Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸೋಮನಾಥ ದೇವಾಲಯ ಪುನರ್ ನಿರ್ಮಾಣ ವಿರೋಧಿ ಶಕ್ತಿಗಳು ಇನ್ನೂ ಸಕ್ರಿಯ, ಅವುಗಳನ್ನು ಸೋಲಿಸಬೇಕು: ಪ್ರಧಾನಿ ಮೋದಿ ಕರೆ

11/01/2026 4:30 PM

ನಗ್ನ ಫೋಟೋ ತೆಗೆದು ಪತ್ನಿಯಿಂದಲೇ 30 ಲಕ್ಷ ಹಣ, ಚಿನ್ನಕ್ಕೆ ಬ್ಲ್ಯಾಕ್‌ ಮೇಲ್‌: ಪತಿರಾಯ ದೂರು

11/01/2026 4:18 PM

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : 40 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ!

11/01/2026 4:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮದ್ದೂರು ಪಟ್ಟಣದ 100 ಅಡಿ ರಸ್ತೆಗೆ 175 ಕೋಟಿ ರೂ ಪ್ರಸ್ತಾವನೆ: ಶಾಸಕ ಕೆ.ಎಂ.ಉದಯ್
KARNATAKA

ಮದ್ದೂರು ಪಟ್ಟಣದ 100 ಅಡಿ ರಸ್ತೆಗೆ 175 ಕೋಟಿ ರೂ ಪ್ರಸ್ತಾವನೆ: ಶಾಸಕ ಕೆ.ಎಂ.ಉದಯ್

By kannadanewsnow0923/09/2025 5:02 PM

ಮಂಡ್ಯ : ಮದ್ದೂರು ಪಟ್ಟಣದ 100 ಅಡಿ ರಸ್ತೆಗೆ 175 ಕೋಟಿ ರೂಗಳನ್ನು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಮಂಗಳವಾರ ಹೇಳಿದರು.

ಮದ್ದೂರು ಪಟ್ಟಣದ ನಗರಸಭಾ ಕಛೇರಿಯ ಎಸ್.ಎಂ.ಕೃಷ್ಣ ಸಭಾಂಗಣದಲ್ಲಿ ನಗರಸಭಾ ಅಧ್ಯಕ್ಷೆ ಕೋಕಿಲಾ ಅರುಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.

ಮದ್ದೂರು ಪಟ್ಟಣದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಪ್ರವಾಸಿ ಮಂದಿರದಿಂದ ಕೊಲ್ಲಿ ವೃತ್ತದವರೆಗೆ 2.5 ಕಿ.ಮೀ ರಸ್ತೆಯನ್ನು 100 ಅಡಿ ರಸ್ತೆಯನ್ನಾಗಿ ಅಭಿವೃದ್ಧಿ ಮಾಡಲು ಸರ್ಕಾರಕ್ಕೆ 175 ಕೋಟಿ ರೂ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಒಂದು ತಿಂಗಳಲ್ಲಿ ತಾಂತ್ರಿಕ ಅನುಮೋದನೆ ದೊರಕಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುದಾನ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದರು.

ಮದ್ದೂರು ಪುರಸಭೆಯನ್ನು ನಗರಸಭೆಯನ್ನಾಗಿ ರಾಜ್ಯ ಸರ್ಕಾರ ಮೆಲ್ದರ್ಜೆಗೆರಿಸಿದೆ. ಹೀಗಾಗಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಈಗಾಗಲೇ ಸರ್ಕಾರಕ್ಕೆ ವಿಶೇಷ ಅನುದಾನಕ್ಕೆ ಮನವಿ ಮಾಡಲಾಗಿದ್ದು, ಇನ್ನು ಎರಡು ಮೂರು ತಿಂಗಳಲ್ಲಿ 50 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗುವುದು ಎಂದು ಸಭೆಗೆ ತಿಳಿಸಿದರು.

