ಹಾಸನ : ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದ ಘಟನೆ ನಡೆದಿತ್ತು. ಈ ಒಂದು ಉಘಟನೆ ಮಾಸುವ ಮುನ್ನವೇ ಹಾಸನದಲ್ಲಿ ಮತ್ತೊಂದು ಘಟನೆ ನಡೆದಿದ್ದು ಗಣೇಶನ ಮೂರ್ತಿಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿದ್ದಾರೆ.
ಹೌದು ಹಾಸನದಲ್ಲಿ ಗಣೇಶನಿಗೆ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆಯಲಾಗಿದೆ. ಬೇಲೂರು ಪಟ್ಟಣದಲ್ಲಿ ಕಿಡಿಗೇಡಿಗಳಿಂದ ನೀಚತನ ನಡೆದಿದ್ದು, ಎರಡು ಚಪ್ಪಲಿಗಳಿಗೆ ದಾರ ಕಟ್ಟಿ ಗಣೇಶನ ಮೂರ್ತಿಗೆ ಹಾರ ಹಾಕಿದ್ದಾರೆ. ಪುರಸಭೆ ಆವರಣದಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ಗಣಪತಿಗೆ ಚಪ್ಪಲಿ ಹಾರ ಹಾಕಿದ್ದಾರೆ. ಮುಂಜಾನೆ ದೇವರ ದರ್ಶನಕ್ಕೆ ಹೋದ ಭಕ್ತರಿಗೆ ಆಘಾತ ಕಾದಿದೆ. ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಕಿಡಿಗೇಡಿಗಳನ್ನು ಬಂಧಿಸುವಂತೆ ಇದೀಗ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.