Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘ಆಸ್ಕರ್ ಪ್ರಶಸ್ತಿ ರೇಸ್’ಗೆ ಭಾರತದ ‘ಹೋಮ್ ಬೌಂಡ್’ ಅಧಿಕೃತ ಪ್ರವೇಶ |Oscars 2026

19/09/2025 7:22 PM

ರಾಹು ಕೇತುವನ್ನು ಮಂಗಳವಾರದಂದು ಈ ರೀತಿ ಪೂಜಿಸಿ, ನಿಮ್ಮ ಜೀವನದ ಎಲ್ಲಾ ಸಮಸ್ಯೆ ದೂರ

19/09/2025 7:14 PM

BREAKING : ಬಾಲಿವುಡ್ ಸಿನಿಮಾ ‘ಹೋಮ್ ಬೌಂಡ್’ ‘ಆಸ್ಕರ್ ರೇಸ್’ಗೆ ಅಧಿಕೃತ ಪ್ರವೇಶ |Oscars 2026

19/09/2025 7:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನವೆಂಬರ್.4ರಿಂದ ಬೆಂಗಳೂರಿನಲ್ಲಿ ಮೊಟ್ಟ ಮೊದಲ ಕೌಶಲ್ಯ ಶೃಂಗಸಭೆ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
KARNATAKA

ನವೆಂಬರ್.4ರಿಂದ ಬೆಂಗಳೂರಿನಲ್ಲಿ ಮೊಟ್ಟ ಮೊದಲ ಕೌಶಲ್ಯ ಶೃಂಗಸಭೆ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್

By kannadanewsnow0919/09/2025 7:07 PM

ಬೆಂಗಳೂರು: ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿರುವ ನಮ್ಮ ಸರ್ಕಾರ ಮುಂದಿನ ನವೆಂಬರ್‌ನಲ್ಲಿ ಬೆಂಗಳೂರು ಕೌಶಲ್ಯ ಶೃಂಗಸಭೆ 2025 ಆಯೋಜಿಸುತ್ತಿದೆ. ಕೌಶಲ್ಯತೆ, ನಾವೀನ್ಯತೆ ಮತ್ತು ವಿಶೇಷ ಸೌಲಭ್ಯಗಳ ತಾಣವಾಗಿ ಕರ್ನಾಟಕ ಹೊರಹೊಮ್ಮಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಸಚಿವರು, ಹಲವಾರು ಮಾಹಿತಿ ನೀಡಿದರು.

ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್‌ನಲ್ಲಿ ನವೆಂಬರ್ 4 ರಿಂದ 6 ರವರೆಗೆ ಈ ಶೃಂಗಸಭೆ ನಡೆಯಲಿದೆ. ಇದೇ ಮೊದಲ ಬಾರಿಗೆ ಇಂಥ ಮಹತ್ವಾಕಾಂಕ್ಷೆಯ ಸಮಾವೇಶವನ್ನು ಆಯೋಜಿಸಲಾಗುತ್ತಿದೆ. ಮುಖ್ಯಮಂತ್ರಿಗಳು ಈ ಶೃಂಗಸಭೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

“ಬೆಂಗಳೂರು ಕೌಶಲ್ಯ ಶೃಂಗಸಭೆಯ ಮೂಲಕ ಯುವ ಸಮುದಾಯಕ್ಕೆ ಮುಖ್ಯವಾಗಿ ಮಹಿಳೆಯರು, ಗ್ರಾಮೀಣ ಸಮುದಾಯಗಳು ಮತ್ತು ಅಂಗವಿಕಲರಿಗೆ ಹೆಚ್ಚು ಆದ್ಯತೆ ನೀಡಲು ಗಮನಹರಿಸಲಾಗುವುದು. ಕೌಶಲ್ಯದ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಲು ನಮ್ಮ ಸರ್ಕಾರ ಅವಕಾಶಗಳ ಬೃಹತ್‌ ವೇದಿಕೆ ಒದಗಿಸುತ್ತಿದೆ ಎಂದು ಡಾ. ಪಾಟೀಲ್‌ ವಿವರಿಸಿದರು.

ಕೈಗಾರಿಕೆ, ಶೈಕ್ಷಣಿಕ, ತರಬೇತಿ ಮತ್ತು ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿ ಯುವ ಸಮೂಹವನ್ನು ಬೆಳೆಸಲು ಹಾಗೂ ಉದ್ಯೋಗವನ್ನು ಹೆಚ್ಚಿಸುವ ಗುರಿಯನ್ನು ಈ ಶೃಂಗಸಭೆ ಹೊಂದಿದೆ ಎಂದು ಸಚಿವರು ತಿಳಿಸಿದರು.

