Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತುಮಕೂರು ಜಿಲ್ಲೆಯಲ್ಲಿ 1,323 ಮಾಹಿತಿ ಹಕ್ಕು ಮೇಲ್ಮನವಿ ಅರ್ಜಿ ಬಾಕಿ: ಆಯುಕ್ತ ಬದ್ರುದ್ದೀನ್.ಕೆ

20/09/2025 8:27 PM

BREAKING: ರಾಜ್ಯದ ಅಳಂದದಲ್ಲಿ ಮತಗಳವು ಪ್ರಕರಣ: ಸಮಗ್ರ ತನಿಖೆಗೆ SIT ರಚಿಸಿ ಸರ್ಕಾರ ಅಧಿಕೃತ ಆದೇಶ

20/09/2025 8:06 PM

ಸಾಗರದ ಮಾರಿಕಾಂಬಾ ದೇವಸ್ಥಾನ ಸರ್ವಸದಸ್ಯರ ಸಭೆ ಯಶಸ್ವಿ: ಶೀಘ್ರವೇ ಚುನಾವಣೆಗೆ ತೀರ್ಮಾನ

20/09/2025 7:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯದ ಅಳಂದದಲ್ಲಿ ಮತಗಳವು ಪ್ರಕರಣ: ಸಮಗ್ರ ತನಿಖೆಗೆ SIT ರಚಿಸಿ ಸರ್ಕಾರ ಅಧಿಕೃತ ಆದೇಶ
KARNATAKA

BREAKING: ರಾಜ್ಯದ ಅಳಂದದಲ್ಲಿ ಮತಗಳವು ಪ್ರಕರಣ: ಸಮಗ್ರ ತನಿಖೆಗೆ SIT ರಚಿಸಿ ಸರ್ಕಾರ ಅಧಿಕೃತ ಆದೇಶ

By kannadanewsnow0920/09/2025 8:06 PM

ಬೆಂಗಳೂರು: ಕಲ್ಬುರ್ಗಿ ಜಿಲ್ಲೆ ಆಳಂದ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದಮೆ ಸಂಖ್ಯೆ 26/2023 0 182, 419, 464, 465 ಐ.ಪಿ.ಸಿ. ರಂತೆ ದಾಖಲಾಗಿರುವ ಪ್ರಕರಣದ ಸಮಗ್ರ ತನಿಖೆಗಾಗಿ ಸಿಐಡಿಯಲ್ಲಿ ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಮಾಡಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ನಡವಳಿಯನ್ನು ಹೊರಡಿಸಿದ್ದು, ದಿನಾಂಕ:20/09/2025ರ ಪತ್ರದಲ್ಲಿ ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾನಿರೀಕ್ಷಕರು, ಕರ್ನಾಟಕ ರಾಜ್ಯ, ಬೆಂಗಳೂರು ಇವರು ಕಲ್ಬುರ್ಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿನ 256 ಮತಗಟ್ಟೆಗಳ ವ್ಯಾಪ್ತಿಯಲ್ಲಿ ಬರುವ 6670 ಮತದಾರರನ್ನು ಮತದಾರರ ಪಟ್ಟಿಯಿಂದ ಅನಧಿಕೃತವಾಗಿ ಕೈಬಿಡಲಾಗಿದೆ ಎಂಬುದಾಗಿ ಚುನಾವಣಾ ಆಯೋಗಕ್ಕೆ ಮಾಜಿ ಶಾಸಕರಾಗಿದ್ದ ಶ್ರೀ. ಬಿ. ಆರ್. ಪಾಟೀಲ್ ರವರು ದೂರು ಸಲ್ಲಿಸಿದ್ದ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗವು ಈ ಕುರಿತಂತೆ ಪರಿಶೀಲಿಸಿದಾಗ ಒಟ್ಟು 6018 ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡುವಂತೆ ವಿವಿಧ ಸರ್ಕಾರಿ ಆನ್‌ಲೈನ್ ಅಪ್ಲಿಕೇಷನ್‌ಗಳಿಗೆ ಅರ್ಜಿಗಳು ಸ್ವೀಕೃತವಾಗಿದ್ದು, ಅವುಗಳಲ್ಲಿ 24 ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ, ಪುರಸ್ಕರಿಸಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದು ಕಂಡು ಬಂದಿರುತ್ತದೆ.

