ಬೆಂಗಳೂರು : ಕಾವೇರಿ ನೀರಿನ ಪೈಪ್ಲೈನ್ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಇಂದಿನಿಂದ 2 ದಿನಗಳ ಕಾಲ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಆಗಲಿದೆ. ಬೆಂಗಳೂರು ನೀರಿನ ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ನಗರದ ನಾಗರಬಾವಿ ಬಿಡಿಎ ಕಾಂಪ್ಲೆಕ್ಸ್ ಪ್ರದೇಶದ 600 ಮಿಮೀ ವ್ಯಾಸದ ಮುಖ್ಯ ಕಾವೇರಿ ನೀರಿನ ಪೈಪ್ಲೈನ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಸೆ.19 ರಿಂದ 20ರ ವರೆಗೆ ನಗರದ ಕೆಲವು ಭಾಗಗಳಲ್ಲಿ ಕಾವೇರಿ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ತುರ್ತು ಕಾರಣದಿಂದ ನಡೆಯುತ್ತಿರುವ ಕಾಮಗಾರಿಯಲ್ಲಿ ಸಾರ್ವಜನಿಕರು ಸಹಕಾರ ನೀಡುವಂತೆ ಹಾಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ BWSSB ಮನವಿ ಮಾಡಿದೆ. ನಗರದ ವಿಜಯನಗರ, ಬನವಾಸಿ ರಸ್ತೆ, ಕೋರಮಂಗಲ, ಗಾಂಧಿನಗರ ಸುತ್ತಮುತ್ತಲಿನ ಪ್ರದೇಶಗಳು, ಬಿ.ಡಿ.ಎ. ಕಾಂಪ್ಲೆಕ್ಸ್ ಸುತ್ತಮುತ್ತ ಇತರ ಹತ್ತಿರದ ಬಡಾವಣೆಗಳು.