Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Good News ; ಪಿಂಚಣಿದಾರರಿಗೆ ಶುಭ ಸುದ್ದಿ ; ಅ. 1ರಿಂದ ‘NPS’ ನಿಯಮ ಬದಲಾವಣೆ, ಅನೇಕ ಪ್ರಯೋಜನ!

18/09/2025 2:43 PM

ಕಂಪನಿಗಳು ಬೆಂಗಳೂರು ಬಿಡದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮನವಿ

18/09/2025 2:41 PM

BREAKING : ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ : ಬಂಗ್ಲೆಗುಡ್ಡ ಕಾಡಲ್ಲಿ ಬುರುಡೆ ಸಹಿತ ಮಾನವನ ಮೂಳೆಗಳು ಪತ್ತೆ!

18/09/2025 2:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಂಪನಿಗಳು ಬೆಂಗಳೂರು ಬಿಡದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮನವಿ
KARNATAKA

ಕಂಪನಿಗಳು ಬೆಂಗಳೂರು ಬಿಡದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮನವಿ

By kannadanewsnow0918/09/2025 2:41 PM

ನವದೆಹಲಿ: ಬೆಂಗಳೂರಿನ ರಸ್ತೆಗಳ ದುಸ್ಥಿತಿಯ ಬಗ್ಗೆ ದನಿ ಎತ್ತಿರುವ ಉದ್ಯಮಿಗಳ ಪರ ನಿಂತಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ರಾಜ್ಯವನ್ನು ಬಿಟ್ಟು ಹೋಗುವುದು ಬೇಡ ಎಂದು ಮನವಿ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು; “ನೀವು ಬೆಂಗಳೂರು ಬಿಡುವುದು ಬೇಡ. ಈ ನಗರಕ್ಕೆ ಮಹಾನ್ ಪರಂಪರೆ, ಹಿನ್ನೆಲೆ ಇದೆ. ಈ ಎಮ್ಮೆ ಚರ್ಮದ ಸರಕಾರಕ್ಕೆ ಪಾಠ ಕಲಿಸುತ್ತೇವೆ. ನಿಮ್ಮ ಜತೆ ನಾವು, ಇಡೀ ಕರ್ನಾಟಕದ ಜನತೆ ಇದ್ದೇವೆ. ಹೋಗುತ್ತೇವೆ ಎನ್ನುವ ಮಾತನ್ನು ಮನಸ್ಸಿನಿಂದ ತೆಗೆದುಬಿಡಿ. ನಾವೆಲ್ಲರೂ ಸೇರಿ ಬೆಂಗಳೂರು ನಗರವನ್ನು ಬದಲಿಸೋಣ.We will Make Bengaluru Great Again ಎಂದು ಕಂಪನಿಗಳಿಗೆ ಕುಮಾರಸ್ವಾಮಿ ಅವರು ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು ಮತ್ತು ಕರ್ನಾಟಕ ಭ್ರಷ್ಟರ ಕೈಯ್ಯಲ್ಲಿ ಸಿಲುಕಿ ನರಳುತ್ತಿವೆ. ಹೆಜ್ಜೆ ಹೆಜ್ಜೆಗೂ ಸಾವಿನ ಗುಂಡಿ. ಗ್ರೇಟರ್ ಬೆಂಗಳೂರು ಎಂದರೆ ಇದೇನಾ? ಎಂದು ಕೇಂದ್ರ ಸಚಿವರಾದ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಂಪನಿಗಳು ರಾಜ್ಯ ಸರಕಾರದ ಮೇಲೆ ಭರವಸೆ ಕಳೆದುಕೊಂಡು ನೆರೆ ರಾಜ್ಯಗಳತ್ತ ವಲಸೆ ಹೋಗುವುದು ಬೇಡ. ನೀವು ಬೆಂಗಳೂರು ಬಿಡುವುದು ಬೇಡ. ಈ ನಗರಕ್ಕೆ ಮಹಾನ್ ಪರಂಪರೆ, ಹಿನ್ನೆಲೆ ಇದೆ. ಈ ಎಮ್ಮೆ ಚರ್ಮದ ಸರಕಾರಕ್ಕೆ ಪಾಠ ಕಲಿಸುತ್ತೇವೆ ಎಂದು ಸಚಿವರು ಹೇಳಿದ್ದಾರೆ.

ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಕಂಡೆಲ್ಲೆಲ್ಲ ಕಸದ ರಾಶಿ. ಜಿಬಿಎ ಏನು ಮಾಡುತ್ತಿದೆ? ಜನರ ತೆರಿಗೆ ದುಡ್ಡು ನುಂಗಿ ಗೊರಕೆ ಹೊಡೆಯುತ್ತಿದೆಯಾ? ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ ಎಂದು ಸಚಿವರು ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಆಡಳಿತ ವೈಫಲ್ಯ; ಉದ್ಯಮಿಗಳ ದೂರು ಸರಿ ಇದೆ:

ಬೆಂಗಳೂರಿನಲ್ಲಿ ಆಡಳಿತದ ಘೋರ ವೈಫಲ್ಯವಾಗಿದೆ ಎಂದು ಉದ್ಯಮಿಗಳು ದೂರಿರುವುದು ಸರಿ ಇದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ.ಉದ್ಯಮಿಗಳು ಸರಕಾರದ ವೈಫಲ್ಯವನ್ನು ಇಷ್ಟು ಕಠಿಣವಾಗಿ ಎತ್ತಿ ತೋರಿಸಿರುವುದು ಇತಿಹಾಸದಲ್ಲಿ ಇದೇ ಮೊದಲು ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಈ ಸರಕಾರಕ್ಕೆ ಎಳ್ಳಷ್ಟೂ ಸಂಕೋಚ, ಆತ್ಮಾಭಿಮಾನವಿಲ್ಲ. ಕನ್ನಡಿಗರ ಸ್ವಾಭಿಮಾನವನ್ನು ಗುಂಡಿಪಾಲು ಮಾಡಿದೆ. ಇದಕ್ಕೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಇಬ್ಬರು ಈ ಅಪಮಾನಕ್ಕೆ ಹೊಣೆಗಾರರು ಎಂದು ಲೇವಡಿ ಮಾಡಿದರು.

ತೆರಿಗೆ ಹಾಕುವುದರಲ್ಲಿ ಸರಕಾರದ್ದು ರಾಕೆಟ್ ವೇಗ. ಗುಂಡಿ ಮುಚ್ಚುವುದರಲ್ಲಿ ಕೊನೇಪಕ್ಷ ಆಮೆ ವೇಗವೂ ಇಲ್ಲ. ಕೊಳ್ಳೆ ಹೊಡೆಯುವುದರಲ್ಲಿ ಇರುವ ಉನ್ಮಾದ, ಅಭಿವೃದ್ಧಿಯತ್ತ ವಿಪರೀತ ಉಪೇಕ್ಷೆ. ಚುನಾವಣಾ ಗ್ಯಾರಂಟಿಗಳಿಗೆ ರಾಜ್ಯದ ಅಭಿವೃದ್ಧಿ ಬಲಿಯಾಗಿ ಗ್ರೇಟರ್ ಬೆಂಗಳೂರು ಗಬ್ಬೆದ್ದು ನಾರುತ್ತಿದೆ! ಎಂದು ಅವರು ಕಿಡಿ ಕಾರಿದ್ದಾರೆ

ತೆರಿಗೆ ಹಣ ಏನಾಗುತ್ತಿದೆ?:

ಗುಂಡಿ ಮುಚ್ಚುವುದಕ್ಕೆ ಬಿಡಿಗಾಸಿಲ್ಲದ ಸರಕಾರ ಜನರಿಂದ ಕಿತ್ತುಕೊಳ್ಳುತ್ತಿರುವ ತೆರಿಗೆ ಹಣ ಏನು ಮಾಡುತ್ತಿದೆ? ಅದು ಯಾರ ಕಿಸೆ ಸೇರುತ್ತಿದೆ? ಇದಕ್ಕೆ ಉತ್ತರ ಬೇಕೆಂದು ಕೇಂದ್ರ ಸಚಿವರು ಪ್ರಶ್ನಿಸಿದ್ದಾರೆ.