ಆದರೆ, 5994 ಅರ್ಜಿಗಳನ್ನು ಪರಿಶೀಲಿಸಿದಾಗ ಸದರಿ ಅರ್ಜಿಗಳನ್ನು ಯಾರೋ, ಯಾವುದೋ ದುರುದ್ದೇಶದಿಂದ ವಿವಿಧ ಮೊಬೈಲ್ ಸಂಖ್ಯೆಗಳನ್ನು ಉಪಯೋಗಿಸಿ, ಮೂಲ ಮತದಾರರ ಗಮನಕ್ಕೆ ಬಾರದಂತೆ ಮತ್ತು ಗೊತ್ತಾಗದಂತೆ ಮತದಾರರ ಪಟ್ಟಿಯಿಂದ ಹೆಸರನ್ನು ಕೈಬಿಡಲು ಅರ್ಜಿ ಸಲ್ಲಿಸಿರುವುದು ಕಂಡು ಬಂದಿರುವ ಬಗ್ಗೆ ದೂರುದಾರರಾದ ಶ್ರೀಮತಿ ಮಮತಾ ಕುಮಾರಿ ಕೆ.ಎ.ಎಸ್ ರವರು ವಿಚಾರಣೆ ಮಾಡಿ ದಿನಾಂಕ: 21.02.2023 ರಂದು ನೀಡಿದ ದೂರಿನ ಆಧಾರದ ಮೇಲೆ ಕಲ್ಬುರ್ಗಿ ಜಿಲ್ಲೆ ಆಳಂದ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ಸಂಖ್ಯೆ: 26/2023 ಕಲಂ, 182, 419, 464, 465 ಐ.ಪಿ.ಸಿ ರಂತೆ ಪಕರಣ ದಾಖಲಾಗಿರುವುದಾಗಿ ವರದಿ ಮಾಡಿರುತ್ತಾರೆ.

ಸದರಿ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಬಹುದಾದ ಇತರೆ ಪ್ರಕರಣಗಳ ಸಮಗ್ರ ತನಿಖೆಯನ್ನು ಕೈಗೊಳ್ಳಲು ರಾಜ್ಯದ ಅಪರಾಧ ತನಿಖಾ ಸಂಸ್ಥೆಯಾದ ಸಿಐಡಿಯ ಪೊಲೀಸ್ ಮಹಾನಿರ್ದೇಶಕರು, ಸಿಐಡಿ, ಆರ್ಥಿಕ ಅಪರಾಧಗಳು ಮತ್ತು ವಿಶೇಷ ಘಟಕಗಳು ರವರ ಮೇಲ್ವಿಚಾರಣೆಯಲ್ಲಿ ಈ ಕೆಳಕಂಡ ಅಧಿಕಾರಿಗಳನ್ನೊಳಗೊಂಡ ಒಂದು ವಿಶೇಷ ತನಿಖಾ ತಂಡ (Special Investigation Team) ರಚಿಸುವುದು ಸೂಕ್ತವೆಂದು ಶಿಫಾರಸ್ಸು ಮಾಡಿ, ಸದರಿ ವಿಶೇಷ ತನಿಖಾ ತಂಡಕ್ಕೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಲಂ 2(ಯು) ಅಡಿಯಲ್ಲಿ ಪೊಲೀಸ್‌ ಠಾಣೆಯೆಂದು ಘೋಷಿಸಿ, ಕರ್ನಾಟಕ ರಾಜ್ಯ ಕ್ಷೇತ್ರ ವ್ಯಾಪ್ತಿಯನ್ನು ನೀಡುವಂತೆ ಮತ್ತು ವಿಶೇಷ ತನಿಖಾ ತಂಡವು ತನ್ನ ತನಿಖಾ ವರದಿಯನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಲಂ-193ರಡಿ ಸಕ್ಷಮ ನ್ಯಾಯಾಲಯಗಳಿಗೆ ಸಲ್ಲಿಸಲು ಅಧಿಕಾರ ನೀಡುವಂತೆ ಕೋರಿರುತ್ತಾರೆ ಎಂದಿದೆ.

