ಬೆಂಗಳೂರು : ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಇದೀಗ ಆದೇಶ ಹೊರಡಿಸಿದೆ. ಹೊಸದಾಗಿ ಮರು ಮತ ಎಣಿಕೆ ನಡೆಸಲು ಹೈಕೋರ್ಟ್ ಇದೆ ಸಂದರ್ಭದಲ್ಲಿ ಸೂಚನೆ ಹೊರಡಿಸಿದೆ. ಮರು ಮತಎಣಿಕೆಯ ನಂತರ ಹೊಸದಾಗಿ ಫಲಿತಾಂಶ ಘೋಷಿಸಲು ನ್ಯಾ.ಆರ್ ದೇವದಾಸ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.
4 ವಾರಗಳಲ್ಲಿ ಹೈಕೋರ್ಟ್ ಮರು ಮತ ಎಣಿಕೆ ನಡೆಸಲು ಆದೇಶ ನೀಡಿದ್ದು, ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ವೈ ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿ ಆದೇಶ ಹೊರಡಿಸಿತು. ಜಿಲ್ಲಾ ಚುನಾವಣಾ ಅಧಿಕಾರಿ ಮತ ಎಣಿಕೆಯ ವಿಡಿಯೋ ಸಲ್ಲಿಸಿಲ್ಲ ಹಾಗಾಗಿ ಜಿಲ್ಲಾ ಚುನಾವಣಾ ಅಧಿಕಾರಿ ವಿರುದ್ಧ ಸಹ ಕ್ರಮಕ್ಕೆ ಹೈಕೋರ್ಟ್ ಸೂಚನೆ ನೀಡಿತು. ಶಾಸಕ ಕೆ ವೈ ನಂಜೇಗೌಡ ಆಯ್ಕೆ ಅಸಿಂಧು ಉಳಿಸಿ ಹೈಕೋರ್ಟ್ ಆದೇಶಿಸಿದ್ದು 4 ವಾರಗಳಲ್ಲಿ ಹೈಕೋರ್ಟ್ ಮರು ಮತ ಎಣಿಕೆ ನಡೆಸಲು ಆದೇಶ ನೀಡಿತು.
ಇದೇ ವೇಳೆ ಶಾಸಕ ಕೆ ವೈ ನಂಜೆಗೌಡ ಪರ ಹಿರಿಯ ವಕೀಲೆ ನಳಿನ ಮಾಯಾಗೌಡ ಹೈಕೋರ್ಟಿಗೆ ಮನವಿ ಮಾಡಿದ್ದು, ಹೈಕೋರ್ಟ್ ತೀರ್ಪಿಗೆ ಮಧ್ಯಂತರ ತಡೆ ನೀಡುವಂತೆ ಮನವಿ ಮಾಡಿದರು. ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸುವವರೆಗೆ ತಡೆ ನೀಡಿ 30 ದಿನಗಳ ವರೆಗೆ ತಡೆ ನೀಡಲು ಕೆವೈ ನಂಜೇಗೌಡ ಪರ ವಕೀಲರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.