ಕಂಪನಿಗಳು ರಾಜ್ಯ ಸರಕಾರದ ಮೇಲೆ ಭರವಸೆ ಕಳೆದುಕೊಂಡು ನೆರೆ ರಾಜ್ಯಗಳತ್ತ ವಲಸೆ ಹೋಗುತ್ತಿವೆ. ಆ ರಾಜ್ಯಗಳು ಇಂಥ ಸಮಯಕ್ಕೇ ಕಾಯುತ್ತಾ ರಿಯಾಯ್ತಿ ಮೇಲೆ ರಿಯಾಯ್ತಿಗಳನ್ನು ನೀಡುತ್ತಿವೆ. ಭಂಡ ಸರಕಾರಕ್ಕೆ ಅರ್ಥವಾಗುತ್ತಿಲ್ಲ. ಈ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ : ಬಂಗ್ಲೆಗುಡ್ಡ ಕಾಡಲ್ಲಿ ಬುರುಡೆ ಸಹಿತ ಮಾನವನ ಮೂಳೆಗಳು ಪತ್ತೆ!

18/09/2025 2:11 PM1 Min Read

ಆಳಂದ್ ಕ್ಷೇತ್ರದಲ್ಲಿ ಮತದಾರರ ಹೆಸರು ಡಿಲೀಟ್ ಗೆ ಯತ್ನ ಆರೋಪ : ರಾಹುಲ್ ಗಾಂಧಿ ಕಾಮನ್ ಸೆನ್ಸ್ ಇಲ್ಲದ ವ್ಯಕ್ತಿ : ಆರ್.ಅಶೋಕ್

18/09/2025 2:03 PM1 Min Read

BREAKING : ರಾಜ್ಯ ಸರ್ಕಾರದ `ಜಾತಿಗಣತಿ’ ರದ್ದು ಕೋರಿ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ.!

18/09/2025 1:45 PM1 Min Read
Recent News

Good News ; ಪಿಂಚಣಿದಾರರಿಗೆ ಶುಭ ಸುದ್ದಿ ; ಅ. 1ರಿಂದ ‘NPS’ ನಿಯಮ ಬದಲಾವಣೆ, ಅನೇಕ ಪ್ರಯೋಜನ!

18/09/2025 2:43 PM

ಕಂಪನಿಗಳು ಬೆಂಗಳೂರು ಬಿಡದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮನವಿ

18/09/2025 2:41 PM

BREAKING : ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ : ಬಂಗ್ಲೆಗುಡ್ಡ ಕಾಡಲ್ಲಿ ಬುರುಡೆ ಸಹಿತ ಮಾನವನ ಮೂಳೆಗಳು ಪತ್ತೆ!

18/09/2025 2:11 PM

ಆಳಂದ್ ಕ್ಷೇತ್ರದಲ್ಲಿ ಮತದಾರರ ಹೆಸರು ಡಿಲೀಟ್ ಗೆ ಯತ್ನ ಆರೋಪ : ರಾಹುಲ್ ಗಾಂಧಿ ಕಾಮನ್ ಸೆನ್ಸ್ ಇಲ್ಲದ ವ್ಯಕ್ತಿ : ಆರ್.ಅಶೋಕ್

18/09/2025 2:03 PM
State News
KARNATAKA

ಕಂಪನಿಗಳು ಬೆಂಗಳೂರು ಬಿಡದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮನವಿ

By kannadanewsnow0918/09/2025 2:41 PM KARNATAKA 2 Mins Read

ನವದೆಹಲಿ: ಬೆಂಗಳೂರಿನ ರಸ್ತೆಗಳ ದುಸ್ಥಿತಿಯ ಬಗ್ಗೆ ದನಿ ಎತ್ತಿರುವ ಉದ್ಯಮಿಗಳ ಪರ ನಿಂತಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು…

BREAKING : ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ : ಬಂಗ್ಲೆಗುಡ್ಡ ಕಾಡಲ್ಲಿ ಬುರುಡೆ ಸಹಿತ ಮಾನವನ ಮೂಳೆಗಳು ಪತ್ತೆ!

18/09/2025 2:11 PM

ಆಳಂದ್ ಕ್ಷೇತ್ರದಲ್ಲಿ ಮತದಾರರ ಹೆಸರು ಡಿಲೀಟ್ ಗೆ ಯತ್ನ ಆರೋಪ : ರಾಹುಲ್ ಗಾಂಧಿ ಕಾಮನ್ ಸೆನ್ಸ್ ಇಲ್ಲದ ವ್ಯಕ್ತಿ : ಆರ್.ಅಶೋಕ್

18/09/2025 2:03 PM

BREAKING : ರಾಜ್ಯ ಸರ್ಕಾರದ `ಜಾತಿಗಣತಿ’ ರದ್ದು ಕೋರಿ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ.!

18/09/2025 1:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.