ಚಿಕ್ಕಮಗಳೂರು : ರಾಜ್ಯ ಸರಕಾರದಿಂದ ಶೈಕ್ಷಣಿಕ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸುತ್ತಿದ್ದು, ಸಮೀಕ್ಷೆಗೆ ಗೈರಾಗಿದ್ದ ಶಿಕ್ಷಕರಿಗೆ ಕಾರಣ ಕೇಳಿ ಇದೀಗ ನೋಟಿಸ್ ಜಾರಿಗೊಳಿಸಲಾಗಿದೆ. ಶಿಕ್ಷಕರಿಗೆ ಕಾರಣ ಕೇಳಿ ಚಿಕ್ಕಮಗಳೂರು ಡಿಡಿಪಿಐ ನೋಟಿಸ್ ಜಾರಿ ಮಾಡಿದ್ದಾರೆ. ಸಮೀಕ್ಷೆ ಆರಂಭವಾದ ದಿನದಿಂದ ಶಿಕ್ಷಕರು ಗೈರಾಗಿದ್ದಾರೆ. ಗೈರಾದ 18 ಶಿಕ್ಷಕರಿಗೆ ಡಿಡಿಪಿಐ ತಿಮ್ಮರಾಜು ನೋಟಿಸ್ ನೀಡಿದ್ದಾರೆ.
ಗೈರು ಆಗಿರುವುದಕ್ಕೆ ಕಾರಣ ಕೇಳಿ ಕ್ರಮದ ಎಚ್ಚರಿಕೆ ನಡೆಯನ್ನು ನೋಟಿಸ್ ನೀಡಿದ್ದಾರೆ. ಡಿಡಿಪಿಐ ಅಥವಾ ತಹಶೀಲ್ದಾರ್ ಗೆ ದಾಖಲೆ ನೀಡುವಂತೆ ಸೂಚನೆ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು 2882 ಶಿಕ್ಷಕರು ಸಮೀಕ್ಷೆಗೆ ನೇಮಕವಾಗಿದ್ದಾರೆ. ನೇಮಕವಾದ 2882 ಶಿಕ್ಷಕರ ಪೈಕಿ 18 ಶಿಕ್ಷಕರು ಮೊದಲ ದಿನದಿಂದಲೇ ಸಮೀಕ್ಷೆಗೆ ಗೈರಾಗಿದ್ದಾರೆ. ಕಳಸ ಹಾಗೂ ಶೃಂಗೇರಿ ತಾಲೂಕಿನಲ್ಲಿ ಅತಿ ಕಡಿಮೆ ಸಮೀಕ್ಷೆ ನಡೆದಿದೆ. ಹಾಗಾಗಿ ಸಮೀಕ್ಷೆಗೆ ಗೈರಾಗಿದ್ದಕ್ಕೆ ಕಾರಣ ಕೇಳಿ ಎಚ್ಚರಿಕೆ ಕ್ರಮ ನೀಡಿ ನೋಟಿಸ್ ನೀಡಿದ್ದಾರೆ.