ಪಟ್ಟಣವನ್ನು ಸೌಂದರ್ಯಕರಣ ಮತ್ತು ಕ್ಲೀನ್ ಸಿಟಿ ಮಾಡಲು ರೂಪುರೇಷೆ ಸಿದ್ದವಾಗುತ್ತಿದೆ. ಹೂ, ಹಣ್ಣು ಹಾಗೂ ತರಕಾರಿಗಳನ್ನು ಒಂದೇ ಕಡೆ ಮಾರಾಟ ಮಾಡಲು ಹಳೇ ಬಸ್ ನಿಲ್ದಾಣದ ಬಳಿ ಬೃಹತ್ ಮಾರುಕಟ್ಟೆ ಸಂಕೀರ್ಣ ನಿರ್ಮಿಸಲಾಗುವುದು. ಹಾಗೂ ಮಟನ್, ಚಿಕನ್ ಮತ್ತು ಮೀನು ಮಾರಾಟ ಮಾಡಲು ಶಿವಪುರದಲ್ಲಿ ಮಾರುಕಟ್ಟೆ ನಿರ್ಮಾಣಕ್ಕೆ ಈಗಾಗಲೇ ಯೋಜನೆ ರೂಪಿಸಲಾಗಿದ್ದು, ಅಲ್ಲಿ ಬಿಟ್ಟು ಪಟ್ಟಣದ ಬೇರೆ ಎಲ್ಲೂ ವ್ಯಾಪಾರ ಮಾಡಲು ಅನುಮತಿ ನೀಡುವುದಿಲ್ಲ ಎಂದು ಹೇಳಿದರು.

ಪೇಟೆ ಬೀದಿ ಅಗಲೀಕರಣದ ಬಳಿಕ ಪುಟ್ ಪಾತ್ ವ್ಯಾಪಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಅವರಿಗೂ ಸಹ ಒಂದೇ ಕಡೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ಕಲ್ಪಿಸಲಾಗುವುದು. ರಸ್ತೆ ಅಗಲೀಕರಣದ ಸಂಬಂಧ ಸರ್ಕಾರದಿಂದ ಅನುದಾನ ಬಿಡುಗಡೆ ನಂತರ ಪಟ್ಟಣ ವ್ಯಾಪ್ತಿಯ ಜನಪ್ರತಿನಿಧಿಗಳ ಸಭೆ ನಡೆಸಿ ಚರ್ಚೆ ನಡೆಸಿ ಕಾಮಗಾರಿಗೆ ಚಾಲನೆ ನೀಡಲಾಗುವುದು.

ಈಗಾಗಲೇ ಕೆಮ್ಮಣ್ಣು ನಾಲೆ ಆಧುನೀಕರಣ ಕಾಮಗಾರಿ ನಡೆಯುತ್ತಿದೆ. ಪಟ್ಟಣದ ಚರಂಡಿ ಮತ್ತು ಒಳಚರಂಡಿ ನೀರು ಕೆಮ್ಮಣ್ಣು ನಾಲೆಗೆ ಸೇರದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಮುಖ್ಯರಸ್ತೆ ಕೂಡ ಸಾಕಷ್ಟು ಅದ್ವಾನಗೊಂಡಿದ್ದು, ಗುಂಡಿ ಮುಚ್ಚುವ ಕೆಲಸವನ್ನು ಶೀಘ್ರವೇ ತಾತ್ಕಾಲಿಕವಾಗಿ ಮಾಡಲಾಗುವುದು ಎಂದು ಹೇಳಿದರು.

ಸರ್ಕಾರಿ ಹೈಸ್ಕೂಲ್ ವೃತ್ತದಿಂದ ಕರ್ನಾಟಕ ಟಾಕೀಸ್ ರಸ್ತೆ ಮೂಲಕ ಗೊರವನಹಳ್ಳಿಗೆ ಹೋಗುವ ರಸ್ತೆಯನ್ನು ಅಭಿವೃದ್ಧಿ ಮಾಡಲು ಕ್ರಮ ಕೈಗೊಂಡಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.

ಪಟ್ಟಣದ ಪ್ರಮುಖ ವೃತ್ತಗಳಲ್ಲಿ ನಾಡಪ್ರಭು ಕೆಂಪೇಗೌಡ, ಅಮರಶಿಲ್ಪಿ ಜಕಣಾಚಾರಿ, ಬಸವಣ್ಣ, ಕನಕದಾಸ, ಬಾಲಗಂಗಾಧರನಾಥ ಸ್ವಾಮಿಜಿ ಸೇರಿದಂತೆ ಹಲವು ಗಣ್ಯರ ಪುತ್ಥಳಿಯನ್ನು ನಿರ್ಮಿಸುವ ಸಂಬಂಧ ನಡೆದ ಚರ್ಚೆಯಲ್ಲಿ ರಸ್ತೆ ಅಗಲೀಕರಣಗೊಂಡ ಬಳಿಕ ಒಂದೊಂದು ವೃತ್ತಕ್ಕೆ ಮಹನೀಯರ ಪುತ್ತಳಿ ನಿರ್ಮಿಸಲು ಸಭೆಯಲ್ಲಿ ಅನುಮೋದನೆ ಪಡೆಯಲಾಯಿತು.