ಮುಖ್ಯಮಂತ್ರಿ ಸಕಾರಾತ್ಮಕ ಸ್ಪಂದನೆ

ಕರ್ನಾಟಕದಲ್ಲಿ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಹೀಗಾಗಿ ಕೌಶಲ್ಯ ಶೃಂಗಸಭೆ ಆಯೋಜಿಸಬೇಕು ಎಂದು ಈ ಹಿಂದೆಯೇ ಮುಖ್ಯಮಂತ್ರಿಗೆ ಪ್ರಸ್ತಾವ ಸಲ್ಲಿಸಲಾಗಿತ್ತು. ಇದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ ಹಿನ್ನೆಲೆಯಲ್ಲಿ ಸ್ಕಿಲ್‌ ಸಮ್ಮಿಟ್‌ ಕಾರ್ಯರೂಪಕ್ಕೆ ಬರುತ್ತಿದೆ ಎಂದು ತಿಳಿಸಿದರು.

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (KSDC) ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರ (KSDA) ಮತ್ತು ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ಜಂಟಿ ಸಹಯೋಗದೊಂದಿಗೆ ಈ ಶೃಂಗಸಭೆಯನ್ನು ಆಯೋಜಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ಮುಂದಿನ ದಿನಗಳಲ್ಲಿ ಕೌಶಲ್ಯ ನೀತಿ

ಮುಂಬರುವ ದಿನಗಳಲ್ಲಿ ಕೌಶಲ್ಯ ನೀತಿ ರೂಪಿಸಲಾಗುತ್ತದೆ. ಕರ್ನಾಟಕದಲ್ಲಿ ಮಾನವ ಸಂಪನ್ಮೂಲ ಅಗಾಧವಾಗಿದೆ. ಅದಕ್ಕೆ ಸ್ಪಷ್ಟ ರೂಪ, ಕೌಶಲ್ಯ ತರಬೇತಿ ನೀಡಿದರೆ ನಮ್ಮ ರಾಜ್ಯ ಮತ್ತು ನಮ್ಮ ರಾಜಧಾನಿ ಅತ್ಯಂತ ವೇಗವಾಗಿ ಬೆಳೆಯುವ ವಿಶ್ವಾಸವಿದೆ ಎಂದರು.

ಯುವ ಸಮೂಹಕ್ಕೆ ಅತ್ಯುತ್ತಮ ವೇದಿಕೆ

ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಇ.ವಿ. ರಮಣ ರೆಡ್ಡಿ ಮಾತನಾಡಿ, ಯುವನಿಧಿ ಗ್ಯಾರಂಟಿ ಯೋಜನೆಯಿಂದ ಸಾವಿರಾರು ಯುವಕರಿಗೆ ಅನುಕೂಲವಾಗಿದೆ. ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಬೇಕು ಎನ್ನುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಈ ರೀತಿಯ ವಿಶೇಷ ತರಬೇತಿ ದೊರೆತರೆ ಯುವ ಸಮೂಹ ಅಂತಾರಾಷ್ಟ್ರೀಯ ಮಟ್ಟದ ವೇದಿಕೆಯಲ್ಲಿ ಉದ್ಯೋಗ ಗಿಟ್ಟಿಸಲು ಸಮರ್ಥವಾಗುತ್ತದೆ. ಈ ನಿಟ್ಟಿನಲ್ಲಿ ಕೌಶಲ್ಯ ಶೃಂಗಸಭೆ ಅತ್ಯುತ್ತಮ ವೇದಿಕೆ ಒದಗಿಸಲಿದೆ ಎಂದು ತಿಳಿಸಿದರು.

