Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಪೌತಿ ಖಾತಾ ಆಂದೋಲನದಲ್ಲಿ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನ: ಅಧಿಕಾರಿಗಳ ಕಾರ್ಯವೈಖರಿಗೆ ಡಿಸಿ ಶ್ಲಾಘನೆ

12/01/2026 9:34 PM

ಸಾರ್ವಜನಿಕರಿಂದ ಸ್ವೀಕೃತವಾದ ಎಲ್ಲಾ ಅರ್ಜಿಗಳ ಬಗ್ಗೆ ಕ್ರಮವಹಿಸುವುದು ಕಡ್ಡಾಯ: ಮಂಡ್ಯ ಜಿ.ಪಂ ಸಿಇಓ ಖಡಕ್ ಸೂಚನೆ

12/01/2026 9:28 PM

ತೂಗು ಸೇತುವೆ ಬಳಿಕ ‘ಸಿಗಂದೂರು ಜಾತ್ರೆ’ಗೆ ಸಜ್ಜಾದ ಶ್ರೀ ಚೌಡಮ್ಮನ ದೇವಾಲಯ: ಭಕ್ತ ಸಾಗರ ಬರುವ ನಿರೀಕ್ಷೆ

12/01/2026 8:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೃಷ್ಣಾ ಮೇಲ್ದಂಡೆ ಯೋಜನೆ ಸಂತ್ರಸ್ತ ರೈತರಿಗೆ ಭರ್ಜರಿ ಪರಿಹಾರ : ನೀರಾವರಿ ಜಮೀನಿಗೆ 40 ಲಕ್ಷ, ಒಣ ಜಮೀನಿಗೆ 30 ಲಕ್ಷ ಪರಿಹಾರ ಘೋಷಣೆ
KARNATAKA

ಕೃಷ್ಣಾ ಮೇಲ್ದಂಡೆ ಯೋಜನೆ ಸಂತ್ರಸ್ತ ರೈತರಿಗೆ ಭರ್ಜರಿ ಪರಿಹಾರ : ನೀರಾವರಿ ಜಮೀನಿಗೆ 40 ಲಕ್ಷ, ಒಣ ಜಮೀನಿಗೆ 30 ಲಕ್ಷ ಪರಿಹಾರ ಘೋಷಣೆ

By kannadanewsnow5717/09/2025 6:02 AM

ಬೆಂಗಳೂರು : ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆಗಾಗಿ ಸ್ವಾಧೀನ ಗೊಂಡ ಭೂಮಿಗೆ ಕೊನೆಗೂ ಪರಿಹಾರ ನಿಗದಿ ಮಾಡಿ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಮಾಡಿದ್ದು, ಮುಳುಗಡೆಯಾಗುವ 75,563 ಎಕರೆ ಪ್ರದೇಶದಲ್ಲಿದಲ್ಲಿ ಪ್ರತಿ ಎಕರೆ ನೀರಾವರಿ ಭೂಮಿಗೆ ₹40 ಲಕ್ಷ ಹಾಗೂ ಒಣ ಭೂಮಿಗೆ ₹30 ಲಕ್ಷ ಪರಿ ಹಾರನೀಡಲು ತೀರ್ಮಾನಿಸಲಾಗಿದೆ. ಅದೇ ರೀತಿ ಕಾಲುವೆಗಳ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಳ್ಳುತ್ತಿರುವ 51,837 ಎಕರೆಗೆ ಸಂಬಂಧಿಸಿ ನೀರಾವರಿ ಜಮೀನಿಗೆ ಎಕರೆಗೆ 30 ಲಕ್ಷ ರು, ಒಣ ಜಮೀನಿಗೆ 25 ಲಕ್ಷ ರು. ನಿಗದಿ ಮಾಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ 3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಡೆದ ವಿಶೇಷ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಮತ್ತು ನ್ಯಾಯಾಧೀಕರಣದ ತೀರ್ಪಿನಂತೆ ಆಲಮಟ್ಟಿ ಜಲಾಶಯದ ಎತ್ತರವನ್ನು 519.6 ಮೀ. ನಿಂದ 524.256 ಮೀ. ಗೆ ಏರಿಸಲು ಅನುಮತಿ ನೀಡಲಾಗಿದೆ. ಜಲಾಶಯದ ಎತ್ತರವನ್ನು ಹೆಚ್ಚಿಸುವುದರಿಂದ ಆಲಮಟ್ಟಿಯ ಹಿನ್ನೀರಿನಿಂದ ಸುಮಾರು 75,000 ಎಕರೆಗೂ ಹೆಚ್ಚು ಜಮೀನು ಮುಳುಗಡೆಯಾಗುವ ಸಂಭವವಿದೆ. ಇದರಿಂದ 5.94 ಲಕ್ಷ ಹೆಕ್ಟೇರ್(ಸುಮಾರು 14 ರಿಂದ 15 ಲಕ್ಷ ಎಕರೆ) ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಬಹುದಾಗಿದೆ. ಯುಕೆಪಿ ಹಂತ 3 ಬೃಹತ್ ನೀರಾವರಿ ಯೋಜನೆಯಾಗಿದ್ದು, ಈ ಭಾಗದ ರೈತರ ಜಮೀನಿಗೆ ನೀರೊದಗಿಸಿ, ಅವರ ಜೀವನ ಮಟ್ಟದ ಸುಧಾರಿಸಲು ನಾವು ಪಣತೊಟ್ಟಿದ್ದೇವೆ.

