ಗದಗ : ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಜಾತಿಗಣತಿ ಸಮೀಕ್ಷೆ ಆರಂಭವಾಗಲಿದ್ದು, ಈಗಾಗಲೇ ಇದೇ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಸಚಿವರೇ ಕೆಲವು ವಿಚಾರವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೀಗ ಸೆಪ್ಟೆಂಬರ್ 22 ರಿಂದ ಜಾತಿ ಗಣತಿ ಆರಂಭವಾಗುತ್ತಿದೆ ಧರ್ಮ ಜಾತಿ ಹೇಳಬೇಕು ಕುರುಬರಲ್ಲಿ ಅನೇಕ ಜಾತಿಗಳಿವೆ ಅವೆಲ್ಲ ಬರೆಸಬೇಡಿ ಕುರುಬ ಅಂತ ಮಾತ್ರ ಬರೆಸಿ ಅಂತ ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಇಂದು ಗದಗ ನಗರದಲ್ಲಿ ಕುರುಬರ ಸಂಘದ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ಸೆಪ್ಟೆಂಬರ್ 22 ರಿಂದ ಜಾತಿ ಗಣತಿ ಆರಂಭವಾಗುತ್ತಿದೆ. ಹಾಗಾಗಿ ಪ್ರತಿಯೊಬ್ಬರೂ ತಮ್ಮ ತಮ್ಮ ಧರ್ಮ, ಜಾತಿ ಹೇಳಬೇಕು. ಇನ್ನು ಕುರುಬರಲ್ಲಿ ಅನೇಕ ಜಾತಿಗಳಿವೆ. ಆದರೆ ಕಾಲಂನಲ್ಲಿ ಅವೆಲ್ಲ ಬರೆಸಬೇಡಿ, ಕೇವಲ ಕುರುಬ ಅಂತ ಮಾತ್ರ ಬರೆಸಿ ಅಂತ ಕರೆ ನೀಡಿದರು.