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಶಿವಕಾಂತಮ್ಮ ನಾಯಕ್, ಕೌಶಲ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಎನ್.ಎಂ. ನಾಗರಾಜ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಜಾತಿ ಗಣತಿ ವೇಳೆ ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ನಮೂದಿಸಿ: ಬಿವೈ ವಿಜಯೇಂದ್ರ

ರಾಜ್ಯದ ಜನತೆಗೆ ಗುಡ್ ನ್ಯೂಸ್: 10 ತಾಲ್ಲೂಕಲ್ಲಿ ಯೋಗ, ಪ್ರಕೃತಿ ಚಿಕಿತ್ಸಾ ಕೇಂದ್ರ ತೆರೆಯಲು ಸರ್ಕಾರ ಆದೇಶ

Share. Facebook Twitter LinkedIn WhatsApp Email

Related Posts

ರಾಹು ಕೇತುವನ್ನು ಮಂಗಳವಾರದಂದು ಈ ರೀತಿ ಪೂಜಿಸಿ, ನಿಮ್ಮ ಜೀವನದ ಎಲ್ಲಾ ಸಮಸ್ಯೆ ದೂರ

19/09/2025 7:14 PM3 Mins Read

ಜಾತಿ ಗಣತಿ ವೇಳೆ ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ನಮೂದಿಸಿ: ಬಿವೈ ವಿಜಯೇಂದ್ರ

19/09/2025 7:02 PM2 Mins Read

SHOCKING: ರಾಜ್ಯದಲ್ಲೊಂದು ಅಪರೂಪದ ಆಪರೇಷನ್: ಕಣ್ಣಿನಲ್ಲಿದ್ದ 10 ಸೆ.ಮೀ ಜೀವಂತ ಹುಳು ತೆಗೆದ ವೈದ್ಯರು

19/09/2025 6:55 PM1 Min Read
Recent News

BREAKING : ‘ಆಸ್ಕರ್ ಪ್ರಶಸ್ತಿ ರೇಸ್’ಗೆ ಭಾರತದ ‘ಹೋಮ್ ಬೌಂಡ್’ ಅಧಿಕೃತ ಪ್ರವೇಶ |Oscars 2026

19/09/2025 7:22 PM

ರಾಹು ಕೇತುವನ್ನು ಮಂಗಳವಾರದಂದು ಈ ರೀತಿ ಪೂಜಿಸಿ, ನಿಮ್ಮ ಜೀವನದ ಎಲ್ಲಾ ಸಮಸ್ಯೆ ದೂರ

19/09/2025 7:14 PM

BREAKING : ಬಾಲಿವುಡ್ ಸಿನಿಮಾ ‘ಹೋಮ್ ಬೌಂಡ್’ ‘ಆಸ್ಕರ್ ರೇಸ್’ಗೆ ಅಧಿಕೃತ ಪ್ರವೇಶ |Oscars 2026

19/09/2025 7:13 PM

ನವೆಂಬರ್.4ರಿಂದ ಬೆಂಗಳೂರಿನಲ್ಲಿ ಮೊಟ್ಟ ಮೊದಲ ಕೌಶಲ್ಯ ಶೃಂಗಸಭೆ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್

19/09/2025 7:07 PM
State News
KARNATAKA

ರಾಹು ಕೇತುವನ್ನು ಮಂಗಳವಾರದಂದು ಈ ರೀತಿ ಪೂಜಿಸಿ, ನಿಮ್ಮ ಜೀವನದ ಎಲ್ಲಾ ಸಮಸ್ಯೆ ದೂರ

By kannadanewsnow0919/09/2025 7:14 PM KARNATAKA 3 Mins Read

ರಾಹು ಕೇತು ಎಂದ ತಕ್ಷಣ ನಮ್ಮ ಮನಸ್ಸಿನಲ್ಲಿ ಭಯ ಹುಟ್ಟುತ್ತದೆ. ಅವರು ನಮಗೆ ಯಾವುದೇ ಸಮಸ್ಯೆಗಳನ್ನು ಉಂಟುಮಾಡುತ್ತಾರೆಯೇ ಎಂದು ನಾನು…

ನವೆಂಬರ್.4ರಿಂದ ಬೆಂಗಳೂರಿನಲ್ಲಿ ಮೊಟ್ಟ ಮೊದಲ ಕೌಶಲ್ಯ ಶೃಂಗಸಭೆ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್

19/09/2025 7:07 PM

ಜಾತಿ ಗಣತಿ ವೇಳೆ ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ನಮೂದಿಸಿ: ಬಿವೈ ವಿಜಯೇಂದ್ರ

19/09/2025 7:02 PM

SHOCKING: ರಾಜ್ಯದಲ್ಲೊಂದು ಅಪರೂಪದ ಆಪರೇಷನ್: ಕಣ್ಣಿನಲ್ಲಿದ್ದ 10 ಸೆ.ಮೀ ಜೀವಂತ ಹುಳು ತೆಗೆದ ವೈದ್ಯರು

19/09/2025 6:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.