ಇಂದು ನಡೆದ ವಿಶೇಷ ಸಂಪುಟ ಸಭೆಯಲ್ಲಿ ಈ ಯೋಜನೆಗೆ ಸಂಬಂಧಿಸಿದಂತೆ ರೈತರು, ರೈತ ಹೋರಾಟ ಸಂಘಗಳು, ಸಂಬಂಧಪಟ್ಟ ಶಾಸಕರು, ಸಚಿವರೊಂದಿಗೆ ಚರ್ಚೆ ನಡೆಸಿ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಯೋಜನೆಗೆ ರೈತರಿಂದ ಸ್ವಾಧೀನಪಡಿಸಿಕೊಳ್ಳುವ ನೀರಾವರಿ ಜಮೀನಿಗೆ ಎಕರೆಯೊಂದಕ್ಕೆ 40 ಲಕ್ಷ ರೂ, ಖುಷ್ಕಿ ಒಣಭೂಮಿಯ ಎಕರೆಯೊಂದಕ್ಕೆ 30 ಲಕ್ಷ ಪರಿಹಾರವನ್ನು ನೀಡಬೇಕೆಂದು ಸಚಿವ ಸಂಪುಟ ತೀರ್ಮಾನಿಸಿದೆ.

ಕಾಲುವೆ ತೋಡಲು ಸುಮಾರು 51,837 ಎಕರೆ ಬೇಕಾಗಿದ್ದು, ಇದರಲ್ಲಿ 23,631 ಎಕರೆ ಭೂಮಿಯ ಸ್ವಾಧೀನ ಪ್ರಕ್ರಿಯೆ ನಡೆಸಿ, ಕಾಮಗಾರಿ ಕೈಗೊಳ್ಳಲಾಗಿದೆ. ಕಾಲುವೆ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಂಡ ಭೂಮಿಗೆ ಸಂಬಂಧಿಸಿದಂತೆ ಒಣಭೂಮಿಯ ಎಕರೆಯೊಂದಕ್ಕೆ 25 ಲಕ್ಷ ಹಾಗೂ ನೀರಾವರಿ ಜಮೀನಿಗೆ ಎಕರೆಯೊಂದಕ್ಕೆ 30 ಲಕ್ಷ ಪರಿಹಾರ ಒದಗಿಸಲು ತೀರ್ಮಾನಿಸಲಾಗಿದೆ. ಕಾಲುವೆ ನಿರ್ಮಾಣದಲ್ಲಿ ಜಮೀನು ಕಳೆದುಕೊಂಡವರು ಯೋಜನೆಯ ಫಲಾನುಭವಿಗಳಾಗುತ್ತಾರೆ.

ಭೂಸ್ವಾಧೀನಪಡಿಸಿಕೊಂಡ ಜಮೀನುಗಳಿಗೆ ಪರಿಹಾರವನ್ನು ಮೂರು ಆರ್ಥಿಕ ವರ್ಷದೊಳಗೆ ನೀಡಲು ತೀರ್ಮಾನಿಸಲಾಗಿದೆ. ಯೋಜನೆಗೆ ಭೂಸ್ವಾಧೀನಪಡಿಸಿಕೊಳ್ಳಲು ರೈತರ ಮನವೊಲಿಸುವುದಾಗಿ ಸಂಬಂಧಪಟ್ಟ ಸಚಿವರು, ಶಾಸಕರು, ರೈತಮುಖಂಡರು ತಿಳಿಸಿದ್ದಾರೆ. ರಾಜ್ಯದ ಜನರಿಗೆ ಒಳಿತು ಮಾಡುವ ಈ ಸಾರ್ಥಕ ಯೋಜನೆಗೆ ಭೂಮಿ ನೀಡಲು ರೈತರು ಸಮ್ಮತಿಸಬಹುದೆಂಬ ಭರವಸೆಯಿದೆ. ಇದೊಂದು ಐತಿಹಾಸಿಕ ತೀರ್ಮಾನ. 2023ರಲ್ಲಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಪರಿಹಾರದ ಮೊತ್ತ ಕಡಿಮೆಯಿದ್ದುದ್ದರಿಂದ ಯಾವ ರೈತರೂ ಭೂಮಿ ನೀಡಲು ಒಪ್ಪಲಿಲ್ಲ ಹಾಗೂ ಯೋಜನೆಗೆ ಚಾಲನೆಯೂ ದೊರೆಯದೇ ನೆನೆಗುದಿಗೆ ಬಿದ್ದಿತ್ತು.

