ಕಲಬುರ್ಗಿ : ಭೀಮಾ ನದಿ ಪ್ರವಾಹಕ್ಕೆ ಕಲ್ಯಾಣ ಕರ್ನಾಟಕ ತತ್ತರಿಸಿದ್ದು, ಕಲ್ಯಾಣ ಕರ್ನಾಟಕದಲ್ಲಿ ಇಂದು ಸಿಎಂ ಸಿದ್ದರಾಮಯ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಸಮೀಕ್ಷೆಗು ಮುನ್ನ ಅಧಿಕಾರಿಗಳ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಕಲಬುರ್ಗಿಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಚಿವರು ಸಾಥ್ ನೀಡಿದ್ದಾರೆ. ಸಚಿವರಾದ ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್, ಕೃಷ್ಣ ಬೈರೇಗೌಡ ಸಾಥ್ ನೀಡಿದ್ದಾರೆ. ಕಲಬುರ್ಗಿ ಏರ್ಪೋರ್ಟ್ ನಿಂದ ವೈಮಾನಿಕ ಸಮೀಕ್ಷೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ, ಕಲಬುರ್ಗಿ ವಿಜಯಪುರ ಯಾದಗಿರಿ ರಾಯಚೂರಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಮಳೆ ಹಾನಿ ಪ್ರದೇಶವನ್ನು ವೀಕ್ಷಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ ಕಲ್ಬುರ್ಗಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಅದಾದ ಬಳಿಕ ಬೆಳೆ ಹಾನಿಗೆ ಪರಿಹಾರ ನೀಡುವ ಕುರಿತು ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.