1.  ಬಿ.ಕೆ. ಸಿಂಗ್ ಐ.ಪಿ.ಎಸ್ -ಮುಖ್ಯಸ್ಥರು, ಅಪರ ಪೊಲೀಸ್ ಮಹಾನಿರ್ದೇಶಕರು, ಸಿ.ಐ.ಡಿ, ಬೆಂಗಳೂರು.
2. ಸೈದುಲು ಅದಾವತ್ ಐ.ಪಿ.ಎಸ್, ಸದಸ್ಯರು, ಪೊಲೀಸ್ ಅಧೀಕ್ಷಕರು, ಸಿ.ಸಿ.ಡಿ. ಸಿಐಡಿ, ಬೆಂಗಳೂರು.
3. ಶುಭಾನ್ವಿತ ಐ.ಪಿ.ಎಸ್. ಸದಸ್ಯರು, ಪೊಲೀಸ್‌ ಅಧೀಕ್ಷಕರು, ಎಸ್.ಇ.ಡಿ.ಸಿ.ಐ.ಡಿ, ಬೆಂಗಳೂರು.

ಪ್ರಸ್ತಾವನೆಯನ್ನು ಪರಿಶೀಲಿಸಿ, ಕಲ್ಬುರ್ಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರನ್ನು ಮತದಾರರ ಪಟ್ಟಿಯಿಂದ ಅನಧಿಕೃತವಾಗಿ ಕೈಬಿಡಲಾಗಿರುವ ಸಂಬಂಧ ಕಲಬುರಗಿ ಜಿಲ್ಲೆ ಆಳಂದ ಪೊಲೀಸ್ ಠಾಣೆಯಲ್ಲಿ ದಾಖಲಾದ ಮೊಕದ್ದಮೆ ಸಂಖ್ಯೆ: 26/2023 ಕಲಂ 182, 419 464 465 ಐ.ಪಿ.ಸಿ ಪುಕರಣದ ತನಿಖೆ ನಡೆಸಲು ಮೇಲ್ಕಂಡ ಅಧಿಕಾರಿಗಳನ್ನೊಳಗೊಂಡ ಸಿಐಡಿಯ ವಿಶೇಷ ತನಿಖಾ ತಂಡವನ್ನು ರಚಿಸುವುದು ಮತ್ತು ಸದರಿ ತನಿಖಾ ತಂಡಕ್ಕೆ ಠಾಣಾಧಿಕಾರವನ್ನು ಮತ್ತು ತನಿಖಾ ವರದಿಯನ್ನು ಸಕ್ಷಮ ನ್ಯಾಯಾಲಯಗಳಿಗೆ ಸಲ್ಲಿಸಲು ಅಧಿಕಾರ ನೀಡುವುದು ಸೂಕ್ತವೆಂದು ಸರ್ಕಾರವು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಪಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಸರ್ಕಾರವು ಕಲ್ಬುರ್ಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರನ್ನು ಮತದಾರರ ಪಟ್ಟಿಯಿಂದ ಅನಧಿಕೃತವಾಗಿ ಕೈಬಿಡಲಾಗಿರುವ ಸಂಬಂಧ ಕಲಬುರಗಿ ಜಿಲ್ಲೆ ಆಳಂದ ಪೊಲೀಸ್ ಠಾಣೆಯಲ್ಲಿ ದಾಖಲಾದ ಮೊಕದ್ದಮೆ ಸಂಖ್ಯೆ: 26/2023 ಕಲಂ, 182, 419, 464, 465 ಐ.ಪಿ.ಸಿ ಪ್ರಕರಣದ ಸಮಗ್ರ ತನಿಖೆಯನ್ನು ಕೈಗೊಳ್ಳಲು ರಾಜ್ಯದ ಅಪರಾಧ ತನಿಖಾ ಸಂಸ್ಥೆಯಾದ ಸಿಐಡಿಯಲ್ಲಿನ ಈ ಕೆಳಕಂಡ ಅಧಿಕಾರಿಗಳನ್ನೊಳಗೊಂಡ ಒಂದು ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸಿ ಆದೇಶಿಸಿದೆ.

ಸಾಗರದ ಮಾರಿಕಾಂಬಾ ದೇವಸ್ಥಾನ ಸರ್ವಸದಸ್ಯರ ಸಭೆ ಯಶಸ್ವಿ: ಶೀಘ್ರವೇ ಚುನಾವಣೆಗೆ ತೀರ್ಮಾನ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ನೀರಿನ ಬಾಟಲಿ ದರ ರೂ.1 ಇಳಿಕೆ | Railway Water Bottle Price Cut

Share. Facebook Twitter LinkedIn WhatsApp Email

Related Posts

ತುಮಕೂರು ಜಿಲ್ಲೆಯಲ್ಲಿ 1,323 ಮಾಹಿತಿ ಹಕ್ಕು ಮೇಲ್ಮನವಿ ಅರ್ಜಿ ಬಾಕಿ: ಆಯುಕ್ತ ಬದ್ರುದ್ದೀನ್.ಕೆ