ನಗರಸಭೆಯಿಂದ ಯಾವುದೇ ಅನುದಾನ ಪಡೆಯದೇ ಪಟ್ಟಣದ ಅಭಿವೃದ್ಧಿಗೆ ಮುಂದಾಗಿದ್ದೇನೆ. ವಿಪಕ್ಷ ಜನಪ್ರತಿನಿಧಿಗಳ ವಾರ್ಡ್ ಗಳ ಹೆಚ್ಚಿನ ಅಭಿವೃದ್ಧಿಗೂ ಮುಂದಾಗಿದ್ದೇನೆ. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡುತ್ತಿಲ್ಲ ಎಂದರು.

ಪಟ್ಟಣದ ವ್ಯಾಪ್ತಿಯಲ್ಲಿ ನಾಯಿಗಳು ಕಚ್ಚಿ ಗಂಭೀರವಾಗಿ ಗಾಯಗೊಂಡವರಿಗೆ ಚಿಕಿತ್ಸೆ ಪಡೆದುಕೊಳ್ಳಲು ಪುರಸಭೆ ವತಿಯಿಂದ 10 ಸಾವಿರ ಚಿಕಿತ್ಸಾ ವೆಚ್ಚ ನೀಡುವಂತೆ ಸದಸ್ಯರಾದ ಎಂ.ಐ.ಪ್ರವೀಣ್, ಎಂ.ಬಿ.ಸಚಿನ್ ಸಭೆಗೆ ತಿಳಿಸಿದರು. ಇದಕ್ಕೆ ಸಭೆಯು ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿತು.

ನಗರಸಭೆಯಲ್ಲಿರುವ ಶವ ಸಾಗಿಸುವ ವಾಹನಕ್ಕೆ ಸಾರ್ವಜನಿಕರಿಂದ ಡಿಸೇಲ್ ಹಣವನ್ನು ಕೇಳದೆ ಉಚಿತವಾಗಿ ವಾಹನ ಕಳುಹಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಸದಸ್ಯ ಎಂ.ಬಿ.ಸಚಿನ್ ಸಭೆಗೆ ತಿಳಿಸಿದರು. ಈ ವಿಚಾರವಾಗಿ ಶಾಸಕ ಕೆ.ಎಂ.ಉದಯ್ ಹಾಗೂ ಅಧ್ಯಕ್ಷೆ ಕೋಕಿಲಾ ಅರುಣ್ ಕೂಡ ಒಪ್ಪಿಗೆ ಸೂಚಿಸಿದರು.

ಪಟ್ಟಣ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಎಬಿಸಿ ಮಾಡುವುದು, 23 ವಾರ್ಡ್ ಗಳಿಗೆ ಎಲ್.ಇ.ಡಿ ಬೀದಿ ದೀಪ ಅಳವಡಿಸುವ ಬಗ್ಗೆ ತೀರ್ಮಾನಿಸಿ ಕ್ರಮ ಕೈಗೊಳ್ಳಲಾಯಿತು.

ಸಭೆಯಲ್ಲಿ ಇನ್ನು ಹಲವು ಕಾಮಗಾರಿಗಳ ಸಂಬಂಧ ಅನುದಾನ ಮತ್ತು ವಿಷಯಗಳಿಗೆ ಒಪ್ಪಿಗೆ ಸೂಚಿಸಲಾಯಿತು.

ಇದೇ ವೇಳೆ ನಗರಸಭೆ ಉಪಾಧ್ಯಕ್ಷ ಪ್ರಸನ್ನಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ವನಿತಾ, ಪ್ರಭಾರ ಪೌರಾಯುಕ್ತ ಪರಶುರಾಮ್ ಸತ್ತಿಗೇರಿ, ಸದಸ್ಯರಾದ ಎಂ.ಐ.ಪ್ರವೀಣ್, ಸಚಿನ್, ಮಹೇಶ್, ಸಿದ್ದರಾಜು, ಸುರೇಶ್ ಕುಮಾರ್, ಕಮಲ್ ನಾಥ್, ಲತಾ ರಾಮು, ಸರ್ವಮಂಗಳ, ಪ್ರಮೀಳಾ, ಮೋಹನ್, ವ್ಯವಸ್ಥಾಪಕ ಶ್ರೀಧರ್ ಮತ್ತಿತರರು ಇದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