ಈ ಹಿಂದೆ ಬೆಳಗಾವಿಯಲ್ಲಿ ಉತ್ತರ ಕರ್ನಾಟಕದ ಶಾಸಕರು, ರೈತಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಒಂದೇ ಬಾರಿಗೆ ಕನ್ಸೆಂಟ್ ಅವಾರ್ಡ್ ನೀಡುವ ಬಗ್ಗೆ ಪರಿಗಣಿಸಿದ್ದರೂ, ಪರಿಹಾರಧನ ನಿಗದಿಯಾಗಿರಲಿಲ್ಲ. ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ. ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸರ್ಕಾರ ಆದ್ಯತೆ ನೀಡುತ್ತದೆ. ಆದರೆ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಇದುವರೆಗೂ ಅಧಿಸೂಚನೆ ಹೊರಡಿಸಿಲ್ಲ. ಯೋಜನೆಯ ತ್ವರಿತ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಅಧಿಸೂಚನೆ ಹೊರಡಿಸಲು ಕೇಂದ್ರವನ್ನು ಹಲವು ಬಾರಿ ಭೇಟಿ ಮಾಡಿ ಅಧಿಸೂಚನೆ ಹೊರಡಿಸುವಂತೆ ಒತ್ತಾಯಿಸಲಾಗಿದೆ.

1,33,867 ಎಕರೆ ಜಮೀನು ಯೋಜನೆಗೆ ಬೇಕಾಗಿದ್ದು, 75,563 ಎಕರೆ ಮುಳುಗಡೆಯಾಗಲಿದೆ. 51,837 ಎಕರೆ ಕಾಲುವೆ ನಿರ್ಮಾಣಕ್ಕೆ ಬೇಕಾಗಿದೆ. ರೈತರ ಪುನರ್ವಸತಿ ಹಾಗೂ ಪುನರ್ ವ್ಯವಸ್ಥೆ ಕಾರ್ಯಗಳಿಗೆ 6,469 ಎಕರೆಗಳ ಅವಶ್ಯಕತೆಯಿದೆ. ಇದರಿಂದ ಸುಮಾರು 20 ಗ್ರಾಮಗಳು, ಕೆಲವು ಪಟ್ಟಣದ ವಾರ್ಡ್ ಗಳು ಮುಳುಗಡೆಯಾಗುತ್ತಿದ್ದು, ಒಟ್ಟು 1,33,867 ಎಕರೆಗೆ ಭೂಸ್ವಾಧೀನ ಪರಿಹಾರ ನೀಡುವ ಐತಿಹಾಸಿಕ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಈ ಉದ್ದೇಶಕ್ಕಾಗಿ ಪ್ರತಿವರ್ಷ ಸುಮಾರು 15 ರಿಂದ 20 ಸಾವಿರ ಕೋಟಿ ರೂ.ಗಳ ವೆಚ್ಚ ಬರಲಿದೆ. ಒಟ್ಟಾರೆ ಈ ಯೋಜನೆಗೆ ಸುಮಾರು 70 ಸಾವಿರ ಕೋಟಿ ರೂ. ಗಳು ವೆಚ್ಚವಾಗುವ ಅಂದಾಜು ಇದೆ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರ ಎಂದೆಂದಿಗೂ ನುಡಿದಂತೆ ನಡೆಯುತ್ತದೆ. ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಸರ್ಕಾರ ಆದ್ಯತೆ ನೀಡಿದ್ದು, ಈ ದಿಸೆಯಲ್ಲಿ ರಾಜ್ಯಕ್ಕೆ ಸಮೃದ್ಧಿ ತರಬಲ್ಲ ಐತಿಹಾಸಿಕ ತೀರ್ಮಾನವನ್ನು ನಾವು ಕೈಗೊಂಡಿದ್ದೇವೆ.