20/09/2025 8:27 PM3 Mins Read

ಸಾಗರದ ಮಾರಿಕಾಂಬಾ ದೇವಸ್ಥಾನ ಸರ್ವಸದಸ್ಯರ ಸಭೆ ಯಶಸ್ವಿ: ಶೀಘ್ರವೇ ಚುನಾವಣೆಗೆ ತೀರ್ಮಾನ

20/09/2025 7:57 PM2 Mins Read

BIG NEWS: ನವೆಂಬರ್ ನಿಂದ ರಾಜ್ಯಾಧ್ಯಂತ ‘ಮಾಹಿತಿ ಹಕ್ಕು ಅದಾಲತ್’: ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ

20/09/2025 7:27 PM3 Mins Read
Recent News

ತುಮಕೂರು ಜಿಲ್ಲೆಯಲ್ಲಿ 1,323 ಮಾಹಿತಿ ಹಕ್ಕು ಮೇಲ್ಮನವಿ ಅರ್ಜಿ ಬಾಕಿ: ಆಯುಕ್ತ ಬದ್ರುದ್ದೀನ್.ಕೆ

20/09/2025 8:27 PM

BREAKING: ರಾಜ್ಯದ ಅಳಂದದಲ್ಲಿ ಮತಗಳವು ಪ್ರಕರಣ: ಸಮಗ್ರ ತನಿಖೆಗೆ SIT ರಚಿಸಿ ಸರ್ಕಾರ ಅಧಿಕೃತ ಆದೇಶ

20/09/2025 8:06 PM

ಸಾಗರದ ಮಾರಿಕಾಂಬಾ ದೇವಸ್ಥಾನ ಸರ್ವಸದಸ್ಯರ ಸಭೆ ಯಶಸ್ವಿ: ಶೀಘ್ರವೇ ಚುನಾವಣೆಗೆ ತೀರ್ಮಾನ

20/09/2025 7:57 PM

BREAKING : ಭಾರತ ಪರ ಏಕದಿನ ಕ್ರಿಕೆಟ್’ನಲ್ಲಿ ವೇಗವಾಗಿ 100 ರನ್ ಗಳಿಸಿದ ವಿರಾಟ್ ಕೊಹ್ಲಿ ದಾಖಲೆ ಮುರಿದ ‘ಸ್ಮೃತಿ ಮಂಧಾನ’

20/09/2025 7:48 PM
State News
KARNATAKA

ತುಮಕೂರು ಜಿಲ್ಲೆಯಲ್ಲಿ 1,323 ಮಾಹಿತಿ ಹಕ್ಕು ಮೇಲ್ಮನವಿ ಅರ್ಜಿ ಬಾಕಿ: ಆಯುಕ್ತ ಬದ್ರುದ್ದೀನ್.ಕೆ

By kannadanewsnow0920/09/2025 8:27 PM KARNATAKA 3 Mins Read

ತುಮಕೂರು : ಮಾಹಿತಿ ಹಕ್ಕು ಕಾಯ್ದೆಗೆ ಸಂಬಂಧಿಸಿದಂತೆ ಜಿಲ್ಲೆಯ 1,323 ಮೇಲ್ಮನವಿ ಅರ್ಜಿಗಳು ಆಯೋಗದಲ್ಲಿ ಬಾಕಿಯಿವೆ ಎಂದು ರಾಜ್ಯ ಮಾಹಿತಿ…

BREAKING: ರಾಜ್ಯದ ಅಳಂದದಲ್ಲಿ ಮತಗಳವು ಪ್ರಕರಣ: ಸಮಗ್ರ ತನಿಖೆಗೆ SIT ರಚಿಸಿ ಸರ್ಕಾರ ಅಧಿಕೃತ ಆದೇಶ

20/09/2025 8:06 PM

ಸಾಗರದ ಮಾರಿಕಾಂಬಾ ದೇವಸ್ಥಾನ ಸರ್ವಸದಸ್ಯರ ಸಭೆ ಯಶಸ್ವಿ: ಶೀಘ್ರವೇ ಚುನಾವಣೆಗೆ ತೀರ್ಮಾನ

20/09/2025 7:57 PM

BIG NEWS: ನವೆಂಬರ್ ನಿಂದ ರಾಜ್ಯಾಧ್ಯಂತ ‘ಮಾಹಿತಿ ಹಕ್ಕು ಅದಾಲತ್’: ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ

20/09/2025 7:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.