BREAKING: ನಾಳೆಗೆ ರಾಜ್ಯ ಸರ್ಕಾರದ ‘ಜಾತಿ ಗಣತಿ’ ಪ್ರಶ್ನಿಸಿ ಸಲ್ಲಿಸಿದ್ದ ‘PIL’ ವಿಚಾರಣೆ ಹೈಕೋರ್ಟ್ ಮುಂದೂಡಿಕೆ

ಹಿಂದುಳಿದ ವರ್ಗಗಳ ಆಯೋಗದ ರಿಮೋಟ್ ಕಂಟ್ರೋಲ್ ಬೇರೆಲ್ಲೋ ಇದೆ: ಛಲವಾದಿ ನಾರಾಯಣಸ್ವಾಮಿ

Share. Facebook Twitter LinkedIn WhatsApp Email

Related Posts

ನಗ್ನ ಫೋಟೋ ತೆಗೆದು ಪತ್ನಿಯಿಂದಲೇ 30 ಲಕ್ಷ ಹಣ, ಚಿನ್ನಕ್ಕೆ ಬ್ಲ್ಯಾಕ್‌ ಮೇಲ್‌: ಪತಿರಾಯ ದೂರು

11/01/2026 4:18 PM1 Min Read

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : 40 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ!

11/01/2026 4:16 PM1 Min Read

ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಮನೆಗಳು, 11ಕ್ಕೂ ಹೆಚ್ಚು ಬೈಕ್, ಗೂಡ್ಸ್ ವಾಹನಗಳು ಸುಟ್ಟು ಭಸ್ಮ

11/01/2026 4:10 PM1 Min Read
Recent News

ಸೋಮನಾಥ ದೇವಾಲಯ ಪುನರ್ ನಿರ್ಮಾಣ ವಿರೋಧಿ ಶಕ್ತಿಗಳು ಇನ್ನೂ ಸಕ್ರಿಯ, ಅವುಗಳನ್ನು ಸೋಲಿಸಬೇಕು: ಪ್ರಧಾನಿ ಮೋದಿ ಕರೆ

11/01/2026 4:30 PM

ನಗ್ನ ಫೋಟೋ ತೆಗೆದು ಪತ್ನಿಯಿಂದಲೇ 30 ಲಕ್ಷ ಹಣ, ಚಿನ್ನಕ್ಕೆ ಬ್ಲ್ಯಾಕ್‌ ಮೇಲ್‌: ಪತಿರಾಯ ದೂರು

11/01/2026 4:18 PM

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : 40 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ!

11/01/2026 4:16 PM

ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಮನೆಗಳು, 11ಕ್ಕೂ ಹೆಚ್ಚು ಬೈಕ್, ಗೂಡ್ಸ್ ವಾಹನಗಳು ಸುಟ್ಟು ಭಸ್ಮ

11/01/2026 4:10 PM
State News
KARNATAKA

ನಗ್ನ ಫೋಟೋ ತೆಗೆದು ಪತ್ನಿಯಿಂದಲೇ 30 ಲಕ್ಷ ಹಣ, ಚಿನ್ನಕ್ಕೆ ಬ್ಲ್ಯಾಕ್‌ ಮೇಲ್‌: ಪತಿರಾಯ ದೂರು

By kannadanewsnow0911/01/2026 4:18 PM KARNATAKA 1 Min Read

ಬೆಂಗಳೂರು: ಮನೆಯಲ್ಲಿ ಬೆತ್ತಲಾಗಿ ಓಡಾಡ್ತಾರೆ. ವಿಚಿತ್ರವಾಗಿ ವರ್ತಿಸುತ್ತಾರೆ. ವೀಡಿಯೋ ತೋರಿಸಿ ಲೈಂಗಿಕ ಕ್ರಿಯೆ ಮಾಡೋದಕ್ಕೆ ಒತ್ತಾಯಿಸ್ತಾರೆ ಅಂತ ಆರೋಪಿಸಿ ಪತ್ನಿಯೊಬ್ಬರು…

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : 40 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ!

11/01/2026 4:16 PM

ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಮನೆಗಳು, 11ಕ್ಕೂ ಹೆಚ್ಚು ಬೈಕ್, ಗೂಡ್ಸ್ ವಾಹನಗಳು ಸುಟ್ಟು ಭಸ್ಮ

11/01/2026 4:10 PM

BIG NEWS : ಬಂಡೆ ಪ್ರಕೃತಿ, ಕಡೆದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ : ಡಿಸಿಎಂ ಡಿಕೆ ಶಿವಕುಮಾರ ಮಾರ್ಮಿಕ ನುಡಿ

11/01/2026 4:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.