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಮತ್ತು ನ್ಯಾಯಾಧೀಕರಣದ ತೀರ್ಪಿನಂತೆ ಆಲಮಟ್ಟಿ ಜಲಾಶಯದ ಎತ್ತರವನ್ನು… pic.twitter.com/6cvcN0pEYk

— Siddaramaiah (@siddaramaiah) September 16, 2025

30 lakhs for dry land announced Huge relief for farmers affected by Krishna Upper River Project: 40 lakhs for irrigated land
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಪೌತಿ ಖಾತಾ ಆಂದೋಲನದಲ್ಲಿ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನ: ಅಧಿಕಾರಿಗಳ ಕಾರ್ಯವೈಖರಿಗೆ ಡಿಸಿ ಶ್ಲಾಘನೆ

12/01/2026 9:34 PM2 Mins Read

ಸಾರ್ವಜನಿಕರಿಂದ ಸ್ವೀಕೃತವಾದ ಎಲ್ಲಾ ಅರ್ಜಿಗಳ ಬಗ್ಗೆ ಕ್ರಮವಹಿಸುವುದು ಕಡ್ಡಾಯ: ಮಂಡ್ಯ ಜಿ.ಪಂ ಸಿಇಓ ಖಡಕ್ ಸೂಚನೆ

12/01/2026 9:28 PM1 Min Read

ತೂಗು ಸೇತುವೆ ಬಳಿಕ ‘ಸಿಗಂದೂರು ಜಾತ್ರೆ’ಗೆ ಸಜ್ಜಾದ ಶ್ರೀ ಚೌಡಮ್ಮನ ದೇವಾಲಯ: ಭಕ್ತ ಸಾಗರ ಬರುವ ನಿರೀಕ್ಷೆ

12/01/2026 8:56 PM3 Mins Read
Recent News

ರಾಜ್ಯದಲ್ಲಿ ಪೌತಿ ಖಾತಾ ಆಂದೋಲನದಲ್ಲಿ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನ: ಅಧಿಕಾರಿಗಳ ಕಾರ್ಯವೈಖರಿಗೆ ಡಿಸಿ ಶ್ಲಾಘನೆ

12/01/2026 9:34 PM

ಸಾರ್ವಜನಿಕರಿಂದ ಸ್ವೀಕೃತವಾದ ಎಲ್ಲಾ ಅರ್ಜಿಗಳ ಬಗ್ಗೆ ಕ್ರಮವಹಿಸುವುದು ಕಡ್ಡಾಯ: ಮಂಡ್ಯ ಜಿ.ಪಂ ಸಿಇಓ ಖಡಕ್ ಸೂಚನೆ

12/01/2026 9:28 PM

ತೂಗು ಸೇತುವೆ ಬಳಿಕ ‘ಸಿಗಂದೂರು ಜಾತ್ರೆ’ಗೆ ಸಜ್ಜಾದ ಶ್ರೀ ಚೌಡಮ್ಮನ ದೇವಾಲಯ: ಭಕ್ತ ಸಾಗರ ಬರುವ ನಿರೀಕ್ಷೆ

12/01/2026 8:56 PM

BREAKING: KEAಯಿಂದ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ಭರ್ತಿಗೆ ನಡೆದ ನೇಮಕಾತಿ ಪರೀಕ್ಷೆಯ ಕೀ-ಉತ್ತರ ಪ್ರಕಟ | KEA Recruitment

12/01/2026 8:44 PM
State News
KARNATAKA

ರಾಜ್ಯದಲ್ಲಿ ಪೌತಿ ಖಾತಾ ಆಂದೋಲನದಲ್ಲಿ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನ: ಅಧಿಕಾರಿಗಳ ಕಾರ್ಯವೈಖರಿಗೆ ಡಿಸಿ ಶ್ಲಾಘನೆ

By kannadanewsnow0912/01/2026 9:34 PM KARNATAKA 2 Mins Read

ಮಂಡ್ಯ : ಕಂದಾಯ ಇಲಾಖೆಯಲ್ಲಿನ ಇ- ಪೌತಿ ಖಾತಾ ಆಂದೋಲನದಲ್ಲಿ ಮಂಡ್ಯ ಜಿಲ್ಲೆಯು ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದ್ದು ಕಂದಾಯ ಇಲಾಖೆಯ…

ಸಾರ್ವಜನಿಕರಿಂದ ಸ್ವೀಕೃತವಾದ ಎಲ್ಲಾ ಅರ್ಜಿಗಳ ಬಗ್ಗೆ ಕ್ರಮವಹಿಸುವುದು ಕಡ್ಡಾಯ: ಮಂಡ್ಯ ಜಿ.ಪಂ ಸಿಇಓ ಖಡಕ್ ಸೂಚನೆ

12/01/2026 9:28 PM

ತೂಗು ಸೇತುವೆ ಬಳಿಕ ‘ಸಿಗಂದೂರು ಜಾತ್ರೆ’ಗೆ ಸಜ್ಜಾದ ಶ್ರೀ ಚೌಡಮ್ಮನ ದೇವಾಲಯ: ಭಕ್ತ ಸಾಗರ ಬರುವ ನಿರೀಕ್ಷೆ

12/01/2026 8:56 PM

BREAKING: KEAಯಿಂದ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ಭರ್ತಿಗೆ ನಡೆದ ನೇಮಕಾತಿ ಪರೀಕ್ಷೆಯ ಕೀ-ಉತ್ತರ ಪ್ರಕಟ | KEA Recruitment

12/01/2026 8:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.