಗೆ ನಿಮ್ಮೆಲ್ಲರ ಒತ್ತಾಯ ಮತ್ತು ಆಗ್ರಹಗಳಿಗೂ ನಾನು ಕಿವಿಯಾಗಿದ್ದೇನೆ. ಎಲ್ಲರ ಒಟ್ಟು ಶ್ರಮದಲ್ಲಿ ಇನ್ನಷ್ಟು ಅನುಕೂಲಗಳು ಪತ್ರಕರ್ತ ಸಮುದಾಯಕ್ಕೆ ಸಿಗಲಿದೆ ಎಂದು ಹೇಳುತ್ತಾ, ಇವತ್ತಿನ‌ ಈ ಸನ್ಮಾನ ಮತ್ತು ದೀಪಕ್ ಕುರಂದವಾಡೆ ತಂಡದ ಪ್ರೀತಿ, ಅಭಿಮಾನಕ್ಕೆ ಆಭಾರಿ‌ ಆಗಿದ್ದೇನೆ ಎಂದರು.

ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷರಾದ ದೀಪಕ್ ಕುರಂದವಾಡೆ, KUWJ ಬೆಳಗಾವಿ ಜಿಲ್ಲಾ ಘಟಕದ ಗೌರವಾಧ್ಯಕ್ಷರಾದ ಡಾ.ಭೀಮಶಿ ಎಲ್. ಜಾರಕಿಹೊಳಿ, ಸಂಘದ ಮುಖಂಡರಾದ ಮದನ್ ಗೌಡ ಸೇರಿ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು, ಪದಾಧಿಕಾರಿಗಳು ಮತ್ತು ಹಲವು ಗಣ್ಯರು ಉಪಸ್ಥಿತರಿದ್ದರು.

ಶಿವಮೊಗ್ಗ: ಸಾಗರದ ತೋಟಗರ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಈ ಬಾರಿ 64 ಲಕ್ಷ ಲಾಭ- ಅಧ್ಯಕ್ಷ ಕೆ.ಸಿ.ದೇವಪ್ಪ

‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ದ ಚುನಾವಣೆಗೆ ಕೆಪಿಸಿಸಿ ಭರ್ಜರಿ ಸಿದ್ಧತೆ: ಪೂರ್ವತಯಾರಿ ಸಮಿತಿ ರಚಿಸಿ ಡಿಕೆಶಿ ಆದೇಶ

Share. Facebook Twitter LinkedIn WhatsApp Email

Related Posts

ರಾಜ್ಯದ ಕುರುಬ ಸಮುದಾಯ ST ಪಟ್ಟಿಗೆ: ಸೆ.16ರಂದು ಚರ್ಚಿಸಲು ಮಹತ್ವದ ಸಭೆ ಕರೆದ ಸರ್ಕಾರ

14/09/2025 8:16 PM1 Min Read

ಸಿಎಂ ಸಿದ್ದರಾಮಯ್ಯರ ದರ್ಪ ದೌಲತ್ತು ಇದೆ ರೀತಿ ಮುಂದುವರೆದರೆ, ರಾಜ್ಯದ ಜನತೆ ತಕ್ಕ ಪಾಠ ಕಳಿಸುತ್ತಾರೆ : MP ರೇಣುಕಾಚಾರ್ಯ

14/09/2025 8:08 PM1 Min Read

ಇಲ್ಲಿ ಹುಟ್ಟಿ, ಇಲ್ಲಿಯ ಅನ್ನ ತಿಂದು, ಪಾಕಿಸ್ತಾನ ಜಿಂದಾಬಾದ್ ಅಂದ್ರೆ, ಮನೆಗೆ ನುಗ್ಗಿ ಹೊಡಿತೀವಿ : ಪ್ರಮೋದ್ ಮುತಾಲಿಕ್

14/09/2025 8:00 PM1 Min Read
Recent News

ರಾಜ್ಯದ ಕುರುಬ ಸಮುದಾಯ ST ಪಟ್ಟಿಗೆ: ಸೆ.16ರಂದು ಚರ್ಚಿಸಲು ಮಹತ್ವದ ಸಭೆ ಕರೆದ ಸರ್ಕಾರ

14/09/2025 8:16 PM

ಸಿಎಂ ಸಿದ್ದರಾಮಯ್ಯರ ದರ್ಪ ದೌಲತ್ತು ಇದೆ ರೀತಿ ಮುಂದುವರೆದರೆ, ರಾಜ್ಯದ ಜನತೆ ತಕ್ಕ ಪಾಠ ಕಳಿಸುತ್ತಾರೆ : MP ರೇಣುಕಾಚಾರ್ಯ

14/09/2025 8:08 PM

ಆಸ್ಟ್ರೇಲಿಯಾ ಏಕದಿನ ಸರಣಿಗೆ ಭಾರತ ತಂಡ ಪ್ರಕಟ

14/09/2025 8:07 PM

ಇಲ್ಲಿ ಹುಟ್ಟಿ, ಇಲ್ಲಿಯ ಅನ್ನ ತಿಂದು, ಪಾಕಿಸ್ತಾನ ಜಿಂದಾಬಾದ್ ಅಂದ್ರೆ, ಮನೆಗೆ ನುಗ್ಗಿ ಹೊಡಿತೀವಿ : ಪ್ರಮೋದ್ ಮುತಾಲಿಕ್

14/09/2025 8:00 PM
State News
KARNATAKA

ರಾಜ್ಯದ ಕುರುಬ ಸಮುದಾಯ ST ಪಟ್ಟಿಗೆ: ಸೆ.16ರಂದು ಚರ್ಚಿಸಲು ಮಹತ್ವದ ಸಭೆ ಕರೆದ ಸರ್ಕಾರ

By kannadanewsnow0914/09/2025 8:16 PM KARNATAKA 1 Min Read

ಬೆಂಗಳೂರು: ರಾಜ್ಯದ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸೋ ಕಾಲ ಸಮೀಪಿಸಿದೆ ಎನ್ನಲಾಗುತ್ತಿದೆ. ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಲು…

ಸಿಎಂ ಸಿದ್ದರಾಮಯ್ಯರ ದರ್ಪ ದೌಲತ್ತು ಇದೆ ರೀತಿ ಮುಂದುವರೆದರೆ, ರಾಜ್ಯದ ಜನತೆ ತಕ್ಕ ಪಾಠ ಕಳಿಸುತ್ತಾರೆ : MP ರೇಣುಕಾಚಾರ್ಯ

14/09/2025 8:08 PM

ಇಲ್ಲಿ ಹುಟ್ಟಿ, ಇಲ್ಲಿಯ ಅನ್ನ ತಿಂದು, ಪಾಕಿಸ್ತಾನ ಜಿಂದಾಬಾದ್ ಅಂದ್ರೆ, ಮನೆಗೆ ನುಗ್ಗಿ ಹೊಡಿತೀವಿ : ಪ್ರಮೋದ್ ಮುತಾಲಿಕ್

14/09/2025 8:00 PM

ಯುಜಿ ಆಯುಷ್: ಪ್ರವೇಶಕ್ಕೆ ಎರಡು ದಿನ ಅವಕಾಶ-KEA

14/09/2025 7:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.